Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊನೆಯ ಹಂತದಲ್ಲಿದೆ ಆರ್ಯನ್ ಖಾನ್ ವೆಬ್ ಸೀರಿಸ್ ಶೂಟಿಂಗ್; ಯಾವಾಗ ರಿಲೀಸ್?

ಆರ್ಯನ್ ಖಾನ್ ಅವರು ಡ್ರಗ್ ಕೇಸ್​ನಲ್ಲಿ ಸಿಕ್ಕಿ ಬಿದ್ದರು. ಈ ಪ್ರಕರಣ ಅತ್ಯಂತ ದೊಡ್ಡ ಮಟ್ಟದಲ್ಲಿ ಚರ್ಚೆ ಆಗಿತ್ತು. ಈ ಘಟನೆಯಿಂದ ಅವರು ಸಂಪೂರ್ಣವಾಗಿ ಹೊರ ಬಂದಿದ್ದಾರೆ. ಈಗ ಅವರು ಸಿನಿಮಾ ನಿರ್ದೇಶನದತ್ತ ಮುಖ ಮಾಡಿದ್ದಾರೆ. ಕೊನೆಯ ಕೆಲವು ದಿನಗಳ ಶೂಟ್​ ನಡೆಯುತ್ತಿದೆ.

ಕೊನೆಯ ಹಂತದಲ್ಲಿದೆ ಆರ್ಯನ್ ಖಾನ್ ವೆಬ್ ಸೀರಿಸ್ ಶೂಟಿಂಗ್; ಯಾವಾಗ ರಿಲೀಸ್?
ಆರ್ಯನ್ ಖಾನ್
Follow us
ರಾಜೇಶ್ ದುಗ್ಗುಮನೆ
|

Updated on: May 07, 2024 | 12:33 PM

ಶಾರುಖ್ ಖಾನ್ (Shah Rukh Khan) ಮಗ ಆರ್ಯನ್ ಖಾನ್ ಅವರು ನಿರ್ದೇಶನದತ್ತ ಒಲವು ತೋರಿಸಿದ್ದಾರೆ. ‘ಸ್ಟಾರ್​ಡಂ’ ಹೆಸರಿನ ಸೀರಿಸ್​ನ ಅವರು ನಿರ್ದೇಶನ ಮಾಡುತ್ತಿದ್ದಾರೆ. ಈ ಸೀರಿಸ್ ಬಗ್ಗೆ ಹೊಸ ಅಪ್​ಡೇಟ್​ ಒಂದು ಸಿಕ್ಕಿದೆ. ಈ ಸೀರಿಸ್​​ನ ಕೊನೆಯ ಹಂತದ ಶೂಟಿಂಗ್ ಇತ್ತೀಚೆಗೆ ಆರಂಭ ಆಗಿದೆ. ಈ ವರ್ಷಾಂತ್ಯಕ್ಕೆ ಸೀರಿಸ್ ರಿಲೀಸ್ ಆಗೋ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಆರ್ಯನ್ ಖಾನ್ ಅವರು ಡ್ರಗ್ ಕೇಸ್​ನಲ್ಲಿ ಸಿಕ್ಕಿ ಬಿದ್ದರು. ಈ ಪ್ರಕರಣ ಅತ್ಯಂತ ದೊಡ್ಡ ಮಟ್ಟದಲ್ಲಿ ಚರ್ಚೆ ಆಗಿತ್ತು. ಈ ಘಟನೆಯಿಂದ ಅವರು ಸಂಪೂರ್ಣವಾಗಿ ಹೊರ ಬಂದಿದ್ದಾರೆ. ಈಗ ಅವರು ಸಿನಿಮಾ ನಿರ್ದೇಶನದತ್ತ ಮುಖ ಮಾಡಿದ್ದಾರೆ. ಕೊನೆಯ ಕೆಲವು ದಿನಗಳ ಶೂಟ್​ನಲ್ಲಿ ಬಾಬಿ ಡಿಯೋಲ್ ಅವರ ಕೂಡ ಸೇರ್ಪಡೆ ಆಗೋ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಇತ್ತೀಚೆಗೆ ಆರ್ಯನ್ ಖಾನ್ ಅವರು ಗುರುಗ್ರಾಮದ ರಾಯಲ್ ಪಾಮ್ಸ್ ಹೋಟೆಲ್​ನ ಶೂಟ್​ಗೆ ಬಳಸಿಕೊಂಡಿದ್ದರು. ಐದು ದಿನಗಳ ಕಾಲ ಇಲ್ಲಿ ಶೂಟ್ ಮಾಡಲಾಗಿತ್ತು. ಮೇ ಅಂತ್ಯಕ್ಕೆ ಶೂಟ್ ಪೂರ್ಣಗೊಳ್ಳುವ ಸಾಧ್ಯತೆ ಇದೆ.  ಇದರ ಜೊತೆಗೆ ಅಂಧೇರಿ ಈಸ್ಟ್ ಹಾಗೂ ಕೆಲವು ದ್ವೀಪಗಳಲ್ಲಿ ಶೂಟಿಂಗ್ ಮಾಡಲಾಗಿದೆ.

