AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಡಿಯರ್ ವಿಕ್ರಂ’ ಆಗಿ ಬದಲಾದ ‘ಗೋಧ್ರಾ’; ಸತೀಶ್ ನೀನಾಸಂ ಸಿನಿಮಾ ಟೈಟಲ್​ ಬದಲು

‘ಡಿಯರ್ ವಿಕ್ರಂ’ ಸಿನಿಮಾ ಕ್ರಾಂತಿ ಮತ್ತು ಪ್ರೀತಿಯ ಸುತ್ತಲೂ ಹೆಣೆದಿರುವ ಕಥೆ. ಸಿನಿಮಾದ ಪ್ರತಿ ಹಂತದಲ್ಲೂ ಸಮಾಜದ ಹುಳುಕನ್ನು ಪ್ರಶ್ನಿಸುವ ಕೆಲಸ ಆಗಿದೆ ಎಂಬುದು ಚಿತ್ರತಂಡದ ಅಭಿಪ್ರಾಯ.

‘ಡಿಯರ್ ವಿಕ್ರಂ' ಆಗಿ ಬದಲಾದ ‘ಗೋಧ್ರಾ’; ಸತೀಶ್ ನೀನಾಸಂ ಸಿನಿಮಾ ಟೈಟಲ್​ ಬದಲು
ಶ್ರದ್ಧಾ-ನೀನಾಸಂ ಸತೀಶ್
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on:Jun 09, 2022 | 7:50 PM

ನಟ ಸತೀಶ್ ನೀನಾಸಂ ಅವರು (Sathish Ninasam) ಕನ್ನಡದ ಬೇಡಿಕೆಯ ಹೀರೋಗಳಲ್ಲಿ ಒಬ್ಬರು. ಹಲವು ಸಿನಿಮಾ ಕೆಲಸಗಳಲ್ಲಿ ಅವರು ಬ್ಯುಸಿ ಆಗಿದ್ದಾರೆ. ಅವರ ನಟನೆಯ ‘ಗೋಧ್ರಾ’ ಸಿನಿಮಾ ಬಗ್ಗೆ ಪ್ರೇಕ್ಷಕರಿಗೆ ಸಾಕಷ್ಟು ಕುತೂಹಲ ಇದೆ. ಈ ಚಿತ್ರ ಟೈಟಲ್ ಕಾರಣಕ್ಕೂ ಸಾಕಷ್ಟು ಚರ್ಚೆ ಹುಟ್ಟು ಹಾಕಿದೆ. ಆದರೆ, ಈ ಟೈಟಲ್​ಗೆ ಕೆಲವರಿಂದ ವಿರೋಧ ವ್ಯಕ್ತವಾಗಿದೆ. ಈ ಕಾರಣಕ್ಕೆ ಚಿತ್ರತಂಡ ಸಿನಿಮಾ ಟೈಟಲ್​​ ಬದಲಿಸಿದೆ. ಈ ಚಿತ್ರಕ್ಕೆ ‘ಗೋಧ್ರಾ’ ಬದಲು ‘ಡಿಯರ್ ವಿಕ್ರಂ’ (Dear Vikram Movie) ಎನ್ನುವ ಶೀರ್ಷಿಕೆ ಇಡಲಾಗಿದೆ. ಈ ಮೂಲಕ ಎಲ್ಲಾ ಚರ್ಚೆಗಳಿಗೆ ತೆರೆ ಎಳೆಯಲಾಗಿದೆ.

‘ಡಿಯರ್ ವಿಕ್ರಂ’ ಸಿನಿಮಾ ಕ್ರಾಂತಿ ಮತ್ತು ಪ್ರೀತಿಯ ಸುತ್ತಲೂ ಹೆಣೆದಿರುವ ಕಥೆ. ಸಿನಿಮಾದ ಪ್ರತಿ ಹಂತದಲ್ಲೂ ಸಮಾಜದ ಹುಳುಕನ್ನು ಪ್ರಶ್ನಿಸುವ ಕೆಲಸ ಆಗಿದೆ ಎಂಬುದು ಚಿತ್ರತಂಡದ ಅಭಿಪ್ರಾಯ. ಈ ಸಿನಿಮಾದಲ್ಲಿ ಪ್ರಸ್ತುತ ರಾಜಕೀಯ ಅರಾಜಕತೆ ಬಗ್ಗೆಯೂ ಹೇಳಲಾಗುತ್ತಿದೆ. ‘ಗೋಧ್ರಾ’ ಶೀರ್ಷಿಕೆ ವಿಚಾರವಾಗಿ ಒಂದಷ್ಟು ಚರ್ಚೆ ಶುರುವಾಗಿತ್ತು. ಹೀಗಾಗಿ ಟೈಟಲ್ ಬದಲಿಸುವ ನಿರ್ಧಾರಕ್ಕೆ ಬರಲಾಗಿದೆ.

