AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪ್ಲೀಸ್ ದಯವಿಟ್ಟು ಬಿಟ್ಟುಬಿಡಿ’; ಮನೆಗೆ ಬಂದ ಅತಿಥಿ ಕಂಡು ಕಿರುಚಾಡಿದ ಸಾನ್ಯಾ ಅಯ್ಯರ್

ಸಾನ್ಯಾ ಅಯ್ಯರ್ ಹಾಗೂ ರೂಪೇಶ್ ಇಬ್ಬರೂ ವಾಶ್​ರೂಂನಲ್ಲಿದ್ದರು. ಈ ವೇಳೆ ಅಲ್ಲಿಗೆ ಜಿರಳೆ ಬಂದಿದೆ. ಜಿರಳೆಯನ್ನು ನೋಡಿ ಸಾನ್ಯಾ ಅಯ್ಯರ್ ಕಿರುಚಾಡಿದ್ದಾರೆ. ‘

‘ಪ್ಲೀಸ್ ದಯವಿಟ್ಟು ಬಿಟ್ಟುಬಿಡಿ’; ಮನೆಗೆ ಬಂದ ಅತಿಥಿ ಕಂಡು ಕಿರುಚಾಡಿದ ಸಾನ್ಯಾ ಅಯ್ಯರ್
ಸಾನ್ಯಾ
TV9 Web
| Updated By: ರಾಜೇಶ್ ದುಗ್ಗುಮನೆ|

Updated on: Aug 12, 2022 | 9:40 PM

Share

‘ಬಿಗ್ ಬಾಸ್ ಒಟಿಟಿ’ (Bigg Boss OTT) ಮನೆಯಲ್ಲಿ 16 ಸ್ಪರ್ಧಿಗಳ ನಡುವೆ ಫೈಟ್ ನಡೆಯುತ್ತಿದೆ. ವೂಟ್ ಆ್ಯಪ್​ನಲ್ಲಿ ದಿನದ 24 ಗಂಟೆಯೂ ಈ ಶೋ ಪ್ರಸಾರ ಕಾಣುತ್ತಿದೆ. ಮನೆಯಲ್ಲಿ ಹಲವು ಬೆಳವಣಿಗೆಗಳು ನಡೆಯುತ್ತಿವೆ. ಮನೆಯಲ್ಲಿ ಪ್ರೀತಿ-ಪ್ರೇಮದ ವಿಚಾರಗಳ ಬಗ್ಗೆಯೂ ಹೊಗೆ ಆಡುತ್ತಿವೆ. ಎಲ್ಲಾ ಸ್ಪರ್ಧಿಗಳು ವೀಕ್ಷಕರಿಗೆ ಎಂಟರ್​​ಟೇನ್​ಮೆಂಟ್ ನೀಡಲು ಪ್ರಯತ್ನಿಸುತ್ತಿದ್ದಾರೆ. ಈ ಮಧ್ಯೆ ಮನೆಗೆ ಎಂಟ್ರಿ ಕೊಟ್ಟ ಅತಿಥಿಯ ಕಂಡು ಸಾನ್ಯಾ ಅಯ್ಯರ್ (Sanya Iyer) ದೊಡ್ಡದಾಗಿ ಕಿರುಚಾಡಿದ್ದಾರೆ. ಸಾನ್ಯಾಗೆ ರೂಪೇಶ್ ಶೆಟ್ಟಿ ಅವರು ಮತ್ತಷ್ಟು ಭಯ ಬೀಳಿಸಿದ್ದಾರೆ. ಶುಕ್ರವಾರ (ಆಗಸ್ಟ್ 12) ಎಪಿಸೋಡ್​ನಲ್ಲಿ ಈ ವಿಚಾರ ಹೈಲೈಟ್ ಆಗಿದೆ.

ಸಾನ್ಯಾ ಅಯ್ಯರ್ ಹಾಗೂ ರೂಪೇಶ್ ಇಬ್ಬರೂ ವಾಶ್​ರೂಂನಲ್ಲಿದ್ದರು. ಈ ವೇಳೆ ಅಲ್ಲಿಗೆ ಜಿರಳೆ ಬಂದಿದೆ. ಜಿರಳೆಯನ್ನು ನೋಡಿ ಸಾನ್ಯಾ ಅಯ್ಯರ್ ಕಿರುಚಾಡಿದ್ದಾರೆ. ‘ಇದನ್ನು ಯಾರಾದರೂ ಸಾಯಿಸಿ’ ಎಂದು ಕಿರುಚಾಡಿದರು. ಈ ವೇಳೆಗೆ ಅಲ್ಲಿಗೆ ರೂಪೇಶ್ ಶೆಟ್ಟಿ ಎಂಟ್ರಿ ಆಗಿದೆ. ಅವರು ಸಾನ್ಯಾ ಅವರನ್ನು ಕಿಚಾಯಿಸಿದ್ದಾರೆ.

