AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬಿಗ್ ಬಾಸ್​ ಒಟಿಟಿ’ ವಿನ್ನರ್ ಘೋಷಣೆ; ಇಡೀ ಮನೆಗೆ ವಿಲನ್ ಆಗಿದ್ದ ನಟಿಗೆ ಕಪ್

ಅರ್ಮಾನ್ ಮಲ್ಲಿಕ್, ಪಾಯಲ್ ಮಲ್ಲಿಕ್, ರಣವೀರ್ ಶೋರೆ ಸೇರಿ ಅನೇಕರು ‘ಬಿಗ್ ಬಾಸ್’ ರೇಸ್​ನಲ್ಲಿ ಇದ್ದರು. ಸನಾ ಅವರು ವಿನ್ನರ್ ಎಂದು ಅನಿಲ್ ಕಪೂರ್ ಘೋಷಣೆ ಮಾಡುತ್ತಿದ್ದಂತೆ ಅವರ ಫ್ಯಾನ್ಸ್​ ಅಭಿನಂದನೆ ತಿಳಿಸಿದರು. ಅನಿಲ್ ಕಪೂರ್ ಅವರು ಈ ಬಾರಿಯ ಬಿಗ್ ಬಾಸ್ ಶೋ ನಡೆಸಿಕೊಟ್ಟಿದ್ದಾರೆ.

‘ಬಿಗ್ ಬಾಸ್​ ಒಟಿಟಿ’ ವಿನ್ನರ್ ಘೋಷಣೆ; ಇಡೀ ಮನೆಗೆ ವಿಲನ್ ಆಗಿದ್ದ ನಟಿಗೆ ಕಪ್
ಸನಾ
ರಾಜೇಶ್ ದುಗ್ಗುಮನೆ
|

Updated on: Aug 03, 2024 | 8:51 AM

Share

‘ಹಿಂದಿ ಬಿಗ್ ಬಾಸ್ ಒಟಿಟಿ ಸೀಸನ್ 3’ ಫಿನಾಲೆ ಪೂರ್ಣಗೊಂಡಿದೆ. ಆಗಸ್ಟ್ 2ರ ರಾತ್ರಿ ಗ್ರ್ಯಾಂಡ್ ಫಿನಾಲೆ ನಡೆದಿದೆ. ಸನಾ ಮಕ್ಬುಲ್ ಹಾಗೂ ರ‍್ಯಾಪರ್ ನವೇದ್ ಶೇಖ್ ಮಧ್ಯೆ ಕೊನೆಯ ಹಂತದ ಸ್ಪರ್ಧೆ ಇತ್ತು. ಅನಿಲ್ ಕಪೂರ್ ಅವರು ಕೊನೆಯಲ್ಲಿ ಸನಾ ಮಕ್ಬುಲ್ ವಿನ್ನರ್ ಎಂದು ಘೋಷಣೆ ಮಾಡಿದರು. ನಟಿ ಟ್ರೋಫಿ ಹಾಗೂ 25 ಲಕ್ಷ ರೂಪಾಯಿ ಬಹುಮಾನ ಮೊತ್ತದ ಜೊತೆ ಮನೆಗೆ ತೆರಳಿದ್ದಾರೆ.

ಅರ್ಮಾನ್ ಮಲ್ಲಿಕ್, ಪಾಯಲ್ ಮಲ್ಲಿಕ್, ರಣವೀರ್ ಶೋರೆ ಸೇರಿ ಅನೇಕರು ‘ಬಿಗ್ ಬಾಸ್’ ರೇಸ್​ನಲ್ಲಿ ಇದ್ದರು. ಅನಿಲ್ ಕಪೂರ್ ಅವರು ಈ ಬಾರಿಯ ಬಿಗ್ ಬಾಸ್ ಶೋ ನಡೆಸಿಕೊಟ್ಟಿದ್ದಾರೆ. ಸನಾ ಅವರು ವಿನ್ನರ್ ಎಂದು ಅನಿಲ್ ಕಪೂರ್ ಘೋಷಣೆ ಮಾಡುತ್ತಿದ್ದಂತೆ ಅವರ ಫ್ಯಾನ್ಸ್​ ಅಭಿನಂದನೆ ತಿಳಿಸಿದರು.