‘ನಮ್ಮ ಸಿನಿಮಾ ಯಾವುದೇ ನೈಜ ಘಟನೆಗೆ ಸಂಬಂಧಿಸಿಲ್ಲ ಅಥವಾ ಯಾವುದೇ ಪ್ರದೇಶವನ್ನು ಆಧರಿಸಿ ಮಾಡಿದ ಸಿನಿಮಾ ಅಲ್ಲ. ಹೀಗಾಗಿ ಜನರಲ್ಲಿ ಗೊಂದಲ ಮೂಡಿಸಬಾರದು ಅನ್ನೋ ಕಾರಣದಿಂದ ಸಿನಿಮಾ ಶೀರ್ಷಿಕೆಯನ್ನು ಬದಲಾಯಿಸಲು ನಿರ್ಧರಿಸಿದ್ದೇವೆ. ಗೋಧ್ರಾ ಸಿನಿಮಾ ‘ಡಿಯರ್ ವಿಕ್ರಂ’ ಆಗಿ ಬದಲಾಗಿದೆ’ ಎಂದು ಚಿತ್ರತತಂಡ ಮಾಹಿತಿ ನೀಡಿದೆ.

ಇದನ್ನೂ ಓದಿ
Image
Nayanthara Net Worth: ನಯನತಾರಾ ಬಳಿ 77 ಕೋಟಿ ರೂ. ಮೌಲ್ಯದ ಆಸ್ತಿ; ಪತಿ ವಿಘ್ನೇಶ್​ ಆಸ್ತಿಯೂ ಸೇರಿದ್ರೆ ಎಷ್ಟಾಗಲಿದೆ?
Image
‘ನಾನು ಜೀವನದಲ್ಲಿ ಒಂದು ಒಳ್ಳೆಯ ಕೆಲಸ ಮಾಡಿದ್ದೇನೆ’; ಸುದೀಪ್ ಹೀಗೆ ಹೇಳಿದ್ದೇಕೆ?
Image
Nayanthara Marriage: ಪ್ರಭುದೇವ ಜತೆ ಡೇಟಿಂಗ್​ ಮಾಡುತ್ತಿದ್ದ ನಯನತಾರಾ ಬ್ರೇಕಪ್​ ಮಾಡಿಕೊಂಡಿದ್ದು ಯಾಕೆ?
Image
Shraddha Srinath: ಸ್ಟೈಲಿಶ್ ಅವತಾರದಲ್ಲಿ ಅಭಿಮಾನಿಗಳ ಮನಗೆಲ್ಲುವ ಶ್ರದ್ಧಾ ಶ್ರೀನಾಥ್

ಸತೀಶ್ ನಿನಾಸಂ ಮತ್ತು ಶ್ರದ್ಧಾ ಶ್ರೀನಾಥ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. 2019ರಲ್ಲಿ ತೆರೆಗೆ ಬಂದ ‘ರುಸ್ತುಂ’ ಬಳಿಕ ಶ್ರದ್ಧಾ ಶ್ರೀನಾಥ್ ಪರಭಾಷೆಯಲ್ಲಿ ಬ್ಯುಸಿ ಆದರು. ಈ ಚಿತ್ರದ ಮೂಲಕ ಶ್ರದ್ಧಾ ಶ್ರೀನಾಥ್ ಮತ್ತೆ ಕನ್ನಡಕ್ಕೆ ಮರಳುತ್ತಿದ್ದಾರೆ. ಅಚ್ಯುತ್ ಕುಮಾರ್, ವಸಿಷ್ಠ ಸಿಂಹ, ರಕ್ಷಾ ಸೋಮಶೇಖರ್, ಸೋನು ಗೌಡ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಜೂಡಾ ಸ್ಯಾಂಡಿ ಸಂಗೀತ ನಿರ್ದೇಶನ ಚಿತ್ರಕ್ಕಿದೆ. ಕೆಪಿ ಅವರು ಹಿನ್ನೆಲೆ ಸಂಗೀತ ನೀಡಿದ್ದಾರೆ. ನಂದೀಶ ಅವರಿಗೆ ಇದು ಚೊಚ್ಚಲ ನಿರ್ದೇಶನ.

