AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಗೆಯ ವಿಗ್ರಹ ಹಾಗೂ ಮಿಸ್ಟರಿ; ಒಟಿಟಿಯಲ್ಲಿರೋ ಈ ಥ್ರಿಲ್ಲರ್ ಸಿನಿಮಾನ ಮಿಸ್ ಮಾಡಬೇಡಿ

ಒಟಿಟಿಯಲ್ಲಿರುವ ‘ಸಂಭವಮ್ ಆಧ್ಯಾಯಮ್ ಒನ್ನು’ ಥ್ರಿಲ್ಲರ್ ಸಿನಿಮಾ ಗಮನ ಸೆಳೆದಿದೆ. ಕಾಗೆಯ ವಿಗ್ರಹವಿರುವ ದಟ್ಟಾರಣ್ಯದಲ್ಲಿ ನಡೆಯುವ ಈ ಕಥೆ, ಮಿಸ್ಟರಿ ಮತ್ತು ಟ್ವಿಸ್ಟ್‌ಗಳಿಂದ ಕೂಡಿದೆ. ನಾಯಕನಿಗೆ ಎದುರಾಗುವ ಅನಿರೀಕ್ಷಿತ ಘಟನೆಗಳು ಚಿತ್ರಕ್ಕೆ ತಿರುವು ನೀಡುತ್ತವೆ. ಕೆಲ ಗೊಂದಲಗಳಿದ್ದರೂ, ಇದರ ಕಾನ್ಸೆಪ್ಟ್ ಮತ್ತು ಮೇಕಿಂಗ್ ಗಮನ ಸೆಳೆಯುತ್ತದೆ.

ಕಾಗೆಯ ವಿಗ್ರಹ ಹಾಗೂ ಮಿಸ್ಟರಿ; ಒಟಿಟಿಯಲ್ಲಿರೋ ಈ ಥ್ರಿಲ್ಲರ್ ಸಿನಿಮಾನ ಮಿಸ್ ಮಾಡಬೇಡಿ
ಸಿನಿಮಾ ಪೋಸ್ಟರ್
ರಾಜೇಶ್ ದುಗ್ಗುಮನೆ
|

Updated on:Apr 20, 2026 | 10:15 AM

Share

ಅದೊಂದು ದಟ್ಟಾರಣ್ಯ. ಕಾಡಿನ ಮಧ್ಯದಲ್ಲಿ ಒಂದು ದೇವಸ್ಥಾನ. ದೇವಸ್ಥಾನ ಎಂದಾಕ್ಷಣ ಅದು ಶಿವನದ್ದೋ ಅಥವಾ ಗಣೇಶನದ್ದೋ ಅಲ್ಲ. ಅದು ಕಾಗೆಯದ್ದು. ಕಾಗೆಯ ದೊಡ್ಡ ವಿಗ್ರಹ ಅಲ್ಲಿ ಸ್ಥಾಪನೆ ಆಗಿದೆ. ಅದಕ್ಕೊಂದು ಕರಾಳ ಇತಿಹಾಸ ಇದೆ. ಅಷ್ಟೇ ಅಲ್ಲ, ಆ ಕಾಡಿನಲ್ಲೂ ಒಂದು ಮಾಂತ್ರಿಕತೆ ಇದೆ. ಸಿನಿಮಾ ಉದ್ದಕ್ಕೂ ಟ್ವಿಸ್ಟ್ ಮೇಲೆ ಟ್ವಿಸ್ಟ್ ಇದೆ. ಇದು ಕೆಲವರಿಗೆ ಇಷ್ಟ ಆಗಬಹುದು, ಇನ್ನೂ ಕೆಲವರು ಇದನ್ನು ಇಷ್ಟಪಡದೇ ಇರಬಹುದು. ಆ ಸಿನಿಮಾ ಹೆಸರು ‘ಸಂಭವಮ್ ಆಧ್ಯಾಯಮ್ ಒನ್ನು’.  ಜಿಯೋ ಹಾಟ್​​ಸ್ಟಾರ್​​ನಲ್ಲಿ ಇದು ವೀಕ್ಷಣೆಗೆ ಲಭ್ಯವಿದೆ. ಮಲಯಾಳಂ ಸಿನಿಮಾ ಇದಾಗಿದ್ದು, ಕನ್ನಡದಲ್ಲೂ ವೀಕ್ಷಣೆಗೆ ಲಭ್ಯವಿದೆ.

