AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪದೇಪದೇ ಅದೇ ತಪ್ಪು ಮಾಡುತ್ತಿದ್ದಾರೆ ಸಲ್ಮಾನ್​ ಖಾನ್​; ಬೇಸರ ಹೊರ ಹಾಕಿದ ಫ್ಯಾನ್ಸ್​

‘ರಾಧೆ’ ಸಿನಿಮಾ ರಿಲೀಸ್ ಆಗುವಾಗ ದೇಶದ ಬಹುತೇಕ ಕಡೆಗಳಲ್ಲಿ ಚಿತ್ರಮಂದಿರಗಳು ಕ್ಲೋಸ್ ಇದ್ದವು. ಈ ಕಾರಣಕ್ಕೆ ಚಿತ್ರತಂಡ ಒಟಿಟಿ ಮೊರೆ ಹೋಗಿತ್ತು. ಸಂಪ್ರದಾಯ ಬ್ರೇಕ್​ ಮಾಡಬಾರದು ಎನ್ನುವ ಕಾರಣಕ್ಕೆ ಚಿತ್ರಮಂದಿರದಲ್ಲೂ ಸಲ್ಲು ಸಿನಿಮಾ ರಿಲೀಸ್ ಆಗಿತ್ತು.

ಪದೇಪದೇ ಅದೇ ತಪ್ಪು ಮಾಡುತ್ತಿದ್ದಾರೆ ಸಲ್ಮಾನ್​ ಖಾನ್​; ಬೇಸರ ಹೊರ ಹಾಕಿದ ಫ್ಯಾನ್ಸ್​
TV9 Web
| Edited By: |

Updated on: Sep 11, 2021 | 7:24 PM

Share

ಸಲ್ಮಾನ್​ ಖಾನ್​ ಸಿನಿಮಾಗಳು ಬಾಕ್ಸ್​ ಆಫೀಸ್​ನಲ್ಲಿ ದೊಡ್ಡ ಮಟ್ಟದಲ್ಲಿ ಗಳಿಕೆ ಮಾಡುತ್ತದೆ. ಸಲ್ಲು ಸಿನಿಮಾ ವಿಮರ್ಶೆಯಲ್ಲಿ ಸೋತ ಹೊರತಾಗಿಯೂ ನೂರು ಕೋಟಿ ರೂಪಾಯಿ ಗಳಿಕೆ ಮಾಡಿದ ಉದಾಹರಣೆ ಸಾಕಷ್ಟಿದೆ. ‘ರಾಧೆ: ಯುವರ್​ ಮೋಸ್ಟ್ ವಾಂಟೆಡ್​ ಭಾಯ್​’ ಚಿತ್ರದ ವಿಚಾರದಲ್ಲಿ ಸಲ್ಮಾನ್ ಖಾನ್​ ತಪ್ಪು ನಿರ್ಧಾರ ತೆಗೆದುಕೊಂಡಿದ್ದರು. ಒಟಿಟಿ ಹಾಗೂ ಚಿತ್ರಮಂದಿರಗಳಲ್ಲಿ ಸಿನಿಮಾ ಒಟ್ಟಿಗೆ ರಿಲೀಸ್​ ಮಾಡಿದ್ದರು. ಇದರಿಂದಾಗಿ ಚಿತ್ರದ ಬಾಕ್ಸ್​ ಆಫೀಸ್​ ಕಲೆಕ್ಷನ್​ ತೀವ್ರಗತಿಯಲ್ಲಿ ಕುಸಿದಿತ್ತು. ಆದರೆ, ಈಗ ಸಲ್ಲು ಮತ್ತದೇ ತಪ್ಪು ಮಾಡುತ್ತಿದ್ದಾರೆ.

‘ರಾಧೆ’ ಸಿನಿಮಾ ರಿಲೀಸ್ ಆಗುವಾಗ ದೇಶದ ಬಹುತೇಕ ಕಡೆಗಳಲ್ಲಿ ಚಿತ್ರಮಂದಿರಗಳು ಕ್ಲೋಸ್ ಇದ್ದವು. ಈ ಕಾರಣಕ್ಕೆ ಚಿತ್ರತಂಡ ಒಟಿಟಿ ಮೊರೆ ಹೋಗಿತ್ತು. ಸಂಪ್ರದಾಯ ಬ್ರೇಕ್​ ಮಾಡಬಾರದು ಎನ್ನುವ ಕಾರಣಕ್ಕೆ ಚಿತ್ರಮಂದಿರದಲ್ಲೂ ಸಲ್ಲು ಸಿನಿಮಾ ರಿಲೀಸ್ ಆಗಿತ್ತು. ಈಗ ಕೊವಿಡ್​ ಕಡಿಮೆ ಆಗಿದ್ದು ದೇಶದ ಬಹುತೇಕ ಕಡೆ ಚಿತ್ರಮಂದಿರ ಓಪನ್​ ಆಗಿದೆ. ಆದಾಗ್ಯೂ ಸಲ್ಲು, ಮತ್ತದೇ ಹಳೆಯ ನಿರ್ಧಾರ ಕೈಗೊಳ್ಳುತ್ತಿದ್ದಾರೆ.

