ಪುತ್ರ ಆರ್ಯನ್ ಖಾನ್​ಗೆ ಕೆಲಸ ಕೊಡಿಸಲು ದೊಡ್ಡ ಕಂಪನಿ ಮುಖ್ಯಸ್ಥರ ಜತೆ ಮಾತಾಡಿದ್ದ ಶಾರುಖ್

ನಟ ಶಾರುಖ್ ಖಾನ್ ಅವರು ಬಣ್ಣದ ಲೋಕದಲ್ಲಿ ದೊಡ್ಡ ಸಾಮ್ರಾಜ್ಯವನ್ನೇ ಕಟ್ಟಿಕೊಂಡಿದ್ದಾರೆ. ಹಾಗಿದ್ದರೂ ಕೂಡ ಮಗ ಆರ್ಯನ್​ ಖಾನ್​ಗಾಗಿ ಅವರು ಇನ್ನೊಬ್ಬರ ಬಳಿ ಕೆಲಸ ಕೇಳಿಕೊಂಡು ಹೋಗಿದ್ದರು ಎಂಬುದು ಅಚ್ಚರಿಯ ಸಂಗತಿ. ಈ ಬಗ್ಗೆ ಸ್ವತಃ ಶಾರುಖ್​ ಖಾನ್ ಅವರು ಇತ್ತೀಚೆಗೆ ಹೇಳಿಕೊಂಡಿದ್ದಾರೆ.

ಪುತ್ರ ಆರ್ಯನ್ ಖಾನ್​ಗೆ ಕೆಲಸ ಕೊಡಿಸಲು ದೊಡ್ಡ ಕಂಪನಿ ಮುಖ್ಯಸ್ಥರ ಜತೆ ಮಾತಾಡಿದ್ದ ಶಾರುಖ್
Shah Rukh Khan, Aryan Khan
Follow us
ಮದನ್​ ಕುಮಾರ್​
|

Updated on: Feb 05, 2025 | 1:06 PM

ಮಕ್ಕಳ ಭವಿಷ್ಯದ ಬಗ್ಗೆ ಎಲ್ಲ ತಂದೆ-ತಾಯಿಗಳಿಗೆ ಚಿಂತೆ ಇರುತ್ತದೆ. ಈ ಚಿಂತೆ ಶಾರುಖ್ ಖಾನ್​ ಅವರಿಗೂ ತಪ್ಪಿದ್ದಲ್ಲ. ಬಾಲಿವುಡ್​ನಲ್ಲಿ ಶಾರುಖ್ ಖಾನ್ ಅವರು ತುಂಬ ಕಷ್ಟಪಟ್ಟು ಸ್ಟಾರ್​ ಆಗಿದ್ದಾರೆ. ಈಗ ಅವರ ಮಕ್ಕಳು ಕೂಡ ಚಿತ್ರರಂಗಕ್ಕೆ ಎಂಟ್ರಿ ನೀಡಿದ್ದಾರೆ. ಮಕ್ಕಳಿಗೆ ಉತ್ತಮ ಭವಿಷ್ಯ ರೂಪಿಸಿಕೊಡಬೇಕು ಎಂದು ಶಾರುಖ್ ಖಾನ್​ ಪ್ರಯತ್ನಿಸುತ್ತಿದ್ದಾರೆ. ಅದಕ್ಕಾಗಿ ಅವರು ಮಾಡಿದ ಪ್ರಯತ್ನಗಳ ಬಗ್ಗೆ ಮಾತನಾಡಿದ್ದಾರೆ. ಪುತ್ರ ಆರ್ಯನ್ ಖಾನ್​​ಗೆ ಒಂದು ಕೆಲಸ ಕೊಡಲಿಸಲು ಶಾರುಖ್ ಖಾನ್ ಅವರು ನೆಟ್​ಫ್ಲಿಕ್ಸ್ ಮುಖ್ಯಸ್ಥರ ಜೊತೆ ಮಾತನಾಡಿದ್ದರು ಎಂಬುದು ಈಗ ಬಹಿರಂಗ ಆಗಿದೆ.

