AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೆ ಹಳೇ ಚಾರ್ಮ್​ ಪಡೆದ ಶಾರುಖ್​ ಖಾನ್​; ‘ಪಠಾಣ್​’ ಚಿತ್ರದ ಒಟಿಟಿ ಪ್ರಸಾರ ಹಕ್ಕು 200 ಕೋಟಿ ರೂ.ಗೆ ಸೇಲ್​?

Shah Rukh Khan Pathaan: ‘ಪಠಾಣ್​’ ಸಿನಿಮಾ ಬಗ್ಗೆ ಸ್ವತಃ ಶಾರುಖ್​ ಖಾನ್​ ಅವರು ಸಖತ್​ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಈ ಚಿತ್ರದಲ್ಲಿ ದೀಪಿಕಾ ಪಡುಕೋಣೆ ಮತ್ತು ಜಾನ್​ ಅಬ್ರಾಹಂ ಕೂಡ ಪ್ರಮುಖ ಪಾತ್ರಗಳನ್ನು ನಿಭಾಯಿಸಿದ್ದಾರೆ.

ಮತ್ತೆ ಹಳೇ ಚಾರ್ಮ್​ ಪಡೆದ ಶಾರುಖ್​ ಖಾನ್​; ‘ಪಠಾಣ್​’ ಚಿತ್ರದ ಒಟಿಟಿ ಪ್ರಸಾರ ಹಕ್ಕು 200 ಕೋಟಿ ರೂ.ಗೆ ಸೇಲ್​?
ಶಾರುಖ್ ಖಾನ್
TV9 Web
| Edited By: |

Updated on:May 04, 2022 | 9:10 AM

Share

ಯಾವುದೇ ನಟನ ಒಂದೆರಡು ಸಿನಿಮಾ ಬ್ಯಾಕ್​ ಟು ಬ್ಯಾಕ್​ ಸೋತರೆ ಚಿತ್ರರಂಗದಲ್ಲಿ ನೆಗೆಟಿವ್​ ಪ್ರಚಾರ ಶುರುವಾಗುತ್ತದೆ. ಇನ್ಮುಂದೆ ಈ ಹೀರೋ ಕಥೆ ಮುಗಿಯಿತು ಎಂದೇ ಮಾತನಾಡುತ್ತಾರೆ ಗಾಸಿಪ್​ ಮಂದಿ. ನಟ ಶಾರುಖ್​ ಖಾನ್​ (Shah Rukh Khan) ವಿಚಾರದಲ್ಲೂ ಹಾಗೆಯೇ ಆಗಿತ್ತು. ಬಾಲಿವುಡ್​ನಲ್ಲಿ ಶಾರುಖ್​ ಖಾನ್​ ಅವರು ಸರಣಿ ಸೋಲು ಕಂಡಿದ್ದಾರೆ. ಫ್ಯಾನ್​, ರಯೀಸ್​, ಜಬ್​ ಹ್ಯಾರಿ ಮೆಟ್​ ಸೇಜಲ್​, ಜೀರೋ ಸಿನಿಮಾಗಳು ಸತತವಾಗಿ ಸೋತವು. ಹಾಗಾಗಿ ಶಾರುಖ್​ ಖಾನ್​ ಅವರ ವೃತ್ತಿಜೀವನ ಅಳಿವಿನಂಚಿನಲ್ಲಿದೆ ಎಂದು ಎಲ್ಲರೂ ಮಾತನಾಡಿಕೊಂಡರು. ಆದರೆ ಶಾರುಖ್​ ಮತ್ತೆ ಹೊಸ ಚಾರ್ಮ್​ನೊಂದಿಗೆ ಮರಳುತ್ತಿದ್ದಾರೆ. ಆಡಿಕೊಂಡವರ ಬಾಯಿ ಮುಚ್ಚಿಸಲು ಅವರು ಎಲ್ಲಿಲ್ಲದ ಪ್ರಯತ್ನ ಮಾಡುತ್ತಿದ್ದಾರೆ. ಮುಂಬರುವ ‘ಪಠಾಣ್​’ ಸಿನಿಮಾ (Pathaan Movie) ಸಲುವಾಗಿ ಅವರು ಸಿಕ್ಕಾಪಟ್ಟೆ ಕಸರತ್ತು ನಡೆಸಿದ್ದಾರೆ. ಈ ಸಿನಿಮಾದ ಬಿಡುಗಡೆಗೆ ಇನ್ನೂ ಸಮಯ ಇದೆ. ಅಷ್ಟರಲ್ಲಾಗಲೇ ಚಿತ್ರದ ಒಟಿಟಿ ಪ್ರಸಾರ ಹಕ್ಕುಗಳ ಮಾರಾಟದ ಬಗ್ಗೆ ಗುಸುಗುಸು ಸುದ್ದಿ ಕೇಳಿಬಂದಿದೆ. ಮೂಲಗಳ ಪ್ರಕಾರ ಬರೋಬ್ಬರಿ 200 ಕೋಟಿ ರೂಪಾಯಿಗೆ ‘ಪಠಾಣ್​’ ಸಿನಿಮಾದ ಒಟಿಟಿ (OTT Platform) ಪ್ರಸಾರ ಹಕ್ಕುಗಳು ಸೇಲ್​ ಆಗಿವೆ!

