AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೆ ಹಳೇ ಚಾರ್ಮ್​ ಪಡೆದ ಶಾರುಖ್​ ಖಾನ್​; ‘ಪಠಾಣ್​’ ಚಿತ್ರದ ಒಟಿಟಿ ಪ್ರಸಾರ ಹಕ್ಕು 200 ಕೋಟಿ ರೂ.ಗೆ ಸೇಲ್​?

Shah Rukh Khan Pathaan: ‘ಪಠಾಣ್​’ ಸಿನಿಮಾ ಬಗ್ಗೆ ಸ್ವತಃ ಶಾರುಖ್​ ಖಾನ್​ ಅವರು ಸಖತ್​ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಈ ಚಿತ್ರದಲ್ಲಿ ದೀಪಿಕಾ ಪಡುಕೋಣೆ ಮತ್ತು ಜಾನ್​ ಅಬ್ರಾಹಂ ಕೂಡ ಪ್ರಮುಖ ಪಾತ್ರಗಳನ್ನು ನಿಭಾಯಿಸಿದ್ದಾರೆ.

ಮತ್ತೆ ಹಳೇ ಚಾರ್ಮ್​ ಪಡೆದ ಶಾರುಖ್​ ಖಾನ್​; ‘ಪಠಾಣ್​’ ಚಿತ್ರದ ಒಟಿಟಿ ಪ್ರಸಾರ ಹಕ್ಕು 200 ಕೋಟಿ ರೂ.ಗೆ ಸೇಲ್​?
ಶಾರುಖ್ ಖಾನ್
Follow us
TV9 Web
| Updated By: ಮದನ್​ ಕುಮಾರ್​

Updated on:May 04, 2022 | 9:10 AM

ಯಾವುದೇ ನಟನ ಒಂದೆರಡು ಸಿನಿಮಾ ಬ್ಯಾಕ್​ ಟು ಬ್ಯಾಕ್​ ಸೋತರೆ ಚಿತ್ರರಂಗದಲ್ಲಿ ನೆಗೆಟಿವ್​ ಪ್ರಚಾರ ಶುರುವಾಗುತ್ತದೆ. ಇನ್ಮುಂದೆ ಈ ಹೀರೋ ಕಥೆ ಮುಗಿಯಿತು ಎಂದೇ ಮಾತನಾಡುತ್ತಾರೆ ಗಾಸಿಪ್​ ಮಂದಿ. ನಟ ಶಾರುಖ್​ ಖಾನ್​ (Shah Rukh Khan) ವಿಚಾರದಲ್ಲೂ ಹಾಗೆಯೇ ಆಗಿತ್ತು. ಬಾಲಿವುಡ್​ನಲ್ಲಿ ಶಾರುಖ್​ ಖಾನ್​ ಅವರು ಸರಣಿ ಸೋಲು ಕಂಡಿದ್ದಾರೆ. ಫ್ಯಾನ್​, ರಯೀಸ್​, ಜಬ್​ ಹ್ಯಾರಿ ಮೆಟ್​ ಸೇಜಲ್​, ಜೀರೋ ಸಿನಿಮಾಗಳು ಸತತವಾಗಿ ಸೋತವು. ಹಾಗಾಗಿ ಶಾರುಖ್​ ಖಾನ್​ ಅವರ ವೃತ್ತಿಜೀವನ ಅಳಿವಿನಂಚಿನಲ್ಲಿದೆ ಎಂದು ಎಲ್ಲರೂ ಮಾತನಾಡಿಕೊಂಡರು. ಆದರೆ ಶಾರುಖ್​ ಮತ್ತೆ ಹೊಸ ಚಾರ್ಮ್​ನೊಂದಿಗೆ ಮರಳುತ್ತಿದ್ದಾರೆ. ಆಡಿಕೊಂಡವರ ಬಾಯಿ ಮುಚ್ಚಿಸಲು ಅವರು ಎಲ್ಲಿಲ್ಲದ ಪ್ರಯತ್ನ ಮಾಡುತ್ತಿದ್ದಾರೆ. ಮುಂಬರುವ ‘ಪಠಾಣ್​’ ಸಿನಿಮಾ (Pathaan Movie) ಸಲುವಾಗಿ ಅವರು ಸಿಕ್ಕಾಪಟ್ಟೆ ಕಸರತ್ತು ನಡೆಸಿದ್ದಾರೆ. ಈ ಸಿನಿಮಾದ ಬಿಡುಗಡೆಗೆ ಇನ್ನೂ ಸಮಯ ಇದೆ. ಅಷ್ಟರಲ್ಲಾಗಲೇ ಚಿತ್ರದ ಒಟಿಟಿ ಪ್ರಸಾರ ಹಕ್ಕುಗಳ ಮಾರಾಟದ ಬಗ್ಗೆ ಗುಸುಗುಸು ಸುದ್ದಿ ಕೇಳಿಬಂದಿದೆ. ಮೂಲಗಳ ಪ್ರಕಾರ ಬರೋಬ್ಬರಿ 200 ಕೋಟಿ ರೂಪಾಯಿಗೆ ‘ಪಠಾಣ್​’ ಸಿನಿಮಾದ ಒಟಿಟಿ (OTT Platform) ಪ್ರಸಾರ ಹಕ್ಕುಗಳು ಸೇಲ್​ ಆಗಿವೆ!

