AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಊ ಅಂಟಾವಾ ಮಾವ..’ ಎಂದು ಸಖತ್ ಆಗಿ ಸ್ಟೆಪ್ ಹಾಕಿದ ಸಮಂತಾ-ಅಕ್ಷಯ್ ಕುಮಾರ್

ಅಕ್ಷಯ್ ಕುಮಾರ್ ಹಾಗೂ ಸಮಂತಾ ಈವರೆಗೆ ಒಟ್ಟಾಗಿ ನಟಿಸಿಲ್ಲ. ಆದರೆ, ಇವರು ಇದೇ ಮೊದಲ ಬಾರಿಗೆ ಚಾಟ್​ ಶೋಗಾಗಿ ಒಂದಾಗಿದ್ದಾರೆ.

‘ಊ ಅಂಟಾವಾ ಮಾವ..’ ಎಂದು ಸಖತ್ ಆಗಿ ಸ್ಟೆಪ್ ಹಾಕಿದ ಸಮಂತಾ-ಅಕ್ಷಯ್ ಕುಮಾರ್
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Jul 21, 2022 | 1:53 PM

ನಟಿ ಸಮಂತಾ (Samantha) ಇತ್ತೀಚೆಗೆ ಸಖತ್ ಸುದ್ದಿಯಲ್ಲಿದ್ದಾರೆ. ಅವರು ಹೆಜ್ಜೆ ಹಾಕಿದ ‘ಪುಷ್ಪ’ (Pushpa Movie) ಚಿತ್ರದ ‘ಊ ಅಂಟಾವಾ ಮಾವ..’ ಸಾಂಗ್ ಸೂಪರ್ ಹಿಟ್ ಆಯಿತು. ಸಮಂತಾ ಅವರ ಬೋಲ್ಡ್​ ಲುಕ್ ನೋಡಿ ಸಾಕಷ್ಟು ಮಂದಿ ಫಿದಾ ಆದರು. ಈ ಹಾಡು ಸೂಪರ್ ಹಿಟ್ ಆಗಲು ದೇವಿಶ್ರೀ ಪ್ರಸಾದ್ ಅವರ ಸಂಗೀತ ಸಂಯೋಜನೆಯ ಕೊಡುಗೆ ಕೂಡ ದೊಡ್ಡದಿದೆ. ಟಾಲಿವುಡ್​ನಿಂದ ಹಿಡಿದು ಬಾಲಿವುಡ್​ವರೆಗೆ ಅನೇಕರಿಗೆ ಈ ಹಾಡು ಇಷ್ಟ. ಟೀಮ್ ಇಂಡಿಯಾ ಆಟಗಾರ ವಿರಾಟ್ ಕೊಹ್ಲಿ ಕೂಡ ಈ ಸಾಂಗ್​ಗೆ ಹೆಜ್ಜೆ ಹಾಕಿದ್ದರು. ಈಗ ಸಮಂತಾ ಹಾಗೂ ಅಕ್ಷಯ್ ಕುಮಾರ್ ‘ಊ ಅಂಟಾವಾ ಮಾವ..’ ಎಂದು ಸಖತ್ ಆಗಿ ಡ್ಯಾನ್ಸ್ ಮಾಡಿದ್ದಾರೆ.

ಸಮಂತಾ ಹಾಗೂ ಅಕ್ಷಯ್ ಕುಮಾರ್ ಅವರು ‘ಕಾಫಿ ವಿತ್ ಕರಣ್ ಸೀಸನ್ 7’ರ ಮೂರನೇ ಎಪಿಸೋಡ್​ಗೆ ಅತಿಥಿಯಾಗಿ ಬಂದಿದ್ದಾರೆ. ಸಮಂತಾ ಅವರು ಬಾಲಿವುಡ್​ನಲ್ಲೂ ಹೆಸರು ಮಾಡಿದ್ದಾರೆ. ‘ದಿ ಫ್ಯಾಮಿಲಿ ಮ್ಯಾನ್ 2’ ವೆಬ್ ಸೀರಿಸ್ ಅವರಿಗೆ ಸಾಕಷ್ಟು ಜನಪ್ರಿಯತೆ ತಂದುಕೊಟ್ಟಿತು. ಹಿಂದಿಯಿಂದ ಅವರಿಗೆ ಸಾಕಷ್ಟು ಆಫರ್​ಗಳು ಬರುತ್ತಿವೆ. ಈ ಕಾರಣಕ್ಕೆ ಅವರಿಗೆ ‘ಕಾಫಿ ವಿತ್​ ಕರಣ್​ಗೆ’ ಅತಿಥಿಯಾಗಿ ಬರಲು ಆಮಂತ್ರಣ ಸಿಕ್ಕಿದೆ.

ಇದನ್ನೂ ಓದಿ
Image
ಮಾಜಿ ಪತಿ ನಾಗ ಚೈತನ್ಯ ಜೊತೆ ಸ್ಪರ್ಧೆಗೆ ಇಳಿಯಲು ನೋ ಎಂದ ಸಮಂತಾ
Image
Sobhita Dhulipala: ಸಮಂತಾ ಮಾಜಿ ಪತಿ ನಾಗ ಚೈತನ್ಯ ಹೆಸರು ಎತ್ತಿದ್ದಕ್ಕೆ ಮಧ್ಯ ಬೆರಳು ತೋರಿಸಿ ಗರಂ ಆದ ಶೋಭಿತಾ?
Image
ದೇಶದ ಅತ್ಯಂತ ಜನಪ್ರಿಯ ನಟಿ ಸಮಂತಾ; ರಶ್ಮಿಕಾ ಮಂದಣ್ಣಗೆ ಎಷ್ಟನೇ ಸ್ಥಾನ?
Image
‘ನಿಮ್ಮ ಕೆಲಸದ ಮೇಲೆ ಗಮನಹರಿಸಿ’; ನಾಗ ಚೈತನ್ಯ ಫ್ಯಾನ್ಸ್​​ಗೆ ಎಚ್ಚರಿಕೆ ನೀಡಿದ ಸಮಂತಾ

