AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಹೀರಾಮಂಡಿ’ ವೆಬ್​ ಸಿರೀಸ್​ ಯಶಸ್ಸಿಗೆ ಗೌರವ ಸಲ್ಲಿಸಿದ ‘ಅಮುಲ್​’

ಸ್ವಾತಂತ್ರ್ಯ ಪೂರ್ವದ ಕಥೆಯನ್ನು ‘ಹೀರಾಮಂಡಿ’ ವೆಬ್​ ಸರಣಿಯಲ್ಲಿ ಹೇಳಲಾಗಿದೆ. ಇದಕ್ಕೆ ಸಂಜಯ್​ ಲೀಲಾ ಬನ್ಸಾಲಿ ನಿರ್ದೇಶನ ಮಾಡಿದ್ದಾರೆ. ಸೋನಾಕ್ಷಿ ಸಿನ್ಹಾ, ಮನಿಶಾ ಕೊಯಿರಾಲಾ, ರಿಚಾ ಚಡ್ಡಾ, ಅದಿತಿ ರಾವ್​ ಹೈದರಿ ಮುಂತಾದವರು ಈ ವೆಬ್​ ಸಿರೀಸ್​ನಲ್ಲಿ ಬಣ್ಣ ಹಚ್ಚಿದ್ದಾರೆ. ‘ಅಮುಲ್​’ ಕಡೆಯಿಂದ ಈ ವೆಬ್​ ಸರಣಿಗೆ ಪ್ರಶಂಸೆ ಸಿಕ್ಕಿದೆ.

‘ಹೀರಾಮಂಡಿ’ ವೆಬ್​ ಸಿರೀಸ್​ ಯಶಸ್ಸಿಗೆ ಗೌರವ ಸಲ್ಲಿಸಿದ ‘ಅಮುಲ್​’
‘ಹೀರಾಮಂಡಿ’ ವೆಬ್​ ಸಿರೀಸ್​ ಯಶಸ್ಸಿಗೆ ಗೌರವ ಸಲ್ಲಿಸಿದ ‘ಅಮುಲ್​’
ಮದನ್​ ಕುಮಾರ್​
|

Updated on: May 08, 2024 | 7:33 PM

Share

ಒಟಿಟಿ ಪ್ರೇಕ್ಷಕರು ಹೀರಾಮಂಡಿ’ (Heeramandi) ವೆಬ್​ ಸಿರೀಸ್​ ನೋಡಿ ಖುಷಿಪಟ್ಟಿದ್ದಾರೆ. ಹಲವು ಕಾರಣಗಳಿಂದ ಈ ವೆಬ್​ ಸರಣಿಗೆ ಜನರ ಮೆಚ್ಚುಗೆ ಸಿಕ್ಕಿದೆ. ನೆಟ್​ಫ್ಲಿಕ್ಸ್​ ಮೂಲಕ ಮೇ 1ರಂದು ವೀಕ್ಷಣೆಗೆ ಲಭ್ಯವಾದ ಈ ವೆಬ್​ ಸಿರೀಸ್​ಗೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ. ಅನೇಕರು ಈ ಬಗ್ಗೆ ಸೋಶಿಯಲ್​ ಮೀಡಿಯಾದಲ್ಲಿ ತಮ್ಮ ಅನಿಸಿಕೆ ಹಂಚಿಕೊಳ್ಳುತ್ತಿದ್ದಾರೆ. ವಿಶೇಷ ಏನೆಂದರೆ, ‘ಅಮುಲ್​’ (Amul) ಸಂಸ್ಥೆ ಕೂಡ ‘ಹೀರಾಮಂಡಿ’ಗೆ ಭೇಷ್ ಎಂದಿದೆ. ವಿಶೇಷ ಕಾರ್ಟೂನ್​ ಮೂಲಕ ಈ ವೆಬ್​ ಸರಣಿಗೆ ಗೌರವ ಸಲ್ಲಿಸಲಾಗಿದೆ.

