AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಇದು ಭಾರತ, ನಗ್ನತೆ ಪ್ರಸಾರ ನಿಲ್ಲಬೇಕು’: ಒಟಿಟಿ ಬಗ್ಗೆ ಅಸಮಾಧಾನ ಹೊರ ಹಾಕಿದ ಸಲ್ಮಾನ್ ಖಾನ್

‘ಒಟಿಟಿಗೆ ಸೆನ್ಸಾರ್​ಶಿಪ್ ಬೇಕು. ನಗ್ನತೆ, ಕೆಟ್ಟ ಪದಗಳ ಬಳಕೆ ನಿಲ್ಲಬೇಕು. ಸಣ್ಣ ಮಕ್ಕಳು ಕೂಡ ಮೊಬೈಲ್​ನಲ್ಲಿ ಈ ರೀತಿಯ ಕಾಂಟೆಂಟ್​​ನ ನೋಡುವ ಸಾಧ್ಯತೆ ಇರುತ್ತದೆ’ ಎಂದಿದ್ದಾರೆ ಸಲ್ಮಾನ್ ಖಾನ್.

‘ಇದು ಭಾರತ, ನಗ್ನತೆ ಪ್ರಸಾರ ನಿಲ್ಲಬೇಕು’: ಒಟಿಟಿ ಬಗ್ಗೆ ಅಸಮಾಧಾನ ಹೊರ ಹಾಕಿದ ಸಲ್ಮಾನ್ ಖಾನ್
ಸಲ್ಮಾನ್ ಖಾನ್
ರಾಜೇಶ್ ದುಗ್ಗುಮನೆ
|

Updated on:Apr 06, 2023 | 3:15 PM

Share

ನಟ ಸಲ್ಮಾನ್ ಖಾನ್ (Salman Khan) ಅವರು ವೃತ್ತಿ ಜೀವನದಲ್ಲಿ ತಮ್ಮದೇ ಆದ ನಿಯಮಗಳನ್ನು ಹಾಕಿಕೊಂಡಿದ್ದಾರೆ. ಅವರು ತೆರೆಮೇಲೆ ಲಿಪ್ ಲಾಕ್ ಮಾಡುವುದಿಲ್ಲ. ಅವರ ಸಿನಿಮಾಗಳಲ್ಲಿ ಅಸಭ್ಯ ದೃಶ್ಯಗಳಿಗೆ ಜಾಗ ಇರೋದಿಲ್ಲ. ಇದನ್ನು ಸಲ್ಲು ಈಗಲೂ ಫಾಲೋ ಮಾಡುತ್ತಿದ್ದಾರೆ. ಎಷ್ಟೇ ಕೋಟಿ ರೂಪಾಯಿ ಕೊಡುತ್ತೇನೆ ಎಂದರೂ ಸಲ್ಲು ಈ ನಿಯಮ ಮೀರೋದಿಲ್ಲ. ಈಗ ಸಲ್ಮಾನ್ ಖಾನ್ ಅವರು ಒಟಿಟಿ ಬಗ್ಗೆ ಮಾತನಾಡಿದ್ದಾರೆ. ಒಟಿಟಿಯಲ್ಲಿ ಪ್ರಸಾರ ಆಗುವ ಕಾಂಟೆಂಟ್​​ಗಳಿಗೆ ಯಾವುದೇ ಸೆನ್ಸಾರ್ ಇಲ್ಲದ ಕಾರಣ ಅಶ್ಲೀಲ ದೃಶ್ಯಗಳು ಹೇರಳವಾಗಿ ಸಿಗುತ್ತಿವೆ. ಇದನ್ನು ಸಲ್ಮಾನ್ ಖಾನ್ ಖಂಡಿಸಿದ್ದಾರೆ. ‘ಇದು ಭಾರತ. ನಗ್ನತೆಯ ಪ್ರಸಾರ ನಿಲ್ಲಬೇಕು’ ಎಂದು ಸಲ್ಲು ಅಭಿಪ್ರಾಯಪಟ್ಟಿದ್ದಾರೆ. ಅವರ ಹೇಳಿಕೆಯನ್ನು ಅನೇಕರು ಬೆಂಬಲಿಸಿದ್ದಾರೆ.