ಜೂನ್ 2023ರಲ್ಲಿ ‘ಸ್ಟಾರ್​ಡಂ’ ಸಿನಿಮಾದ ಶೂಟಿಂಗ್ ಆರಂಭ ಆಗಿದೆ. ಇದರಲ್ಲಿ ಆರು ಎಪಿಸೋಡ್​ಗಳು ಇರಲಿವೆ. ಬಾಲಿವುಡ್​ ಬಗ್ಗೆ ಇದರಲ್ಲಿ ಇರಲಿದೆ. ಯಾರೆಲ್ಲ ನಟಿಸಿದ್ದಾರೆ ಎನ್ನುವ ವಿಚಾರವನ್ನು ಗುಟ್ಟಾಗಿ ಇಡಲಾಗಿದೆ. ಮೂಲಗಳ ಪ್ರಕಾರ ಶಾರುಖ್ ಖಾನ್, ರಣಬೀರ್ ಕಪೂರ್, ರಣವೀರ್ ಸಿಂಗ್ ಅತಿಥಿ ಪಾತ್ರ ಮಾಡಲಿದ್ದಾರಂತೆ.

ಇದನ್ನೂ ಓದಿ: ‘ವಿರಾಟ್ ಕೊಹ್ಲಿ ನನ್ನ ಅಳಿಯ’; ಪ್ರೀತಿಯಿಂದ ಮಾತನಾಡಿದ ಶಾರುಖ್ ಖಾನ್

‘ರೆಡ್ ಚಿಲ್ಲೀಸ್ ಎಂಟರ್​ಟೇನ್​ಮೆಂಟ್’ ಅಡಿಯಲ್ಲಿ ಶಾರುಖ್ ಖಾನ್ ಪತ್ನಿ ಗೌರಿ ಖಾನ್ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಯಾವ ಒಟಿಟಿಯಲ್ಲಿ ಈ ಸೀರಿಸ್ ರಿಲೀಸ್ ಆಗಲಿದೆ, ಯಾವ ರೀತಿಯಲ್ಲಿ ಈ ಸೀರಿಸ್ ಮೂಡಿ ಬರಲಿದೆ ಎನ್ನುವ ಕುತೂಹಲ ಮೂಡಿದೆ. ಕೆಲವು ವರದಿಗಳ ಪ್ರಕಾರ ಬಿಗ್ ಬಜೆಟ್​ನಲ್ಲಿ ಈ ಸರಣಿ ಸಿದ್ಧವಾಗುತ್ತಿದೆ. ಇದಕ್ಕೆ ಇದಲ್ಲದೆ ಆರ್ಯನ್ ಖಾನ್ ಅವರು ಬಟ್ಟೆ ಬ್ರ್ಯಾಂಡ್ ಕೂಡ ಆರಂಭಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