ಅಕ್ಷಯ್ ಕುಮಾರ್ ಹಾಗೂ ಸಮಂತಾ ಈವರೆಗೆ ಒಟ್ಟಾಗಿ ನಟಿಸಿಲ್ಲ. ಆದರೆ, ಇವರು ಇದೇ ಮೊದಲ ಬಾರಿಗೆ ಚಾಟ್​ ಶೋಗಾಗಿ ಒಂದಾಗಿದ್ದಾರೆ. ಇವರ ಕೆಮಿಸ್ಟ್ರಿ ಚೆನ್ನಾಗಿ ವರ್ಕ್​ ಆಗಿದೆ ಎಂಬುದಕ್ಕೆ ಈ ಶೋನ ಪ್ರೋಮೋಗಳೇ ಸಾಕ್ಷಿ. ಈಗ ‘ಊ ಅಂಟಾವಾ ಮಾವ..’ ಹಾಡಿನಲ್ಲಿ ಇಬ್ಬರೂ ಒಟ್ಟಾಗಿ ಹೆಜ್ಜೆ ಹಾಕಿದ್ದು ಫ್ಯಾನ್ಸ್​ಗೆ ಇಷ್ಟವಾಗಿದೆ. ಇಬ್ಬರನ್ನೂ ಒಟ್ಟಾಗಿ ತೆರೆಮೇಲೆ ನೋಡಬೇಕು ಎಂದು ಫ್ಯಾನ್ಸ್ ಆಶಿಸಿದ್ದಾರೆ.

View this post on Instagram

A post shared by Dharmatic (@dharmaticent)

ಇದನ್ನೂ ಓದಿ:  ಸಮಂತಾ ಈಗ ಟ್ರಾಫಿಕ್ ಪೊಲೀಸ್, ಸ್ಟಾರ್​ ನಟನ ವಾಹನ ಅಡ್ಡಗಟ್ಟಿದ ನಟಿ; ಇದು ಸಿನಿಮಾ ವಿಚಾರ ಅಲ್ಲ

‘ಕಾಫಿ ವಿತ್ ಕರಣ್​’ ಶೋನಲ್ಲಿ ಅನೇಕ ವಿವಾದಾತ್ಮಕ ಪ್ರಶ್ನೆಗಳೂ ಎದುರಾಗುತ್ತವೆ. ವೈಯಕ್ತಿಕ ಜೀವನದ ಬಗ್ಗೆ ನೇರವಾಗಿ ಪ್ರಶ್ನೆಗಳನ್ನು ಕೇಳಲಾಗುತ್ತದೆ. ಸಮಂತಾ ಅವರು ವಿಚ್ಛೇದನದ ನಂತರದಲ್ಲಿ ಇದೇ ಮೊದಲ ಬಾರಿಗೆ ಚಾಟ್ ಶೋ ಒಂದರಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ವಿಚ್ಛೇದನಕ್ಕೆ ಕಾರಣ ಏನು ಎಂಬುದನ್ನು ಸಮಂತಾ ಈವರೆಗೆ ರಿವೀಲ್ ಮಾಡಿಲ್ಲ. ‘ಕಾಫಿ ವಿತ್ ಕರಣ್​’ ವೇದಿಕೆ ಮೇಲೆ ಈ ಪ್ರಶ್ನೆಗೆ ಉತ್ತರ ಸಿಗಬಹುದೇ ಎಂದು ಫ್ಯಾನ್ಸ್ ಕಾಯುತ್ತಿದ್ದಾರೆ. ಇಂದು (ಜುಲೈ 21) ರಾತ್ರಿ 7 ಗಂಟೆಗೆ ಈ ಶೋ ಡಿಸ್ನಿ ಪ್ಲಸ್ ಹಾಟ್​​ಸ್ಟಾರ್​ನಲ್ಲಿ ಪ್ರಸಾರ ಕಾಣಲಿದೆ.

ಬೆಂಗಳೂರಿನ ದೊಡ್ಡಕಲ್ಲಸಂದ್ರ ರಸ್ತೆಯ ದುಸ್ಥಿತಿ: ವಿಡಿಯೋ ಮಾಡಿ ತೋರಿಸಿದ ನಟ
ಬೆಂಗಳೂರಿನ ದೊಡ್ಡಕಲ್ಲಸಂದ್ರ ರಸ್ತೆಯ ದುಸ್ಥಿತಿ: ವಿಡಿಯೋ ಮಾಡಿ ತೋರಿಸಿದ ನಟ
ಕಮಲ್ ಹಾಸನ್ ಆಡಿದ್ದು ದುರಹಂಕಾರದ ಮಾತು: ವಾಟಾಳ್ ನಾಗರಾಜ್
ಕಮಲ್ ಹಾಸನ್ ಆಡಿದ್ದು ದುರಹಂಕಾರದ ಮಾತು: ವಾಟಾಳ್ ನಾಗರಾಜ್
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ
ಕನ್ನಡಿಗರು ಸಹನಶೀಲರು ಆದರೆ ಕಣಕಿದರೆ ಸುಮ್ಮನಿರಲ್ಲ: ನಾರಾಯಣಗೌಡ, ಕರವೇ
ಕನ್ನಡಿಗರು ಸಹನಶೀಲರು ಆದರೆ ಕಣಕಿದರೆ ಸುಮ್ಮನಿರಲ್ಲ: ನಾರಾಯಣಗೌಡ, ಕರವೇ