ಯಶ್​ ರಾಜ್​ ಫಿಲ್ಮ್ಸ್​ ಬ್ಯಾನರ್​ನಲ್ಲಿ ‘ಪಠಾಣ್​’ ಸಿನಿಮಾ ಮೂಡಿಬರುತ್ತಿದೆ. ಈ ಸಿನಿಮಾದ ಪ್ರಸಾರ ಹಕ್ಕುಗಳು ಒಟಿಟಿಗೆ ಮಾರಾಟ ಆಗಿವೆ ಎಂದ ಮಾತ್ರಕ್ಕೆ ಚಿತ್ರಮಂದಿರದಲ್ಲಿ ರಿಲೀಸ್​ ಆಗುವುದಿಲ್ಲ ಎಂದರ್ಥವಲ್ಲ. 2023ರ ಜ.25ರಂದು ಥಿಯೇಟರ್​ನಲ್ಲಿ ‘ಪಠಾಣ್​’ ರಿಲೀಸ್​ ಆಗಲಿದೆ. ಚಿತ್ರಮಂದಿರದ ಬಳಿಕ ಒಟಿಟಿಗೆ ಕಾಲಿಡಲಿದೆ. ‘ಯಶ್​ ರಾಜ್​ ಫಿಲ್ಮ್ಸ್​’ ಸಂಸ್ಥೆಯ ಬಹುತೇಕ ಚಿತ್ರಗಳು ‘ಅಮೇಜಾನ್​ ಪ್ರೈಂ ವಿಡಿಯೋ’ ಮೂಲಕವೇ ಪ್ರಸಾರ ಕಂಡಿವೆ. ಹಾಗಾಗಿ ‘ಪಠಾಣ್​’ ಕೂಡ ಇದೇ ಹಾದಿ ಹಿಡಿದಿದೆ ಎನ್ನಲಾಗುತ್ತಿದೆ.

ಈ ಬಗ್ಗೆ ಚಿತ್ರತಂಡದಿಂದ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ. ‘ಪಠಾಣ್​’ ಸಿನಿಮಾ ಬಗ್ಗೆ ಸ್ವತಃ ಶಾರುಖ್​ ಖಾನ್​ ಅವರು ಸಖತ್​ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ‘ಜೀರೋ’ ಚಿತ್ರದ ಸೋಲಿನ ಬಳಿಕ ಅವರು ಬಹಳ ಸಮಯ ತೆಗೆದುಕೊಂಡು ಒಪ್ಪಿಕೊಂಡ ಸಿನಿಮಾ ಇದು. ಈ ಚಿತ್ರಕ್ಕೆ ‘ಬ್ಯಾಂಗ್​ ಬ್ಯಾಂಗ್​’, ‘ವಾರ್​’ ಸಿನಿಮಾ ಖ್ಯಾತಿಯ ಸಿದ್ದಾರ್ಥ್​ ಆನಂದ್​ ಅವರು ನಿರ್ದೇಶನ ಮಾಡುತ್ತಿದ್ದಾರೆ. ಶಾರುಖ್​ ಖಾನ್​ ಜೊತೆ ದೀಪಿಕಾ ಪಡುಕೋಣೆ ಮತ್ತು ಜಾನ್​ ಅಬ್ರಾಹಂ ಕೂಡ ಪ್ರಮುಖ ಪಾತ್ರಗಳನ್ನು ನಿಭಾಯಿಸಿದ್ದಾರೆ.

