AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಲ್ಮಾನ್​ ಖಾನ್​ ಮಾಡಿದ 30 ಸೆಕೆಂಡ್​ ಕೆಲಸಕ್ಕೆ 50 ಲಕ್ಷ ರೂ. ಸಂಬಳ; ಸಲ್ಲು ಬರೆದಿದ್ದು ಒಂದೇ ವಾಕ್ಯ

ಸಲ್ಮಾನ್​ ಖಾನ್​ ಹಂಚಿಕೊಂಡಿರುವ ಒಂದು ಜಾಹೀರಾತಿನಿಂದ ಅವರಿಗೆ ಬರೋಬ್ಬರಿ 50 ಲಕ್ಷ ರೂ. ಸಂಭಾವನೆ ಸಿಕ್ಕಿದೆ ಎನ್ನಲಾಗಿದೆ. ಅದು ಶಾರುಖ್​ ಖಾನ್​ಗೆ ಸಂಬಂಧಿಸಿದ ಜಾಹೀರಾತು ಎಂಬುದು ವಿಶೇಷ.

ಸಲ್ಮಾನ್​ ಖಾನ್​ ಮಾಡಿದ 30 ಸೆಕೆಂಡ್​ ಕೆಲಸಕ್ಕೆ 50 ಲಕ್ಷ ರೂ. ಸಂಬಳ; ಸಲ್ಲು ಬರೆದಿದ್ದು ಒಂದೇ ವಾಕ್ಯ
ಸಲ್ಮಾನ್​ ಖಾನ್​
TV9 Web
| Edited By: |

Updated on: Sep 18, 2021 | 9:34 AM

Share

ನಟ ಸಲ್ಮಾನ್​ ಖಾನ್​ಗೆ ಯಾವ ಪರಿ ಡಿಮ್ಯಾಂಡ್​ ಇದೆ ಎಂಬುದನ್ನು ಬಿಡಿಸಿ ಹೇಳಬೇಕಾಗಿಲ್ಲ. ಸಿನಿಮಾಗಳು ಸೋತರೂ ಅವರ ಸ್ಟಾರ್​ ಗಿರಿ ಕಿಂಚಿತ್ತೂ ಕಮ್ಮಿ ಆಗುತ್ತಿಲ್ಲ. ಹಾಗಾಗಿ ಅವರಿಗೆ ನೂರಾರು ಕೋಟಿ ರೂ. ಸಂಭಾವನೆ ಸಿಗುತ್ತದೆ. ಸಿನಿಮಾಗಳು ಮಾತ್ರವಲ್ಲದೇ ಬಿಗ್​ ಬಾಸ್​ ರಿಯಾಲಿಟಿ ಶೋ ನಿರೂಪಣೆಯಿಂದಲೂ ಅವರು ಭರ್ಜರಿ ಸಂಬಳ ಪಡೆಯುತ್ತಾರೆ. ಅದೆಲ್ಲವನ್ನೂ ಮೀರಿಸುವಂತಹ ಸುದ್ದಿಯೊಂದು ಈಗ ಕೇಳಿಬಂದಿದೆ. ಸಣ್ಣದೊಂದು ಕೆಲಸ ಮಾಡಿದ್ದಕ್ಕೆ ಸಲ್ಮಾನ್​ ಖಾನ್​ಗೆ ಬರೋಬ್ಬರಿ 50 ಲಕ್ಷ ರೂ. ಸಂಭಾವನೆ ನೀಡಲಾಗಿದೆ ಎಂಬ ಮಾಹಿತಿ ಬಿ-ಟೌನ್​ ಅಂಗಳದಲ್ಲಿ ಹರಿದಾಡುತ್ತಿದೆ. ಏನದು ಕೆಲಸ? ಒಂದು ಒಂದೇ ಒಂದು ಜಾಹೀರಾತನ್ನು ಶೇರ್​ ಮಾಡಿದ್ದು! ಈ ಕೆಲಸಕ್ಕೆ 30 ಸೆಕೆಂಡ್​ ಸಮಯ ಸಾಕು.

