AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊನೆಯ ಹಂತದಲ್ಲಿದೆ ಆರ್ಯನ್ ಖಾನ್ ವೆಬ್ ಸೀರಿಸ್ ಶೂಟಿಂಗ್; ಯಾವಾಗ ರಿಲೀಸ್?

ಆರ್ಯನ್ ಖಾನ್ ಅವರು ಡ್ರಗ್ ಕೇಸ್​ನಲ್ಲಿ ಸಿಕ್ಕಿ ಬಿದ್ದರು. ಈ ಪ್ರಕರಣ ಅತ್ಯಂತ ದೊಡ್ಡ ಮಟ್ಟದಲ್ಲಿ ಚರ್ಚೆ ಆಗಿತ್ತು. ಈ ಘಟನೆಯಿಂದ ಅವರು ಸಂಪೂರ್ಣವಾಗಿ ಹೊರ ಬಂದಿದ್ದಾರೆ. ಈಗ ಅವರು ಸಿನಿಮಾ ನಿರ್ದೇಶನದತ್ತ ಮುಖ ಮಾಡಿದ್ದಾರೆ. ಕೊನೆಯ ಕೆಲವು ದಿನಗಳ ಶೂಟ್​ ನಡೆಯುತ್ತಿದೆ.

ಕೊನೆಯ ಹಂತದಲ್ಲಿದೆ ಆರ್ಯನ್ ಖಾನ್ ವೆಬ್ ಸೀರಿಸ್ ಶೂಟಿಂಗ್; ಯಾವಾಗ ರಿಲೀಸ್?
ಆರ್ಯನ್ ಖಾನ್
ರಾಜೇಶ್ ದುಗ್ಗುಮನೆ
|

Updated on: May 07, 2024 | 12:33 PM

Share

ಶಾರುಖ್ ಖಾನ್ (Shah Rukh Khan) ಮಗ ಆರ್ಯನ್ ಖಾನ್ ಅವರು ನಿರ್ದೇಶನದತ್ತ ಒಲವು ತೋರಿಸಿದ್ದಾರೆ. ‘ಸ್ಟಾರ್​ಡಂ’ ಹೆಸರಿನ ಸೀರಿಸ್​ನ ಅವರು ನಿರ್ದೇಶನ ಮಾಡುತ್ತಿದ್ದಾರೆ. ಈ ಸೀರಿಸ್ ಬಗ್ಗೆ ಹೊಸ ಅಪ್​ಡೇಟ್​ ಒಂದು ಸಿಕ್ಕಿದೆ. ಈ ಸೀರಿಸ್​​ನ ಕೊನೆಯ ಹಂತದ ಶೂಟಿಂಗ್ ಇತ್ತೀಚೆಗೆ ಆರಂಭ ಆಗಿದೆ. ಈ ವರ್ಷಾಂತ್ಯಕ್ಕೆ ಸೀರಿಸ್ ರಿಲೀಸ್ ಆಗೋ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಆರ್ಯನ್ ಖಾನ್ ಅವರು ಡ್ರಗ್ ಕೇಸ್​ನಲ್ಲಿ ಸಿಕ್ಕಿ ಬಿದ್ದರು. ಈ ಪ್ರಕರಣ ಅತ್ಯಂತ ದೊಡ್ಡ ಮಟ್ಟದಲ್ಲಿ ಚರ್ಚೆ ಆಗಿತ್ತು. ಈ ಘಟನೆಯಿಂದ ಅವರು ಸಂಪೂರ್ಣವಾಗಿ ಹೊರ ಬಂದಿದ್ದಾರೆ. ಈಗ ಅವರು ಸಿನಿಮಾ ನಿರ್ದೇಶನದತ್ತ ಮುಖ ಮಾಡಿದ್ದಾರೆ. ಕೊನೆಯ ಕೆಲವು ದಿನಗಳ ಶೂಟ್​ನಲ್ಲಿ ಬಾಬಿ ಡಿಯೋಲ್ ಅವರ ಕೂಡ ಸೇರ್ಪಡೆ ಆಗೋ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಇತ್ತೀಚೆಗೆ ಆರ್ಯನ್ ಖಾನ್ ಅವರು ಗುರುಗ್ರಾಮದ ರಾಯಲ್ ಪಾಮ್ಸ್ ಹೋಟೆಲ್​ನ ಶೂಟ್​ಗೆ ಬಳಸಿಕೊಂಡಿದ್ದರು. ಐದು ದಿನಗಳ ಕಾಲ ಇಲ್ಲಿ ಶೂಟ್ ಮಾಡಲಾಗಿತ್ತು. ಮೇ ಅಂತ್ಯಕ್ಕೆ ಶೂಟ್ ಪೂರ್ಣಗೊಳ್ಳುವ ಸಾಧ್ಯತೆ ಇದೆ.  ಇದರ ಜೊತೆಗೆ ಅಂಧೇರಿ ಈಸ್ಟ್ ಹಾಗೂ ಕೆಲವು ದ್ವೀಪಗಳಲ್ಲಿ ಶೂಟಿಂಗ್ ಮಾಡಲಾಗಿದೆ.

