AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಥಿಯೇಟರ್​ಗೆ ಬರದೆ ಒಟಿಟಿ ಮೊರೆ ಹೋದ ಶಾರುಖ್​ ಸಿನಿಮಾ; ಬೇಸರಗೊಂಡ ಫ್ಯಾನ್ಸ್​

2019ರಲ್ಲಿ ಶಾರುಖ್​ ಖಾನ್​ ಅವರು ತಮ್ಮ ನಿರ್ಮಾಣ ಸಂಸ್ಥೆ ‘ರೆಡ್​ ಚಿಲ್ಲೀಸ್​’ ಅಡಿಯಲ್ಲಿ ‘ಬಾಬ್​ ಬಿಸ್ವಾಸ್​’ ಸಿನಿಮಾ ನಿರ್ಮಾಣ ಮಾಡುವುದಾಗಿ ಘೋಷಣೆ ಮಾಡಿದ್ದರು. ಅಭಿಷೇಕ್​ ಬಚ್ಚನ್​ ಸಿನಿಮಾದಲ್ಲಿ ಲೀಡ್​ ರೋಲ್​ ನಿರ್ವಹಿಸಿದ್ದಾರೆ. 2

ಥಿಯೇಟರ್​ಗೆ ಬರದೆ ಒಟಿಟಿ ಮೊರೆ ಹೋದ ಶಾರುಖ್​ ಸಿನಿಮಾ; ಬೇಸರಗೊಂಡ ಫ್ಯಾನ್ಸ್​
ಶಾರುಖ್ ಖಾನ್
TV9 Web
| Edited By: |

Updated on:Nov 10, 2021 | 5:46 PM

Share

ಆರ್ಯನ್​ ಖಾನ್​ ಬಂಧನದ (Aryan Khan) ನಂತರದಲ್ಲಿ ಶಾರುಖ್​ ಖಾನ್ (Shah Rukh Khan)​ ಎಲ್ಲಿಯೂ ಸಾರ್ವಜನಿಕವಾಗಿ ಕಾಣಿಸಿಕೊಂಡಿಲ್ಲ. ಸಿನಿಮಾ ಕೆಲಸಗಳಲ್ಲಿಯೂ ಅವರು ತೊಡಗಿಕೊಳ್ಳುತ್ತಿಲ್ಲ. ಈ ಮಧ್ಯೆ ಅವರ ನಿರ್ಮಾಣದ ಸಿನಿಮಾ ಈಗ ಚಿತ್ರಮಂದಿರಕ್ಕೆ ಬರದೆ ನೇರವಾಗಿ ಒಟಿಟಿ (OTT Platform) ಮೊರೆ ಹೋಗಿರುವ ಸುದ್ದಿ ಹೊರ ಬಿದ್ದಿದೆ. ಸಾಲುಸಾಲು ಸಿನಿಮಾಗಳು ರಿಲೀಸ್​ ಆಗುತ್ತಿರುವ ಈ ಸಂದರ್ಭದಲ್ಲಿ ಒಟಿಟಿ ನಿರ್ಧಾರ ಅನಿವಾರ್ಯ ಎನ್ನುವ ಅಭಿಪ್ರಾಯವನ್ನು ಶಾರುಖ್​ ಹೊರ ಹಾಕಿದ್ದಾರೆ ಎನ್ನಲಾಗುತ್ತಿದೆ. ಹಾಗಾದರೆ ಯಾವುದು ಆ ಸಿನಿಮಾ? ಆ ಪ್ರಶ್ನೆಗೆ ಇಲ್ಲಿದೆ ಉತ್ತರ.

2019ರಲ್ಲಿ ಶಾರುಖ್​ ಖಾನ್​ ಅವರು ತಮ್ಮ ನಿರ್ಮಾಣ ಸಂಸ್ಥೆ ‘ರೆಡ್​ ಚಿಲ್ಲೀಸ್​’ ಅಡಿಯಲ್ಲಿ ‘ಬಾಬ್​ ಬಿಸ್ವಾಸ್​’ ಸಿನಿಮಾ ನಿರ್ಮಾಣ ಮಾಡುವುದಾಗಿ ಘೋಷಣೆ ಮಾಡಿದ್ದರು. ಅಭಿಷೇಕ್​ ಬಚ್ಚನ್​ ಸಿನಿಮಾದಲ್ಲಿ ಲೀಡ್​ ರೋಲ್​ ನಿರ್ವಹಿಸಿದ್ದಾರೆ. 2020ರಲ್ಲೇ ಸಿನಿಮಾ ಶೂಟಿಂಗ್​ ಪೂರ್ಣಗೊಂಡಿತ್ತು. ಆದರೆ, ಕೊವಿಡ್​ ಕಾರಣದಿಂದ ಸಿನಿಮಾ ರಿಲೀಸ್​ ಮಾಡೋಕೆ ಸಾಧ್ಯವಾಗಿರಲಿಲ್ಲ. ಈಗ ಎಲ್ಲ ಕಡೆಗಳಲ್ಲೂ ಚಿತ್ರಮಂದಿರ ತೆರೆದಿದೆ. ಆದರೆ, ಸಾಲುಸಾಲು ಸಿನಿಮಾಗಳು ರಿಲೀಸ್​ಗೆ ರೆಡಿ ಇವೆ. ಈ ಕಾರಣಕ್ಕೆ ಶಾರುಖ್​ ಒಟಿಟಿ ಮೊರೆ ಹೋಗಿದ್ದಾರೆ. ಇದು ಅಭಿಮಾನಿಗಳಿಗೆ ಬೇಸರ ಮೂಡಿಸಿದೆ.

