AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಹೀರಾಮಂಡಿ’ ವೆಬ್​ ಸಿರೀಸ್​ ಯಶಸ್ಸಿಗೆ ಗೌರವ ಸಲ್ಲಿಸಿದ ‘ಅಮುಲ್​’

ಸ್ವಾತಂತ್ರ್ಯ ಪೂರ್ವದ ಕಥೆಯನ್ನು ‘ಹೀರಾಮಂಡಿ’ ವೆಬ್​ ಸರಣಿಯಲ್ಲಿ ಹೇಳಲಾಗಿದೆ. ಇದಕ್ಕೆ ಸಂಜಯ್​ ಲೀಲಾ ಬನ್ಸಾಲಿ ನಿರ್ದೇಶನ ಮಾಡಿದ್ದಾರೆ. ಸೋನಾಕ್ಷಿ ಸಿನ್ಹಾ, ಮನಿಶಾ ಕೊಯಿರಾಲಾ, ರಿಚಾ ಚಡ್ಡಾ, ಅದಿತಿ ರಾವ್​ ಹೈದರಿ ಮುಂತಾದವರು ಈ ವೆಬ್​ ಸಿರೀಸ್​ನಲ್ಲಿ ಬಣ್ಣ ಹಚ್ಚಿದ್ದಾರೆ. ‘ಅಮುಲ್​’ ಕಡೆಯಿಂದ ಈ ವೆಬ್​ ಸರಣಿಗೆ ಪ್ರಶಂಸೆ ಸಿಕ್ಕಿದೆ.

‘ಹೀರಾಮಂಡಿ’ ವೆಬ್​ ಸಿರೀಸ್​ ಯಶಸ್ಸಿಗೆ ಗೌರವ ಸಲ್ಲಿಸಿದ ‘ಅಮುಲ್​’
‘ಹೀರಾಮಂಡಿ’ ವೆಬ್​ ಸಿರೀಸ್​ ಯಶಸ್ಸಿಗೆ ಗೌರವ ಸಲ್ಲಿಸಿದ ‘ಅಮುಲ್​’
ಮದನ್​ ಕುಮಾರ್​
|

Updated on: May 08, 2024 | 7:33 PM

Share

ಒಟಿಟಿ ಪ್ರೇಕ್ಷಕರು ಹೀರಾಮಂಡಿ’ (Heeramandi) ವೆಬ್​ ಸಿರೀಸ್​ ನೋಡಿ ಖುಷಿಪಟ್ಟಿದ್ದಾರೆ. ಹಲವು ಕಾರಣಗಳಿಂದ ಈ ವೆಬ್​ ಸರಣಿಗೆ ಜನರ ಮೆಚ್ಚುಗೆ ಸಿಕ್ಕಿದೆ. ನೆಟ್​ಫ್ಲಿಕ್ಸ್​ ಮೂಲಕ ಮೇ 1ರಂದು ವೀಕ್ಷಣೆಗೆ ಲಭ್ಯವಾದ ಈ ವೆಬ್​ ಸಿರೀಸ್​ಗೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ. ಅನೇಕರು ಈ ಬಗ್ಗೆ ಸೋಶಿಯಲ್​ ಮೀಡಿಯಾದಲ್ಲಿ ತಮ್ಮ ಅನಿಸಿಕೆ ಹಂಚಿಕೊಳ್ಳುತ್ತಿದ್ದಾರೆ. ವಿಶೇಷ ಏನೆಂದರೆ, ‘ಅಮುಲ್​’ (Amul) ಸಂಸ್ಥೆ ಕೂಡ ‘ಹೀರಾಮಂಡಿ’ಗೆ ಭೇಷ್ ಎಂದಿದೆ. ವಿಶೇಷ ಕಾರ್ಟೂನ್​ ಮೂಲಕ ಈ ವೆಬ್​ ಸರಣಿಗೆ ಗೌರವ ಸಲ್ಲಿಸಲಾಗಿದೆ.

ಹಿರಿಯ ನಿರ್ದೇಶಕ ಸಂಜಯ್​ ಲೀಲಾ ಬನ್ಸಾಲಿ ಅವರು ‘ಹೀರಾಮಂಡಿ’ ವೆಬ್​ ಸರಣಿಗೆ ನಿರ್ದೇಶನ ಮಾಡಿದ್ದಾರೆ. ಇದು ಅವರ ಬಹುವರ್ಷಗಳ ಕನಸು. ಅನೇಕ ವರ್ಷಗಳ ಹಿಂದೆಯೇ ಈ ಕಥೆಯನ್ನು ಇಟ್ಟುಕೊಂಡು ಅವರು ಸಿನಿಮಾ ಮಾಡಲು ಹೊರಟಿದ್ದರು. ಈಗ ಅದೇ ಕಥೆಯನ್ನು ವೆಬ್​ ಸಿರೀಸ್​ ರೂಪದಲ್ಲಿ ಪ್ರೇಕ್ಷಕರ ಮುಂದೆ ತಂದಿದ್ದಾರೆ. ಅನೇಕ ಪ್ರತಿಭಾವಂತ ನಟ-ನಟಿಯರು ಇದರಲ್ಲಿ ಅಭಿನಯಿಸಿದ್ದಾರೆ.