ಯಶ್​ ರಾಜ್​ ಫಿಲ್ಮ್ಸ್​ ಬ್ಯಾನರ್​ನಲ್ಲಿ ‘ಪಠಾಣ್​’ ಸಿನಿಮಾ ಮೂಡಿಬರುತ್ತಿದೆ. ಈ ಸಿನಿಮಾದ ಪ್ರಸಾರ ಹಕ್ಕುಗಳು ಒಟಿಟಿಗೆ ಮಾರಾಟ ಆಗಿವೆ ಎಂದ ಮಾತ್ರಕ್ಕೆ ಚಿತ್ರಮಂದಿರದಲ್ಲಿ ರಿಲೀಸ್​ ಆಗುವುದಿಲ್ಲ ಎಂದರ್ಥವಲ್ಲ. 2023ರ ಜ.25ರಂದು ಥಿಯೇಟರ್​ನಲ್ಲಿ ‘ಪಠಾಣ್​’ ರಿಲೀಸ್​ ಆಗಲಿದೆ. ಚಿತ್ರಮಂದಿರದ ಬಳಿಕ ಒಟಿಟಿಗೆ ಕಾಲಿಡಲಿದೆ. ‘ಯಶ್​ ರಾಜ್​ ಫಿಲ್ಮ್ಸ್​’ ಸಂಸ್ಥೆಯ ಬಹುತೇಕ ಚಿತ್ರಗಳು ‘ಅಮೇಜಾನ್​ ಪ್ರೈಂ ವಿಡಿಯೋ’ ಮೂಲಕವೇ ಪ್ರಸಾರ ಕಂಡಿವೆ. ಹಾಗಾಗಿ ‘ಪಠಾಣ್​’ ಕೂಡ ಇದೇ ಹಾದಿ ಹಿಡಿದಿದೆ ಎನ್ನಲಾಗುತ್ತಿದೆ.

ಈ ಬಗ್ಗೆ ಚಿತ್ರತಂಡದಿಂದ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ. ‘ಪಠಾಣ್​’ ಸಿನಿಮಾ ಬಗ್ಗೆ ಸ್ವತಃ ಶಾರುಖ್​ ಖಾನ್​ ಅವರು ಸಖತ್​ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ‘ಜೀರೋ’ ಚಿತ್ರದ ಸೋಲಿನ ಬಳಿಕ ಅವರು ಬಹಳ ಸಮಯ ತೆಗೆದುಕೊಂಡು ಒಪ್ಪಿಕೊಂಡ ಸಿನಿಮಾ ಇದು. ಈ ಚಿತ್ರಕ್ಕೆ ‘ಬ್ಯಾಂಗ್​ ಬ್ಯಾಂಗ್​’, ‘ವಾರ್​’ ಸಿನಿಮಾ ಖ್ಯಾತಿಯ ಸಿದ್ದಾರ್ಥ್​ ಆನಂದ್​ ಅವರು ನಿರ್ದೇಶನ ಮಾಡುತ್ತಿದ್ದಾರೆ. ಶಾರುಖ್​ ಖಾನ್​ ಜೊತೆ ದೀಪಿಕಾ ಪಡುಕೋಣೆ ಮತ್ತು ಜಾನ್​ ಅಬ್ರಾಹಂ ಕೂಡ ಪ್ರಮುಖ ಪಾತ್ರಗಳನ್ನು ನಿಭಾಯಿಸಿದ್ದಾರೆ.

