Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪದೇಪದೇ ಅದೇ ತಪ್ಪು ಮಾಡುತ್ತಿದ್ದಾರೆ ಸಲ್ಮಾನ್​ ಖಾನ್​; ಬೇಸರ ಹೊರ ಹಾಕಿದ ಫ್ಯಾನ್ಸ್​

‘ರಾಧೆ’ ಸಿನಿಮಾ ರಿಲೀಸ್ ಆಗುವಾಗ ದೇಶದ ಬಹುತೇಕ ಕಡೆಗಳಲ್ಲಿ ಚಿತ್ರಮಂದಿರಗಳು ಕ್ಲೋಸ್ ಇದ್ದವು. ಈ ಕಾರಣಕ್ಕೆ ಚಿತ್ರತಂಡ ಒಟಿಟಿ ಮೊರೆ ಹೋಗಿತ್ತು. ಸಂಪ್ರದಾಯ ಬ್ರೇಕ್​ ಮಾಡಬಾರದು ಎನ್ನುವ ಕಾರಣಕ್ಕೆ ಚಿತ್ರಮಂದಿರದಲ್ಲೂ ಸಲ್ಲು ಸಿನಿಮಾ ರಿಲೀಸ್ ಆಗಿತ್ತು.

ಪದೇಪದೇ ಅದೇ ತಪ್ಪು ಮಾಡುತ್ತಿದ್ದಾರೆ ಸಲ್ಮಾನ್​ ಖಾನ್​; ಬೇಸರ ಹೊರ ಹಾಕಿದ ಫ್ಯಾನ್ಸ್​
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Sep 11, 2021 | 7:24 PM

ಸಲ್ಮಾನ್​ ಖಾನ್​ ಸಿನಿಮಾಗಳು ಬಾಕ್ಸ್​ ಆಫೀಸ್​ನಲ್ಲಿ ದೊಡ್ಡ ಮಟ್ಟದಲ್ಲಿ ಗಳಿಕೆ ಮಾಡುತ್ತದೆ. ಸಲ್ಲು ಸಿನಿಮಾ ವಿಮರ್ಶೆಯಲ್ಲಿ ಸೋತ ಹೊರತಾಗಿಯೂ ನೂರು ಕೋಟಿ ರೂಪಾಯಿ ಗಳಿಕೆ ಮಾಡಿದ ಉದಾಹರಣೆ ಸಾಕಷ್ಟಿದೆ. ‘ರಾಧೆ: ಯುವರ್​ ಮೋಸ್ಟ್ ವಾಂಟೆಡ್​ ಭಾಯ್​’ ಚಿತ್ರದ ವಿಚಾರದಲ್ಲಿ ಸಲ್ಮಾನ್ ಖಾನ್​ ತಪ್ಪು ನಿರ್ಧಾರ ತೆಗೆದುಕೊಂಡಿದ್ದರು. ಒಟಿಟಿ ಹಾಗೂ ಚಿತ್ರಮಂದಿರಗಳಲ್ಲಿ ಸಿನಿಮಾ ಒಟ್ಟಿಗೆ ರಿಲೀಸ್​ ಮಾಡಿದ್ದರು. ಇದರಿಂದಾಗಿ ಚಿತ್ರದ ಬಾಕ್ಸ್​ ಆಫೀಸ್​ ಕಲೆಕ್ಷನ್​ ತೀವ್ರಗತಿಯಲ್ಲಿ ಕುಸಿದಿತ್ತು. ಆದರೆ, ಈಗ ಸಲ್ಲು ಮತ್ತದೇ ತಪ್ಪು ಮಾಡುತ್ತಿದ್ದಾರೆ.

‘ರಾಧೆ’ ಸಿನಿಮಾ ರಿಲೀಸ್ ಆಗುವಾಗ ದೇಶದ ಬಹುತೇಕ ಕಡೆಗಳಲ್ಲಿ ಚಿತ್ರಮಂದಿರಗಳು ಕ್ಲೋಸ್ ಇದ್ದವು. ಈ ಕಾರಣಕ್ಕೆ ಚಿತ್ರತಂಡ ಒಟಿಟಿ ಮೊರೆ ಹೋಗಿತ್ತು. ಸಂಪ್ರದಾಯ ಬ್ರೇಕ್​ ಮಾಡಬಾರದು ಎನ್ನುವ ಕಾರಣಕ್ಕೆ ಚಿತ್ರಮಂದಿರದಲ್ಲೂ ಸಲ್ಲು ಸಿನಿಮಾ ರಿಲೀಸ್ ಆಗಿತ್ತು. ಈಗ ಕೊವಿಡ್​ ಕಡಿಮೆ ಆಗಿದ್ದು ದೇಶದ ಬಹುತೇಕ ಕಡೆ ಚಿತ್ರಮಂದಿರ ಓಪನ್​ ಆಗಿದೆ. ಆದಾಗ್ಯೂ ಸಲ್ಲು, ಮತ್ತದೇ ಹಳೆಯ ನಿರ್ಧಾರ ಕೈಗೊಳ್ಳುತ್ತಿದ್ದಾರೆ.

