‘ಹೀರಾಮಂಡಿ’ ವೆಬ್​ ಸಿರೀಸ್​ ಯಶಸ್ಸಿಗೆ ಗೌರವ ಸಲ್ಲಿಸಿದ ‘ಅಮುಲ್​’

ಸ್ವಾತಂತ್ರ್ಯ ಪೂರ್ವದ ಕಥೆಯನ್ನು ‘ಹೀರಾಮಂಡಿ’ ವೆಬ್​ ಸರಣಿಯಲ್ಲಿ ಹೇಳಲಾಗಿದೆ. ಇದಕ್ಕೆ ಸಂಜಯ್​ ಲೀಲಾ ಬನ್ಸಾಲಿ ನಿರ್ದೇಶನ ಮಾಡಿದ್ದಾರೆ. ಸೋನಾಕ್ಷಿ ಸಿನ್ಹಾ, ಮನಿಶಾ ಕೊಯಿರಾಲಾ, ರಿಚಾ ಚಡ್ಡಾ, ಅದಿತಿ ರಾವ್​ ಹೈದರಿ ಮುಂತಾದವರು ಈ ವೆಬ್​ ಸಿರೀಸ್​ನಲ್ಲಿ ಬಣ್ಣ ಹಚ್ಚಿದ್ದಾರೆ. ‘ಅಮುಲ್​’ ಕಡೆಯಿಂದ ಈ ವೆಬ್​ ಸರಣಿಗೆ ಪ್ರಶಂಸೆ ಸಿಕ್ಕಿದೆ.

‘ಹೀರಾಮಂಡಿ’ ವೆಬ್​ ಸಿರೀಸ್​ ಯಶಸ್ಸಿಗೆ ಗೌರವ ಸಲ್ಲಿಸಿದ ‘ಅಮುಲ್​’
‘ಹೀರಾಮಂಡಿ’ ವೆಬ್​ ಸಿರೀಸ್​ ಯಶಸ್ಸಿಗೆ ಗೌರವ ಸಲ್ಲಿಸಿದ ‘ಅಮುಲ್​’
Follow us
|

Updated on: May 08, 2024 | 7:33 PM

ಒಟಿಟಿ ಪ್ರೇಕ್ಷಕರು ಹೀರಾಮಂಡಿ’ (Heeramandi) ವೆಬ್​ ಸಿರೀಸ್​ ನೋಡಿ ಖುಷಿಪಟ್ಟಿದ್ದಾರೆ. ಹಲವು ಕಾರಣಗಳಿಂದ ಈ ವೆಬ್​ ಸರಣಿಗೆ ಜನರ ಮೆಚ್ಚುಗೆ ಸಿಕ್ಕಿದೆ. ನೆಟ್​ಫ್ಲಿಕ್ಸ್​ ಮೂಲಕ ಮೇ 1ರಂದು ವೀಕ್ಷಣೆಗೆ ಲಭ್ಯವಾದ ಈ ವೆಬ್​ ಸಿರೀಸ್​ಗೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ. ಅನೇಕರು ಈ ಬಗ್ಗೆ ಸೋಶಿಯಲ್​ ಮೀಡಿಯಾದಲ್ಲಿ ತಮ್ಮ ಅನಿಸಿಕೆ ಹಂಚಿಕೊಳ್ಳುತ್ತಿದ್ದಾರೆ. ವಿಶೇಷ ಏನೆಂದರೆ, ‘ಅಮುಲ್​’ (Amul) ಸಂಸ್ಥೆ ಕೂಡ ‘ಹೀರಾಮಂಡಿ’ಗೆ ಭೇಷ್ ಎಂದಿದೆ. ವಿಶೇಷ ಕಾರ್ಟೂನ್​ ಮೂಲಕ ಈ ವೆಬ್​ ಸರಣಿಗೆ ಗೌರವ ಸಲ್ಲಿಸಲಾಗಿದೆ.

ಹಿರಿಯ ನಿರ್ದೇಶಕ ಸಂಜಯ್​ ಲೀಲಾ ಬನ್ಸಾಲಿ ಅವರು ‘ಹೀರಾಮಂಡಿ’ ವೆಬ್​ ಸರಣಿಗೆ ನಿರ್ದೇಶನ ಮಾಡಿದ್ದಾರೆ. ಇದು ಅವರ ಬಹುವರ್ಷಗಳ ಕನಸು. ಅನೇಕ ವರ್ಷಗಳ ಹಿಂದೆಯೇ ಈ ಕಥೆಯನ್ನು ಇಟ್ಟುಕೊಂಡು ಅವರು ಸಿನಿಮಾ ಮಾಡಲು ಹೊರಟಿದ್ದರು. ಈಗ ಅದೇ ಕಥೆಯನ್ನು ವೆಬ್​ ಸಿರೀಸ್​ ರೂಪದಲ್ಲಿ ಪ್ರೇಕ್ಷಕರ ಮುಂದೆ ತಂದಿದ್ದಾರೆ. ಅನೇಕ ಪ್ರತಿಭಾವಂತ ನಟ-ನಟಿಯರು ಇದರಲ್ಲಿ ಅಭಿನಯಿಸಿದ್ದಾರೆ.