ಇದನ್ನೂ ಓದಿ: ದ್ವಿಪಾತ್ರ ಮಾಡಿ ಸೈ ಎನಿಸಿಕೊಂಡ ನಟಿ ಸೋನಾಕ್ಷಿ ಸಿನ್ಹಾ

ಸ್ವಾತಂತ್ರ್ಯ ಪೂರ್ವ ಕಾಲದ ಲಾಹೋರ್​ನಲ್ಲಿ ಇದ್ದ ಶ್ರೀಮಂತ ವೇಶ್ಯೆಯರು ಮತ್ತು ನವಾಬರ ಕಥೆ ‘ಹೀರಾಮಂಡಿ’ಯಲ್ಲಿದೆ. ಈ ವೆಬ್​ ಸರಣಿಯಲ್ಲಿ ಮನಿಶಾ ಕೊಯಿರಾಲಾ, ಸೋನಾಕ್ಷಿ ಸಿನ್ಹಾ, ಸಂಜೀದಾ ಶೇಖ್​, ಅದಿತಿ ರಾವ್​ ಹೈದರಿ, ಶರ್ಮಿನ್​ ಸೇಗಲ್​, ತಹ ಶಾ, ಶೇಖರ್​ ಸುಮನ್, ಅಧ್ಯಯನ್​ ಸುಮನ್​, ಫರ್ದೀನ್ ಖಾನ್​, ರಿಚಾ ಚಡ್ಡಾ ಮುಂತಾದವರು ನಟಿಸಿದ್ದಾರೆ.

