Sign In

By signing in or creating an account, you agree with Associated Broadcasting Company's Terms & Conditions and Privacy Policy.

Citadel: ‘ಸಿಟಾಡೆಲ್​’ ಪ್ರೀಮಿಯರ್​ ಶೋನಲ್ಲಿ ಮಿಂಚಿದ ಸಮಂತಾ ರುತ್​ ಪ್ರಭು, ವರುಣ್​ ಧವನ್​

Samantha Ruth Prabhu: ‘ಸಿಟಾಡೆಲ್​’ ವೆಬ್​ ಸೀರಿಸ್​ನ ಇಂಡಿಯನ್​ ವರ್ಷನ್​ನಲ್ಲಿ ಸಮಂತಾ ರುತ್​ ಪ್ರಭು ಹಾಗೂ ವರುಣ್​ ಧವನ್​ ನಟಿಸಿದ್ದಾರೆ. ಲಂಡನ್​ನಲ್ಲಿ ನಡೆದ ಪ್ರೀಮಿಯರ್​ ಶೋಗೆ ಅವರನ್ನು ಆಹ್ವಾನಿಸಲಾಗಿತ್ತು.

Citadel: ‘ಸಿಟಾಡೆಲ್​’ ಪ್ರೀಮಿಯರ್​ ಶೋನಲ್ಲಿ ಮಿಂಚಿದ ಸಮಂತಾ ರುತ್​ ಪ್ರಭು, ವರುಣ್​ ಧವನ್​
ವರುಣ್ ಧವನ್, ಸಮಂತಾ
Follow us
ಮದನ್​ ಕುಮಾರ್​
|

Updated on: Apr 19, 2023 | 12:12 PM

ನಟಿ ಸಮಂತಾ ರುತ್​ ಪ್ರಭು (Samantha Ruth Prabhu) ಅಭಿನಯದ ‘ಶಾಕುಂತಲಂ’ ಸಿನಿಮಾ ಹೀನಾಯವಾಗಿ ಸೋತಿದೆ. ಹಾಗಿದ್ದರೂ ಅವರ ಹವಾ ಕಡಿಮೆ ಆಗಿಲ್ಲ. ‘ಶಾಕುಂತಲಂ’ ಚಿತ್ರದ ಸೋಲನ್ನು ಮರೆತು ಅವರು ಲಂಡನ್​ಗೆ ತೆರಳಿದ್ದಾರೆ. ಅಲ್ಲಿ ಹಾಲಿವುಡ್​ ಸೆಲೆಬ್ರಿಟಿಗಳ ಜೊತೆ ಬೆರೆತು ಬಿಂದಾಸ್​ ಆಗಿ ಕಾಲ ಕಳೆದಿದ್ದಾರೆ. ಅವರಿಗೆ ಬಾಲಿವುಡ್​ ನಟ ವರುಣ್​ ಧವನ್​ (Varun Dhawan) ಕೂಡ ಸಾಥ್​ ನೀಡಿದ್ದಾರೆ. ಅಷ್ಟಕ್ಕೂ ಸಮಂತಾ ಅವರು ಏಕಾಏಕಿ ಲಂಡನ್​ಗೆ ಹಾರಿದ್ದು ಯಾಕೆ? ‘ಸಿಟಾಡೆಲ್​’ (Citadel) ವೆಬ್​ ಸರಣಿಯ ಪ್ರೀಮಿಯರ್​ ಶೋ ಸಲುವಾಗಿ. ಹೌದು, ಏಪ್ರಿಲ್​ 18ರ ರಾತ್ರಿ ಪ್ರಿಮಿಯರ್​ ಮಾಡಲಾಗಿದೆ. ಪ್ರಿಯಾಂಕಾ ಚೋಪ್ರಾ, ರಾಜ್ ನಿಧಿಮೋರು, ಕೃಷ್ಣ ಡಿ.ಕೆ. ಮುಂತಾದವರು ಕೂಡ ಇದರಲ್ಲಿ ಭಾಗಿ ಆಗಿದ್ದರು. ‘ಸಿಟಾಡೆಲ್​’ ಪ್ರೀಮಿಯರ್​ ಶೋ ಸಂದರ್ಭದ ಫೋಟೋಗಳು ವೈರಲ್​ ಆಗಿವೆ.