‘ಪಠಾಣ್​’ ಸಿನಿಮಾದಲ್ಲಿ ಶಾರುಖ್​ ಖಾನ್​ ಅವರು ಸಿಕ್ಸ್​ ಪ್ಯಾಕ್​ ಗೆಟಪ್​ನಲ್ಲಿ ಅಭಿಮಾನಿಗಳನ್ನು ರಂಜಿಸಲಿದ್ದಾರೆ. ಅದರ ಫಸ್ಟ್​ಲುಕ್​ ಕೂಡ ಈಗಾಗಲೇ ಬಿಡುಗಡೆಯಾಗಿ ಧೂಳೆಬ್ಬಿಸಿದೆ. ಶೂಟಿಂಗ್​ ಸಂದರ್ಭದ ಕೆಲವು ಫೋಟೋಗಳು ಲೀಕ್​ ಆಗಿವೆ. ಆ ಮೂಲಕವೂ ‘ಪಠಾಣ್​’ ಸಿನಿಮಾ ಸುದ್ದಿ ಮಾಡಿದೆ. ಇದಲ್ಲದೇ ಇನ್ನೂ ಅನೇಕ ಸಿನಿಮಾಗಳನ್ನು ಶಾರುಖ್​ ಖಾನ್​ ಒಪ್ಪಿಕೊಳ್ಳುತ್ತಿದ್ದಾರೆ. ಆ ಪೈಕಿ ನಿರ್ದೇಶಕ ರಾಜ್​ಕುಮಾರ್​ ಹಿರಾನಿ ಜೊತೆ ಮಾಡಲಿರುವ ‘ಡಂಕಿ’ ಸಿನಿಮಾ ಹೆಚ್ಚು ನಿರೀಕ್ಷೆ ಮೂಡಿಸಿದೆ. ‘ಮುನ್ನಾ ಭಾಯ್​ ಎಂಬಿಬಿಎಸ್​’, ‘ಪಿಕೆ’ ರೀತಿಯ ವಿಶೇಷವಾದ ಸಿನಿಮಾಗಳ ಮೂಲಕ ಗುರುತಿಸಿಕೊಂಡಿರುವ ರಾಜ್​ಕುಮಾರ್​ ಹಿರಾನಿ ಅವರು ಈಗ ಶಾರುಖ್​ ಖಾನ್​ ಅಭಿಮಾನಿಗಳಿಗಾಗಿ ಯಾವ ಕಥೆಯನ್ನು ತೆರೆಗೆ ತರಲಿದ್ದಾರೆ ಎಂಬ ಕೌತುಕ ಮನೆ ಮಾಡಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಇದನ್ನೂ ಓದಿ:

8 ಪ್ಯಾಕ್​ ಅವತಾರದಲ್ಲಿ ಬಂದ ಶಾರುಖ್​ ಖಾನ್​; ಮಸ್ತ್​ ಫೋಟೋ ನೋಡಿ ಫ್ಯಾನ್ಸ್​ ಹೇಳಿದ್ದೇನು?

ಸೌದಿ ಮಿನಿಸ್ಟರ್​ ಜೊತೆ ಶಾರುಖ್​, ಸಲ್ಮಾನ್​​, ಅಕ್ಷಯ್​ ಕುಮಾರ್​ ಪೋಸ್; ಏನಿದು ಸಮಾಚಾರ?