ಹಿರಿಯ ನಿರ್ದೇಶಕ ಸಂಜಯ್​ ಲೀಲಾ ಬನ್ಸಾಲಿ ಅವರು ‘ಹೀರಾಮಂಡಿ’ ವೆಬ್​ ಸರಣಿಗೆ ನಿರ್ದೇಶನ ಮಾಡಿದ್ದಾರೆ. ಇದು ಅವರ ಬಹುವರ್ಷಗಳ ಕನಸು. ಅನೇಕ ವರ್ಷಗಳ ಹಿಂದೆಯೇ ಈ ಕಥೆಯನ್ನು ಇಟ್ಟುಕೊಂಡು ಅವರು ಸಿನಿಮಾ ಮಾಡಲು ಹೊರಟಿದ್ದರು. ಈಗ ಅದೇ ಕಥೆಯನ್ನು ವೆಬ್​ ಸಿರೀಸ್​ ರೂಪದಲ್ಲಿ ಪ್ರೇಕ್ಷಕರ ಮುಂದೆ ತಂದಿದ್ದಾರೆ. ಅನೇಕ ಪ್ರತಿಭಾವಂತ ನಟ-ನಟಿಯರು ಇದರಲ್ಲಿ ಅಭಿನಯಿಸಿದ್ದಾರೆ.

ಇದನ್ನೂ ಓದಿ: ದ್ವಿಪಾತ್ರ ಮಾಡಿ ಸೈ ಎನಿಸಿಕೊಂಡ ನಟಿ ಸೋನಾಕ್ಷಿ ಸಿನ್ಹಾ

ಸ್ವಾತಂತ್ರ್ಯ ಪೂರ್ವ ಕಾಲದ ಲಾಹೋರ್​ನಲ್ಲಿ ಇದ್ದ ಶ್ರೀಮಂತ ವೇಶ್ಯೆಯರು ಮತ್ತು ನವಾಬರ ಕಥೆ ‘ಹೀರಾಮಂಡಿ’ಯಲ್ಲಿದೆ. ಈ ವೆಬ್​ ಸರಣಿಯಲ್ಲಿ ಮನಿಶಾ ಕೊಯಿರಾಲಾ, ಸೋನಾಕ್ಷಿ ಸಿನ್ಹಾ, ಸಂಜೀದಾ ಶೇಖ್​, ಅದಿತಿ ರಾವ್​ ಹೈದರಿ, ಶರ್ಮಿನ್​ ಸೇಗಲ್​, ತಹ ಶಾ, ಶೇಖರ್​ ಸುಮನ್, ಅಧ್ಯಯನ್​ ಸುಮನ್​, ಫರ್ದೀನ್ ಖಾನ್​, ರಿಚಾ ಚಡ್ಡಾ ಮುಂತಾದವರು ನಟಿಸಿದ್ದಾರೆ.

‘ದೇವದಾಸ್​’, ‘ಪದ್ಮಾವತ್​’, ‘ಬಾಜಿರಾವ್​ ಮಸ್ತಾನಿ’ ಮುಂತಾದ ಸೂಪರ್​ ಹಿಟ್​ ಸಿನಿಮಾಗಳನ್ನು ನೀಡಿದ ನಿರ್ದೇಶಕ ಸಂಜಯ್​ ಲೀಲಾ ಬನ್ಸಾಲಿ ಅವರು ಇದೇ ಮೊದಲ ಬಾರಿಗೆ ಒಟಿಟಿಗೆ ಕಾಲಿಟ್ಟಿದ್ದಾರೆ. ಅವರು ಆ್ಯಕ್ಷನ್​-ಕಟ್​ ಹೇಳಿದ ಮೊದಲ ವೆಬ್​ ಸಿರೀಸ್​ ‘ಹೀರಾಮಂಡಿ’. ಸಿನಿಮಾಗಳ ರೀತಿಯೇ ಈ ವೆಬ್​ ಸಿರೀಸ್​ ಅನ್ನು ಕೂಡ ಅವರು ಬಹಳ ಅದ್ದೂರಿಯಾಗಿ ತೆರೆಗೆ ತಂದಿದ್ದಾರೆ. ದೊಡ್ಡ ದೊಡ್ಡ ಸೆಟ್​ಗಳು, ಮನ ಸೆಳೆಯುವ ಸಂಗೀತ, ಕಲರ್​ಫುಲ್​ ಕಾಸ್ಟ್ಯೂಮ್​ ಮುಂತಾದ ಅಂಶಗಳು ಇದರಲ್ಲಿ ಹೈಲೈಟ್​ ಆಗಿವೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್