ಜಿರಳೆಯನ್ನು ಕೈಯಲ್ಲಿ ಇಟ್ಟುಕೊಂಡ ರೂಪೇಶ್ ಅವರು ಅದನ್ನು ಸಾನ್ಯಾಗೆ ತೋರಿಸಿದರು. ಇದನ್ನು ನೋಡಿ ಸಾನ್ಯಾ ಆತಂಕಗೊಂಡರು. ‘ನಾನು ಹೇಳಿದಂತೆ ಕೇಳ್ತೀನಿ ಎಂದು ಹೇಳಿ. ಆಮೇಲೆ ಜಿರಳೆಯನ್ನು ಎಸಿತೀನಿ’ ಎಂದರು. ‘ಪ್ಲೀಸ್ ದಯವಿಟ್ಟು ಬಿಟ್ಟುಬಿಡಿ. ನೀವು ಹೇಳಿದಂತೆ ಕೇಳುತ್ತೇನೆ’ ಎಂದರು ಸಾನ್ಯಾ. ನಂತರ ಇಬ್ಬರ ನಡುವೆ ಮಾತುಕತೆ ನಡೆದೇ ಇತ್ತು.

ಇದನ್ನೂ ಓದಿ
Image
Bigg Boss OTT Kannada: ನಂಗೆ ಮೂಡ್ ಆಫ್ ಆಗಲ್ಲ: ಯಾವಾಗ್ಲೂ ಮೂಡ್​ನಲ್ಲಿರುತ್ತೇನೆ ಎಂದ ಸೋನು ಗೌಡ
Image
‘ಅಟ್ಲೀಸ್ಟ್​​ ಇಷ್ಟ ಅಂತಾದ್ರೂ ಹೇಳು’; ಸ್ಫೂರ್ತಿಗೆ ನೇರವಾಗಿ ಹೇಳಿದ ರಾಕೇಶ್
Image
‘ನಾನು ತಳ್ಳಿದ್ರೆ 25 ಅಡಿ ದೂರ ಹೋಗಿ ಬೀಳ್ತೀಯಾ’; ಆವಾಜ್ ಹಾಕಲು ಬಂದ ಉದಯ್​ಗೆ ಗುರೂಜಿ ಎಚ್ಚರಿಕೆ
Image
Sonu Srinivas Gowda: ಸೋನು ಶ್ರೀನಿವಾಸ್​ ಗೌಡ ಫೋನ್​ ನಂಬರ್​ ಏನು? ಅದ್ರಲ್ಲೂ ಚಾಲಕಿತನ ತೋರಿದ ರೀಲ್ಸ್​ ಬೆಡಗಿ

ಸಾನ್ಯಾ ಹಾಗೂ ರೂಪೇಶ್ ನಡುವೆ ಏನೋ ನಡೆಯುತ್ತಿದೆ ಎಂಬ ಚರ್ಚೆ ಇದೆ. ‘ನಿಮ್ಮಿಬ್ಬರ ಜೋಡಿ ಚೆನ್ನಾಗಿ ಕಾಣುತ್ತದೆ’ ಎಂದು ಸೋಮಣ್ಣ ಹಾಗೂ ಜಶ್ವಂತ್ ಅವರು ಸಾನ್ಯಾ ಹಾಗೂ ರೂಪೇಶ್​ಗೆ ಹೇಳಿದ್ದರು. ‘ನಾವಿಬ್ಬರೂ ಒಳ್ಳೆಯ ಗೆಳೆಯರಷ್ಟೇ. ನಮ್ಮಿಬ್ಬರ ನಡುವೆ ಮತ್ತೇನು ಇಲ್ಲ’ ಎಂದು ರೂಪೇಶ್​ ಸ್ಪಷ್ಟನೆ ನೀಡಿದ್ದರು.

ಇದನ್ನೂ ಓದಿ: Roopesh Shetty: ಬಿಗ್ ​ಬಾಸ್ ಮನೆಗೆ ಎಂಟ್ರಿಕೊಟ್ಟ ಕರಾವಳಿಯ ಸೂಪರ್ ಸ್ಟಾರ್: ಯಾರು ಗೊತ್ತಾ ಈ ರೂಪೇಶ್ ಶೆಟ್ಟಿ?

ಸೋನು ಗೌಡ, ಆರ್ಯವರ್ಧನ್ ಗುರೂಜಿ ಮೊದಲಾದವರ ಮೇಲೆ ಎಲಿಮಿನೇಷನ್ ತೂಗುಗತ್ತಿ ತೂಗುತ್ತಿದೆ. ಈ ಪೈಕಿ ಒಬ್ಬರು ಮನೆಯಿಂದ ಎಲಿಮಿನೇಟ್​ ಆಗುವುದು ಪಕ್ಕಾ. ಅದು ಯಾರು ಎಂಬ ಬಗ್ಗೆ ಚರ್ಚೆ ನಡೆಯುತ್ತಿದೆ. 42 ದಿನಗಳ ಕಾಲ ‘ಬಿಗ್ ಬಾಸ್ ಒಟಿಟಿ’ ಸೀಸನ್ ನಡೆಯಲಿದೆ. ನಂತರ ಬಿಗ್ ಬಾಸ್ ಟಿವಿಯಲ್ಲಿ ಪ್ರಸಾರ ಕಾಣಲಿದೆ.

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