ಸಲ್ಮಾನ್​ ಖಾನ್​ ಮಾಡಿದ 30 ಸೆಕೆಂಡ್​ ಕೆಲಸಕ್ಕೆ 50 ಲಕ್ಷ ರೂ. ಸಂಬಳ; ಸಲ್ಲು ಬರೆದಿದ್ದು ಒಂದೇ ವಾಕ್ಯ

ಸಲ್ಮಾನ್​ ಖಾನ್​ ಹಂಚಿಕೊಂಡಿರುವ ಒಂದು ಜಾಹೀರಾತಿನಿಂದ ಅವರಿಗೆ ಬರೋಬ್ಬರಿ 50 ಲಕ್ಷ ರೂ. ಸಂಭಾವನೆ ಸಿಕ್ಕಿದೆ ಎನ್ನಲಾಗಿದೆ. ಅದು ಶಾರುಖ್​ ಖಾನ್​ಗೆ ಸಂಬಂಧಿಸಿದ ಜಾಹೀರಾತು ಎಂಬುದು ವಿಶೇಷ.

ಸಲ್ಮಾನ್​ ಖಾನ್​ ಮಾಡಿದ 30 ಸೆಕೆಂಡ್​ ಕೆಲಸಕ್ಕೆ 50 ಲಕ್ಷ ರೂ. ಸಂಬಳ; ಸಲ್ಲು ಬರೆದಿದ್ದು ಒಂದೇ ವಾಕ್ಯ
ಸಲ್ಮಾನ್​ ಖಾನ್​
Follow us
| Updated By: ಮದನ್​ ಕುಮಾರ್​

Updated on: Sep 18, 2021 | 9:34 AM

ನಟ ಸಲ್ಮಾನ್​ ಖಾನ್​ಗೆ ಯಾವ ಪರಿ ಡಿಮ್ಯಾಂಡ್​ ಇದೆ ಎಂಬುದನ್ನು ಬಿಡಿಸಿ ಹೇಳಬೇಕಾಗಿಲ್ಲ. ಸಿನಿಮಾಗಳು ಸೋತರೂ ಅವರ ಸ್ಟಾರ್​ ಗಿರಿ ಕಿಂಚಿತ್ತೂ ಕಮ್ಮಿ ಆಗುತ್ತಿಲ್ಲ. ಹಾಗಾಗಿ ಅವರಿಗೆ ನೂರಾರು ಕೋಟಿ ರೂ. ಸಂಭಾವನೆ ಸಿಗುತ್ತದೆ. ಸಿನಿಮಾಗಳು ಮಾತ್ರವಲ್ಲದೇ ಬಿಗ್​ ಬಾಸ್​ ರಿಯಾಲಿಟಿ ಶೋ ನಿರೂಪಣೆಯಿಂದಲೂ ಅವರು ಭರ್ಜರಿ ಸಂಬಳ ಪಡೆಯುತ್ತಾರೆ. ಅದೆಲ್ಲವನ್ನೂ ಮೀರಿಸುವಂತಹ ಸುದ್ದಿಯೊಂದು ಈಗ ಕೇಳಿಬಂದಿದೆ. ಸಣ್ಣದೊಂದು ಕೆಲಸ ಮಾಡಿದ್ದಕ್ಕೆ ಸಲ್ಮಾನ್​ ಖಾನ್​ಗೆ ಬರೋಬ್ಬರಿ 50 ಲಕ್ಷ ರೂ. ಸಂಭಾವನೆ ನೀಡಲಾಗಿದೆ ಎಂಬ ಮಾಹಿತಿ ಬಿ-ಟೌನ್​ ಅಂಗಳದಲ್ಲಿ ಹರಿದಾಡುತ್ತಿದೆ. ಏನದು ಕೆಲಸ? ಒಂದು ಒಂದೇ ಒಂದು ಜಾಹೀರಾತನ್ನು ಶೇರ್​ ಮಾಡಿದ್ದು! ಈ ಕೆಲಸಕ್ಕೆ 30 ಸೆಕೆಂಡ್​ ಸಮಯ ಸಾಕು.