Published On - 9:10 am, Wed, 4 May 22

Follow Us
ಸಚಿವ ಸ್ಥಾನ ಸಂಬಂಧ ಜಮೀರ್​​ ಅಹ್ಮದ್​​ ಸ್ಫೋಟಕ ಹೇಳಿಕೆ
ಸಚಿವ ಸ್ಥಾನ ಸಂಬಂಧ ಜಮೀರ್​​ ಅಹ್ಮದ್​​ ಸ್ಫೋಟಕ ಹೇಳಿಕೆ
ಐಸೊಬ್ಯುಟನಾಲ್; ಶೀಘ್ರದಲ್ಲೇ ಬರಲಿದೆ ಪರಿಸರ ಸ್ನೇಹಿ ಬಯೋ ಡೀಸೆಲ್!
ಐಸೊಬ್ಯುಟನಾಲ್; ಶೀಘ್ರದಲ್ಲೇ ಬರಲಿದೆ ಪರಿಸರ ಸ್ನೇಹಿ ಬಯೋ ಡೀಸೆಲ್!
ಚಿನ್ನಯ್ಯ ತಮ್ಮ ಬಳಿ ಹೇಳಿದ್ದೇನು? ಬಹಿರಂಗಪಡಿಸಿದ ಪ್ರಕಾಶ್ ರೈ
ಚಿನ್ನಯ್ಯ ತಮ್ಮ ಬಳಿ ಹೇಳಿದ್ದೇನು? ಬಹಿರಂಗಪಡಿಸಿದ ಪ್ರಕಾಶ್ ರೈ
ಎದೆ ಉರಿ ಕಾಣಿಸಿಕೊಂಡು ನಾಲ್ಕು ವರ್ಷದ ಬಾಲಕ ವೈಷ್ಣವ್ ಸಾವು
ಎದೆ ಉರಿ ಕಾಣಿಸಿಕೊಂಡು ನಾಲ್ಕು ವರ್ಷದ ಬಾಲಕ ವೈಷ್ಣವ್ ಸಾವು
ಬೌರಿಂಗ್ ಆಸ್ಪತ್ರೆ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ ಅಧಿಕಾರಿಗಳು!
ಬೌರಿಂಗ್ ಆಸ್ಪತ್ರೆ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ ಅಧಿಕಾರಿಗಳು!
ಗ್ರೈಂಡರ್​​​ನಿಂದ ವಿದ್ಯುತ್​ ಪ್ರವಹಿಸಿ 4 ವರ್ಷದ ಬಾಲಕಿ ಸಾವು
ಗ್ರೈಂಡರ್​​​ನಿಂದ ವಿದ್ಯುತ್​ ಪ್ರವಹಿಸಿ 4 ವರ್ಷದ ಬಾಲಕಿ ಸಾವು
'ಗ್ಯಾರಂಟಿಯಲ್ಲಿ ಅಕ್ರಮವಾಗಿದೆ ಎಂದಾದರೆ ಅನುಷ್ಠಾನ ಸಮಿತಿ ಏನ್ಮಾಡ್ತಿತ್ತು?"
'ಗ್ಯಾರಂಟಿಯಲ್ಲಿ ಅಕ್ರಮವಾಗಿದೆ ಎಂದಾದರೆ ಅನುಷ್ಠಾನ ಸಮಿತಿ ಏನ್ಮಾಡ್ತಿತ್ತು?
ಇಷ್ಟು ಫೇಮ್ ಸಿಕ್ಕರೂ ಸಿನಿಮಾಗಳಲ್ಲಿ ಏಕೆ ನಟಿಸಲ್ಲ? ಕಾರಣ ತಿಳಿಸಿದ ಹನುಮಂತ
ಇಷ್ಟು ಫೇಮ್ ಸಿಕ್ಕರೂ ಸಿನಿಮಾಗಳಲ್ಲಿ ಏಕೆ ನಟಿಸಲ್ಲ? ಕಾರಣ ತಿಳಿಸಿದ ಹನುಮಂತ
ಜೆಡಿಎಸ್​​ನಿಂದ ಕಾಂಗ್ರೆಸ್​​ ಶಾಸಕರ ಸಂಪರ್ಕ ಸುದ್ದಿ ಸುಳ್ಳೆಂದ ಹೆಚ್​​ಡಿಕೆ
ಜೆಡಿಎಸ್​​ನಿಂದ ಕಾಂಗ್ರೆಸ್​​ ಶಾಸಕರ ಸಂಪರ್ಕ ಸುದ್ದಿ ಸುಳ್ಳೆಂದ ಹೆಚ್​​ಡಿಕೆ
ಸತ್ತವರು ಕನಸಿನಲ್ಲಿ ಯಾವ ರೀತಿ ಬಂದರೆ ಏನರ್ಥ?
ಸತ್ತವರು ಕನಸಿನಲ್ಲಿ ಯಾವ ರೀತಿ ಬಂದರೆ ಏನರ್ಥ?