‘ದಿ ಬ್ಯಾಡ್ಸ್ ಆಫ್ ಬಾಲಿವುಡ್​’ (The Ba***ds of Bollywood) ವೆಬ್ ಸರಣಿಗೆ ಆರ್ಯನ್ ಖಾನ್ ಅವರು ನಿರ್ದೇಶನ ಮಾಡಿದ್ದಾರೆ. ಈ ಟೈಟಲ್ ಅನಾವರಣ ಮಾಡಲಾಗಿದೆ. ಈ ಕಾರ್ಯಕ್ರಮದಲ್ಲಿ ಶಾರುಖ್ ಖಾನ್ ಅವರು ಉಪಸ್ಥಿತರಿದ್ದರು. ‘ದಿ ಬ್ಯಾಡ್ಸ್ ಆಫ್ ಬಾಲಿವುಡ್​’ ವೆಬ್ ಸರಣಿಗೆ ಶಾರುಖ್ ಖಾನ್ ಪತ್ನಿ ಗೌರಿ ಖಾನ್ ಅವರು ಬಂಡವಾಳ ಹೂಡಿದ್ದಾರೆ. ಮಗನಿಗಾಗಿ ತಾವು ಮಾಡಿದ ಪ್ರಯತ್ನ ಏನು ಎಂಬುದನ್ನು ಶಾರುಖ್ ವಿವರಿಸಿದ್ದಾರೆ.

ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಆರ್ಯನ್ ಖಾನ್ ಅವರು ಹೀರೋ ಆಗಬೇಕಿತ್ತು. ಆದರೆ ನಂತರ ಅವರ ಗಮನ ನಿರ್ದೇಶನದ ಕಡೆಗೆ ಹೋಯಿತು. ‘ನಿರ್ದೇಶನ ಮತ್ತು ನಿರ್ಮಾಣದ ಕೆಲಸವನ್ನು ಆರ್ಯನ್ ಖಾನ್ ಅಮೆರಿಕದಲ್ಲಿ ಕಲಿತಿದ್ದಾನೆ. ಅದಕ್ಕೂ ಮೊದಲು ನಾನು ನೆಟ್​ಫ್ಲಿಕ್ಸ್ ಮುಖ್ಯಸ್ಥರ ಜೊತೆ ಮಾತನಾಡಿದ್ದೆ. ಆರ್ಯನ್​ಗೆ ನೆಟ್​ಫ್ಲಿಕ್ಸ್​ನಲ್ಲಿ ಕೆಲಸ ಕೊಡಿ ಅಂತ ಕೇಳಿದ್ದೆ. ಯಾರಿಗಾದರೂ ಅವನು ಸಹಾಯಕನಾಗಿ ಕೆಲಸ ಮಾಡಲಿ ಅಂತ ನಾನು ಬಯಸಿದ್ದೆ. ಆದರೆ ಕೊವಿಡ್ ಬಂದಿದ್ದರಿಂದ ಆರ್ಯನ್ ವಾಪಸ್ ಭಾರತಕ್ಕೆ ಬಂದ’ ಎಂದು ಶಾರುಖ್ ಖಾನ್ ಅವರು ಹೇಳಿದ್ದಾರೆ.