ಇಂಗ್ಲಿಷ್​ನ ‘ಸಿಟಾಡೆಲ್​’ ಸೀರಿಸ್​ನಲ್ಲಿ ಪ್ರಿಯಾಂಕಾ ಚೋಪ್ರಾ ಮತ್ತು ರಿಚರ್ಡ್​ ಮ್ಯಾಡನ್​ ಮುಖ್ಯ ಭೂಮಿಕೆ ನಿಭಾಯಿಸಿದ್ದಾರೆ. ಇದರ ಇಂಡಿಯನ್​ ವರ್ಷನ್​ನಲ್ಲಿ ಸಮಂತಾ ರುತ್​ ಪ್ರಭು ಹಾಗೂ ವರುಣ್​ ಧವನ್​ ನಟಿಸಿದ್ದಾರೆ. ಹಾಗಾಗಿ ಲಂಡನ್​ನಲ್ಲಿ ನಡೆದ ‘ಸಿಟಾಡೆಲ್​’ ಪ್ರೀಮಿಯರ್​ ಶೋಗೆ ಅವರನ್ನು ಆಹ್ವಾನಿಸಲಾಗಿತ್ತು.

ಇದನ್ನೂ ಓದಿ
Image
Samantha Ruth Prabhu: ಮತ್ತೆ ಕೈ ಕೊಟ್ಟಿದೆ ಸಮಂತಾ ರುತ್​ ಪ್ರಭು ಆರೋಗ್ಯ; ಅಭಿಮಾನಿಗಳಿಗೆ ಆತಂಕ
Image
Samantha: ಶಾಕುಂತಲಂ ಸಿನಿಮಾ ಚಿತ್ರೀಕರಣದ ಐದು ಕೆಟ್ಟ ಅನುಭವಗಳ ನೆನೆದ ಸಮಂತಾ
Image
ಮಾಜಿ ಗಂಡನ ಕುಟುಂಬದ ಮೇಲೆ ಸಮಂತಾಗೆ ಇನ್ನೂ ಕಡಿಮೆ ಆಗಿಲ್ಲ ಪ್ರೀತಿ; ಇಲ್ಲಿದೆ ಹೊಸ ಸಾಕ್ಷಿ
Image
Samantha: ‘ನಾನು ಇದನ್ನು ಹೇಳಲೇ ಇಲ್ಲ’: ಮಾಜಿ ಗಂಡನ ವಿಷಯಕ್ಕೆ ಸ್ಪಷ್ಟನೆ ನೀಡಿದ ಸಮಂತಾ
View this post on Instagram

A post shared by VarunDhawan (@varundvn)

‘ಸಿಟಾಡೆಲ್​’ ವೆಬ್​ ಸೀರಿಸ್​ನಲ್ಲಿ ಪ್ರಿಯಾಂಕಾ ಚೋಪ್ರಾ ಅವರು ಬ್ಯಾಕ್​ಲೆಸ್​ ಆಗಿ ಕಾಣಿಸಿಕೊಂಡಿದ್ದಾರೆ ಎಂಬುದಕ್ಕೆ ಟೀಸರ್​ನಲ್ಲಿ ಸಾಕ್ಷಿ ಸಿಕ್ಕಿದೆ. ಹಾಗಾದರೆ ಭಾರತೀಯ ವರ್ಷನ್​ನಲ್ಲಿ ಸಮಂತಾ ಕೂಡ ಇದೇ ರೀತಿ ನಟಿಸುತ್ತಾರಾ ಎಂಬ ಪ್ರಶ್ನೆ ಎದುರಾಗಿದೆ. ಗ್ಲಾಮರಸ್​ ಪಾತ್ರಗಳನ್ನು ಮಾಡುವಲ್ಲಿ ಸಮಂತಾ ರುತ್​ ಪ್ರಭು ಅವರು ಹಿಂದೇಟು ಹಾಕುವವರಲ್ಲ. ‘ಪುಷ್ಪ’ ಸಿನಿಮಾದ ‘ಉ ಅಂಟಾವಾ ಮಾವ..’ ಹಾಡಿನಲ್ಲಿ ಅವರು ಸಖತ್​ ಹಾಟ್​ ಆಗಿ ನಟಿಸಿದ್ದರು. ಅಲ್ಲದೇ, ‘ಫ್ಯಾಮಿಲಿ ಮ್ಯಾನ್​ 2’ ವೆಬ್​ ಸಿರೀಸ್​ನಲ್ಲೂ ಅವರ ಪಾತ್ರ ಬೋಲ್ಡ್​ ಆಗಿತ್ತು. ‘ಸಿಟಾಡೆಲ್​’ನಲ್ಲಿ ಅವರ ಪಾತ್ರ ಹೇಗಿರಲಿದೆ ಎಂಬುದನ್ನು ತಿಳಿಯುವ ಕೌತುಕ ಮೂಡಿದೆ.

ಇದನ್ನೂ ಓದಿ: ‘ಶಾಕುಂತಲಂ’ ಸಿನಿಮಾ ಸೋತ ಬಳಿಕ ಸಮಂತಾಗೆ ನೆನಪಾಯ್ತು ಭಗವದ್ಗೀತೆಯ ಶ್ಲೋಕ

ಅನಾರೋಗ್ಯದ ಕಾರಣದಿಂದ ಸಮಂತಾ ಅವರ ವೃತ್ತಿಜೀವನ ಕೊಂಚ ಕುಂಠಿತ ಆಗಿತ್ತು. ಆದರೆ ಈಗ ಅವರು ಸಂಪೂರ್ಣ ಚೇತರಿಸಿಕೊಂಡು ಸಿನಿಮಾ ಕೆಲಸಗಳಿಗೆ ಮರಳಿದ್ದಾರೆ. ವಿಜಯ್​ ದೇವರಕೊಂಡ ಜೊತೆಗಿನ ‘ಖುಷಿ’ ಚಿತ್ರದಲ್ಲೂ ಅವರು ನಟಿಸುತ್ತಿದ್ದಾರೆ. ‘ಸಿಟಾಡೆಲ್​’ ಮೇಲೆ ಅವರ ಅಭಿಮಾನಿಗಳು ಸಖತ್​ ನಿರೀಕ್ಷೆ ಇಟ್ಟುಕೊಂಡಿದ್ದಾರೆ.

ಇದನ್ನೂ ಓದಿ: Samantha: ‘ಶಾಕುಂತಲಂ’ ಚಿತ್ರಕ್ಕೆ ಹೀನಾಯ ಸೋಲು; ಎರಡಂಕಿ ಮುಟ್ಟಲು ವಿಫಲವಾಯ್ತು ಸಮಂತಾ ಸಿನಿಮಾ

‘ಸಿಟಾಡೆಲ್​’ ವೆಬ್​ ಸಿರೀಸ್​ನಲ್ಲಿ ಸಮಂತಾ ಅವರು ಸಿಕ್ಕಾಪಟ್ಟೆ ಆ್ಯಕ್ಷನ್​ ದೃಶ್ಯಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇತ್ತೀಚೆಗೆ ಇದರ ಶೂಟಿಂಗ್​ ವೇಳೆ ಸಮಂತಾ ಕೈಗೆ ಗಾಯಗಳಾಗಿತ್ತು. ಆ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು. ಅಮೇಜಾನ್​ ಪ್ರೈಮ್ ವಿಡಿಯೋ ಮೂಲಕ ಈ ಸೀರಿಸ್ ರಿಲೀಸ್ ಆಗಲಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ರೈಲ್ವೆ ಹಳಿ ಮೇಲೆ ಮಲಗಿ ತನ್ನ ಮೇಲೆ ರೈಲು ಹೋಗುವ ರೀಲ್ಸ್ ಮಾಡಿದ ಯುವಕ!
ರೈಲ್ವೆ ಹಳಿ ಮೇಲೆ ಮಲಗಿ ತನ್ನ ಮೇಲೆ ರೈಲು ಹೋಗುವ ರೀಲ್ಸ್ ಮಾಡಿದ ಯುವಕ!
ಹಣ ಗಳಿಸುತ್ತಿಲ್ಲವೆಂದು ಗಂಡನಿಗೆ ಹೆಂಡತಿಯಿಂದ ಕಪಾಳಮೋಕ್ಷ; ಆಮೇಲೇನಾಯ್ತು?
ಹಣ ಗಳಿಸುತ್ತಿಲ್ಲವೆಂದು ಗಂಡನಿಗೆ ಹೆಂಡತಿಯಿಂದ ಕಪಾಳಮೋಕ್ಷ; ಆಮೇಲೇನಾಯ್ತು?
ವಾಹನ ಹತ್ತದೆ ಕಾರ್ಯಕರ್ತರೊಂದಿಗೆ ರ‍್ಯಾಲಿಯಲ್ಲಿ ನಡೆದ ವಿಜಯೇಂದ್ರ
ವಾಹನ ಹತ್ತದೆ ಕಾರ್ಯಕರ್ತರೊಂದಿಗೆ ರ‍್ಯಾಲಿಯಲ್ಲಿ ನಡೆದ ವಿಜಯೇಂದ್ರ
ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಬೆಲೆ ಏರಿಕೆ ಅನಿವಾರ್ಯ ಎಂದ ಕೈ ಶಾಸಕ
ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಬೆಲೆ ಏರಿಕೆ ಅನಿವಾರ್ಯ ಎಂದ ಕೈ ಶಾಸಕ
ಕೇಂದ್ರ ಸರ್ಕಾರ ಗ್ಯಾಸ್ ಸಿಲಿಂಡರ್ ಬೆಲೆ 50 ರೂ ಜಾಸ್ತಿ ಮಾಡಿಲ್ಲವೇ? ರೆಡ್ಡಿ
ಕೇಂದ್ರ ಸರ್ಕಾರ ಗ್ಯಾಸ್ ಸಿಲಿಂಡರ್ ಬೆಲೆ 50 ರೂ ಜಾಸ್ತಿ ಮಾಡಿಲ್ಲವೇ? ರೆಡ್ಡಿ
ಬಾನು ಅವರ 12 ಉತ್ಕೃಷ್ಟ ಕತೆಗಳ ಸಂಕಲನ ಬೂಕರ್ ಪ್ರಶಸ್ತಿಗೆ ಶಾರ್ಟ್​ಲಿಸ್ಟ್ !
ಬಾನು ಅವರ 12 ಉತ್ಕೃಷ್ಟ ಕತೆಗಳ ಸಂಕಲನ ಬೂಕರ್ ಪ್ರಶಸ್ತಿಗೆ ಶಾರ್ಟ್​ಲಿಸ್ಟ್ !
ಇನ್ಮುಂದೆ KSRTC ಬಸ್​ ಟ್ರ್ಯಾಕ್​ ಮಾಡಬಹುದು: ಹೇಗೆ? ವಿಡಿಯೋ ನೋಡಿ
ಇನ್ಮುಂದೆ KSRTC ಬಸ್​ ಟ್ರ್ಯಾಕ್​ ಮಾಡಬಹುದು: ಹೇಗೆ? ವಿಡಿಯೋ ನೋಡಿ
ಸಿದ್ದರಾಮಯ್ಯ ಸರ್ಕಾರ ಭ್ರಷ್ಟವೆಂದು ನಾನು ಹೇಳಿಲ್ಲ: ಬಸವರಾಜ ರಾಯರೆಡ್ಡಿ
ಸಿದ್ದರಾಮಯ್ಯ ಸರ್ಕಾರ ಭ್ರಷ್ಟವೆಂದು ನಾನು ಹೇಳಿಲ್ಲ: ಬಸವರಾಜ ರಾಯರೆಡ್ಡಿ
ತಮಿಳುನಾಡುನಲ್ಲಿ ಮುಂದೊಂದು ದಿನ ಬಿಜೆಪಿ ಅಧಿಕಾರಕ್ಕೆ ಬರಲಿದೆ: ಅಣ್ಣಾಮಲೈ
ತಮಿಳುನಾಡುನಲ್ಲಿ ಮುಂದೊಂದು ದಿನ ಬಿಜೆಪಿ ಅಧಿಕಾರಕ್ಕೆ ಬರಲಿದೆ: ಅಣ್ಣಾಮಲೈ
ಕುಟುಂಬ, ಮಕ್ಕಳು, ಸಿನಿಮಾ ಇತ್ಯಾದಿ.. ಮಗಳೊಟ್ಟಿಗೆ ಮಾತಿಗೆ ಕೂತ ಶಿವಣ್ಣ
ಕುಟುಂಬ, ಮಕ್ಕಳು, ಸಿನಿಮಾ ಇತ್ಯಾದಿ.. ಮಗಳೊಟ್ಟಿಗೆ ಮಾತಿಗೆ ಕೂತ ಶಿವಣ್ಣ