Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಹೀರಾಮಂಡಿ’ ವೆಬ್​ ಸಿರೀಸ್​ ಯಶಸ್ಸಿಗೆ ಗೌರವ ಸಲ್ಲಿಸಿದ ‘ಅಮುಲ್​’

ಸ್ವಾತಂತ್ರ್ಯ ಪೂರ್ವದ ಕಥೆಯನ್ನು ‘ಹೀರಾಮಂಡಿ’ ವೆಬ್​ ಸರಣಿಯಲ್ಲಿ ಹೇಳಲಾಗಿದೆ. ಇದಕ್ಕೆ ಸಂಜಯ್​ ಲೀಲಾ ಬನ್ಸಾಲಿ ನಿರ್ದೇಶನ ಮಾಡಿದ್ದಾರೆ. ಸೋನಾಕ್ಷಿ ಸಿನ್ಹಾ, ಮನಿಶಾ ಕೊಯಿರಾಲಾ, ರಿಚಾ ಚಡ್ಡಾ, ಅದಿತಿ ರಾವ್​ ಹೈದರಿ ಮುಂತಾದವರು ಈ ವೆಬ್​ ಸಿರೀಸ್​ನಲ್ಲಿ ಬಣ್ಣ ಹಚ್ಚಿದ್ದಾರೆ. ‘ಅಮುಲ್​’ ಕಡೆಯಿಂದ ಈ ವೆಬ್​ ಸರಣಿಗೆ ಪ್ರಶಂಸೆ ಸಿಕ್ಕಿದೆ.

‘ಹೀರಾಮಂಡಿ’ ವೆಬ್​ ಸಿರೀಸ್​ ಯಶಸ್ಸಿಗೆ ಗೌರವ ಸಲ್ಲಿಸಿದ ‘ಅಮುಲ್​’
‘ಹೀರಾಮಂಡಿ’ ವೆಬ್​ ಸಿರೀಸ್​ ಯಶಸ್ಸಿಗೆ ಗೌರವ ಸಲ್ಲಿಸಿದ ‘ಅಮುಲ್​’
Follow us
ಮದನ್​ ಕುಮಾರ್​
|

Updated on: May 08, 2024 | 7:33 PM

ಒಟಿಟಿ ಪ್ರೇಕ್ಷಕರು ಹೀರಾಮಂಡಿ’ (Heeramandi) ವೆಬ್​ ಸಿರೀಸ್​ ನೋಡಿ ಖುಷಿಪಟ್ಟಿದ್ದಾರೆ. ಹಲವು ಕಾರಣಗಳಿಂದ ಈ ವೆಬ್​ ಸರಣಿಗೆ ಜನರ ಮೆಚ್ಚುಗೆ ಸಿಕ್ಕಿದೆ. ನೆಟ್​ಫ್ಲಿಕ್ಸ್​ ಮೂಲಕ ಮೇ 1ರಂದು ವೀಕ್ಷಣೆಗೆ ಲಭ್ಯವಾದ ಈ ವೆಬ್​ ಸಿರೀಸ್​ಗೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ. ಅನೇಕರು ಈ ಬಗ್ಗೆ ಸೋಶಿಯಲ್​ ಮೀಡಿಯಾದಲ್ಲಿ ತಮ್ಮ ಅನಿಸಿಕೆ ಹಂಚಿಕೊಳ್ಳುತ್ತಿದ್ದಾರೆ. ವಿಶೇಷ ಏನೆಂದರೆ, ‘ಅಮುಲ್​’ (Amul) ಸಂಸ್ಥೆ ಕೂಡ ‘ಹೀರಾಮಂಡಿ’ಗೆ ಭೇಷ್ ಎಂದಿದೆ. ವಿಶೇಷ ಕಾರ್ಟೂನ್​ ಮೂಲಕ ಈ ವೆಬ್​ ಸರಣಿಗೆ ಗೌರವ ಸಲ್ಲಿಸಲಾಗಿದೆ.