ಸೆಲೆಬ್ರಿಟಿಗಳು ತಮ್ಮ ಸೋಶಿಯಲ್​ ಮೀಡಿಯಾ ಪೋಸ್ಟ್​ ಮೂಲಕವೂ ಹಣ ಗಳಿಸುತ್ತಾರೆ. ಕಮರ್ಷಿಯಲ್​ ಜಾಹೀರಾತುಗಳನ್ನು ತಮ್ಮ ಖಾತೆಗಳಲ್ಲಿ ಶೇರ್​ ಮಾಡಿಕೊಂಡರೆ ಅವರಿಗೆ ಹಣ ಸಿಗುತ್ತದೆ. ಈಗ ಸಲ್ಮಾನ್​ ಖಾನ್​ ಹಂಚಿಕೊಂಡಿರುವ ಒಂದು ಜಾಹೀರಾತಿನಿಂದ ಅವರಿಗೆ ಬರೋಬ್ಬರಿ 50 ಲಕ್ಷ ರೂ. ಸಿಕ್ಕಿದೆ ಎನ್ನಲಾಗಿದೆ. ಯಾವುದು ಆ ಜಾಹೀರಾತು? ಶಾರುಖ್​ ಖಾನ್​ ಓಟಿಟಿ ಎಂಟ್ರಿಗೆ ಸಕಲ ಸಿದ್ಧತೆ ನಡೆಯುತ್ತಿದೆ. ಅದಕ್ಕಾಗಿ ಒಂದು ಜಾಹೀರಾತು ತಯಾರಿಸಲಾಗಿದ್ದು, ಅದನ್ನು ಸಲ್ಮಾನ್​ ಖಾನ್​ ಶೇರ್​ ಮಾಡಿಕೊಂಡಿದ್ದಾರೆ. ಅದಕ್ಕೆ ಅವರಿಗೆ 50 ಲಕ್ಷ ರೂ. ಹಣ ನೀಡಲಾಗಿದೆ ಎಂಬ ಮಾತು ಕೇಳಿಬರುತ್ತಿದೆ.

ಈವರೆಗೂ ಶಾರುಖ್​ ಖಾನ್​ ಓಟಿಟಿ ಪ್ರವೇಶಿಸಿಲ್ಲ. ಇತ್ತ ಅವರ ಸಿನಿಮಾಗಳು ಕೂಡ ಬಾಕ್ಸ್​ಆಫೀಸ್​ನಲ್ಲಿ ಗೆಲ್ಲುತ್ತಿಲ್ಲ. ಹಾಗಾಗಿ ಅವರನ್ನು ಓಟಿಟಿಗೆ ಕರೆದುಕೊಂಡು ಬರಲು ಡಿಸ್ನಿ ಪ್ಲಸ್​ ಹಾಟ್​ಸ್ಟಾರ್​ ಸಂಸ್ಥೆ ಪ್ಲ್ಯಾನ್​ ಮಾಡಿದೆ. ಅದಕ್ಕೆ ಶಾರುಖ್​ ಕೂಡ ಒಪ್ಪಿದ್ದು, ಜಾಹೀರಾತುಗಳ ಮೂಲಕ ಭರ್ಜರಿ ಪ್ರಚಾರ ಮಾಡಲಾಗುತ್ತಿದೆ. ಅದಕ್ಕೆ ಸಲ್ಮಾನ್​ ಖಾನ್​ ಕೂಡ ಕೈ ಜೋಡಿಸಿದ್ದಾರೆ. ಜಾಹೀರಾತನ್ನು ಶೇರ್​ ಮಾಡಿಕೊಂಡಿರುವ ಅವರು, ‘ಶಾರುಖ್​ ಖಾನ್​ಗೆ ಸ್ವಾಗತ ಮಾಡುವುದಿಲ್ಲವೇ?’ ಎಂದು ಒಂದೇ ಒಂದು ವಾಕ್ಯ ಕ್ಯಾಪ್ಷನ್​ ನೀಡಿದ್ದಾರೆ. ಇಷ್ಟು ಮಾಡಿದ್ದಕ್ಕೆ ಭಾರಿ ಮೊತ್ತದ ಸಂಭಾವನೆಯನ್ನು ಜೇಬಿಗೆ ಇಳಿಸಿಕೊಂಡಿದ್ದಾರೆ.

ಇದನ್ನೂ ಓದಿ:

ಸಿದ್ದಾರ್ಥ್​ ಶುಕ್ಲಾ ಸಾವಿನ ಬಗ್ಗೆ ನಗುತ್ತಾ ಮಾತನಾಡಿದ್ದ ಸಲ್ಮಾನ್​ ಖಾನ್​: ಶಾಕಿಂಗ್​ ವಿಡಿಯೋ ವೈರಲ್

ಟ್ವಿಟರ್​ನಲ್ಲಿ ಟ್ರೆಂಡ್​ ಆಯ್ತು ಶಾರುಖ್​ ಖಾನ್​ ‘ಪಠಾಣ್​’; ಸಿನಿಮಾ ತಂಡ ಕೊಟ್ಟ ಹೊಸ ಅಪ್​ಡೇಟ್​ ಏನು?