ಕಥಾ ನಾಯಕ ಆಗತಾನೇ ಬೇರೆ ಸ್ಟೇಷನ್​​ಗೆ ಪೋಸ್ಟಿಂಗ್ ಹಾಕಿಸಿಕೊಂಡು ಬಂದಿರುತ್ತಾನೆ. ಹೊಸ ಊರು, ಹೊಸ ಜನ. ಬಂದ ದಿನವೇ ಒಂದು ವಿಚಿತ್ರ ಘಟನೆ ನಡೆಯುತ್ತದೆ. ಆತ, ಅನಿವಾರ್ಯವಾಗಿ ಕಾಡಿನ ಮಧ್ಯೆ ಹೋಗಬೇಕಾಗುತ್ತದೆ. ಅದು ಆ ಕಾಗೆ ವಿಗ್ರಹದ ಹತ್ತಿರ. ಆ ಬಳಿಕ ಸಿನಿಮಾದ ನಿಜವಾದ ಕಥೆ ತೆರೆದುಕೊಳ್ಳುತ್ತದೆ. ಈ ಸಿನಿಮಾ ಒಳ್ಳೆಯ ರೇಟಿಂಗ್ ಪಡೆದುಕೊಂಡಿದೆ.

ಮಲಯಾಂ ಮಂದಿ ಥ್ರಿಲ್ಲರ್ ಸಿನಿಮಾಗಳನ್ನು ಹೆಣೆಯಲು ಎತ್ತಿದ ಕೈ. ಅದೇ ರೀತಿ ‘ಸಂಭವಮ್ ಆಧ್ಯಾಯಮ್ ಒನ್ನು’ ಸಿನಿಮಾ ಕೂಡ ಗಮನ ಸೆಳೆಯುತ್ತದೆ. ಆದರೆ, ಈ ಚಿತ್ರದಲ್ಲಿ ಕೆಲವು ದೊಡ್ಡ ದೊಡ್ಡ ಮೈನಸ್ ಪಾಯಿಂಟ್ ಕೂಡ ಇದೆ. ಆರಂಭದಲ್ಲಿ ಸಿನಿಮಾ ಸಾಕಷ್ಟು ಗಮನ ಸೆಳೆಯುತ್ತದೆ. ಆದರೆ, ಮುಂದೆ ಹೋದಂತೆ ಕೆಲವು ಕಡೆಗಳಲ್ಲಿ ಗೊಂದಲದ ಗೂಡಾಗುತ್ತದೆ. ಹಲವು ದೃಶ್ಯಗಳಿಗೆ ಸ್ಪಷ್ಟತೆ ಸಿಗೋದಿಲ್ಲ.

ಇದನ್ನೂ ಓದಿ: ಮಲಯಾಳಂನ ‘ಪಳ್ಳಿ ಚಟ್ಟಂಬಿ’ ಚಿತ್ರದಲ್ಲಿ ಬಳಕೆ ಆಯ್ತು ಯಕ್ಷಗಾನ; ಇದೆ ಕನ್ನಡದ ಡೈಲಾಗ್

ಇನ್ನು ಮೇಕಿಂಗ್ ವಿಷಯದಲ್ಲಿ ‘ಸಂಭವಮ್ ಆಧ್ಯಾಯಮ್ ಒನ್ನು’ ಗಮನ ಸೆಳೆದಿದೆ. ಈ ಚಿತ್ರದ ಕಾನ್ಸೆಪ್ಟ್ ಕೂಡ ಗಮನ ಸೆಳೆಯುವ ರೀತಿಯಲ್ಲಿ ಇದೆ. ಆದರೆ, ಗೊಂದಲಗಳನ್ನು ಬಗೆಹರಿಸಿದ್ದರೆ ಸಿನಿಮಾ ಇನ್ನಷ್ಟು ಉತ್ತಮವಾಗಿ ಮೂಡಿಬರುತ್ತಿತ್ತು. ಟೈಮ್​ಪಾಸ್​ಗೆ ಒಂದೊಳ್ಳೆಯ ಥ್ರಿಲ್ಲರ್ಸಿನಿಮಾ ನೋಡಬೇಕು ಎಂದಿದ್ದರೆ ‘ಸಂಭವಮ್ ಆಧ್ಯಾಯಮ್ ಒನ್ನು’ ಒಳ್ಳೆಯ ಆಯ್ಕೆ. ಜೀತು ಸತೀಶನ್ ಮಂಗಳತು ಈ ಚಿತ್ರ ನಿರ್ದೇಶನ ಮಾಡಿದರೆ, ಅಕ್ಸರ್ ಅಲಿ, ವಿನೀತ್ ಕುಮಾರ್, ಅಸ್ಸಿಮ್ ಜಮಾಲ್ ಮೊದಲಾದವರು ಚಿತ್ರದಲ್ಲಿ ನಟಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 10:11 am, Mon, 20 April 26

Follow Us