ಹಿರಿಯ ನಿರ್ದೇಶಕ ಸಂಜಯ್​ ಲೀಲಾ ಬನ್ಸಾಲಿ ಅವರು ‘ಹೀರಾಮಂಡಿ’ ವೆಬ್​ ಸರಣಿಗೆ ನಿರ್ದೇಶನ ಮಾಡಿದ್ದಾರೆ. ಇದು ಅವರ ಬಹುವರ್ಷಗಳ ಕನಸು. ಅನೇಕ ವರ್ಷಗಳ ಹಿಂದೆಯೇ ಈ ಕಥೆಯನ್ನು ಇಟ್ಟುಕೊಂಡು ಅವರು ಸಿನಿಮಾ ಮಾಡಲು ಹೊರಟಿದ್ದರು. ಈಗ ಅದೇ ಕಥೆಯನ್ನು ವೆಬ್​ ಸಿರೀಸ್​ ರೂಪದಲ್ಲಿ ಪ್ರೇಕ್ಷಕರ ಮುಂದೆ ತಂದಿದ್ದಾರೆ. ಅನೇಕ ಪ್ರತಿಭಾವಂತ ನಟ-ನಟಿಯರು ಇದರಲ್ಲಿ ಅಭಿನಯಿಸಿದ್ದಾರೆ.

ಇದನ್ನೂ ಓದಿ: ದ್ವಿಪಾತ್ರ ಮಾಡಿ ಸೈ ಎನಿಸಿಕೊಂಡ ನಟಿ ಸೋನಾಕ್ಷಿ ಸಿನ್ಹಾ

ಸ್ವಾತಂತ್ರ್ಯ ಪೂರ್ವ ಕಾಲದ ಲಾಹೋರ್​ನಲ್ಲಿ ಇದ್ದ ಶ್ರೀಮಂತ ವೇಶ್ಯೆಯರು ಮತ್ತು ನವಾಬರ ಕಥೆ ‘ಹೀರಾಮಂಡಿ’ಯಲ್ಲಿದೆ. ಈ ವೆಬ್​ ಸರಣಿಯಲ್ಲಿ ಮನಿಶಾ ಕೊಯಿರಾಲಾ, ಸೋನಾಕ್ಷಿ ಸಿನ್ಹಾ, ಸಂಜೀದಾ ಶೇಖ್​, ಅದಿತಿ ರಾವ್​ ಹೈದರಿ, ಶರ್ಮಿನ್​ ಸೇಗಲ್​, ತಹ ಶಾ, ಶೇಖರ್​ ಸುಮನ್, ಅಧ್ಯಯನ್​ ಸುಮನ್​, ಫರ್ದೀನ್ ಖಾನ್​, ರಿಚಾ ಚಡ್ಡಾ ಮುಂತಾದವರು ನಟಿಸಿದ್ದಾರೆ.

