AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಿಲೀಸ್​​ಗೆ ಎರಡು ವರ್ಷ ಇರುವಾಗಲೇ 200 ಕೋಟಿ ರೂ. ಬಿಸ್ನೆಸ್ ಮಾಡಿದ ಬನ್ಸಾಲಿ ಸಿನಿಮಾ  

ಸಂಜಯ್ ಲೀಲಾ ಬನ್ಸಾಲಿ ಸಿನಿಮಾದಲ್ಲಿ ಕೆಲಸ ಮಾಡೋ ಅವಕಾಶ ಎಲ್ಲರಿಗೂ ಸಿಗುವುದಿಲ್ಲ. ಈ ರೀತಿ ಅವಕಾಶ ಸಿಕ್ಕಾಗ ಹೀರೋಗಳು ಮುಂದೆ ಬಂದು ಖುಷಿಖುಷಿಯಿಂದ ಸಿನಿಮಾ ಮಾಡುತ್ತಾರೆ. ಈಗ ಸಂಜಯ್ ಲೀಲಾ ಬನ್ಸಾಲಿ ಹಾಗೂ ರಣಬೀರ್ ಕಪೂರ್ ಒಟ್ಟಾಗಿ ಸಿನಿಮಾ ಮಾಡುತ್ತಿದ್ದಾರೆ. ಈ ಚಿತ್ರಕ್ಕೆ ‘ಲವ್ ಆ್ಯಂಡ್ ವಾರ್’ ಎನ್ನುವ ಶೀರ್ಷಿಕೆ ಇಡಲಾಗಿದೆ. ಈ ಸಿನಿಮಾ ಒಳ್ಳೆಯ ಬಿಸ್ನೆಸ್ ಮಾಡಿದೆ.

ರಿಲೀಸ್​​ಗೆ ಎರಡು ವರ್ಷ ಇರುವಾಗಲೇ 200 ಕೋಟಿ ರೂ. ಬಿಸ್ನೆಸ್ ಮಾಡಿದ ಬನ್ಸಾಲಿ ಸಿನಿಮಾ  
ಬನ್ಸಾಲಿ
ರಾಜೇಶ್ ದುಗ್ಗುಮನೆ
|

Updated on: Sep 17, 2024 | 10:27 AM

Share

ನಿರ್ದೇಶಕ ಸಂಜಯ್ ಲೀಲಾ ಬನ್ಸಾಲಿ ಅವರು ‘ಲವ್ ಆ್ಯಂಡ್ ವಾರ್’ ಸಿನಿಮಾ ಕೆಲಸಗಳಲ್ಲಿ ತೊಡಗಿಕೊಳ್ಳಬೇಕಿದೆ. ಈ ಚಿತ್ರದಲ್ಲಿ ರಣಬೀರ್ ಕಪೂರ್, ಆಲಿಯಾ ಭಟ್ ಹಾಗೂ ವಿಕ್ಕಿ ಕೌಶಲ್ ನಟಿಸುತ್ತಿದ್ದಾರೆ. ಈ ಚಿತ್ರದ ಶೂಟಿಂಗ್ ಆರಂಭಕ್ಕೆ ಇನ್ನೂ ಕೆಲವು ತಿಂಗಳು ಬೇಕಿದೆ. ಆಗಲೇ ಈ ಸಿನಿಮಾ ಎಲ್ಲಾ ಡೀಲ್​​ಗಳನ್ನು ಮಾಡಿ ಮುಗಿಸಿದೆಯಂತೆ. ರಿಲೀಸ್​ಗೂ ಮೊದಲೇ ಚಿತ್ರ 200 ಕೋಟಿ ರೂಪಾಯಿ ಬಿಸ್ನೆಸ್ ಮಾಡಿದೆ.

ಸಿನಿಮಾದ ಟ್ರೇಲರ್ ಅಥವಾ ಟೀಸರ್ ನೋಡಿದ ಬಳಿಕ ಕೆಲವು ಒಟಿಟಿ ಸಂಸ್ಥೆಗಳು ಸಿನಿಮಾ ಖರೀದಿಗೆ ಮುಂದೆ ಬರುತ್ತವೆ. ಆದರೆ, ಬನ್ಸಾಲಿ ವಿಚಾರದಲ್ಲಿ ಆ ರೀತಿ ಅಲ್ಲ. ಬನ್ಸಾಲಿ ಅವರ ಕೆಲಸದ ಬಗ್ಗೆ ಎಲ್ಲರಿಗೂ ಗೊತ್ತಿದೆ. ಅವರು ‘ಹೀರಾಮಂಡಿ’ ಸೀರಿಸ್ ಮೂಲಕ ಹೆಸರು ಮಾಡಿದ್ದರು. ಈ ಸರಣಿ ನೆಟ್​ಫ್ಲಿಕ್ಸ್​ನಲ್ಲಿ ಪ್ರಸಾರ ಕಂಡಿತ್ತು. ಈಗ ಇದೇ ಒಟಿಟಿ ಅವರ ಮುಂದಿನ ಚಿತ್ರವನ್ನು ಖರೀದಿ ಮಾಡಿದೆ.