ಜೀ5 ಜತೆ ಶಾರುಖ್​ ಮಾತುಕತೆ ಮಾಡಿದ್ದಾರೆ. ಇದರ ಡೀಲ್​ ಕುದುರಿದ್ದು, ಶೀಘ್ರವೇ ರಿಲೀಸ್​ ದಿನಾಂಕ ಘೋಷಣೆ ಆಗಲಿದೆ. ಅಭಿಷೇಕ್​ ಬಚ್ಚನ್​ ಈ ಸಿನಿಮಾಗಾಗಿ ಸಾಕಷ್ಟು ಬದಲಾವಣೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಅವರು ಚಿತ್ರಾಂಗದ ಸಿಂಗ್​ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಪಾತ್ರ ಹೇಗಿರಲಿದೆ ಎಂಬುದು ಇನ್ನೂ ಗುಟ್ಟಾಗಿದೆ.

ವಿದ್ಯಾ ಬಾಲನ್​ ನಟನೆಯ ‘ಕಹಾನಿ’ ಸಿನಿಮಾ ದೊಡ್ಡ ಮಟ್ಟದಲ್ಲಿ ಹಿಟ್​ ಆಗಿತ್ತು. ಈ ಚಿತ್ರದಲ್ಲಿ ಬರುವ ಬಾಬ್​ ಬಿಸ್ವಾಸ್ ಹೆಸರಿನ ಪಾತ್ರವನ್ನು ಶಾಶ್ವತ್​ ಚಟರ್ಜಿ ನಿರ್ವಹಿಸಿದ್ದರು. ಇದೇ ಪಾತ್ರ ಆಧರಿಸಿ ‘ಬಾಬ್​ ಬಿಸ್ವಾಸ್’ ಸಿದ್ಧಗೊಂಡಿದೆ. ರೆಡ್​ ಚಿಲ್ಲೀಸ್​ ಬ್ಯಾನರ್​ ಅಡಿಯಲ್ಲಿ ಸಿದ್ಧವಾಗಿರುವ ಈ ಸಿನಿಮಾಗೆ ಶಾರುಖ್​ ಪತ್ನಿ ಗೌರಿ ಖಾನ್​, ಸುಜಯ್ ಘೋಷ್​ ಮತ್ತು ಗೌರವ್​ ವರ್ಮಾ ಬಂಡವಾಳ ಹೂಡಿದ್ದಾರೆ. ದಿಯಾ ಘೋಷ್​ ಅವರು ಇದೇ ಮೊದಲ ಬಾರಿಗೆ ನಿರ್ದೇಶನಕ್ಕೆ ಇಳಿದಿದ್ದಾರೆ.

ಇದನ್ನೂ ಓದಿ: ಎನ್​ಸಿಬಿ ವಿಚಾರಣೆಯಿಂದ ತಪ್ಪಿಸಿಕೊಂಡ ಆರ್ಯನ್​ ಖಾನ್​; ಶಾರುಖ್​ ಮಗ ಕೊಟ್ಟ ಕಾರಣ ಏನು?

Published On - 5:33 pm, Wed, 10 November 21

ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಸಿಎಂ ಕುರ್ಚಿ ಕದನ: ಇಲ್ಲಿದೆ ರಾಜ್ಯ ರಾಜಕೀಯದ ಬಿಗ್​​ ಅಪ್ಡೇಟ್​!
ಸಿಎಂ ಕುರ್ಚಿ ಕದನ: ಇಲ್ಲಿದೆ ರಾಜ್ಯ ರಾಜಕೀಯದ ಬಿಗ್​​ ಅಪ್ಡೇಟ್​!
ಈ ಸರ್ಕಾರಿ ಬಸ್​​ಗಳಿಗೆ ದೇವರೇ ಗತಿ
ಈ ಸರ್ಕಾರಿ ಬಸ್​​ಗಳಿಗೆ ದೇವರೇ ಗತಿ
ಶಾಮನೂರು ಕ್ಷೇತ್ರದಲ್ಲಿ ಬೈ ಎಲೆಕ್ಷನ್​: ಕಾಂಗ್ರೆಸ್​​ ಟಿಕೆಟ್​​ ಯಾರಿಗೆ?
ಶಾಮನೂರು ಕ್ಷೇತ್ರದಲ್ಲಿ ಬೈ ಎಲೆಕ್ಷನ್​: ಕಾಂಗ್ರೆಸ್​​ ಟಿಕೆಟ್​​ ಯಾರಿಗೆ?
ವಿಮಾನ ನಿಲ್ದಾಣದ ವಿರುದ್ಧ ರಾಮಲಿಂಗಾರೆಡ್ಡಿ ಗರಂ
ವಿಮಾನ ನಿಲ್ದಾಣದ ವಿರುದ್ಧ ರಾಮಲಿಂಗಾರೆಡ್ಡಿ ಗರಂ