AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಲೂಸಾ ನೀನು?’; ಸೋನು ಶ್ರೀನಿವಾಸ್​ ಗೌಡ ಅವತಾರಕ್ಕೆ ಉರಿದು ಬಿದ್ದ ಸಾನ್ಯಾ ಅಯ್ಯರ್

ಸೋನು ಕಿವಿಗೆ ಹೆಡ್​ಫೋನ್​ ಹಾಕಿಕೊಂಡರೆ, ಸಾನ್ಯಾ ಲೈನ್​ಗಳನ್ನು ಹೇಳಿದರು. ಆದರೆ, ಒಂದೇ ಒಂದು ವಾಕ್ಯವನ್ನು ಸರಿಯಾಗಿ ಹೇಳಿಲ್ಲ ಸೋನು.

‘ಲೂಸಾ ನೀನು?’; ಸೋನು ಶ್ರೀನಿವಾಸ್​ ಗೌಡ ಅವತಾರಕ್ಕೆ ಉರಿದು ಬಿದ್ದ ಸಾನ್ಯಾ ಅಯ್ಯರ್
ಸಾನ್ಯಾ-ಸೋನು
TV9 Web
| Edited By: |

Updated on: Aug 17, 2022 | 8:15 PM

Share

‘ಬಿಗ್ ಬಾಸ್ ಒಟಿಟಿ’ (Bigg Boss OTT) ಮನೆಯಲ್ಲಿ ಸಾಕಷ್ಟು ಘಟನೆಗಳು ನಡೆಯುತ್ತಿವೆ. ಹಲವರ ಮಧ್ಯೆ ಟಾಸ್ಕ್​ ವಿಚಾರಕ್ಕೆ ಕಿರಿಕ್​ಗಳು ನಡೆಯುತ್ತಿವೆ. ಈಗಾಗಲೇ ಹಲವರು ಕಣ್ಣೀರು ಹಾಕಿದ್ದಾರೆ. ಈ ಬಾರಿ ಸೋನು ಶ್ರೀನಿವಾಸ್ ಗೌಡ ಹಾಗೂ ಸಾನ್ಯಾ ಅವರ ಸರದಿ. ಇಬ್ಬರ ನಡುವೆ ಟಾಸ್ಕ್​ ವಿಚಾರಕ್ಕೆ ದೊಡ್ಡ ಕಿರಿಕ್ ಆಗಿದೆ. ‘ಲೂಸಾ ನೀನು?’ ಎಂದು ಸೋನು ಶ್ರೀನಿವಾಸ್ ಗೌಡ (Sonu Srinivas Gowda) ವಿರುದ್ಧ ಸಾನ್ಯಾ ಅಯ್ಯರ್ ನೇರವಾಗಿ ಕೂಗಾಡಿದ್ದಾರೆ. ಇದೇ ಮೊದಲ ಬಾರಿಗೆ ಅವರು ಟೆಂಪರ್ ಕಳೆದುಕೊಂಡಿದ್ದಾರೆ. ಇಂದಿನ (ಆಗಸ್ಟ್ 17) ಎಪಿಸೋಡ್​ನಲ್ಲಿ ಈ ವಿಚಾರ ಹೈಲೈಟ್ ಆಗಿದೆ.

ಎರಡು ಟೀಂ ಮಾಡಿ ಒಂದು ಟಾಸ್ಕ್ ನೀಡಲಾಗಿತ್ತು. ಈ ಟಾಸ್ಕ್​ನ ಪ್ರಕಾರ ಒಂದು ಟೀಂನಿಂದ ಇಬ್ಬರು ಆಟಕ್ಕೆ ಇಳಿಯಬೇಕು. ಒಬ್ಬರ ಕಿವಿಗೆ ಹೆಡ್​ಫೋನ್​ ಹಾಕಿ ಸಾಂಗ್ ಹಾಕಲಾಗುತ್ತದೆ. ಎದುರು ಇದ್ದವರು ಬಿಗ್ ಬಾಸ್ ನೀಡಿದ ಲೈನ್​​ನ ಜೋರಾಗಿ ಹೇಳಬೇಕು. ಹೆಡ್​ಫೋನ್ ಹಾಕಿಕೊಂಡವರು ಇದನ್ನು ಗೆಸ್ ಮಾಡಬೇಕು. ಈ ಆಟಕ್ಕೆ ಸೋನು ಹಾಗೂ ಸಾನ್ಯಾ ಇಳಿದಿದ್ದಾರೆ.

ಸೋನು ಶ್ರೀನಿವಾಸ್ ಗೌಡ ಕಿವಿಗೆ ಹೆಡ್​ಫೋನ್​ ಹಾಕಿಕೊಂಡರೆ, ಸಾನ್ಯಾ ಲೈನ್​ಗಳನ್ನು ಹೇಳಿದರು. ಆದರೆ, ಒಂದೇ ಒಂದು ವಾಕ್ಯವನ್ನು ಸರಿಯಾಗಿ ಹೇಳಿಲ್ಲ ಸೋನು. ‘ಹೆಡ್​ಫೋನ್​ನಲ್ಲಿ ಸಾಂಗ್ ದೊಡ್ಡದಾಗಿ ಬರುತ್ತಿದೆ’ ಎಂದು ಕೂಗುವುದೊಂದೇ ಮಾಡುತ್ತಿದ್ದರು. ಇದರಿಂದ ಸಾನ್ಯಾ ಅಸಮಾಧಾನಗೊಂಡರು. ಇಬ್ಬರ ನಡುವೆ ಕಿರಿಕ್ ಆಯಿತು.

ಇದನ್ನೂ ಓದಿ
Image
‘ನಾನು ಸಖತ್ ಆಗಿ ಕಬಡ್ಡಿ ಆಡ್ತೀನಿ’ ಎಂದು ಬಿಗ್ ಬಾಸ್ ಮನೆಯಲ್ಲಿ ಗಾಯ ಮಾಡಿಕೊಂಡ ಸೋನು ಶ್ರೀನಿವಾಸ್ ಗೌಡ
Image
ಗರ್ಲ್​​ಫ್ರೆಂಡ್ ವಿಚಾರಕ್ಕೆ ಬಂದ ಸೋನು ಗೌಡ ವಿರುದ್ಧ ಸೇಡು ತೀರಿಸಿಕೊಂಡ ಜಶ್ವಂತ್
Image
‘ಪ್ಲೀಸ್ ದಯವಿಟ್ಟು ಬಿಟ್ಟುಬಿಡಿ’; ಮನೆಗೆ ಬಂದ ಅತಿಥಿ ಕಂಡು ಕಿರುಚಾಡಿದ ಸಾನ್ಯಾ ಅಯ್ಯರ್
Image
‘ಕಾಫಿ ನಾಡು ಚಂದು ಬಿಗ್ ಬಾಸ್‌ಗೆ ಹೋಗಬೇಕು’ ಅಭಿಯಾನ ಶುರು; ಸ್ವತಃ ಬೆಂಬಲ ನೀಡಿದ ವೈರಲ್ ಸಿಂಗರ್!

ಸೋನು ಶ್ರೀನಿವಾಸ್ ಗೌಡ ತನ್ನ ತಪ್ಪಿಲ್ಲ ಎಂದು ವಾದಿಸೋಕೆ ಶುರು ಮಾಡಿದರು. ಅಷ್ಟೇ ಅಲ್ಲ ಸಾನ್ಯಾ ಮೇಲೆ ತಪ್ಪನ್ನು ಎತ್ತಿ ಹಾಕಿದರು. ಈ ವಿಚಾರದಿಂದ ಸಾನ್ಯಾ ಸಿಕ್ಕಾಪಟ್ಟೆ ಅಪ್ಸೆಟ್ ಆದರು. ಇಬ್ಬರ ನಡುವೆ ಮಾತಿನ ಚಕಮಕಿ ನಡೆಯಿತು. ‘ನೀನು ಲೂಸಾ’ ಎಂದು ಹೇಳುತ್ತಾ ಟೆಂಪರ್ ಕಳೆದುಕೊಂಡರು ಸಾನ್ಯಾ. ನಂತರ ಸಾನ್ಯಾ ಅಳೋಕೆ ಆರಂಭಿಸಿದರು.

ಇದನ್ನೂ ಓದಿ: ರಾತ್ರಿ 2.15ಕ್ಕೆ ಸೋನು ಗೌಡ ಜತೆ ಮಾತಾಡಲು ಬಂದ ರಾಕೇಶ್; ವೈರಲ್​ ಹುಡುಗಿಯ ಪ್ರತಿಕ್ರಿಯೆ ಹೇಗಿತ್ತು?​

ಆಗಸ್ಟ್ 16ರ ಎಪಿಸೋಡ್​ನಲ್ಲಿ ಸೋನು ಶ್ರೀನಿವಾಸ್ ಗೌಡ ಅವರು ಸಖತ್ ಆಗಿ ಪರ್ಫಾರ್ಮೆನ್ಸ್ ನೀಡಿದ್ದರು. ಗಾಯಗೊಂಡಿದ್ದರೂ ಫಿಸಿಕಲ್ ಟಾಸ್ಕ್​ನಲ್ಲಿ ಗೆದ್ದರು. ಈ ಬಗ್ಗೆ ಎಲ್ಲ ಕಡೆಗಳಿಂದ ಅವರಿಗೆ ಮೆಚ್ಚುಗೆ ವ್ಯಕ್ತವಾಗಿತ್ತು. ಆದರೆ, ಇಂದಿನ ಎಪಿಸೋಡ್​ನಲ್ಲಿ ಅವರು ಮುಗ್ಗರಿಸಿದ್ದಾರೆ. ಈ ಬಾರಿ ಅವರು ಎಲಿಮಿನೇಷನ್​ಗೆ ನಾಮಿನೇಟ್​ ಆಗಿದ್ದಾರೆ. ಅವರು ಈ ಬಾರಿ ಮನೆಯಿಂದ ಹೊರಹೋಗುತ್ತಾರಾ ಅನ್ನೋದನ್ನು ನಾವು ಕಾದು ನೋಡಬೇಕಿದೆ.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?