‘ಪಠಾಣ್​’ ಸಿನಿಮಾದಲ್ಲಿ ಶಾರುಖ್​ ಖಾನ್​ ಅವರು ಸಿಕ್ಸ್​ ಪ್ಯಾಕ್​ ಗೆಟಪ್​ನಲ್ಲಿ ಅಭಿಮಾನಿಗಳನ್ನು ರಂಜಿಸಲಿದ್ದಾರೆ. ಅದರ ಫಸ್ಟ್​ಲುಕ್​ ಕೂಡ ಈಗಾಗಲೇ ಬಿಡುಗಡೆಯಾಗಿ ಧೂಳೆಬ್ಬಿಸಿದೆ. ಶೂಟಿಂಗ್​ ಸಂದರ್ಭದ ಕೆಲವು ಫೋಟೋಗಳು ಲೀಕ್​ ಆಗಿವೆ. ಆ ಮೂಲಕವೂ ‘ಪಠಾಣ್​’ ಸಿನಿಮಾ ಸುದ್ದಿ ಮಾಡಿದೆ. ಇದಲ್ಲದೇ ಇನ್ನೂ ಅನೇಕ ಸಿನಿಮಾಗಳನ್ನು ಶಾರುಖ್​ ಖಾನ್​ ಒಪ್ಪಿಕೊಳ್ಳುತ್ತಿದ್ದಾರೆ. ಆ ಪೈಕಿ ನಿರ್ದೇಶಕ ರಾಜ್​ಕುಮಾರ್​ ಹಿರಾನಿ ಜೊತೆ ಮಾಡಲಿರುವ ‘ಡಂಕಿ’ ಸಿನಿಮಾ ಹೆಚ್ಚು ನಿರೀಕ್ಷೆ ಮೂಡಿಸಿದೆ. ‘ಮುನ್ನಾ ಭಾಯ್​ ಎಂಬಿಬಿಎಸ್​’, ‘ಪಿಕೆ’ ರೀತಿಯ ವಿಶೇಷವಾದ ಸಿನಿಮಾಗಳ ಮೂಲಕ ಗುರುತಿಸಿಕೊಂಡಿರುವ ರಾಜ್​ಕುಮಾರ್​ ಹಿರಾನಿ ಅವರು ಈಗ ಶಾರುಖ್​ ಖಾನ್​ ಅಭಿಮಾನಿಗಳಿಗಾಗಿ ಯಾವ ಕಥೆಯನ್ನು ತೆರೆಗೆ ತರಲಿದ್ದಾರೆ ಎಂಬ ಕೌತುಕ ಮನೆ ಮಾಡಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಇದನ್ನೂ ಓದಿ:

8 ಪ್ಯಾಕ್​ ಅವತಾರದಲ್ಲಿ ಬಂದ ಶಾರುಖ್​ ಖಾನ್​; ಮಸ್ತ್​ ಫೋಟೋ ನೋಡಿ ಫ್ಯಾನ್ಸ್​ ಹೇಳಿದ್ದೇನು?

ಸೌದಿ ಮಿನಿಸ್ಟರ್​ ಜೊತೆ ಶಾರುಖ್​, ಸಲ್ಮಾನ್​​, ಅಕ್ಷಯ್​ ಕುಮಾರ್​ ಪೋಸ್; ಏನಿದು ಸಮಾಚಾರ?