ಇದನ್ನೂ ಓದಿ: ‘ನಾನೇ ಕಥೆ ಹುಡುಕಿಕೊಂಡು ಹೋದೆ’; ‘ಅಶೋಕ ಬ್ಲೇಡ್​’ ಸಿನಿಮಾ ಬಗ್ಗೆ ನೀನಾಸಂ ಸತೀಶ್ ಮಾತು

ಇತ್ತೀಚೆಗೆ ಒಟಿಟಿ ಅಬ್ಬರ ಜೋರಾಗಿದೆ. ಹಲವು ಸಿನಿಮಾಗಳು ನೇರವಾಗಿ ಒಟಿಟಿಗೆ ಕಾಲಿಡುತ್ತಿದೆ. ‘ಗೋಧ್ರಾ’ ಸಿನಿಮಾ ಕೂಡ ನೇರವಾಗಿ ಒಟಿಟಿಗೆ ಕಾಲಿಡುತ್ತಿದೆ. ವೂಟ್​ನಲ್ಲಿ ಸಿನಿಮಾ ರಿಲೀಸ್​ ಆಗಲಿದೆ. ಈ ಚಿತ್ರದ ಪ್ರಸಾರ ದಿನಾಂಕ ಶೀಘ್ರವೇ ಘೋಷಣೆ ಆಗಲಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 2:57 pm, Thu, 9 June 22

ಪದ್ಮ ಭೂಷಣ ಪ್ರಶಸ್ತಿ ಪಡೆಯಲು ಬಂದ ಬಾಲಯ್ಯ ಗತ್ತು ಹೇಗಿತ್ತು ನೋಡಿ..
ಪದ್ಮ ಭೂಷಣ ಪ್ರಶಸ್ತಿ ಪಡೆಯಲು ಬಂದ ಬಾಲಯ್ಯ ಗತ್ತು ಹೇಗಿತ್ತು ನೋಡಿ..
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಕೊಪ್ಪಳದ 96 ವರ್ಷದ ಭೀಮವ್ವ ಶಿಳ್ಳೆಕ್ಯಾತರ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಕೊಪ್ಪಳದ 96 ವರ್ಷದ ಭೀಮವ್ವ ಶಿಳ್ಳೆಕ್ಯಾತರ
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಕಪ್ಪು ಬಾವುಟ ಪ್ರದರ್ಶಿಶಿದ ಮಹಿಳೆಯರ ವಿರುದ್ಧ ಕೇಸ್ ದಾಖಲಾಗಿದೆ: ಐಜಿಪಿ
ಕಪ್ಪು ಬಾವುಟ ಪ್ರದರ್ಶಿಶಿದ ಮಹಿಳೆಯರ ವಿರುದ್ಧ ಕೇಸ್ ದಾಖಲಾಗಿದೆ: ಐಜಿಪಿ
Pahalgam Attack: ಪ್ರವಾಸಿಗರೊಬ್ಬರ ಕ್ಯಾಮರಾದಲ್ಲಿ ದಾಳಿ ಭೀಕರ ದೃಶ್ಯ!
Pahalgam Attack: ಪ್ರವಾಸಿಗರೊಬ್ಬರ ಕ್ಯಾಮರಾದಲ್ಲಿ ದಾಳಿ ಭೀಕರ ದೃಶ್ಯ!
ಸಿಎಂ ವರ್ತನೆಯಿಂದ ಅಧಿಕಾರಿ ಮಾನಸಿಕ ಕ್ಷೋಭೆಗೊಳಗಾಗಿರುತ್ತಾರೆ: ಶೆಟ್ಟರ್
ಸಿಎಂ ವರ್ತನೆಯಿಂದ ಅಧಿಕಾರಿ ಮಾನಸಿಕ ಕ್ಷೋಭೆಗೊಳಗಾಗಿರುತ್ತಾರೆ: ಶೆಟ್ಟರ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್