AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Samantha: ಸಮಂತಾ-ನಾಗ ಚೈತನ್ಯ ವಿಚ್ಛೇದನಕ್ಕೆ ಅಸಲಿ ಕಾರಣ ಬಹಿರಂಗ ಆಗುವ ಸಮಯ ಬಂತಾ? ಹೆಚ್ಚಿತು ಕೌತುಕ

Samantha | Naga Chaitanya: ಸಮಂತಾ ಮತ್ತು ನಾಗ ಚೈತನ್ಯ ಅವರ ಡಿವೋರ್ಸ್​ ಬಗ್ಗೆ ಅನೇಕ ಅಂತೆ-ಕಂತೆಗಳು ಹರಿದಾಡಿವೆ. ಅದರಲ್ಲಿ ಯಾವುದು ಸತ್ಯ, ಯಾವುದು ಸುಳ್ಳು ಎಂಬ ಬಗ್ಗೆ ಈ ಮಾಜಿ ದಂಪತಿಯೇ ಸ್ಪಷ್ಟನೆ ನೀಡಬೇಕಿದೆ.

Samantha: ಸಮಂತಾ-ನಾಗ ಚೈತನ್ಯ ವಿಚ್ಛೇದನಕ್ಕೆ ಅಸಲಿ ಕಾರಣ ಬಹಿರಂಗ ಆಗುವ ಸಮಯ ಬಂತಾ? ಹೆಚ್ಚಿತು ಕೌತುಕ
TV9 Web
| Edited By: |

Updated on: Jul 06, 2022 | 7:15 AM

Share

ಹಲವು ವರ್ಷಗಳ ಕಾಲ ಪ್ರೀತಿಸಿ ಮದುವೆ ಆದ ಸಮಂತಾ ರುತ್​ ಪ್ರಭು ಮತ್ತು ನಾಗ ಚೈತನ್ಯ (Naga Chaitanya) ಅವರು ವಿಚ್ಛೇದನ ಪಡೆಯುತ್ತಾರೆ ಎಂದು ಯಾರೂ ಊಹಿಸಿರಲಿಲ್ಲ. ಪರಸ್ಪರ ಅನ್ಯೋನ್ಯವಾಗಿ ಇದ್ದಂತೆ ಸದಾ ಕಾಣಿಸಿಕೊಳ್ಳುತ್ತಿದ್ದ ಅವರಿಬ್ಬರ ನಡುವೆ ಯಾವ ವಿಚಾರಕ್ಕೆ ಮನಸ್ತಾಪ ಮೂಡಿತೋ ಗೊತ್ತಿಲ್ಲ. ಅಂತಿಮವಾಗಿ ಅವರು ತಮ್ಮ ದಾಂಪತ್ಯ ಜೀವನಕ್ಕೆ ಫುಲ್​ ಸ್ಟಾಪ್​ ಹಾಕಿದರು. ಈ ವಿಚ್ಛೇದನಕ್ಕೆ ಕಾರಣ ಏನು ಎಂಬುದನ್ನು ತಿಳಿಯಲು ಅಭಿಮಾನಿಗಳು ಕಾದಿದ್ದಾರೆ. ಆದರೆ ಈವರೆಗೂ ಆ ಕಾರಣದ ಬಗ್ಗೆ ಈ ಮಾಜಿ ದಂಪತಿ ಬಾಯಿ ಬಿಟ್ಟಿಲ್ಲ. ಈಗ ಸಮಂತಾ (Samantha) ಅವರು ಮೌನ ಮುರಿಯುವ ಕಾಲ ಹತ್ತಿರವಾಗಿದೆ ಎಂದೇ ಎಲ್ಲರೂ ಊಹಿಸುತ್ತಿದ್ದಾರೆ. ಕರಣ್​ ಜೋಹರ್​ (Karan Johar) ಎದುರಿನಲ್ಲಿ ಸಮಂತಾ ಅವರು ಎಲ್ಲವನ್ನೂ ಹೇಳಿಕೊಳ್ಳಬಹುದು ಎಂಬ ನಿರೀಕ್ಷೆ ಸೃಷ್ಟಿ ಆಗಿದೆ.

ಕರಣ್​ ಜೋಹರ್​ ಅವರು ನಡೆಸಿಕೊಡಲಿರುವ ‘ಕಾಫಿ ವಿತ್​ ಕರಣ್​ ಸೀಸನ್​ 7’ ಕಾರ್ಯಕ್ರಮ ಜುಲೈ 7ರಿಂದ ಪ್ರಸಾರ ಆರಂಭಿಸಲಿದೆ. ಅನೇಕ ಸೆಲೆಬ್ರಿಟಿಗಳು ಈ ಟಾಕ್​ ಶೋನಲ್ಲಿ ಭಾಗಿ ಆಗಲಿದ್ದಾರೆ. ಅತಿಥಿಗಳ ಪಟ್ಟಿಯಲ್ಲಿ ಸಮಂತಾ ರುತ್​ ಪ್ರಭು ಕೂಡ ಇದ್ದಾರೆ. ಈ ಕಾರ್ಯಕ್ರಮದಲ್ಲಿ ಅವರು ಮದುವೆ ಬಗ್ಗೆ ಮಾತನಾಡಿದ್ದಾರೆ ಎಂಬುದಕ್ಕೆ ಟೀಸರ್​ನಲ್ಲಿ ಸುಳಿವು ಸಿಕ್ಕಿದೆ.

