AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೊಂದು ಹುಡುಗಿ ಜತೆ ಆಪ್ತತೆ; ಮುರಿದು ಬಿತ್ತು ಶಮಿತಾ ಶೆಟ್ಟಿ-ರಾಕೇಶ್ ಬಾಪಟ್ ಸಂಬಂಧ

ಶಿಲ್ಪಾ ಪತಿ ರಾಜ್​ ಕುಂದ್ರಾ ಅಶ್ಲೀಲ ಸಿನಿಮಾ ನಿರ್ಮಾಣ ದಂಧೆಯಲ್ಲಿ ಬಂಧನಕ್ಕೆ ಒಳಗಾದ ಕೆಲವೇ ದಿನಗಳಲ್ಲಿ ಶಮಿತಾ ಬಿಗ್​ ಬಾಸ್​ ಮನೆ ಪ್ರವೇಶಿಸಿದರು. ಈ ವಿಚಾರದಲ್ಲಿ ಸಾಕಷ್ಟು ನೊಂದಿದ್ದರೂ ಅವರು ಬಿಗ್​ ಬಾಸ್ ಮನೆಗೆ ಬಂದಿದ್ದು ಸಾಕಷ್ಟು ಅಚ್ಚರಿ ಮೂಡಿಸಿತ್ತು.

ಮತ್ತೊಂದು ಹುಡುಗಿ ಜತೆ ಆಪ್ತತೆ; ಮುರಿದು ಬಿತ್ತು ಶಮಿತಾ ಶೆಟ್ಟಿ-ರಾಕೇಶ್ ಬಾಪಟ್ ಸಂಬಂಧ
ರಾಕೇಶ್ ಬಾಪಟ್, ಶಮಿತಾ ಶೆಟ್ಟಿ
TV9 Web
| Edited By: |

Updated on:Sep 11, 2021 | 5:07 PM

Share

ಶಿಲ್ಪಾ ಶೆಟ್ಟಿ ಸಹೋದರಿ ಶಮಿತಾ ಶೆಟ್ಟಿ ಹಾಗೂ ರಾಕೇಶ್​ ಬಾಪಟ್​ ಬಿಗ್​ ಬಾಸ್​ ಒಟಿಟಿಯಲ್ಲಿ ಆಪ್ತವಾಗಿದ್ದರು. ಇವರ ಕೆಮಿಸ್ಟ್ರಿ ಅನೇಕರಿಗೆ ಇಷ್ಟವಾಗಿತ್ತು. ಬಿಗ್​ ಬಾಸ್​ ಮನೆಯಲ್ಲಿ ಹೊಸ ಲವ್​ ಸ್ಟೋರಿ ಹುಟ್ಟಿಕೊಂಡಿತು ಎಂದು ಎಲ್ಲರೂ ಅಂದುಕೊಂಡಿದ್ದರು. ಆದರೆ, ಕೆಲವೇ ದಿನಗಳಲ್ಲಿ ಲೆಕ್ಕಾಚಾರ ತಲೆಕೆಳಗಾಗಿದೆ. ಶಮಿತಾ ಹಾಗೂ ರಾಕೇಶ್​ ನಡುವೆ ಹುಟ್ಟಿಕೊಂಡಿದ್ದ ಆಪ್ತತೆ ಈಗ ಸುಟ್ಟು ಕರಕಲಾಗಿದೆ.

ಶಿಲ್ಪಾ ಪತಿ ರಾಜ್​ ಕುಂದ್ರಾ ಅಶ್ಲೀಲ ಸಿನಿಮಾ ನಿರ್ಮಾಣ ದಂಧೆಯಲ್ಲಿ ಬಂಧನಕ್ಕೆ ಒಳಗಾದ ಕೆಲವೇ ದಿನಗಳಲ್ಲಿ ಶಮಿತಾ ಬಿಗ್​ ಬಾಸ್​ ಮನೆ ಪ್ರವೇಶಿಸಿದರು. ಈ ವಿಚಾರದಲ್ಲಿ ಸಾಕಷ್ಟು ನೊಂದಿದ್ದರೂ ಅವರು ಬಿಗ್​ ಬಾಸ್ ಮನೆಗೆ ಬಂದಿದ್ದು ಸಾಕಷ್ಟು ಅಚ್ಚರಿ ಮೂಡಿಸಿತ್ತು. ಬಿಗ್​ ಬಾಸ್​ ಮನೆಗೆ ಬಂದ ನಂತರದಲ್ಲಿ ಶಮಿತಾ ಆಕರ್ಷಣೆಯ ಕೇಂದ್ರ ಬಿಂದು ಆಗಿದ್ದಾರೆ. ರಾಕೇಶ್​ ಬಾಪಟ್​ ಜತೆ ಸಲುಗೆಯಿಂದ ಇದ್ದಿದ್ದಕ್ಕೆ ಮತ್ತಷ್ಟು ಚರ್ಚೆಗೆ ಒಳಗಾದರು.