‘ದೇವದಾಸ್​’, ‘ಪದ್ಮಾವತ್​’, ‘ಬಾಜಿರಾವ್​ ಮಸ್ತಾನಿ’ ಮುಂತಾದ ಸೂಪರ್​ ಹಿಟ್​ ಸಿನಿಮಾಗಳನ್ನು ನೀಡಿದ ನಿರ್ದೇಶಕ ಸಂಜಯ್​ ಲೀಲಾ ಬನ್ಸಾಲಿ ಅವರು ಇದೇ ಮೊದಲ ಬಾರಿಗೆ ಒಟಿಟಿಗೆ ಕಾಲಿಟ್ಟಿದ್ದಾರೆ. ಅವರು ಆ್ಯಕ್ಷನ್​-ಕಟ್​ ಹೇಳಿದ ಮೊದಲ ವೆಬ್​ ಸಿರೀಸ್​ ‘ಹೀರಾಮಂಡಿ’. ಸಿನಿಮಾಗಳ ರೀತಿಯೇ ಈ ವೆಬ್​ ಸಿರೀಸ್​ ಅನ್ನು ಕೂಡ ಅವರು ಬಹಳ ಅದ್ದೂರಿಯಾಗಿ ತೆರೆಗೆ ತಂದಿದ್ದಾರೆ. ದೊಡ್ಡ ದೊಡ್ಡ ಸೆಟ್​ಗಳು, ಮನ ಸೆಳೆಯುವ ಸಂಗೀತ, ಕಲರ್​ಫುಲ್​ ಕಾಸ್ಟ್ಯೂಮ್​ ಮುಂತಾದ ಅಂಶಗಳು ಇದರಲ್ಲಿ ಹೈಲೈಟ್​ ಆಗಿವೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಕರ್ನಾಟಕ ವಿರುದ್ಧ 5 ವಿಕೆಟ್ ಉರುಳಿಸಿದ ಆಕಿಬ್ ನಬಿ
ಕರ್ನಾಟಕ ವಿರುದ್ಧ 5 ವಿಕೆಟ್ ಉರುಳಿಸಿದ ಆಕಿಬ್ ನಬಿ
ತಂಡಕ್ಕೆ ಚಿಯರ್ ಅಪ್ ಮಾಡಲು ಹುಬ್ಬಳ್ಳಿಗೆ ಬಂದ ಜಮ್ಮು-ಕಾಶ್ಮೀರ ಸಿಎಂ
ತಂಡಕ್ಕೆ ಚಿಯರ್ ಅಪ್ ಮಾಡಲು ಹುಬ್ಬಳ್ಳಿಗೆ ಬಂದ ಜಮ್ಮು-ಕಾಶ್ಮೀರ ಸಿಎಂ
ಬಾಗಲಕೋಟೆ ಬೆನ್ನಲ್ಲೇ ಮಡಿಕೇರಿ ಹಿಂದೂ ಸಂಗಮದಲ್ಲಿ ಗಲಾಟೆ: ವಿಡಿಯೋ ನೋಡಿ
ಬಾಗಲಕೋಟೆ ಬೆನ್ನಲ್ಲೇ ಮಡಿಕೇರಿ ಹಿಂದೂ ಸಂಗಮದಲ್ಲಿ ಗಲಾಟೆ: ವಿಡಿಯೋ ನೋಡಿ
ಏರ್ ಇಂಡಿಯಾ ಅವಾಂತರ: 2 ದಿನಗಳಿಂದ ಪ್ಲೈಟ್ ನಲ್ಲೇ ಉಳಿದ ಕನ್ನಡಿಗರು!
ಏರ್ ಇಂಡಿಯಾ ಅವಾಂತರ: 2 ದಿನಗಳಿಂದ ಪ್ಲೈಟ್ ನಲ್ಲೇ ಉಳಿದ ಕನ್ನಡಿಗರು!
ಕರ್ನಾಟಕ ಕಾಂಗ್ರೆಸ್​​ನಲ್ಲಿ ನಾಯಕತ್ವ ಬದಲಾವಣೆ? ರಾಬರ್ಟ್ ವಾದ್ರಾ ಏನಂದ್ರು?
ಕರ್ನಾಟಕ ಕಾಂಗ್ರೆಸ್​​ನಲ್ಲಿ ನಾಯಕತ್ವ ಬದಲಾವಣೆ? ರಾಬರ್ಟ್ ವಾದ್ರಾ ಏನಂದ್ರು?
ಚೌಟ್ರಿವರೆಗೂ ಬಂದು ಮದುವೆ ಬೇಡ ಎಂದ ವಧು!
ಚೌಟ್ರಿವರೆಗೂ ಬಂದು ಮದುವೆ ಬೇಡ ಎಂದ ವಧು!
ಪೆಟ್ರೋಲ್​​ಗೆ ಎಥನಾಲ್ ಮಿಕ್ಸ್: ಯಾರಿಗೆ ಲಾಭ? ಪೆಟ್ರೋಲ್ ಬೆಲೆ ಇಳಿಯುತ್ತಾ?
ಪೆಟ್ರೋಲ್​​ಗೆ ಎಥನಾಲ್ ಮಿಕ್ಸ್: ಯಾರಿಗೆ ಲಾಭ? ಪೆಟ್ರೋಲ್ ಬೆಲೆ ಇಳಿಯುತ್ತಾ?
ಅಪಘಾತಕ್ಕೀಡಾಗಿ ರಸ್ತೆಯಲ್ಲಿ ಬಿದ್ದಿದ್ದ ಯುವಕನಿಗೆ ಕೇಂದ್ರ ಸಚಿವ ಸಹಾಯ
ಅಪಘಾತಕ್ಕೀಡಾಗಿ ರಸ್ತೆಯಲ್ಲಿ ಬಿದ್ದಿದ್ದ ಯುವಕನಿಗೆ ಕೇಂದ್ರ ಸಚಿವ ಸಹಾಯ
ಬೆಂಗಳೂರಿನಲ್ಲಿ ಕುರಿ ಮಾರಾಟ ಮಾಡ್ತಿದ್ದವನ ಬಳಿ ಪಿಸ್ತೂಲ್!
ಬೆಂಗಳೂರಿನಲ್ಲಿ ಕುರಿ ಮಾರಾಟ ಮಾಡ್ತಿದ್ದವನ ಬಳಿ ಪಿಸ್ತೂಲ್!
ಮಲ್ಲಿಕಾರ್ಜುನ ಮುತ್ಯಾ ಪರ ಭಕ್ತರ ಸಭೆ, ಜಿಲ್ಲಾಡಳಿತಕ್ಕೆ 2 ದಿನ ಡೆಡ್​​ಲೈನ್
ಮಲ್ಲಿಕಾರ್ಜುನ ಮುತ್ಯಾ ಪರ ಭಕ್ತರ ಸಭೆ, ಜಿಲ್ಲಾಡಳಿತಕ್ಕೆ 2 ದಿನ ಡೆಡ್​​ಲೈನ್