ಸೆಲೆಬ್ರಿಟಿಗಳ ಬೋಲ್ಡ್​ ಮಾತಿಗೆ ‘ಕಾಫಿ ವಿತ್​ ಕರಣ್​’ ಕಾರ್ಯಕ್ರಮ ಫೇಮಸ್​. ಇಷ್ಟು ಸೀಸನ್​ಗಳ ಕಾಲ ಟಿವಿಯಲ್ಲಿ ಈ ಶೋ ಪ್ರಸಾರವಾಗಿತ್ತು. ಈಗ ಮೊದಲ ಬಾರಿಗೆ 7ನೇ ಸೀಸನ್​ ಅನ್ನು ನೇರವಾಗಿ ಒಟಿಟಿಯಲ್ಲಿ ಪ್ರಸಾರ ಮಾಡಲು ನಿರ್ಧರಿಸಲಾಗಿದೆ. ಸೆಲೆಬ್ರಿಟಿಗಳು ತಮ್ಮ ವೈಯಕ್ತಿಕ ಜೀವನದ ಅನೇಕ ಅಂಶಗಳನ್ನು ಕೂಡ ಕರಣ್​ ಜೋಹರ್​ ಎದುರು ಶೇರ್​ ಮಾಡಿಕೊಂಡ ಉದಾಹರಣೆ ಇದೆ. ಹಾಗಾಗಿ ಸಮಂತಾ ಅವರು ವಿಚ್ಛೇದನಕ್ಕೆ ಕಾರಣ ಏನು ಎಂಬುದನ್ನು ತಿಳಿಸುತ್ತಾರೆ ಎಂದು ನಿರೀಕ್ಷಿಸಲಾಗುತ್ತಿದೆ.

ಇದನ್ನೂ ಓದಿ
Image
ಸಲ್ಲು ಸಹೋದರ ಸೊಹೈಲ್​-ಸೀಮಾ ವಿಚ್ಛೇದನ; ರಾತ್ರೋರಾತ್ರಿ ಓಡಿಹೋಗಿ ಮದುವೆ ಆಗಿದ್ದ ಜೋಡಿಯ ಪ್ರೇಮ ಕಹಾನಿ ಇಲ್ಲಿದೆ
Image
‘ಡಿವೋರ್ಸ್​ ಆಗಿರಬಹುದು, ಆದ್ರೆ ಜೊತೆಗಿದ್ದೇವೆ’; ಇಬ್ಬರು ಮಾಜಿ ಪತ್ನಿಯರ ಬಗ್ಗೆ ಮಾತಾಡಿದ ಆಮಿರ್​ ಖಾನ್​
Image
ವಿಚ್ಛೇದನದ ಬಳಿಕ ಅಕ್ಕಿನೇನಿ ಕುಟುಂಬಕ್ಕೆ ಸಮಂತಾ ಹಿಂದಿರುಗಿಸಿದರು ಒಂದು ಪ್ರಮುಖ ವಸ್ತು; ಏನದು?
Image
ಚಿತ್ರರಂಗದಲ್ಲಿ ಮುಂದುವರಿದ ವಿಚ್ಛೇದನ ಸರಣಿ; ಖ್ಯಾತ ನಿರ್ದೇಶಕನ ಡಿವೋರ್ಸ್​

ಸಮಂತಾ ಮತ್ತು ನಾಗ ಚೈತನ್ಯ ಅವರ ಡಿವೋರ್ಸ್​ ಬಗ್ಗೆ ಅನೇಕ ಅಂತೆ-ಕಂತೆಗಳು ಹರಿದಾಡಿವೆ. ಯಾವುದು ಸತ್ಯ, ಯಾವುದು ಸುಳ್ಳು ಎಂಬುದು ನಿಖರವಾಗಿಲ್ಲ. ಅವುಗಳಿಗೆಲ್ಲ ಸಮಂತಾ ಅಥವಾ ನಾಗ ಚೈತನ್ಯ ಅವರೇ ಸ್ಪಷ್ಟನೆ ನೀಡಬೇಕಿದೆ. ‘ಮದುವೆ ಅಂದ್ರೆ ಕೆಜಿಎಫ್ ಥರ​’ ಎಂದು ಕಾಫಿ ವಿತ್​ ಕರಣ್​ ಶೋನಲ್ಲಿ ಸಮಂತಾ ಹೇಳಿರುವುದು ಪ್ರೋಮೋ ಮೂಲಕ ಗೊತ್ತಾಗಿದೆ. ಅದರ ಅರ್ಥ ಏನು ಎಂಬುದನ್ನು ತಿಳಿಯಲು ಫ್ಯಾನ್ಸ್​ ಕಾದಿದ್ದಾರೆ.

ಇದನ್ನೂ ಓದಿ: ಸಮಂತಾ, ಆಲಿಯಾ Etc..: ‘ಕಾಫಿ ವಿತ್​ ಕರಣ್​’ ಶೋಗೆ ಬರುವ ಸೆಲೆಬ್ರಿಟಿಗಳು ಇವರೇ

‘ನಿಮ್ಮ ಕೆಲಸದ ಮೇಲೆ ಗಮನಹರಿಸಿ’; ನಾಗ ಚೈತನ್ಯ ಫ್ಯಾನ್ಸ್​​ಗೆ ಎಚ್ಚರಿಕೆ ನೀಡಿದ ಸಮಂತಾ

Follow Us
ಕಾಂಜಾವಾಲಾ ಕೈಗಾರಿಕಾ ಪ್ರದೇಶದ ಕಾರ್ಖಾನೆಯಲ್ಲಿ ಬೆಂಕಿ ಅವಘಡ
ಕಾಂಜಾವಾಲಾ ಕೈಗಾರಿಕಾ ಪ್ರದೇಶದ ಕಾರ್ಖಾನೆಯಲ್ಲಿ ಬೆಂಕಿ ಅವಘಡ
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​