ಜೂನ್ 2023ರಲ್ಲಿ ‘ಸ್ಟಾರ್​ಡಂ’ ಸಿನಿಮಾದ ಶೂಟಿಂಗ್ ಆರಂಭ ಆಗಿದೆ. ಇದರಲ್ಲಿ ಆರು ಎಪಿಸೋಡ್​ಗಳು ಇರಲಿವೆ. ಬಾಲಿವುಡ್​ ಬಗ್ಗೆ ಇದರಲ್ಲಿ ಇರಲಿದೆ. ಯಾರೆಲ್ಲ ನಟಿಸಿದ್ದಾರೆ ಎನ್ನುವ ವಿಚಾರವನ್ನು ಗುಟ್ಟಾಗಿ ಇಡಲಾಗಿದೆ. ಮೂಲಗಳ ಪ್ರಕಾರ ಶಾರುಖ್ ಖಾನ್, ರಣಬೀರ್ ಕಪೂರ್, ರಣವೀರ್ ಸಿಂಗ್ ಅತಿಥಿ ಪಾತ್ರ ಮಾಡಲಿದ್ದಾರಂತೆ.

ಇದನ್ನೂ ಓದಿ: ‘ವಿರಾಟ್ ಕೊಹ್ಲಿ ನನ್ನ ಅಳಿಯ’; ಪ್ರೀತಿಯಿಂದ ಮಾತನಾಡಿದ ಶಾರುಖ್ ಖಾನ್

‘ರೆಡ್ ಚಿಲ್ಲೀಸ್ ಎಂಟರ್​ಟೇನ್​ಮೆಂಟ್’ ಅಡಿಯಲ್ಲಿ ಶಾರುಖ್ ಖಾನ್ ಪತ್ನಿ ಗೌರಿ ಖಾನ್ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಯಾವ ಒಟಿಟಿಯಲ್ಲಿ ಈ ಸೀರಿಸ್ ರಿಲೀಸ್ ಆಗಲಿದೆ, ಯಾವ ರೀತಿಯಲ್ಲಿ ಈ ಸೀರಿಸ್ ಮೂಡಿ ಬರಲಿದೆ ಎನ್ನುವ ಕುತೂಹಲ ಮೂಡಿದೆ. ಕೆಲವು ವರದಿಗಳ ಪ್ರಕಾರ ಬಿಗ್ ಬಜೆಟ್​ನಲ್ಲಿ ಈ ಸರಣಿ ಸಿದ್ಧವಾಗುತ್ತಿದೆ. ಇದಕ್ಕೆ ಇದಲ್ಲದೆ ಆರ್ಯನ್ ಖಾನ್ ಅವರು ಬಟ್ಟೆ ಬ್ರ್ಯಾಂಡ್ ಕೂಡ ಆರಂಭಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