AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಗೆಯ ವಿಗ್ರಹ ಹಾಗೂ ಮಿಸ್ಟರಿ; ಒಟಿಟಿಯಲ್ಲಿರೋ ಈ ಥ್ರಿಲ್ಲರ್ ಸಿನಿಮಾನ ಮಿಸ್ ಮಾಡಬೇಡಿ

ಒಟಿಟಿಯಲ್ಲಿರುವ ‘ಸಂಭವಮ್ ಆಧ್ಯಾಯಮ್ ಒನ್ನು’ ಥ್ರಿಲ್ಲರ್ ಸಿನಿಮಾ ಗಮನ ಸೆಳೆದಿದೆ. ಕಾಗೆಯ ವಿಗ್ರಹವಿರುವ ದಟ್ಟಾರಣ್ಯದಲ್ಲಿ ನಡೆಯುವ ಈ ಕಥೆ, ಮಿಸ್ಟರಿ ಮತ್ತು ಟ್ವಿಸ್ಟ್‌ಗಳಿಂದ ಕೂಡಿದೆ. ನಾಯಕನಿಗೆ ಎದುರಾಗುವ ಅನಿರೀಕ್ಷಿತ ಘಟನೆಗಳು ಚಿತ್ರಕ್ಕೆ ತಿರುವು ನೀಡುತ್ತವೆ. ಕೆಲ ಗೊಂದಲಗಳಿದ್ದರೂ, ಇದರ ಕಾನ್ಸೆಪ್ಟ್ ಮತ್ತು ಮೇಕಿಂಗ್ ಗಮನ ಸೆಳೆಯುತ್ತದೆ.

ಕಾಗೆಯ ವಿಗ್ರಹ ಹಾಗೂ ಮಿಸ್ಟರಿ; ಒಟಿಟಿಯಲ್ಲಿರೋ ಈ ಥ್ರಿಲ್ಲರ್ ಸಿನಿಮಾನ ಮಿಸ್ ಮಾಡಬೇಡಿ
ಸಿನಿಮಾ ಪೋಸ್ಟರ್
ರಾಜೇಶ್ ದುಗ್ಗುಮನೆ
|

Updated on:Apr 20, 2026 | 10:15 AM

Share

ಅದೊಂದು ದಟ್ಟಾರಣ್ಯ. ಕಾಡಿನ ಮಧ್ಯದಲ್ಲಿ ಒಂದು ದೇವಸ್ಥಾನ. ದೇವಸ್ಥಾನ ಎಂದಾಕ್ಷಣ ಅದು ಶಿವನದ್ದೋ ಅಥವಾ ಗಣೇಶನದ್ದೋ ಅಲ್ಲ. ಅದು ಕಾಗೆಯದ್ದು. ಕಾಗೆಯ ದೊಡ್ಡ ವಿಗ್ರಹ ಅಲ್ಲಿ ಸ್ಥಾಪನೆ ಆಗಿದೆ. ಅದಕ್ಕೊಂದು ಕರಾಳ ಇತಿಹಾಸ ಇದೆ. ಅಷ್ಟೇ ಅಲ್ಲ, ಆ ಕಾಡಿನಲ್ಲೂ ಒಂದು ಮಾಂತ್ರಿಕತೆ ಇದೆ. ಸಿನಿಮಾ ಉದ್ದಕ್ಕೂ ಟ್ವಿಸ್ಟ್ ಮೇಲೆ ಟ್ವಿಸ್ಟ್ ಇದೆ. ಇದು ಕೆಲವರಿಗೆ ಇಷ್ಟ ಆಗಬಹುದು, ಇನ್ನೂ ಕೆಲವರು ಇದನ್ನು ಇಷ್ಟಪಡದೇ ಇರಬಹುದು. ಆ ಸಿನಿಮಾ ಹೆಸರು ‘ಸಂಭವಮ್ ಆಧ್ಯಾಯಮ್ ಒನ್ನು’.  ಜಿಯೋ ಹಾಟ್​​ಸ್ಟಾರ್​​ನಲ್ಲಿ ಇದು ವೀಕ್ಷಣೆಗೆ ಲಭ್ಯವಿದೆ. ಮಲಯಾಳಂ ಸಿನಿಮಾ ಇದಾಗಿದ್ದು, ಕನ್ನಡದಲ್ಲೂ ವೀಕ್ಷಣೆಗೆ ಲಭ್ಯವಿದೆ.

