AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Dunki OTT: ‘ಡಂಕಿ’ ಒಟಿಟಿ ಹಕ್ಕುಗಳಿಗೆ ಭರ್ಜರಿ ಬೇಡಿಕೆ; 155 ಕೋಟಿಗೆ ಶಾರುಖ್​ ಖಾನ್​ ಸಿನಿಮಾ ಸೇಲ್​?

Shah Rukh Khan: ಡಿಸೆಂಬರ್​ 22ರಂದು ಚಿತ್ರಮಂದಿರಗಳಲ್ಲಿ ‘ಡಂಕಿ’ ಸಿನಿಮಾ ಬಿಡುಗಡೆ ಆಗಲಿದೆ. ಆದರೆ ಒಟಿಟಿ ಡೀಲ್​ ಈಗಲೇ ಮುಗಿದಿದೆ. ಇದರಿಂದ ನಿರ್ಮಾಪಕರಿಗೆ ಭರ್ಜರಿ ಲಾಭ ಆಗಿದೆ.

Dunki OTT: ‘ಡಂಕಿ’ ಒಟಿಟಿ ಹಕ್ಕುಗಳಿಗೆ ಭರ್ಜರಿ ಬೇಡಿಕೆ; 155 ಕೋಟಿಗೆ ಶಾರುಖ್​ ಖಾನ್​ ಸಿನಿಮಾ ಸೇಲ್​?
‘ಡಂಕಿ’ ಪೋಸ್ಟರ್​, ಶಾರುಖ್​ ಖಾನ್​
ಮದನ್​ ಕುಮಾರ್​
|

Updated on: Jul 09, 2023 | 9:22 AM

Share

ದಿನದಿಂದ ದಿನಕ್ಕೆ ಶಾರುಖ್​ ಖಾನ್​ (Shah Rukh Khan) ಅವರ ಬೇಡಿಕೆ ಹೆಚ್ಚಾಗುತ್ತಿದೆ. ‘ಪಠಾಣ್​’ ಸಿನಿಮಾ ಬಳಿಕ ಅವರ ಚಾರ್ಮ್​ ಹೆಚ್ಚಿದೆ. ಶಾರುಖ್​ ಜೊತೆ ಸಿನಿಮಾ ಮಾಡಲು ದೊಡ್ಡ ದೊಡ್ಡ ನಿರ್ಮಾಪಕರು ಮತ್ತು ನಿರ್ದೇಶಕರು ಕಾಯುತ್ತಿದ್ದಾರೆ. ಆದರೆ ಸಿನಿಮಾ ಒಪ್ಪಿಕೊಳ್ಳುವಲ್ಲಿ ಶಾರುಖ್​ ಅವಸರ ಮಾಡುತ್ತಿಲ್ಲ. ಈಗ ಅವರು ನಿರ್ದೇಶಕ ರಾಜ್​ಕುಮಾರ್​ ಹಿರಾನಿ (Rajkumar Hirani) ಜೊತೆ ‘ಡಂಕಿ’ ಸಿನಿಮಾದಲ್ಲಿ ಬ್ಯುಸಿ ಆಗಿದ್ದಾರೆ. ಈ ಚಿತ್ರದ ಒಟಿಟಿ ರೈಟ್ಸ್​ ಮಾರಾಟದ ಬಗ್ಗೆ ಒಂದು ಗಾಸಿಪ್​ ಹರಿದಾಡುತ್ತಿದೆ. ‘ಬಾಲಿವುಡ್​ ಹಂಗಾಮಾ’ ವರದಿ ಮಾಡಿರುವ ಪ್ರಕಾರ ಶೂಟಿಂಗ್​ ಮುಗಿಯುವುದಕ್ಕೂ ಮುನ್ನವೇ ‘ಡಂಕಿ’ (Dunki Movie) ಚಿತ್ರದ ಒಟಿಟಿ ಹಕ್ಕುಗಳು ಸೇಲ್​ ಆಗಿವೆ. ಅದು ಕೂಡ ಬರೋಬ್ಬರಿ 155 ಕೋಟಿ ರೂಪಾಯಿಗೆ ಎಂದು ಹೇಳಲಾಗುತ್ತಿದೆ.