ಇದನ್ನೂ ಓದಿ: ‘ಯಶ್ ನನ್ನ ಸ್ನೇಹಿತ’: ದುಬೈನಲ್ಲಿ ಕೂಗಿ ಹೇಳಿದ ಶಾರುಖ್ ಖಾನ್; ವಿಡಿಯೋ ವೈರಲ್

ಶಾರುಖ್ ಖಾನ್ ಅವರು ‘ದಿ ಬ್ಯಾಡ್ಸ್ ಆಫ್ ಬಾಲಿವುಡ್​’ ಸಿನಿಮಾದ ಟೈಟಲ್​ ಟೀಸರ್​ನಲ್ಲಿ ಕಾಣಿಸಿಕೊಂಡಿದ್ದಾರೆ. ‘ಜನರು ನನಗೆ ತೋರಿಸಿದ ಪ್ರೀತಿಯಲ್ಲಿ ಅರ್ಧದಷ್ಟು ಪ್ರೀತಿಯನ್ನು ಮಕ್ಕಳಿಗೆ ನೀಡಿದರೂ ಸಾಕಾಗುತ್ತದೆ’ ಎಂದು ಶಾರುಖ್ ಖಾನ್ ಹೇಳಿದ್ದಾರೆ. ಶಾರುಖ್ ಪುತ್ರಿ ಸುಹಾನಾ ಖಾನ್ ನಟಿಯಾಗಿ ಚಿತ್ರರಂಗಕ್ಕೆ ಕಾಲಿಟ್ಟಿದ್ದಾರೆ. 2ನೇ ಸಿನಿಮಾದಲ್ಲಿ ಅವರು ಶಾರುಖ್ ಜೊತೆ ನಟಿಸುತ್ತಿದ್ದಾರೆ. ಶಾರುಖ್ ಖಾನ್ ಅವರು ಸಿನಿಮಾಗಳ ಆಯ್ಕೆಯಲ್ಲಿ ತುಂಬ ಎಚ್ಚರಿಕೆ ವಹಿಸುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಬಿಜೆಪಿಗೆ ಮುನ್ನಡೆ, ದೆಹಲಿಯಲ್ಲಿ ಕಾರ್ಯಕರ್ತರಿಂದ ಸಂಭ್ರಮಾಚರಣ
ಬಿಜೆಪಿಗೆ ಮುನ್ನಡೆ, ದೆಹಲಿಯಲ್ಲಿ ಕಾರ್ಯಕರ್ತರಿಂದ ಸಂಭ್ರಮಾಚರಣ
ಯಾವ ಕಾರಣಕ್ಕೂ ಪ್ರತಿಮೆಯನ್ನು ತೆರವುಗೊಳಿಸಲ್ಲ ಎಂದ ಸ್ಥಳೀಯರು
ಯಾವ ಕಾರಣಕ್ಕೂ ಪ್ರತಿಮೆಯನ್ನು ತೆರವುಗೊಳಿಸಲ್ಲ ಎಂದ ಸ್ಥಳೀಯರು
ಮೈಸೂರು: ತ್ರಿವೇಣಿ ಸಂಗಮದಲ್ಲಿ ಫೆಬ್ರವರಿ 10ರಿಂದ ಮೂರು ದಿನ ಕುಂಭಮೇಳ
ಮೈಸೂರು: ತ್ರಿವೇಣಿ ಸಂಗಮದಲ್ಲಿ ಫೆಬ್ರವರಿ 10ರಿಂದ ಮೂರು ದಿನ ಕುಂಭಮೇಳ
ಚಾಂಪಿಯನ್ಸ್ ಟ್ರೋಫಿ ಜೆರ್ಸಿ ಅನಾವರಣಗೊಳಿಸಿದ ಪಾಕಿಸ್ತಾನ್
ಚಾಂಪಿಯನ್ಸ್ ಟ್ರೋಫಿ ಜೆರ್ಸಿ ಅನಾವರಣಗೊಳಿಸಿದ ಪಾಕಿಸ್ತಾನ್
Delhi Result Live: ದೆಹಲಿ ವಿಧಾನಸಭಾ ಚುನಾವಣೆ ಫಲಿತಾಂಶ ನೇರ ಪ್ರಸಾರ
Delhi Result Live: ದೆಹಲಿ ವಿಧಾನಸಭಾ ಚುನಾವಣೆ ಫಲಿತಾಂಶ ನೇರ ಪ್ರಸಾರ
ಸೆಲೆಬ್ರಿಟಿಗಳಿಲ್ಲದೆ ಸರಳವಾಗಿ ಮದುವೆಯಾದ ಬಿಲಿಯನೇರ್ ಮಗ ಜೀತ್ ಅದಾನಿ
ಸೆಲೆಬ್ರಿಟಿಗಳಿಲ್ಲದೆ ಸರಳವಾಗಿ ಮದುವೆಯಾದ ಬಿಲಿಯನೇರ್ ಮಗ ಜೀತ್ ಅದಾನಿ
ದೆಹಲಿ ನಾಯಕರ ಭೇಟಿ ಬಳಿಕ ಶಾಸಕ ಯತ್ನಾಳ್​ ಹೇಳಿದ್ದಿಷ್ಟು
ದೆಹಲಿ ನಾಯಕರ ಭೇಟಿ ಬಳಿಕ ಶಾಸಕ ಯತ್ನಾಳ್​ ಹೇಳಿದ್ದಿಷ್ಟು
ರಕ್ಷಿತಾರನ್ನು ಮದುವೆಯಾದಾಗ ಅಂಬರೀಶ್ ಹೇಳಿದ್ದನ್ನು ಮೆಲಕು ಹಾಕಿದ ಪ್ರೇಮ್
ರಕ್ಷಿತಾರನ್ನು ಮದುವೆಯಾದಾಗ ಅಂಬರೀಶ್ ಹೇಳಿದ್ದನ್ನು ಮೆಲಕು ಹಾಕಿದ ಪ್ರೇಮ್
ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆಯ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; 4 ಜನ ಸಾವು
ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆಯ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; 4 ಜನ ಸಾವು
ಅಪ್ಪನನ್ನು ಇಷ್ಟಪಡುವ ಕಾರಣಕ್ಕೆ ಮಗನನ್ನೂ ಇಷ್ಟಪಡುವ ಅಗತ್ಯವಿಲ್ಲ: ನಿರಾಣಿ
ಅಪ್ಪನನ್ನು ಇಷ್ಟಪಡುವ ಕಾರಣಕ್ಕೆ ಮಗನನ್ನೂ ಇಷ್ಟಪಡುವ ಅಗತ್ಯವಿಲ್ಲ: ನಿರಾಣಿ