ಕಥಾ ನಾಯಕ ಆಗತಾನೇ ಬೇರೆ ಸ್ಟೇಷನ್​​ಗೆ ಪೋಸ್ಟಿಂಗ್ ಹಾಕಿಸಿಕೊಂಡು ಬಂದಿರುತ್ತಾನೆ. ಹೊಸ ಊರು, ಹೊಸ ಜನ. ಬಂದ ದಿನವೇ ಒಂದು ವಿಚಿತ್ರ ಘಟನೆ ನಡೆಯುತ್ತದೆ. ಆತ, ಅನಿವಾರ್ಯವಾಗಿ ಕಾಡಿನ ಮಧ್ಯೆ ಹೋಗಬೇಕಾಗುತ್ತದೆ. ಅದು ಆ ಕಾಗೆ ವಿಗ್ರಹದ ಹತ್ತಿರ. ಆ ಬಳಿಕ ಸಿನಿಮಾದ ನಿಜವಾದ ಕಥೆ ತೆರೆದುಕೊಳ್ಳುತ್ತದೆ. ಈ ಸಿನಿಮಾ ಒಳ್ಳೆಯ ರೇಟಿಂಗ್ ಪಡೆದುಕೊಂಡಿದೆ.

ಮಲಯಾಂ ಮಂದಿ ಥ್ರಿಲ್ಲರ್ ಸಿನಿಮಾಗಳನ್ನು ಹೆಣೆಯಲು ಎತ್ತಿದ ಕೈ. ಅದೇ ರೀತಿ ‘ಸಂಭವಮ್ ಆಧ್ಯಾಯಮ್ ಒನ್ನು’ ಸಿನಿಮಾ ಕೂಡ ಗಮನ ಸೆಳೆಯುತ್ತದೆ. ಆದರೆ, ಈ ಚಿತ್ರದಲ್ಲಿ ಕೆಲವು ದೊಡ್ಡ ದೊಡ್ಡ ಮೈನಸ್ ಪಾಯಿಂಟ್ ಕೂಡ ಇದೆ. ಆರಂಭದಲ್ಲಿ ಸಿನಿಮಾ ಸಾಕಷ್ಟು ಗಮನ ಸೆಳೆಯುತ್ತದೆ. ಆದರೆ, ಮುಂದೆ ಹೋದಂತೆ ಕೆಲವು ಕಡೆಗಳಲ್ಲಿ ಗೊಂದಲದ ಗೂಡಾಗುತ್ತದೆ. ಹಲವು ದೃಶ್ಯಗಳಿಗೆ ಸ್ಪಷ್ಟತೆ ಸಿಗೋದಿಲ್ಲ.

ಇದನ್ನೂ ಓದಿ: ಮಲಯಾಳಂನ ‘ಪಳ್ಳಿ ಚಟ್ಟಂಬಿ’ ಚಿತ್ರದಲ್ಲಿ ಬಳಕೆ ಆಯ್ತು ಯಕ್ಷಗಾನ; ಇದೆ ಕನ್ನಡದ ಡೈಲಾಗ್

ಇನ್ನು ಮೇಕಿಂಗ್ ವಿಷಯದಲ್ಲಿ ‘ಸಂಭವಮ್ ಆಧ್ಯಾಯಮ್ ಒನ್ನು’ ಗಮನ ಸೆಳೆದಿದೆ. ಈ ಚಿತ್ರದ ಕಾನ್ಸೆಪ್ಟ್ ಕೂಡ ಗಮನ ಸೆಳೆಯುವ ರೀತಿಯಲ್ಲಿ ಇದೆ. ಆದರೆ, ಗೊಂದಲಗಳನ್ನು ಬಗೆಹರಿಸಿದ್ದರೆ ಸಿನಿಮಾ ಇನ್ನಷ್ಟು ಉತ್ತಮವಾಗಿ ಮೂಡಿಬರುತ್ತಿತ್ತು. ಟೈಮ್​ಪಾಸ್​ಗೆ ಒಂದೊಳ್ಳೆಯ ಥ್ರಿಲ್ಲರ್ಸಿನಿಮಾ ನೋಡಬೇಕು ಎಂದಿದ್ದರೆ ‘ಸಂಭವಮ್ ಆಧ್ಯಾಯಮ್ ಒನ್ನು’ ಒಳ್ಳೆಯ ಆಯ್ಕೆ. ಜೀತು ಸತೀಶನ್ ಮಂಗಳತು ಈ ಚಿತ್ರ ನಿರ್ದೇಶನ ಮಾಡಿದರೆ, ಅಕ್ಸರ್ ಅಲಿ, ವಿನೀತ್ ಕುಮಾರ್, ಅಸ್ಸಿಮ್ ಜಮಾಲ್ ಮೊದಲಾದವರು ಚಿತ್ರದಲ್ಲಿ ನಟಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 10:11 am, Mon, 20 April 26

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More