ಒಟಿಟಿ ಸಂಸ್ಥೆಗಳ ನಡುವೆ ಪೈಪೋಟಿ ಹೆಚ್ಚಿದೆ. ಪ್ರೇಕ್ಷಕರಿಗೆ ಹೊಸ ಸಿನಿಮಾಗಳನ್ನು ನೀಡಲು ‘ಜಿಯೋ ಸಿನಿಮಾ’ ಸಂಸ್ಥೆ ಎಲ್ಲಿಲ್ಲದ ಪ್ರಯತ್ನ ನಡೆಸುತ್ತಿದೆ. ಶಾರುಖ್​ ಖಾನ್​ ನಟನೆಯ ‘ಡಂಕಿ’ ಚಿತ್ರದ ಒಟಿಟಿ ಹಕ್ಕುಗಳು ಈ ಸಂಸ್ಥೆಯ ಪಾಲಾಗಿದೆ ಎಂಬ ಮಾತು ಕೇಳಿಬಂದಿದೆ. 155 ಕೋಟಿ ರೂಪಾಯಿ ನೀಡಿ ಒಟಿಟಿ ಪ್ರಸಾರ ಹಕ್ಕುಗಳನ್ನು ಖರೀದಿಸಲಾಗಿದೆ. ಆದರೆ ಈ ಬಗ್ಗೆ ಇನ್ನಷ್ಟೇ ಅಧಿಕೃತ ಮಾಹಿತಿ ಹೊರಬೀಳಬೇಕಿದೆ. ಸದ್ಯಕ್ಕೆ ಇದು ಅಂತೆ-ಕಂತೆಗಳ ಹಂತದಲ್ಲೇ ಇದೆ.

ಇದನ್ನೂ ಓದಿ: ಅಪಘಾತದ ವದಂತಿ ಬೆನ್ನಲ್ಲೇ ಶಾರುಖ್​ ಖಾನ್​ ಬಗ್ಗೆ ಇನ್ನೊಂದು ಗಾಸಿಪ್​; ಕೂಡಲೇ ಸ್ಪಷ್ಟನೆ ನೀಡಿದ ಕರಣ್​ ಜೋಹರ್​

ನಿರ್ದೇಶಕ ರಾಜ್​ಕುಮಾರ್​ ಹಿರಾನಿ ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ. ಕ್ಲಾಸ್​ ಸಿನಿಮಾಗಳನ್ನು ಮಾಡಿ ಅವರು ಅಪಾರ ಖ್ಯಾತಿ ಗಳಿಸಿದ್ದಾರೆ. ‘ಮುನ್ನಾಭಾಯ್​ ಎಂಬಿಬಿಎಸ್​​’, ‘3 ಈಡಿಯಟ್ಸ್​’, ‘ಪಿಕೆ’, ‘ಸಂಜು’ ಚಿತ್ರಗಳ ಮೂಲಕ ಅವರು ಅಭಿಮಾನಿಗಳನ್ನು ರಂಜಿಸಿದ್ದಾರೆ. ಮೊದಲ ಬಾರಿಗೆ ‘ಡಂಕಿ’ ಸಿನಿಮಾದಲ್ಲಿ ಶಾರುಖ್​ ಖಾನ್​ ಜೊತೆ ರಾಜ್​ಕುಮಾರ್​ ಹಿರಾನಿ ಕೈ ಜೋಡಿಸಿರುವುದರಿಂದ ಸಹಜವಾಗಿಯೇ ನಿರೀಕ್ಷೆ ಹೆಚ್ಚಿದೆ.

ಇದನ್ನೂ ಓದಿ: ಶೂಟಿಂಗ್​​ ವೇಳೆ ಅವಘಡ; ಶಾರುಖ್​​​​ ಖಾನ್​​​ ಆಸ್ಪತ್ರೆಗೆ ದಾಖಲು

ಈ ವರ್ಷ ಡಿಸೆಂಬರ್​ 22ರಂದು ಚಿತ್ರಮಂದಿರಗಳಲ್ಲಿ ‘ಡಂಕಿ’ ಸಿನಿಮಾ ಬಿಡುಗಡೆ ಆಗಲಿದೆ. ಆದರೆ ಒಟಿಟಿ ಡೀಲ್​ ಈಗಲೇ ಮುಗಿದಿದೆ. ಇದರಿಂದ ನಿರ್ಮಾಪಕರಿಗೆ ಭರ್ಜರಿ ಲಾಭ ಆಗಿದೆ. ಇನ್ನು, ನಿರ್ದೇಶಕ ಅಟ್ಲಿ ಜೊತೆ ಶಾರುಖ್​ ಖಾನ್ ಅವರು ‘ಜವಾನ್​’ ಸಿನಿಮಾ ಮಾಡುತ್ತಿದ್ದಾರೆ. ಈ ಚಿತ್ರ ಸೆಪ್ಟೆಂಬರ್​ 7ರಂದು ಬಿಡುಗಡೆ ಆಗಲಿದೆ. ಬಾಕ್ಸ್​ ಆಫೀಸ್​ನಲ್ಲಿ ‘ಜವಾನ್​’ ಕೂಡ ಭರ್ಜರಿ ಕಮಾಯಿ ಮಾಡುವ ಸೂಚನೆ ಸಿಕ್ಕಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