PSL 2025: ಬೌಲಿಂಗ್ ವೇಳೆ ಕಳ್ಳಾಟ: ಆಟಗಾರರ ನಡುವೆ ವಾಕ್ಕಲಹ
PSL 2025: ಬೌಲಿಂಗ್ ವೇಳೆ ಕಳ್ಳಾಟ: ಆಟಗಾರರ ನಡುವೆ ವಾಕ್ಕಲಹ
ಭರತ್ ಭೂಷಣ್ ಪತ್ನಿ ಮತ್ತು ಕುಟುಂಬಸ್ಥರಿಗೆ ಮುಖ್ಯಮಂತ್ರಿಯಿಂದ ಸಾಂತ್ವನ
ಭರತ್ ಭೂಷಣ್ ಪತ್ನಿ ಮತ್ತು ಕುಟುಂಬಸ್ಥರಿಗೆ ಮುಖ್ಯಮಂತ್ರಿಯಿಂದ ಸಾಂತ್ವನ
ಬ್ಯಾಟರ್ ಬಿದ್ದು ಒದ್ದಾಡಿದರೂ ತಿರುಗಿ ಕೂಡ ನೋಡದ ಜಸ್​ಪ್ರೀತ್ ಬುಮ್ರಾ
ಬ್ಯಾಟರ್ ಬಿದ್ದು ಒದ್ದಾಡಿದರೂ ತಿರುಗಿ ಕೂಡ ನೋಡದ ಜಸ್​ಪ್ರೀತ್ ಬುಮ್ರಾ
ಇದೆಂತಹ ವರ್ತನೆ... ಮೌನಾಚರಣೆ ವೇಳೆಯೂ ಹಾರ್ದಿಕ್ ಪಾಂಡ್ಯ ಹುಚ್ಚಾಟ
ಇದೆಂತಹ ವರ್ತನೆ... ಮೌನಾಚರಣೆ ವೇಳೆಯೂ ಹಾರ್ದಿಕ್ ಪಾಂಡ್ಯ ಹುಚ್ಚಾಟ
ಬೆಂಗಳೂರು ತಲುಪಿದ ಕನ್ನಡಿಗರ ಪಾರ್ಥಿವ ಶರೀರ, ಅಂತಿಮ ನಮನ ಸಲ್ಲಿಕೆ
ಬೆಂಗಳೂರು ತಲುಪಿದ ಕನ್ನಡಿಗರ ಪಾರ್ಥಿವ ಶರೀರ, ಅಂತಿಮ ನಮನ ಸಲ್ಲಿಕೆ
ಮನೆ ಗೋಡೆಲಿ, ಕಿಟಕಿಗಳಲ್ಲಿ ಜೇನುಗೂಡು ಕಟ್ಟಿದ್ರೆ ಏನರ್ಥ? ಇಲ್ಲಿದೆ ಮಾಹಿತಿ
ಮನೆ ಗೋಡೆಲಿ, ಕಿಟಕಿಗಳಲ್ಲಿ ಜೇನುಗೂಡು ಕಟ್ಟಿದ್ರೆ ಏನರ್ಥ? ಇಲ್ಲಿದೆ ಮಾಹಿತಿ
ಈ ದಿನದ ವಿಶೇಷವೇನು? ನಿಮ್ಮ ರಾಶಿ ಭವಿಷ್ಯವೇನು? ಇಲ್ಲಿದೆ ನೋಡಿ
ಈ ದಿನದ ವಿಶೇಷವೇನು? ನಿಮ್ಮ ರಾಶಿ ಭವಿಷ್ಯವೇನು? ಇಲ್ಲಿದೆ ನೋಡಿ
ಕಾಶ್ಮೀರದಲ್ಲಿ ಸಿಲುಕಿರುವ ಕನ್ನಡಿಗರಿಗೆ ಸೂಕ್ತ ವ್ಯವಸ್ಥೆ: ಪ್ರಲ್ಹಾದ್ ಜೋಶಿ
ಕಾಶ್ಮೀರದಲ್ಲಿ ಸಿಲುಕಿರುವ ಕನ್ನಡಿಗರಿಗೆ ಸೂಕ್ತ ವ್ಯವಸ್ಥೆ: ಪ್ರಲ್ಹಾದ್ ಜೋಶಿ
ಹನಿಮೂನ್ ಟ್ರಿಪ್​ನಲ್ಲಿ ಹೆಂಡ್ತಿಯೊಂದಿಗಿನ ವಿನಯ್ ನರ್ವಾಲ್​​​ ಕೊನೆ ರೀಲ್ಸ್
ಹನಿಮೂನ್ ಟ್ರಿಪ್​ನಲ್ಲಿ ಹೆಂಡ್ತಿಯೊಂದಿಗಿನ ವಿನಯ್ ನರ್ವಾಲ್​​​ ಕೊನೆ ರೀಲ್ಸ್
ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ
ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