ಸೆಲೆಬ್ರಿಟಿಗಳು ತಮ್ಮ ಸೋಶಿಯಲ್​ ಮೀಡಿಯಾ ಪೋಸ್ಟ್​ ಮೂಲಕವೂ ಹಣ ಗಳಿಸುತ್ತಾರೆ. ಕಮರ್ಷಿಯಲ್​ ಜಾಹೀರಾತುಗಳನ್ನು ತಮ್ಮ ಖಾತೆಗಳಲ್ಲಿ ಶೇರ್​ ಮಾಡಿಕೊಂಡರೆ ಅವರಿಗೆ ಹಣ ಸಿಗುತ್ತದೆ. ಈಗ ಸಲ್ಮಾನ್​ ಖಾನ್​ ಹಂಚಿಕೊಂಡಿರುವ ಒಂದು ಜಾಹೀರಾತಿನಿಂದ ಅವರಿಗೆ ಬರೋಬ್ಬರಿ 50 ಲಕ್ಷ ರೂ. ಸಿಕ್ಕಿದೆ ಎನ್ನಲಾಗಿದೆ. ಯಾವುದು ಆ ಜಾಹೀರಾತು? ಶಾರುಖ್​ ಖಾನ್​ ಓಟಿಟಿ ಎಂಟ್ರಿಗೆ ಸಕಲ ಸಿದ್ಧತೆ ನಡೆಯುತ್ತಿದೆ. ಅದಕ್ಕಾಗಿ ಒಂದು ಜಾಹೀರಾತು ತಯಾರಿಸಲಾಗಿದ್ದು, ಅದನ್ನು ಸಲ್ಮಾನ್​ ಖಾನ್​ ಶೇರ್​ ಮಾಡಿಕೊಂಡಿದ್ದಾರೆ. ಅದಕ್ಕೆ ಅವರಿಗೆ 50 ಲಕ್ಷ ರೂ. ಹಣ ನೀಡಲಾಗಿದೆ ಎಂಬ ಮಾತು ಕೇಳಿಬರುತ್ತಿದೆ.

ಈವರೆಗೂ ಶಾರುಖ್​ ಖಾನ್​ ಓಟಿಟಿ ಪ್ರವೇಶಿಸಿಲ್ಲ. ಇತ್ತ ಅವರ ಸಿನಿಮಾಗಳು ಕೂಡ ಬಾಕ್ಸ್​ಆಫೀಸ್​ನಲ್ಲಿ ಗೆಲ್ಲುತ್ತಿಲ್ಲ. ಹಾಗಾಗಿ ಅವರನ್ನು ಓಟಿಟಿಗೆ ಕರೆದುಕೊಂಡು ಬರಲು ಡಿಸ್ನಿ ಪ್ಲಸ್​ ಹಾಟ್​ಸ್ಟಾರ್​ ಸಂಸ್ಥೆ ಪ್ಲ್ಯಾನ್​ ಮಾಡಿದೆ. ಅದಕ್ಕೆ ಶಾರುಖ್​ ಕೂಡ ಒಪ್ಪಿದ್ದು, ಜಾಹೀರಾತುಗಳ ಮೂಲಕ ಭರ್ಜರಿ ಪ್ರಚಾರ ಮಾಡಲಾಗುತ್ತಿದೆ. ಅದಕ್ಕೆ ಸಲ್ಮಾನ್​ ಖಾನ್​ ಕೂಡ ಕೈ ಜೋಡಿಸಿದ್ದಾರೆ. ಜಾಹೀರಾತನ್ನು ಶೇರ್​ ಮಾಡಿಕೊಂಡಿರುವ ಅವರು, ‘ಶಾರುಖ್​ ಖಾನ್​ಗೆ ಸ್ವಾಗತ ಮಾಡುವುದಿಲ್ಲವೇ?’ ಎಂದು ಒಂದೇ ಒಂದು ವಾಕ್ಯ ಕ್ಯಾಪ್ಷನ್​ ನೀಡಿದ್ದಾರೆ. ಇಷ್ಟು ಮಾಡಿದ್ದಕ್ಕೆ ಭಾರಿ ಮೊತ್ತದ ಸಂಭಾವನೆಯನ್ನು ಜೇಬಿಗೆ ಇಳಿಸಿಕೊಂಡಿದ್ದಾರೆ.

ಇದನ್ನೂ ಓದಿ:

ಸಿದ್ದಾರ್ಥ್​ ಶುಕ್ಲಾ ಸಾವಿನ ಬಗ್ಗೆ ನಗುತ್ತಾ ಮಾತನಾಡಿದ್ದ ಸಲ್ಮಾನ್​ ಖಾನ್​: ಶಾಕಿಂಗ್​ ವಿಡಿಯೋ ವೈರಲ್

ಟ್ವಿಟರ್​ನಲ್ಲಿ ಟ್ರೆಂಡ್​ ಆಯ್ತು ಶಾರುಖ್​ ಖಾನ್​ ‘ಪಠಾಣ್​’; ಸಿನಿಮಾ ತಂಡ ಕೊಟ್ಟ ಹೊಸ ಅಪ್​ಡೇಟ್​ ಏನು?

‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