‘ಅಂತಿಮ್​-ದಿ ಫೈನಲ್​ ಟ್ರುತ್​’ ಸಿನಿಮಾದಲ್ಲಿ ಸಲ್ಲು ನಟಿಸುತ್ತಿದ್ದಾರೆ. ಈ ಸಿನಿಮಾ ಜೀ 5ನಲ್ಲಿ ಪ್ರೀಮಿಯರ್​ ಆಗಲಿದೆ ಎನ್ನಲಾಗುತ್ತಿದೆ. ಆಯುಶ್​ ಶರ್ಮಾ ಗ್ಯಾಂಗ್​ಸ್ಟರ್​ ಆಗಿ ಕಾಣಿಸಿಕೊಂಡರೆ, ಸಲ್ಲು ಸಿಖ್​ ಪೊಲೀಸ್​ ಆಗಿ ನಟಿಸಿದ್ದಾರೆ.  ಕೊವಿಡ್ ಕಾರಣದಿಂದ ಮಹಾರಾಷ್ಟ್ರದಲ್ಲಿ ಇನ್ನೂ ಚಿತ್ರಮಂದಿರ ತೆರೆದಿಲ್ಲ. ಹೀಗಾಗಿ, ಒಟಿಟಿ ರಿಲೀಸ್​ಗೆ ಸಲ್ಲು ಹೆಚ್ಚು ಒತ್ತು ಕೊಡುತ್ತಿದ್ದಾರೆ. ಈ ಮೂಲಕ ಹೆಚ್ಚು ಜನರನ್ನು ತಲುಪೋ ಆಲೋಚನೆ ಅವರದ್ದು. ಇನ್ನು, ಚಿತ್ರಮಂದಿರಗಳಲ್ಲೂ ಈ ಸಿನಿಮಾ ತೆರೆಗೆ ಬರುತ್ತಿದೆ.

‘ಅಂತಿಮ್​-ದಿ ಫೈನಲ್​ ಟ್ರುತ್​’ ಚಿತ್ರದ ಮೇಲೆ ಸಾಕಷ್ಟು ನಿರೀಕ್ಷೆ ಇದೆ. ಇನ್ನು, ಸಲ್ಲು ಸಿನಿಮಾ ಎಂದರೆ ಅಲ್ಲಿ, ಆ್ಯಕ್ಷನ್​ಗೆ ಯಾವುದೇ ಕೊರತೆ ಇರುವುದಿಲ್ಲ. ಆದರೆ, ಈ ಸಿನಿಮಾ ಚಿತ್ರಮಂದಿರ ಹಾಗೂ ಒಟಿಟಿಯಲ್ಲಿ ಒಟ್ಟಿಗೆ ರಿಲೀಸ್​ ಆಗುತ್ತಿರುವುದರಿಂದ ಬಾಕ್ಸ್​ ಆಫೀಸ್​ ಕಲೆಕ್ಷನ್​ಗೆ ಹೊಡೆತ ಬೀಳಲಿದೆ. ಈ ಬಗ್ಗೆ ಅಭಿಮಾನಿಗಳು ಬೇಸರ ಹೊರ ಹಾಕಿದ್ದಾರೆ.

ಇದನ್ನೂ ಓದಿ: ರಾಜಮೌಳಿ ರಿಜೆಕ್ಟ್​ ಮಾಡಿದ್ದ ಸಲ್ಮಾನ್​ ಖಾನ್ ಸಿನಿಮಾ ಸೂಪರ್​ ಹಿಟ್​; ವಿಜಯೇಂದ್ರ ಪ್ರಸಾದ್​ ಪಶ್ಚಾತ್ತಾಪ

ಸಲ್ಮಾನ್ ಖಾನ್ ‘ಹಿಟ್​ ಆಂಡ್ ರನ್’ ಪ್ರಕರಣವನ್ನು ಹೋಲುವ ‘ಸೆಲ್ಮೋನ್ ಭಾಯಿ’ ಗೇಮ್​ಗೆ ಕೋರ್ಟ್ ತಡೆ; ಏನಿದು ಪ್ರಕರಣ?

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