Published On - 9:10 am, Wed, 4 May 22

5 ಎಸೆತಗಳಲ್ಲಿ 5 ವಿಕೆಟ್ ಉರುಳಿಸಿದ ದಿಗ್ವೇಶ್ ರಾಥಿ
5 ಎಸೆತಗಳಲ್ಲಿ 5 ವಿಕೆಟ್ ಉರುಳಿಸಿದ ದಿಗ್ವೇಶ್ ರಾಥಿ
ಸೈಪ್ರಸ್​​ನ ಐತಿಹಾಸಿಕ ಭೇಟಿ ಮುಗಿಸಿ ಕೆನಡಾಕ್ಕೆ ಹೊರಟ ಭಾರತದ ಪ್ರಧಾನಿ ಮೋದಿ
ಸೈಪ್ರಸ್​​ನ ಐತಿಹಾಸಿಕ ಭೇಟಿ ಮುಗಿಸಿ ಕೆನಡಾಕ್ಕೆ ಹೊರಟ ಭಾರತದ ಪ್ರಧಾನಿ ಮೋದಿ
ಬೆಂಗಳೂರಿನಲ್ಲಿ ಇಂದು ಒಂದೇ ದಿನದಲ್ಲಿ 103 ಬೈಕ್​ ಟ್ಯಾಕ್ಸಿ ಸೀಜ್!
ಬೆಂಗಳೂರಿನಲ್ಲಿ ಇಂದು ಒಂದೇ ದಿನದಲ್ಲಿ 103 ಬೈಕ್​ ಟ್ಯಾಕ್ಸಿ ಸೀಜ್!
ಹ್ಯಾನ್ಲೆಯಲ್ಲಿ ಮಿನಿ ತಾರಾಲಯಕ್ಕೆ ಸಚಿವೆ ನಿರ್ಮಲಾ ಸೀತಾರಾಮನ್ ಶಂಕುಸ್ಥಾಪನೆ
ಹ್ಯಾನ್ಲೆಯಲ್ಲಿ ಮಿನಿ ತಾರಾಲಯಕ್ಕೆ ಸಚಿವೆ ನಿರ್ಮಲಾ ಸೀತಾರಾಮನ್ ಶಂಕುಸ್ಥಾಪನೆ
ಪ್ರಧಾನಿ ಮೋದಿ ಕಾಲಿಗೆ ನಮಸ್ಕರಿಸಿ ಸ್ವಾಗತಿಸಿದ ಸೈಪ್ರಸ್ ಶಾಸಕಿ
ಪ್ರಧಾನಿ ಮೋದಿ ಕಾಲಿಗೆ ನಮಸ್ಕರಿಸಿ ಸ್ವಾಗತಿಸಿದ ಸೈಪ್ರಸ್ ಶಾಸಕಿ
ಧುಮ್ಮುಕ್ಕುತ್ತಿರುವ ವಿಶ್ವ ವಿಖ್ಯಾತ ಜಲಪಾತ, ಜೋಗದ ಸಿರಿಯ ನಯನ ಮನೋಹರ ದೃಶ್ಯ
ಧುಮ್ಮುಕ್ಕುತ್ತಿರುವ ವಿಶ್ವ ವಿಖ್ಯಾತ ಜಲಪಾತ, ಜೋಗದ ಸಿರಿಯ ನಯನ ಮನೋಹರ ದೃಶ್ಯ
ದಾವಣಗೆರೆಗೆ ಕಾರಲ್ಲಿ ಬಂದಿದ್ದಕ್ಕೆ ತಡವಾಯ್ತು ಎಂದ ಸಿಎಂ ಸಿದ್ದರಾಮಯ್ಯ
ದಾವಣಗೆರೆಗೆ ಕಾರಲ್ಲಿ ಬಂದಿದ್ದಕ್ಕೆ ತಡವಾಯ್ತು ಎಂದ ಸಿಎಂ ಸಿದ್ದರಾಮಯ್ಯ
ನೈಟ್ ರೈಡರ್ಸ್ ವಿರುದ್ಧ 4 ವಿಕೆಟ್ ಉರುಳಿಸಿದ ನೂರ್ ಅಹ್ಮದ್
ನೈಟ್ ರೈಡರ್ಸ್ ವಿರುದ್ಧ 4 ವಿಕೆಟ್ ಉರುಳಿಸಿದ ನೂರ್ ಅಹ್ಮದ್
ಅಕ್ರಮ ಗಣಿಗಾರಿಕೆ ಆರೋಪಗಳಿಂದ ಮುಕ್ತನಾಗಿದ್ದೇನೆ: ಜನಾರ್ಧನ ರೆಡ್ಡಿ
ಅಕ್ರಮ ಗಣಿಗಾರಿಕೆ ಆರೋಪಗಳಿಂದ ಮುಕ್ತನಾಗಿದ್ದೇನೆ: ಜನಾರ್ಧನ ರೆಡ್ಡಿ
ಮುಂಬರುವ ದಿನಗಳಲ್ಲಿ ಇನ್ನಷ್ಟು ಹೆಚ್ಚಲಿದೆ ಬುಲಿಯನ್ ದರ: ಸರವಣ
ಮುಂಬರುವ ದಿನಗಳಲ್ಲಿ ಇನ್ನಷ್ಟು ಹೆಚ್ಚಲಿದೆ ಬುಲಿಯನ್ ದರ: ಸರವಣ