ಇದನ್ನೂ ಓದಿ: ದ್ವಿಪಾತ್ರ ಮಾಡಿ ಸೈ ಎನಿಸಿಕೊಂಡ ನಟಿ ಸೋನಾಕ್ಷಿ ಸಿನ್ಹಾ

ಸ್ವಾತಂತ್ರ್ಯ ಪೂರ್ವ ಕಾಲದ ಲಾಹೋರ್​ನಲ್ಲಿ ಇದ್ದ ಶ್ರೀಮಂತ ವೇಶ್ಯೆಯರು ಮತ್ತು ನವಾಬರ ಕಥೆ ‘ಹೀರಾಮಂಡಿ’ಯಲ್ಲಿದೆ. ಈ ವೆಬ್​ ಸರಣಿಯಲ್ಲಿ ಮನಿಶಾ ಕೊಯಿರಾಲಾ, ಸೋನಾಕ್ಷಿ ಸಿನ್ಹಾ, ಸಂಜೀದಾ ಶೇಖ್​, ಅದಿತಿ ರಾವ್​ ಹೈದರಿ, ಶರ್ಮಿನ್​ ಸೇಗಲ್​, ತಹ ಶಾ, ಶೇಖರ್​ ಸುಮನ್, ಅಧ್ಯಯನ್​ ಸುಮನ್​, ಫರ್ದೀನ್ ಖಾನ್​, ರಿಚಾ ಚಡ್ಡಾ ಮುಂತಾದವರು ನಟಿಸಿದ್ದಾರೆ.

‘ದೇವದಾಸ್​’, ‘ಪದ್ಮಾವತ್​’, ‘ಬಾಜಿರಾವ್​ ಮಸ್ತಾನಿ’ ಮುಂತಾದ ಸೂಪರ್​ ಹಿಟ್​ ಸಿನಿಮಾಗಳನ್ನು ನೀಡಿದ ನಿರ್ದೇಶಕ ಸಂಜಯ್​ ಲೀಲಾ ಬನ್ಸಾಲಿ ಅವರು ಇದೇ ಮೊದಲ ಬಾರಿಗೆ ಒಟಿಟಿಗೆ ಕಾಲಿಟ್ಟಿದ್ದಾರೆ. ಅವರು ಆ್ಯಕ್ಷನ್​-ಕಟ್​ ಹೇಳಿದ ಮೊದಲ ವೆಬ್​ ಸಿರೀಸ್​ ‘ಹೀರಾಮಂಡಿ’. ಸಿನಿಮಾಗಳ ರೀತಿಯೇ ಈ ವೆಬ್​ ಸಿರೀಸ್​ ಅನ್ನು ಕೂಡ ಅವರು ಬಹಳ ಅದ್ದೂರಿಯಾಗಿ ತೆರೆಗೆ ತಂದಿದ್ದಾರೆ. ದೊಡ್ಡ ದೊಡ್ಡ ಸೆಟ್​ಗಳು, ಮನ ಸೆಳೆಯುವ ಸಂಗೀತ, ಕಲರ್​ಫುಲ್​ ಕಾಸ್ಟ್ಯೂಮ್​ ಮುಂತಾದ ಅಂಶಗಳು ಇದರಲ್ಲಿ ಹೈಲೈಟ್​ ಆಗಿವೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ಲೈವ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ಲೈವ್​
ಕೊಪ್ಪಳ: ಕೆಸರುಮಯವಾದ ರಸ್ತೆ, ಭತ್ತ ನಾಟಿ ಮಾಡಿ ಗ್ರಾಮಸ್ಥರ ಆಕ್ರೋಶ
ಕೊಪ್ಪಳ: ಕೆಸರುಮಯವಾದ ರಸ್ತೆ, ಭತ್ತ ನಾಟಿ ಮಾಡಿ ಗ್ರಾಮಸ್ಥರ ಆಕ್ರೋಶ
ದೇವರಿಗೆ ಯಾವ ದಿನ ಯಾವ ನೈವೇದ್ಯ ಅರ್ಪಿಸಬೇಕು? ವಿಡಿಯೋ ನೋಡಿ
ದೇವರಿಗೆ ಯಾವ ದಿನ ಯಾವ ನೈವೇದ್ಯ ಅರ್ಪಿಸಬೇಕು? ವಿಡಿಯೋ ನೋಡಿ
ಈ ರಾಶಿಯವರಿಗೆ ಆಗಬೇಕಾದ ವಿವಾಹವು ಕಾರಾಣಾಂತರದಿಂದ ಮುಂದೆ ಹೋಗಲಿದೆ
ಈ ರಾಶಿಯವರಿಗೆ ಆಗಬೇಕಾದ ವಿವಾಹವು ಕಾರಾಣಾಂತರದಿಂದ ಮುಂದೆ ಹೋಗಲಿದೆ
FIR ದಾಖಲಾಗಿದ್ದರೂ ಸುದೀರ್ಘ 8 ವರೆ ಗಂಟೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ CM
FIR ದಾಖಲಾಗಿದ್ದರೂ ಸುದೀರ್ಘ 8 ವರೆ ಗಂಟೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ CM
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಗೋಡೆ ಕುಸಿದು ಇಬ್ಬರು ಸಾವು
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಗೋಡೆ ಕುಸಿದು ಇಬ್ಬರು ಸಾವು
ಈ ಪ್ರಕರಣದಲ್ಲಿ ನಂಗೆ ಗಂಡಾಂತರ ಇಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ HDK ಮಾತು
ಈ ಪ್ರಕರಣದಲ್ಲಿ ನಂಗೆ ಗಂಡಾಂತರ ಇಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ HDK ಮಾತು
ಸಿಎಂ ವಿರುದ್ಧ FIR: ಪಂಜು ಹಿಡಿದು ಪ್ರತಿಭಟನೆ ನಡೆಸಿದ ಸಿದ್ದು ಬೆಂಬಲಿಗರು
ಸಿಎಂ ವಿರುದ್ಧ FIR: ಪಂಜು ಹಿಡಿದು ಪ್ರತಿಭಟನೆ ನಡೆಸಿದ ಸಿದ್ದು ಬೆಂಬಲಿಗರು
ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ
ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್