AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕಾಫಿ ವಿತ್​ ಕರಣ್​’ ಶೋಗೆ ಸಾರಾ ಅಲಿ ಖಾನ್​ ಅತಿಥಿ; ಮತ್ತೆ ಅದೇ ವಿವಾದದ ಬಗ್ಗೆ ಪ್ರಶ್ನೆ ಎದುರಾಗುತ್ತಾ?

Koffee with Karan: ಕರಣ್​ ಜೋಹರ್ ಅವರು ಎಲ್ಲ ಟೀಕೆಗಳನ್ನು ಮುಕ್ತವಾಗಿ ಸ್ವೀಕರಿಸುತ್ತಾರೆ. ಇಂಥ ಶೋಗಳ ನಿರೂಪಣೆಯ ಜೊತೆಗೆ ಸಿನಿಮಾಗಳ ನಿರ್ಮಾಣ ಮತ್ತು ನಿರ್ದೇಶನದಲ್ಲೂ ಅವರು ಬ್ಯುಸಿ ಆಗಿದ್ದಾರೆ. ನೆಪೋಟಿಸಂ ವಿಚಾರದಲ್ಲಿ ಅವರನ್ನು ಹೆಚ್ಚಾಗಿ ಟ್ರೋಲ್​ ಮಾಡಲಾಗುತ್ತದೆ. ‘ಕಾಫಿ ವಿತ್​ ಕರಣ್​’ ಶೋ ಕೂಡ ಹಲವು ವಿವಾದಕ್ಕೆ ಕಾರಣ ಆಗಿದೆ.

‘ಕಾಫಿ ವಿತ್​ ಕರಣ್​’ ಶೋಗೆ ಸಾರಾ ಅಲಿ ಖಾನ್​ ಅತಿಥಿ; ಮತ್ತೆ ಅದೇ ವಿವಾದದ ಬಗ್ಗೆ ಪ್ರಶ್ನೆ ಎದುರಾಗುತ್ತಾ?
ಸಾರಾ ಅಲಿ ಖಾನ್​
ಮದನ್​ ಕುಮಾರ್​
|

Updated on: Nov 03, 2023 | 11:11 AM

Share

ಕರಣ್​ ಜೋಹರ್​ ಅವರಿಗೆ ವಿವಾದ ಹೊಸದೇನೂ ಅಲ್ಲ. ಅವರು ನಡೆಸಿಕೊಡುವ ‘ಕಾಫಿ ವಿತ್​ ಕರಣ್​’ (Koffee with Karan) ಶೋ ಕೂಡ ಹಲವು ಕಾರಣಗಳಿಂದ ವಿವಾದ ಸೃಷ್ಟಿ ಮಾಡಿದ್ದುಂಟು. ಕೆಲವೇ ದಿನಗಳ ಹಿಂದೆ ಪ್ರಸಾರವಾದ ಎಪಿಸೋಡ್​ನಲ್ಲಿ ದೀಪಿಕಾ ಪಡುಕೋಣೆ ಮತ್ತು ರಣವೀರ್ ಸಿಂಗ್​ ಭಾಗಿ ಆಗಿದ್ದರು. ಅವರಿಬ್ಬರು ಆ ಸಂಚಿಕೆಯಲ್ಲಿ ಮಾತನಾಡಿದ ವಿಚಾರ ಸಖತ್​ ಟ್ರೋಲ್​ ಆಗಿತ್ತು. ಅದರಿಂದ ನಿಜಕ್ಕೂ ಲಾಭ ಆಗಿದ್ದು ಕರಣ್​ ಜೋಹರ್​ (Karan Johar) ಅವರಿಗೆ. ಯಾಕೆಂದರೆ, ಈ ವಿವಾದಗಳಿಂದ ಈ ಶೋಗೆ ಸಖತ್​ ಪ್ರಚಾರ ಸಿಕ್ಕಿದೆ. ಈಗ ಇದರ ಹೊಸ ಎಪಿಸೋಡ್​ನಲ್ಲಿ ಸಾರಾ ಅಲಿ ಖಾನ್ (Sara Ali Khan)​ ಮತ್ತು ಅನನ್ಯಾ ಪಾಂಡೆ ಭಾಗವಹಿಸಲಿದ್ದಾರೆ. ಮತ್ತೆ ಕರಣ್​ ಜೋಹರ್​ ಅವರು ವಿವಾದದ ಪ್ರಶ್ನೆಯನ್ನೇ ಎತ್ತುವ ಸಾಧ್ಯತೆ ಇದೆ.