‘ಅಂತಿಮ್​-ದಿ ಫೈನಲ್​ ಟ್ರುತ್​’ ಸಿನಿಮಾದಲ್ಲಿ ಸಲ್ಲು ನಟಿಸುತ್ತಿದ್ದಾರೆ. ಈ ಸಿನಿಮಾ ಜೀ 5ನಲ್ಲಿ ಪ್ರೀಮಿಯರ್​ ಆಗಲಿದೆ ಎನ್ನಲಾಗುತ್ತಿದೆ. ಆಯುಶ್​ ಶರ್ಮಾ ಗ್ಯಾಂಗ್​ಸ್ಟರ್​ ಆಗಿ ಕಾಣಿಸಿಕೊಂಡರೆ, ಸಲ್ಲು ಸಿಖ್​ ಪೊಲೀಸ್​ ಆಗಿ ನಟಿಸಿದ್ದಾರೆ.  ಕೊವಿಡ್ ಕಾರಣದಿಂದ ಮಹಾರಾಷ್ಟ್ರದಲ್ಲಿ ಇನ್ನೂ ಚಿತ್ರಮಂದಿರ ತೆರೆದಿಲ್ಲ. ಹೀಗಾಗಿ, ಒಟಿಟಿ ರಿಲೀಸ್​ಗೆ ಸಲ್ಲು ಹೆಚ್ಚು ಒತ್ತು ಕೊಡುತ್ತಿದ್ದಾರೆ. ಈ ಮೂಲಕ ಹೆಚ್ಚು ಜನರನ್ನು ತಲುಪೋ ಆಲೋಚನೆ ಅವರದ್ದು. ಇನ್ನು, ಚಿತ್ರಮಂದಿರಗಳಲ್ಲೂ ಈ ಸಿನಿಮಾ ತೆರೆಗೆ ಬರುತ್ತಿದೆ.

‘ಅಂತಿಮ್​-ದಿ ಫೈನಲ್​ ಟ್ರುತ್​’ ಚಿತ್ರದ ಮೇಲೆ ಸಾಕಷ್ಟು ನಿರೀಕ್ಷೆ ಇದೆ. ಇನ್ನು, ಸಲ್ಲು ಸಿನಿಮಾ ಎಂದರೆ ಅಲ್ಲಿ, ಆ್ಯಕ್ಷನ್​ಗೆ ಯಾವುದೇ ಕೊರತೆ ಇರುವುದಿಲ್ಲ. ಆದರೆ, ಈ ಸಿನಿಮಾ ಚಿತ್ರಮಂದಿರ ಹಾಗೂ ಒಟಿಟಿಯಲ್ಲಿ ಒಟ್ಟಿಗೆ ರಿಲೀಸ್​ ಆಗುತ್ತಿರುವುದರಿಂದ ಬಾಕ್ಸ್​ ಆಫೀಸ್​ ಕಲೆಕ್ಷನ್​ಗೆ ಹೊಡೆತ ಬೀಳಲಿದೆ. ಈ ಬಗ್ಗೆ ಅಭಿಮಾನಿಗಳು ಬೇಸರ ಹೊರ ಹಾಕಿದ್ದಾರೆ.

ಇದನ್ನೂ ಓದಿ: ರಾಜಮೌಳಿ ರಿಜೆಕ್ಟ್​ ಮಾಡಿದ್ದ ಸಲ್ಮಾನ್​ ಖಾನ್ ಸಿನಿಮಾ ಸೂಪರ್​ ಹಿಟ್​; ವಿಜಯೇಂದ್ರ ಪ್ರಸಾದ್​ ಪಶ್ಚಾತ್ತಾಪ

ಸಲ್ಮಾನ್ ಖಾನ್ ‘ಹಿಟ್​ ಆಂಡ್ ರನ್’ ಪ್ರಕರಣವನ್ನು ಹೋಲುವ ‘ಸೆಲ್ಮೋನ್ ಭಾಯಿ’ ಗೇಮ್​ಗೆ ಕೋರ್ಟ್ ತಡೆ; ಏನಿದು ಪ್ರಕರಣ?

ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ
ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ
ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ
ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ
ಉಗ್ರರ ಅಟ್ಟಹಾಸದಿಂದ ರಕ್ತಪಾತವಾದ ಪಹಲ್ಗಾಮ್ ಈಗ ಹೇಗಿದೆ ನೋಡಿ...
ಉಗ್ರರ ಅಟ್ಟಹಾಸದಿಂದ ರಕ್ತಪಾತವಾದ ಪಹಲ್ಗಾಮ್ ಈಗ ಹೇಗಿದೆ ನೋಡಿ...
ಕಾಶ್ಮೀರದ ಉಗ್ರರ ದಾಳಿ ಬಗ್ಗೆ ಅಮೆರಿಕ ಉಪಾಧ್ಯಕ್ಷ ವ್ಯಾನ್ಸ್ ಹೇಳಿದ್ದೇನು?
ಕಾಶ್ಮೀರದ ಉಗ್ರರ ದಾಳಿ ಬಗ್ಗೆ ಅಮೆರಿಕ ಉಪಾಧ್ಯಕ್ಷ ವ್ಯಾನ್ಸ್ ಹೇಳಿದ್ದೇನು?
ಬಿಜೆಪಿಯಿಂದ ಹೊರಬಿದ್ದ ಬಳಿಕ ಜನಪ್ರಿಯತೆ ಹೆಚ್ಚುತ್ತಾ ಸಾಗಿದೆ: ಯತ್ನಾಳ್
ಬಿಜೆಪಿಯಿಂದ ಹೊರಬಿದ್ದ ಬಳಿಕ ಜನಪ್ರಿಯತೆ ಹೆಚ್ಚುತ್ತಾ ಸಾಗಿದೆ: ಯತ್ನಾಳ್
ಉಗ್ರರಿಗೆ ಪಾಕಿಸ್ತಾನ ತರಬೇತಿ ನೀಡುತ್ತಿರೋದನ್ನು ಖಂಡಿಸಬೇಕು: ಹರಿಪ್ರಸಾದ್​​
ಉಗ್ರರಿಗೆ ಪಾಕಿಸ್ತಾನ ತರಬೇತಿ ನೀಡುತ್ತಿರೋದನ್ನು ಖಂಡಿಸಬೇಕು: ಹರಿಪ್ರಸಾದ್​​
ಪಹಲ್ಗಾಮ್ ದಾಳಿ: ಹುಟ್ಟುಹಬ್ಬ ಆಚರಣೆ ರದ್ದು ಮಾಡಿದ ಯುವ
ಪಹಲ್ಗಾಮ್ ದಾಳಿ: ಹುಟ್ಟುಹಬ್ಬ ಆಚರಣೆ ರದ್ದು ಮಾಡಿದ ಯುವ
ಪಹಲ್ಗಾಮ್‌ ಉಗ್ರರ ದಾಳಿಯಿಂದ ಗ್ರೇಟ್​ ಎಸ್ಕೆಪ್​ ಆದ ಬಾಗಲಕೋಟೆಯ 13 ಮಂದಿ
ಪಹಲ್ಗಾಮ್‌ ಉಗ್ರರ ದಾಳಿಯಿಂದ ಗ್ರೇಟ್​ ಎಸ್ಕೆಪ್​ ಆದ ಬಾಗಲಕೋಟೆಯ 13 ಮಂದಿ
ಉಗ್ರರ ದಾಳಿಗೆ ಬಲಿಯಾದ ಲೆ. ವಿನಯ್ ನರ್ವಾಲ್​ಗೆ ಪತ್ನಿಯಿಂದ ಭಾವುಕ ವಿದಾಯ
ಉಗ್ರರ ದಾಳಿಗೆ ಬಲಿಯಾದ ಲೆ. ವಿನಯ್ ನರ್ವಾಲ್​ಗೆ ಪತ್ನಿಯಿಂದ ಭಾವುಕ ವಿದಾಯ
ಈಗ ಮತಾಂತರ ಮಾಡಲಾಗಲ್ಲ, ಹಾಗಾಗೇ ಮುಸ್ಲಿಮೇತರರನ್ನು ಕೊಲ್ಲೋದು: ರವಿ
ಈಗ ಮತಾಂತರ ಮಾಡಲಾಗಲ್ಲ, ಹಾಗಾಗೇ ಮುಸ್ಲಿಮೇತರರನ್ನು ಕೊಲ್ಲೋದು: ರವಿ