ಸನಾ ಅವರ ವಿರುದ್ಧ ಈ ಮೊದಲಿನಿಂದಲೂ ಸಾಕಷ್ಟು ಟೀಕೆಗಳು ಬರುತ್ತಿದ್ದವು. ಅವರು ಸ್ವಾರ್ಥಿ, ಅವರಿಗೆ ಅಹಂ ಎಂದು ಅನೇಕರು ಆರೋಪಿಸುತ್ತಾ ಬಂದಿದ್ದರು. ಅವರು ಪ್ರತಿ ವಾರವೂ ನಾಮಿನೇಟ್ ಆಗುತ್ತಾ ಬಂದಿದ್ದರು. ಅವರು ಬಿಗ್ ಬಾಸ್ ಮನೆಯ ವಿಲನ್ ಆಗಿ ಕಾಣಿಸಿಕೊಂಡಿದ್ದರು. ಈಗ ಬಿಗ್ ಬಾಸ್ ಕಪ್ ಗೆಲ್ಲುವ ಮೂಲಕ ಟೀಕಾಕಾರರ ಬಾಯಿ ಮುಚ್ಚಿಸಿದ್ದಾರೆ.

ರಣವೀರ್ ಶೋರೆ ಅವರ ವೈಯಕ್ತಿ ಜೀವನದ ಬಗ್ಗೆ ಕಮೆಂಟ್ ಮಾಡಿ ವಿವಾದಸೃಷ್ಟಿ ಮಾಡಿದ್ದರು. ‘ನಿನ್ನ ಮಗ ಎಷ್ಟು ದೊಡ್ಡವನು? 13 ವರ್ಷ ಅಲ್ಲವೇ? ಅಮೆರಿಕದಲ್ಲಿ ಶಿಕ್ಷಣ ಪಡೆಯುತ್ತಿದ್ದಾನೆ. 25 ಲಕ್ಷ ಗೆದ್ದು ಆ ಹಣವನ್ನು ಮಗನ ಶಿಕ್ಷಣಕ್ಕೆ ಬಳಸಬೇಕು ಎನ್ನುವ ಆಲೋಚನೆಯಲ್ಲಿ ಇದ್ದೀಯಾ ಅಲ್ಲವೇ? ಆದರೆ, ಈ ಹಣ ಸಾಕಾಗುವುದಿಲ್ಲವಲ್ಲ’ ಎಂದು ಸನಾ ರಣವೀರ್​ಗೆ ಹೇಳಿದ್ದರು.

ಇದನ್ನೂ ಓದಿ: ‘ಕೋಟಿ’ ಸಿನಿಮಾ ಮೊದಲ ಹಾಡು ಬಿಡುಗಡೆ, ದಿಗ್ಗಜರ ಸಮಾಗಮ

ಚಂದ್ರಿಕಾ ದೀಕ್ಷಿತ್, ಸಾಯಿ ಕೇತನ್ ರಾವ್, ಅರ್ಮಾನ್ ಮಲಿಕ್, ಕೃತಿಕಾ ಮಲಿಕ್, ಪಾಯಲ್ ಮಲಿಕ್., ದೀಪಾ ಚೌರಾಸಿಯಾ, ಸನಾ ಸುಲ್ತಾನ್. ವಿಶಾಲ್ ಪಾಂಡೆ, ಶಿವಾನಿ ಕುಮಾರಿ ಸೇರಿ ಅನೇಕರು ಈ ಸೀಸನ್​ನಲ್ಲಿ ಇದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಈ ತಿಂಗಳಿಂದಲೇ ಬಜೆಟ್ ಸಿದ್ಧತೆ ಆರಂಭ ಎಂದ ಸಿಎಂ ಸಿದ್ದರಾಮಯ್ಯ
ಈ ತಿಂಗಳಿಂದಲೇ ಬಜೆಟ್ ಸಿದ್ಧತೆ ಆರಂಭ ಎಂದ ಸಿಎಂ ಸಿದ್ದರಾಮಯ್ಯ
ಹೊಸ ವರ್ಷದ ಪ್ರಯುಕ್ತ ನೀಲಕಂಠವರ್ಣಿ ಸ್ವಾಮಿಗೆ ವಿಶೇಷ ಅಭಿಷೇಕ
ಹೊಸ ವರ್ಷದ ಪ್ರಯುಕ್ತ ನೀಲಕಂಠವರ್ಣಿ ಸ್ವಾಮಿಗೆ ವಿಶೇಷ ಅಭಿಷೇಕ
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್