Follow Us
ಉದ್ಘಾಟನೆಯಾದ 6 ತಿಂಗಳೊಳಗೆ ಬಂಗಾಳದ ಫ್ಲೈಓವರ್ ಗೋಡೆ ಕುಸಿತ
ಉದ್ಘಾಟನೆಯಾದ 6 ತಿಂಗಳೊಳಗೆ ಬಂಗಾಳದ ಫ್ಲೈಓವರ್ ಗೋಡೆ ಕುಸಿತ
ಮುಜುರಾಯಿ ದೇಗುಲಗಳಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಲು ಗ್ಯಾಸ್ ಸಮಸ್ಯೆ
ಮುಜುರಾಯಿ ದೇಗುಲಗಳಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಲು ಗ್ಯಾಸ್ ಸಮಸ್ಯೆ
ಯಾದಗಿರಿ ಭೂಗರ್ಭದಲ್ಲಿ ಅಡಗಿದೆಯಾ ಖನಿಜ ನಿಕ್ಷೇಪ? ಹೆಲಿಕಾಪ್ಟರ್ ಮೂಲಕ ಶೋಧ
ಯಾದಗಿರಿ ಭೂಗರ್ಭದಲ್ಲಿ ಅಡಗಿದೆಯಾ ಖನಿಜ ನಿಕ್ಷೇಪ? ಹೆಲಿಕಾಪ್ಟರ್ ಮೂಲಕ ಶೋಧ
ಯುಗಾದಿ ವರ್ಷ ಭವಿಷ್ಯ; ಮೀನ ರಾಶಿಗೆ ಈ ವರ್ಷ ಹೇಗಿರಲಿದೆ?
ಯುಗಾದಿ ವರ್ಷ ಭವಿಷ್ಯ; ಮೀನ ರಾಶಿಗೆ ಈ ವರ್ಷ ಹೇಗಿರಲಿದೆ?
ಯುಗಾದಿ ವರ್ಷ ಭವಿಷ್ಯ; ಈ ರಾಶಿಗೆ ವಿವಾಹ ಯೋಗ ಹಾಗೂ ಹೊಸ ಉದ್ಯೋಗಾವಕಾಶ
ಯುಗಾದಿ ವರ್ಷ ಭವಿಷ್ಯ; ಈ ರಾಶಿಗೆ ವಿವಾಹ ಯೋಗ ಹಾಗೂ ಹೊಸ ಉದ್ಯೋಗಾವಕಾಶ
ಏರ್ ಇಂಡಿಯಾ ವಿಮಾನ ಹಾರ್ಡ್​ ಲ್ಯಾಂಡಿಂಗ್, ಪುಡಿ ಪುಡಿಯಾದ ಚಕ್ರ
ಏರ್ ಇಂಡಿಯಾ ವಿಮಾನ ಹಾರ್ಡ್​ ಲ್ಯಾಂಡಿಂಗ್, ಪುಡಿ ಪುಡಿಯಾದ ಚಕ್ರ
ಗ್ಯಾಸ್ ನೋ ಸ್ಟಾಕ್: ಬೆಂಗಳೂರಿನಲ್ಲಿ ಬಂಕ್ ಬಂದ್, ಆಟೋದವರ ದುಡಿಮೆಗೂ ಕುತ್ತು
ಗ್ಯಾಸ್ ನೋ ಸ್ಟಾಕ್: ಬೆಂಗಳೂರಿನಲ್ಲಿ ಬಂಕ್ ಬಂದ್, ಆಟೋದವರ ದುಡಿಮೆಗೂ ಕುತ್ತು
ಯುಗಾದಿ ವರ್ಷ ಭವಿಷ್ಯ; ಈ ರಾಶಿಯವರು ಆರೋಗ್ಯದ ಬಗ್ಗೆ ಅತ್ಯಂತ ಜಾಗರೂಕರಾಗಿರಿ
ಯುಗಾದಿ ವರ್ಷ ಭವಿಷ್ಯ; ಈ ರಾಶಿಯವರು ಆರೋಗ್ಯದ ಬಗ್ಗೆ ಅತ್ಯಂತ ಜಾಗರೂಕರಾಗಿರಿ
ಕಾರು ಓಡಿಸುವಾಗ ವ್ಯಕ್ತಿಗೆ ಹೃದಯಾಘಾತ, ಸಿಪಿಆರ್ ನೀಡಿ ಜೀವ ಉಳಿಸಿದ ಪೊಲೀಸ್
ಕಾರು ಓಡಿಸುವಾಗ ವ್ಯಕ್ತಿಗೆ ಹೃದಯಾಘಾತ, ಸಿಪಿಆರ್ ನೀಡಿ ಜೀವ ಉಳಿಸಿದ ಪೊಲೀಸ್
ನಿಮ್ಮ 10 ಕೋಟಿ ರೂ. ಎಲ್ಲಿ ಸಾಕಾಗುತ್ತದೆ
ನಿಮ್ಮ 10 ಕೋಟಿ ರೂ. ಎಲ್ಲಿ ಸಾಕಾಗುತ್ತದೆ