‘ಲವ್ ಆ್ಯಂಡ್ ವಾರ್’ ಚಿತ್ರದ ಶೂಟಿಂಗ್ ಆರಂಭಕ್ಕೂ ಮೊದಲು 130 ಕೋಟಿ ರೂಪಾಯಿ ಕೊಟ್ಟು ಸಿನಿಮಾನ ನೆಟ್​ಫ್ಲಿಕ್ಸ್ ಖರೀದಿ ಮಾಡಿದೆ. ಒಂದೊಮ್ಮೆ ಸಿನಿಮಾ ಒಳ್ಳೆಯ ಗಳಿಕೆ ಮಾಡಿದರೆ ಈ ಮೊತ್ತವನ್ನು ಹೆಚ್ಚಿಸುವ ಬಗ್ಗೆಯೂ ಮಾತುಕತೆ ಆಗಿದೆಯಂತೆ. ಇನ್ನು, ಮ್ಯೂಸಿಕ್ ಹಕ್ಕನ್ನು ‘ಸರೆಗಮ’ 35 ಕೋಟಿ ರೂಪಾಯಿಗೆ ಖರೀದಿ ಮಾಡಿದೆ. ಇನ್ನು, ಟಿವಿ ಹಕ್ಕು ಬರೋಬ್ಬರಿ 50 ಕೋಟಿ ರೂಪಾಯಿಗೆ ಮಾರಾಟ ಆಗಿದೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: ಬನ್ಸಾಲಿ ಹೊಸ ಚಿತ್ರಕ್ಕೆ ರಣಬೀರ್ ಕಪೂರ್ ಹೀರೋ; ಶೂಟಿಂಗ್​ಗೂ ಮೊದಲೇ ಷರತ್ತುಗಳ ಪಟ್ಟಿ ಇಟ್ಟ ನಟ

‘ಲವ್ ಆ್ಯಂಡ್ ವಾರ್’ ಸಿನಿಮಾದ ಬಜೆಟ್ 200 ಕೋಟಿ ರೂಪಾಯಿ. ಸಿನಿಮಾ ರಿಲೀಸ್​ಗೂ ಮೊದಲೇ ಬಜೆಟ್​ನಷ್ಟೇ ಬಿಸ್ನೆಸ್ ಸಿನಿಮಾ ಮಾಡಿದೆ. ಹೀಗಾಗಿ ಸಿನಿಮಾ ರಿಲೀಸ್ ಆದ ಬಳಿಕ ಬರೋದೆಲ್ಲವೂ ಲಾಭವೇ ಆಗಲಿದೆ. ಈ ಚಿತ್ರದಲ್ಲಿ ಬರುವ ಲಾಭದಲ್ಲಿ ರಣಬೀರ್ ಕಪೂರ್​ಗೂ ಪಾಲಿದೆ ಎನ್ನಲಾಗಿದೆ. ಈ ಸಿನಿಮಾ ರಿಲೀಸ್ ಆಗೋದು 2026ರಲ್ಲಿ ಎನ್ನಲಾಗಿದೆ. ಅಂದರೆ ಸಿನಿಮಾಗೆ ಇನ್ನೂ ಎರಡು ವರ್ಷ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ತಮಿಳುನಾಡಿಗೆ ನೀರು ಬಿಡುವಂತೆ ಆದೇಶಿಸಿದ್ದು ಸರಿಯಲ್ಲ: ದರ್ಶನ ಪುಟ್ಟಣಯ್ಯ
ತಮಿಳುನಾಡಿಗೆ ನೀರು ಬಿಡುವಂತೆ ಆದೇಶಿಸಿದ್ದು ಸರಿಯಲ್ಲ: ದರ್ಶನ ಪುಟ್ಟಣಯ್ಯ
ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ಖಂಡಿಸಿ ಅನ್ನದಾತರ ಆಕ್ರೋಶ
ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ಖಂಡಿಸಿ ಅನ್ನದಾತರ ಆಕ್ರೋಶ
ಮಾದಪ್ಪನ ಹುಂಡಿಯಲ್ಲಿ ಕೋಟಿ ಕೋಟಿ ಕಾಣಿಕೆ ಸಂಗ್ರಹ!
ಮಾದಪ್ಪನ ಹುಂಡಿಯಲ್ಲಿ ಕೋಟಿ ಕೋಟಿ ಕಾಣಿಕೆ ಸಂಗ್ರಹ!
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ
ಇಂದು ಗುರು ಪೂರ್ಣಿಮೆ ಶುಭ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ
ಇಂದು ಗುರು ಪೂರ್ಣಿಮೆ ಶುಭ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!