ಸಾರಾ ಅಲಿ ಖಾನ್​ ಅವರು ತಮ್ಮ ನಂಬಿಕೆ ಮತ್ತು ಆಚರಣೆಗಳ ಕಾರಣದಿಂದ ಆಗಾಗ ಟ್ರೋಲ್​ಗೆ ಒಳಗಾಗಿದ್ದುಂಟು. ಹಿಂದೂ ಮತ್ತು ಮುಸ್ಲಿಂ ಎರಡೂ ಧರ್ಮವನ್ನು ಅವರು ಪಾಲಿಸುತ್ತಾರೆ. ಅಲ್ಲದೇ ಎಲ್ಲ ಧರ್ಮಗಳ ಬಗ್ಗೆಯೂ ಅವರಿಗೆ ನಂಬಿಕೆ ಇದೆ. ಹಾಗಾಗಿ ಅವರು ಪ್ರಮುಖ ಧಾರ್ಮಿಕ ಕೇಂದ್ರಗಳಿಗೆ ಭೇಟಿ ನೀಡಿದ್ದುಂಟು. ಹಿಂದೂ ದೇವಾಲಯಗಳಿಗೆ ಅವರು ಭೇಟಿ ನೀಡಿದಾಗ ಅನೇಕರು ಟೀಕೆ ಮಾಡಿದ್ದುಂಟು. ಅದರ ಬಗ್ಗೆ ಈಗಾಗಲೇ ಅವರು ಸ್ಪಷ್ಟನೆ ನೀಡಿದ್ದಾರೆ. ಹಾಗಿದ್ದರೂ ಕೂಡ ಕರಣ್​ ಜೋಹರ್​ ಅವರು ಅದೇ ವಿಚಾರವನ್ನು ಮತ್ತೆ ಕೆದಕುತ್ತಾರಾ ಎಂಬ ಕೌತುಕ ಮೂಡಿದೆ.

ಇದನ್ನೂ ಓದಿ: ಪದೇಪದೇ ಕಿಡಿಕಾರುವ ಕಂಗನಾಗೂ ಪ್ರೀತಿ ತೋರಿದ ಕರಣ್​ ಜೋಹರ್​; ‘ಎಮರ್ಜೆನ್ಸಿ’ ನೋಡಲು ಕಾತರ

ಇನ್ನು, ಅನನ್ಯಾ ಪಾಂಡೆ ಅವರು ಇತ್ತೀಚೆಗೆ ರಿಲೇಷನ್​ಶಿಪ್​ ವಿಚಾರಕ್ಕೆ ಸದ್ದು ಮಾಡುತ್ತಿದ್ದಾರೆ. ನಟ ಸಿದ್ದಾರ್ಥ್​ ರಾಯ್​ ಕಪೂರ್​ ಜೊತೆ ಅವರ ಲವ್ವಿಡವ್ವಿ ನಡೆಯುತ್ತಿದೆ ಎಂಬುದು ಬಹುತೇಕರ ಅನುಮಾನ. ಅದಕ್ಕೆ ಸಾಕ್ಷಿ ಒದಗಿಸುವಂತಹ ಕೆಲವು ಫೋಟೋ ಮತ್ತು ವಿಡಿಯೋಗಳು ವೈರಲ್​ ಆಗಿವೆ. ಇದರ ಬಗ್ಗೆ ಕರಣ್ ಜೋಹರ್​ ಅವರ ‘ಕಾಫಿ ವಿತ್​ ಕರಣ್​’ ಶೋನಲ್ಲಿ ಪ್ರಶ್ನೆ ಕೇಳುವ ಸಾಧ್ಯತೆ ಇದೆ. ಈ ವೇಳೆ ಅನನ್ಯಾ ಪಾಂಡೆ ಅವರು ತಮ್ಮ ಪ್ರೀತಿ-ಪ್ರೇಮದ ವಿಚಾರವನ್ನು ಒಪ್ಪಿಕೊಳ್ಳುತ್ತಾರಾ ಎಂಬುದನ್ನು ಕಾದು ನೋಡಬೇಕು.

ಇದನ್ನೂ ಓದಿ: ವಿಡಿಯೋ ಸಮೇತ ಕರಣ್​ ಜೋಹರ್​ ಬಣ್ಣ ಬಯಲು ಮಾಡಿದ ನಟಿ ಕಂಗನಾ ರಣಾವತ್​

ಕರಣ್​ ಜೋಹರ್ ಅವರು ಎಲ್ಲ ಟೀಕೆಗಳನ್ನು ಮುಕ್ತವಾಗಿ ಸ್ವೀಕರಿಸುತ್ತಾರೆ. ಇಂಥ ಶೋಗಳ ನಿರೂಪಣೆಯ ಜೊತೆಗೆ ಸಿನಿಮಾಗಳ ನಿರ್ಮಾಣ ಮತ್ತು ನಿರ್ದೇಶನದಲ್ಲೂ ಅವರು ಬ್ಯುಸಿ ಆಗಿದ್ದಾರೆ. ಈ ವರ್ಷ ಅವರು ನಿರ್ದೇಶಿಸಿದ ‘ರಾಕಿ ಔರ್​ ರಾಣಿ ಕಿ ಪ್ರೇಮ್​ ಕಹಾನಿ’ ಸಿನಿಮಾ ಬಿಡುಗಡೆಯಾಗಿ ಉತ್ತಮ ಪ್ರದರ್ಶನ ಕಂಡಿದೆ. ಈ ಸಿನಿಮಾದಲ್ಲಿ ಆಲಿಯಾ ಭಟ್​ ಮತ್ತು ರಣವೀರ್​ ಸಿಂಗ್​ ಜೋಡಿಯಾಗಿ ನಟಿಸಿದ್ದಾರೆ. ಒಟಿಟಿಯಲ್ಲಿ ಬಿಡುಗಡೆ ಆದಾಗಲೂ ಈ ಸಿನಿಮಾಗೆ ಒಳ್ಳೆಯ ಪ್ರತಿಕ್ರಿಯೆ ಸಿಕ್ಕಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