ಕಾರ್ಯಕ್ರಮ ಒಂದರಲ್ಲಿ ಒಟಿಟಿಯ ಒಳಿತು ಹಾಗೂ ಕೆಡಕುಗಳ ಬಗ್ಗೆ ಸಲ್ಮಾನ್ ಖಾನ್ ಮಾತನಾಡಿದ್ದಾರೆ. ‘ಒಟಿಟಿಗೆ ಸೆನ್ಸಾರ್​ಶಿಪ್ ಬೇಕು. ನಗ್ನತೆ, ಕೆಟ್ಟ ಪದಗಳ ಬಳಕೆ ನಿಲ್ಲಬೇಕು. ಸಣ್ಣ ಮಕ್ಕಳು ಕೂಡ ಮೊಬೈಲ್​ನಲ್ಲಿ ಈ ರೀತಿಯ ಕಾಂಟೆಂಟ್​​ನ ನೋಡುವ ಸಾಧ್ಯತೆ ಇರುತ್ತದೆ. ವಿದ್ಯಾಭ್ಯಾಸಕ್ಕೆ ಸಂಬಂಧಿಸಿದ್ದನ್ನು ನೋಡುತ್ತೇನೆ ಎಂದು ನಿಮ್ಮ ಮಗಳು ಮೊಬೈಲ್​ ತೆಗೆದುಕೊಂಡು ಈ ರೀತಿಯದ್ದನ್ನು ನೋಡಿದರೆ ಅದನ್ನು ನೀವು ಇಷ್ಟಪಡುತ್ತೀರಾ? ಒಟಿಟಿಗೆ ಸೆನ್ಸಾರ್​ಶಿಪ್ ತಂದರೆ ವೀಕ್ಷಕರ ಸಂಖ್ಯೆ ಹೆಚ್ಚಲಿದೆ’ ಎಂದು ಸಲ್ಲು ಅಭಿಪ್ರಾಯಪಟ್ಟಿದ್ದಾರೆ.

ಬಿಕಿನಿ, ಕಿಸ್ಸಿಂಗ್ ದೃಶ್ಯಗಳ ಬಗ್ಗೆಯೂ ಸಲ್ಲು ಅಸಮಾಧಾನ ಹೊರಹಾಕಿದ್ದಾರೆ. ‘ನೀವು ರೊಮ್ಯಾನ್ಸ್ ದೃಶ್ಯಗಳಲ್ಲಿ ನಟಿಸುತ್ತೀರಿ. ದೇಹವನ್ನು ಎಕ್ಸ್​ಪೋಸ್ ಮಾಡುತ್ತೀರಿ. ಮನೆಗೆ ಹೋದಾಗ ನಿಮ್ಮ ಮನೆಯ ವಾಚ್​ಮನ್ ಕೂಡ ಅದನ್ನೇ ವೀಕ್ಷಿಸುತ್ತಿರುತ್ತಾನೆ. ಭದ್ರತೆ ದೃಷ್ಟಿಯಿಂದ ಇದು ಸರಿಯಲ್ಲ. ನೀವು ಯಾವಾಗಾಲೂ ನಿಮ್ಮ ಗಡಿ ದಾಟಬಾರದು. ನಾವು ಇರೋದು ಭಾರತದಲ್ಲಿ’ ಎಂದು ಸಲ್ಲು ನೆನಪಿಸಿದ್ದಾರೆ.

ಇದನ್ನೂ ಓದಿ: ಈ ವಯಸ್ಸಲ್ಲೂ ಸಲ್ಮಾನ್ ಖಾನ್​ದು ಅದೆಂಥ ಫಿಟ್ನೆಸ್; ಸಿಕ್ಸ್ ಪ್ಯಾಕ್​ ಫೋಟೋ ನೋಡಿ ಫ್ಯಾನ್ಸ್ ಫಿದಾ

ಈ ಮೊದಲು ಒಟಿಟಿ ಕಾಂಟೆಂಟ್​ಗಳಿಗೆ ಸೆನ್ಸಾರ್​ ಆಗಬೇಕು ಎನ್ನುವ ಆಗ್ರಹ ಕೇಳಿಬಂದಿತ್ತು. ಪ್ರಕರಣ ಕೋರ್ಟ್​ಮೆಟ್ಟಿಲೇರಿತ್ತು ಕೂಡ. ಆದರೆ, ಅರ್ಜಿಯನ್ನು ರಿಜೆಕ್ಟ್ ಮಾಡಲಾಯಿತು. ‘ವೆಬ್​ ಸಿರೀಸ್​ಗಳಿಗೆ ಸೆನ್ಸಾರ್​ ಕಮಿಟಿ ಇರಲು ಹೇಗೆ ಸಾಧ್ಯ? ಅದಕ್ಕಾಗಿ ಬೇರೆಯದೇ ಕಾನೂನು ಇದೆ. ಅದರ ಅಡಿಯಲ್ಲಿ ಒಟಿಟಿ ಬರುತ್ತದೆ ಎಂದಾದರೆ ಮಾತ್ರ ಈಗಿರುವ ಕಾನೂನು ಅನ್ವಯ ಆಗುತ್ತದೆ. ಬೇರೆ ಬೇರೆ ದೇಶಗಳಿಂದಲೂ ಕಂಟೆಂಟ್​ ಪ್ರಸಾರ ಆಗುವುದರಿಂದ ಅನೇಕ ಪ್ರಶ್ನೆಗಳು ಉದ್ಭವ ಆಗುತ್ತವೆ’ ಎಂದು ಕೋರ್ಟ್​ ಹೇಳಿತ್ತು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 2:44 pm, Thu, 6 April 23

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು