AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಎಲ್ಲರೂ ಕಲ್ಲು ಹೊಡೆಯುತ್ತಾರೆ’; ಕಪಿಲ್ ಶರ್ಮಾ ಶೋನಲ್ಲಿ ಸಮಯ್ ರೈನಾ ನೇರ ಮಾತು

ನೆಟ್‌ಫ್ಲಿಕ್ಸ್‌ನ 'ದಿ ಗ್ರೇಟ್ ಇಂಡಿಯನ್ ಕಪಿಲ್ ಶೋ'ನಲ್ಲಿ ಕಾಮಿಡಿಯನ್ ಸಮಯ್ ರೈನಾ ಮತ್ತು ಯೂಟ್ಯೂಬರ್ ರಣವೀರ್ ಅಲಹಾಬಾದಿಯಾ ಒಟ್ಟಿಗೆ ಕಾಣಿಸಿಕೊಂಡಿದ್ದಾರೆ. ಕಳೆದ ವರ್ಷದ ವಿವಾದದ ಕುರಿತು ಕಪಿಲ್ ತಮಾಷೆ ಮಾಡಿದ್ದಾರೆ. ನವಜೋತ್ ಸಿಂಗ್ ಸಿಧು, ಸಮಯ್ ಅವರ ಚುರುಕು ಹಾಸ್ಯವನ್ನು ಶ್ಲಾಘಿಸಿದ್ದಾರೆ. ಈ ವಿಶೇಷ ಸಂಚಿಕೆ ಇಂದು ರಾತ್ರಿ 8 ಗಂಟೆಗೆ ನೆಟ್‌ಫ್ಲಿಕ್ಸ್‌ನಲ್ಲಿ ಪ್ರಸಾರವಾಗಲಿದೆ.

‘ಎಲ್ಲರೂ ಕಲ್ಲು ಹೊಡೆಯುತ್ತಾರೆ’; ಕಪಿಲ್ ಶರ್ಮಾ ಶೋನಲ್ಲಿ ಸಮಯ್ ರೈನಾ ನೇರ ಮಾತು
ಸಮಯ್ ರೈನಾ-ರಣವೀರ್
ರಾಜೇಶ್ ದುಗ್ಗುಮನೆ
|

Updated on: May 02, 2026 | 1:26 PM

Share

‘ಇಂಡಿಯಾಸ್ ಗಾಟ್ ಲೇಟೆಂಟ್’ ವಿವಾದದ ಒಂದು ವರ್ಷದ ನಂತರ, ಖ್ಯಾತ ಕಾಮಿಡಿಯನ್ ಸಮಯ್ ರೈನಾ ಮತ್ತು ಯೂಟ್ಯೂಬರ್ ರಣವೀರ್ ಅಲಹಾಬಾದಿಯಾ ಈಗ ನೆಟ್‌ಫ್ಲಿಕ್ಸ್‌ನ ‘ದಿ ಗ್ರೇಟ್ ಇಂಡಿಯನ್ ಕಪಿಲ್ ಶೋ’ಗೆ ಒಟ್ಟಿಗೆ ವೇದಿಕೆ ಏರಿದ್ದಾರೆ. ಇಂದು (ಮೇ 2) ರಾತ್ರಿ 8 ಗಂಟೆಗೆ ಪ್ರಸಾರವಾಗಲಿರುವ ಈ ಸಂಚಿಕೆಯ ಪ್ರೋಮೋ ಬಿಡುಗಡೆಯಾಗಿದ್ದು, ಪ್ರೇಕ್ಷಕರಲ್ಲಿ ಕುತೂಹಲ ಕೆರಳಿಸಿದೆ.

ಕಪಿಲ್ ಶರ್ಮಾ ಅವರು ಕಳೆದ ವರ್ಷದ ವಿವಾದದ ಕುರಿತು ರಣವೀರ್ ಅವರನ್ನು ತಮಾಷೆಯಾಗಿ ಕಾಲೆಳೆದಿದ್ದಾರೆ. ಇದು ಟೀಸರ್​​ನಲ್ಲಿ ಕಾಣಿಸಿದೆ. ಕಾರ್ಯಕ್ರಮದಲ್ಲಿ ರಣವೀರ್ ಅವರು ಸಮಯ್ ಬಗ್ಗೆ ಮಾತನಾಡುತ್ತಾ, ‘ಅವನದ್ದು ತುಂಬಾ ಶುದ್ಧವಾದ ಹೃದಯ, ಅದು ಜನರಿಗೆ ತಿಳಿಯಬೇಕು’ ಎಂದು ಹೊಗಳಿದರು. ತಕ್ಷಣವೇ ಪ್ರತಿಕ್ರಿಯಿಸಿದ ಕಪಿಲ್, ‘ಹೌದು, ಯಾರಾದರೂ ನಿಮ್ಮ ಶೋ ಅನ್ನು ಹಾಳು ಮಾಡಿದರೂ ಅವರು ನಿಮ್ಮನ್ನು ಬದುಕಲು ಬಿಟ್ಟಿದ್ದಾರೆ ಎಂದರೆ ಖಂಡಿತಾ ಅವರ ಹೃದಯ ದೊಡ್ಡದೇ ಇರಬೇಕು’ ಎಂದು ಹೇಳುವ ಮೂಲಕ ಕಳೆದ ವರ್ಷ ರಣವೀರ್ ಅವರ ಜೋಕ್‌ನಿಂದ ಉಂಟಾಗಿದ್ದ ವಿವಾದವನ್ನು ನೆನಪಿಸಿ ನಗೆಗಡಲಲ್ಲಿ ತೇಲಿಸಿದರು. ಇದು ಟೀಸರ್​ ಅಲ್ಲಿ ಕಾಣಿಸಿದೆ.

ಇದೇ ವೇಳೆ ನವಜೋತ್ ಸಿಂಗ್ ಸಿಧು ಅವರು ಸಮಯ್ ಅವರ ಚುರುಕಾದ ಹಾಸ್ಯ ಪ್ರಜ್ಞೆಯನ್ನು ಮೆಚ್ಚಿಕೊಂಡರು. ಆಗ ಸಮಯ್ ಬಗ್ಗೆ ಮೆಚ್ಚುಗೆ ಸೂಚಿಸಿದರು. ‘ದೇವರು ಒಂದು ಬಾಗಿಲು ಮುಚ್ಚಿದರೆ ಹತ್ತು ಕಿಟಕಿಗಳನ್ನು ತೆರೆಯುತ್ತಾನೆ. ನೀನು ಕಿಟಕಿಗಳನ್ನು ನೋಡುವವನಾಗು’ ಎಂದರು. ಇದಕ್ಕೆ ತಮ್ಮದೇ ಶೈಲಿಯಲ್ಲಿ ಉತ್ತರಿಸಿದ ಸಮಯ್, ‘ಸರ್, ಆ ಎಲ್ಲ ಕಿಟಕಿಗಳಿಂದ ಜನ ನಮಗೆ ಕಲ್ಲು ಹೊಡೆಯುತ್ತಾರೆ’ ಎಂದಾಗ ಸಿಧು ನಕ್ಕು ಸುಸ್ತಾದರು. ಸಮಯ್ ಅವರ ಈ ಉತ್ತರಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ಸಿಧು, ‘ಲವ್ ಯೂ ಮಗನೇ, ನೀನು ಅದ್ಭುತ!’ ಎಂದು ಅಪ್ಪಿಕೊಂಡರು.

ಇದನ್ನೂ ಓದಿ: ‘ಯಾವ ಸಮಯ್?’; ಟೀಕಿಸಿದ ಸಮಯ್ ರೈನಾಗೆ ರಣವೀರ್ ಅಲಹಾಬಾದಿಯಾ ಖಡಕ್ ಉತ್ತರ

ಸಮಯ್ ರೈನಾ ಮತ್ತು ರಣವೀರ್ ಅಲಹಾಬಾದಿಯ ಅವರ ಈ ವಿಶೇಷ ಸಂಚಿಕೆಯು ಇಂದು ರಾತ್ರಿ 8 ಗಂಟೆಗೆ ನೆಟ್‌ಫ್ಲಿಕ್ಸ್‌ನಲ್ಲಿ ಬಿಡುಗಡೆಯಾಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಭಾರೀ ಮಳೆ ಮುನ್ಸೂಚನೆ: ಜು.2ರಂದು ಈ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ
ಭಾರೀ ಮಳೆ ಮುನ್ಸೂಚನೆ: ಜು.2ರಂದು ಈ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ
ರಾಮಮಂದಿರದ ಹುಂಡಿ ಲೂಟಿ: ಆರೋಪಿಗಳ ಬಳಿ ಇದ್ದ ಹಣ ಜಪ್ತಿ
ರಾಮಮಂದಿರದ ಹುಂಡಿ ಲೂಟಿ: ಆರೋಪಿಗಳ ಬಳಿ ಇದ್ದ ಹಣ ಜಪ್ತಿ
ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಬಗ್ಗೆ ಸ್ಪಷ್ಟನೆ ನೀಡಿದ ಸಚಿವ ವಿ ಸೋಮಣ್ಣ
ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಬಗ್ಗೆ ಸ್ಪಷ್ಟನೆ ನೀಡಿದ ಸಚಿವ ವಿ ಸೋಮಣ್ಣ
ಮೊಮ್ಮಕ್ಕಳನ್ನು ಹೇಗೆ ಸಾಕಲಿ’: ಗೋಳಾಡಿದ ಬೀದಿ ವ್ಯಾಪಾರಿ ಅಜ್ಜಿ
ಮೊಮ್ಮಕ್ಕಳನ್ನು ಹೇಗೆ ಸಾಕಲಿ’: ಗೋಳಾಡಿದ ಬೀದಿ ವ್ಯಾಪಾರಿ ಅಜ್ಜಿ
ಸೋಶಿಯಲ್ ಮೀಡಿಯಾ ಹಿರೋ ಆಗಬೇಕು ಅನ್ಕೊಂಡಿದ್ದಿಯಾ? ರೌಡಿಗೆ ಕಮಿಷನರ್ ವಾರ್ನ್
ಸೋಶಿಯಲ್ ಮೀಡಿಯಾ ಹಿರೋ ಆಗಬೇಕು ಅನ್ಕೊಂಡಿದ್ದಿಯಾ? ರೌಡಿಗೆ ಕಮಿಷನರ್ ವಾರ್ನ್
ಸಿ.ಟಿ. ರವಿ ತನ್ನ ಬಾಸ್​​ ಎಂದ ಉಪರಾಷ್ಟ್ರಪತಿ​​: ವಿಡಿಯೋ ವೈರಲ್
ಸಿ.ಟಿ. ರವಿ ತನ್ನ ಬಾಸ್​​ ಎಂದ ಉಪರಾಷ್ಟ್ರಪತಿ​​: ವಿಡಿಯೋ ವೈರಲ್
ಆಪರೇಷನ್ ಫುಟ್​​ಪಾತ್ ಬಗ್ಗೆ ಸಚಿವ ಕೃಷ್ಣಭೈರೇಗೌಡ ಖಡಕ್ ಮಾತು
ಆಪರೇಷನ್ ಫುಟ್​​ಪಾತ್ ಬಗ್ಗೆ ಸಚಿವ ಕೃಷ್ಣಭೈರೇಗೌಡ ಖಡಕ್ ಮಾತು
ಚಾಮುಂಡಿ ಬೆಟ್ಟಕ್ಕೆ ಮೆಟ್ಟಿಲು ಹತ್ತಿ ಬರೋರಿಗೆ ಹಾಲು ಬಿಸ್ಕೆಟ್ ವ್ಯವಸ್ಥೆ!
ಚಾಮುಂಡಿ ಬೆಟ್ಟಕ್ಕೆ ಮೆಟ್ಟಿಲು ಹತ್ತಿ ಬರೋರಿಗೆ ಹಾಲು ಬಿಸ್ಕೆಟ್ ವ್ಯವಸ್ಥೆ!
ರಾಮಮಂದಿರ ದೇಣಿಗೆ ಕಳ್ಳತನ ಕೇಸ್​: ಅನಧಿಕೃತ ಕಾಣಿಕೆ ಹುಂಡಿಗಳು ಪತ್ತೆ
ರಾಮಮಂದಿರ ದೇಣಿಗೆ ಕಳ್ಳತನ ಕೇಸ್​: ಅನಧಿಕೃತ ಕಾಣಿಕೆ ಹುಂಡಿಗಳು ಪತ್ತೆ
ಸಾಲದ ಗೋಳು ಹೇಳಿಕೊಂಡ ಮಾಜಿ ಬಿಗ್​​ಬಾಸ್ ಸ್ಪರ್ಧಿ ಸೋನು ಗೌಡ
ಸಾಲದ ಗೋಳು ಹೇಳಿಕೊಂಡ ಮಾಜಿ ಬಿಗ್​​ಬಾಸ್ ಸ್ಪರ್ಧಿ ಸೋನು ಗೌಡ