‘ದೇವದಾಸ್​’, ‘ಪದ್ಮಾವತ್​’, ‘ಬಾಜಿರಾವ್​ ಮಸ್ತಾನಿ’ ಮುಂತಾದ ಸೂಪರ್​ ಹಿಟ್​ ಸಿನಿಮಾಗಳನ್ನು ನೀಡಿದ ನಿರ್ದೇಶಕ ಸಂಜಯ್​ ಲೀಲಾ ಬನ್ಸಾಲಿ ಅವರು ಇದೇ ಮೊದಲ ಬಾರಿಗೆ ಒಟಿಟಿಗೆ ಕಾಲಿಟ್ಟಿದ್ದಾರೆ. ಅವರು ಆ್ಯಕ್ಷನ್​-ಕಟ್​ ಹೇಳಿದ ಮೊದಲ ವೆಬ್​ ಸಿರೀಸ್​ ‘ಹೀರಾಮಂಡಿ’. ಸಿನಿಮಾಗಳ ರೀತಿಯೇ ಈ ವೆಬ್​ ಸಿರೀಸ್​ ಅನ್ನು ಕೂಡ ಅವರು ಬಹಳ ಅದ್ದೂರಿಯಾಗಿ ತೆರೆಗೆ ತಂದಿದ್ದಾರೆ. ದೊಡ್ಡ ದೊಡ್ಡ ಸೆಟ್​ಗಳು, ಮನ ಸೆಳೆಯುವ ಸಂಗೀತ, ಕಲರ್​ಫುಲ್​ ಕಾಸ್ಟ್ಯೂಮ್​ ಮುಂತಾದ ಅಂಶಗಳು ಇದರಲ್ಲಿ ಹೈಲೈಟ್​ ಆಗಿವೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Daily horoscope: ವೃಷಭ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿದೆ
Daily horoscope: ವೃಷಭ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿದೆ
ಕಾರಿನಿಂದ ಗುದ್ದಿ ಕೊಲ್ಲಲು ಯತ್ನ: ಬಚಾವಾದ ಬಗ್ಗೆ ಮುರಳಿ ಪ್ರಸಾದ್ ಮಾತು
ಕಾರಿನಿಂದ ಗುದ್ದಿ ಕೊಲ್ಲಲು ಯತ್ನ: ಬಚಾವಾದ ಬಗ್ಗೆ ಮುರಳಿ ಪ್ರಸಾದ್ ಮಾತು
ಸ್ಪೈಸ್‌ಜೆಟ್ ಪ್ರಯಾಣಿಕರೊಂದಿಗೆ ಡ್ಯಾನ್ಸ್ ಮಾಡಿ ಹೋಳಿ ಆಚರಿಸಿದ ಸಿಬ್ಬಂದಿ
ಸ್ಪೈಸ್‌ಜೆಟ್ ಪ್ರಯಾಣಿಕರೊಂದಿಗೆ ಡ್ಯಾನ್ಸ್ ಮಾಡಿ ಹೋಳಿ ಆಚರಿಸಿದ ಸಿಬ್ಬಂದಿ
ಬೆಂಗಳೂರಿನಲ್ಲಿ ಶ್ವಾನದ ಮೇಲೆ ಅತ್ಯಾಚಾರವೆಸಗಿ ವಿಕೃತಿ
ಬೆಂಗಳೂರಿನಲ್ಲಿ ಶ್ವಾನದ ಮೇಲೆ ಅತ್ಯಾಚಾರವೆಸಗಿ ವಿಕೃತಿ
ವೇದಿಕೆ ಮೇಲೆಯೇ ವಾಗ್ವಾದಕ್ಕಿಳಿದ ಸಂಸದ ಪಿಸಿ ಮೋಹನ್​, ಪ್ರದೀಪ್​ ಈಶ್ವರ್
ವೇದಿಕೆ ಮೇಲೆಯೇ ವಾಗ್ವಾದಕ್ಕಿಳಿದ ಸಂಸದ ಪಿಸಿ ಮೋಹನ್​, ಪ್ರದೀಪ್​ ಈಶ್ವರ್
ಆಶೀರ್ವಾದ ರೂಪದಲ್ಲಿ ಹಣ ನೀಡುವುದು ಮಠದ ಸಂಪ್ರದಾಯ: ಸ್ವಾಮೀಜಿ
ಆಶೀರ್ವಾದ ರೂಪದಲ್ಲಿ ಹಣ ನೀಡುವುದು ಮಠದ ಸಂಪ್ರದಾಯ: ಸ್ವಾಮೀಜಿ
ಗೋರಖ್‌ಪುರದಲ್ಲಿ ಬಣ್ಣ ಎರಚಿ ಸಿಎಂ ಯೋಗಿ ಆದಿತ್ಯನಾಥ್ ಹೋಳಿ ಸಂಭ್ರಮ
ಗೋರಖ್‌ಪುರದಲ್ಲಿ ಬಣ್ಣ ಎರಚಿ ಸಿಎಂ ಯೋಗಿ ಆದಿತ್ಯನಾಥ್ ಹೋಳಿ ಸಂಭ್ರಮ
ಆಮಿರ್- ರಣ್​ಬೀರ್ ನಡುವೆ ಬಿರುಕು ಮೂಡಿಸಿದ ರಿಷಭ್ ಪಂತ್
ಆಮಿರ್- ರಣ್​ಬೀರ್ ನಡುವೆ ಬಿರುಕು ಮೂಡಿಸಿದ ರಿಷಭ್ ಪಂತ್
ನೀವೆಲ್ಲ ಬರುವಂಗಿದಿದ್ರೆ ನಿಮ್ಮನ್ನೂ ಊಟಕ್ಕೆ ಕರೀಬಹುದಿತ್ತು: ಶಿವಕುಮಾರ್
ನೀವೆಲ್ಲ ಬರುವಂಗಿದಿದ್ರೆ ನಿಮ್ಮನ್ನೂ ಊಟಕ್ಕೆ ಕರೀಬಹುದಿತ್ತು: ಶಿವಕುಮಾರ್
‘ಅಪ್ಪು’ ಮರು ಬಿಡುಗಡೆ: ಅಣ್ಣಾವ್ರ ಅಭಿಮಾನಿಗಳಿಂದ ಮತ್ತೊಂದು ಬೇಡಿಕೆ
‘ಅಪ್ಪು’ ಮರು ಬಿಡುಗಡೆ: ಅಣ್ಣಾವ್ರ ಅಭಿಮಾನಿಗಳಿಂದ ಮತ್ತೊಂದು ಬೇಡಿಕೆ