ರಾಕೇಶ್​ ಬಾಪಟ್​ ಹಾಗೂ ಶಮಿತಾ ಪರಸ್ಪರ ಕಿಸ್​ ಮಾಡಿಕೊಂಡಿದ್ದರು. ಈ ವಿಡಿಯೋಗಳು ಸಾಕಷ್ಟು ವೈರಲ್​ ಆಗಿತ್ತು. ಆದರೆ, ಇವರ ನಡುವೆ ಮೂರನೇ ವ್ಯಕ್ತಿ ಆಗಮನವಾಗಿದೆ. ಇದರಿಂದ ಮನ ನೊಂದಿರುವ ಶಮಿತಾ ಅವರು ರಾಕೇಶ್​ರಿಂದ ಅಂತರ ಕಾಯ್ದುಕೊಳ್ಳುವ ನಿರ್ಧಾರಕ್ಕೆ ಬಂದಿದ್ದಾರೆ.

ದಿವ್ಯಾ ಅಗರ್​ವಾಲ್​ ಜತೆ ರಾಕೇಶ್​ ಆಪ್ತವಾಗಿದ್ದಾರೆ. ಇದು ಶಮಿತಾ ಕಣ್ಣು ಕುಕ್ಕಿದೆ. ಈ ವಿಚಾರವಾಗಿ ರಾಕೇಶ್​ ಜತೆ ಶಮಿತಾ ಮಾತಿಗೆ ಇಳಿದಿದ್ದರು. ಇದನ್ನು ರಾಕೇಶ್​ ಸಮರ್ಥಿಸಿಕೊಂಡಿದ್ದರು. ‘ದಿವ್ಯಾ ಅವರನ್ನು ಕಂಡರೆ ನನಗೆ ಇಷ್ಟವಿಲ್ಲ. ಆದರೆ, ಒಂದೇ ಮನೆಯಲ್ಲಿ ಇದ್ದಾಗ ಅವಳನ್ನು ಅವಾಯ್ಡ್​ ಮಾಡೋಕೆ ಸಾಧ್ಯವಿಲ್ಲ’ ಎಂದಿದ್ದರು. ಆದರೆ, ಇಷ್ಟಕ್ಕೇ ನಿಂತಿಲ್ಲ. ದಿವ್ಯಾ ಜತೆ ರಾಕೇಶ್​ ಆಪ್ತರಾಗಿ ನಡೆದುಕೊಂಡಿದ್ದಾರೆ. ಇದು ಸಹಜವಾಗಿಯೇ ಶಮಿತಾ ಕೋಪಕ್ಕೆ ಕಾರಣವಾಗಿದೆ.

‘ರಾಕೇಶ್​ ನನ್ನ ಪರವಾಗಿ ನಿಲ್ಲುತ್ತಿಲ್ಲ. ಅವನು ನನಗೆ ಹೇಳಿ ಮಾಡಿಸಿದ ಹುಡುಗನಲ್ಲ. ನಾನು ಆತನಿಗೆ ಮತ್ತಿನೆಂದೂ ಕ್ಲೋಸ್​ ಆಗುವುದಿಲ್ಲ. ನಾನು ತಪ್ಪಾದ ವ್ಯಕ್ತಿಯನ್ನು ನಂಬಿ ಮೋಸ ಹೋದೆ’ ಎಂದಿದ್ದಾರೆ ಶಮಿತಾ.

ಇದನ್ನೂ ಓದಿ: ತನ್ನ ಪರವಾಗಿ ನಿಲ್ಲುವ ಸಂಗಾತಿ ಬೇಕು ಆದರೆ ರಾಕೇಶ್ ಅಂತಹ ವ್ಯಕ್ತಿ ಅಲ್ಲ ಎಂದು ಹೇಳಿ ಶಾಕ್ ಕೊಟ್ಟ ಶಮಿತಾ ಶೆಟ್ಟಿ

ಮೊದಲ ಬಾಯ್​ಫ್ರೆಂಡ್​ ಮೃತಪಟ್ಟಿದ್ದು ಹೇಗೆ? ಅಳುತ್ತಲೇ ಶಮಿತಾ ಶೆಟ್ಟಿ ಬಿಚ್ಚಿಟ್ರು ಶಾಕಿಂಗ್​ ವಿಚಾರ

Published On - 4:52 pm, Sat, 11 September 21

Follow Us
ಉದ್ಘಾಟನೆಯಾದ 6 ತಿಂಗಳೊಳಗೆ ಬಂಗಾಳದ ಫ್ಲೈಓವರ್ ಗೋಡೆ ಕುಸಿತ
ಉದ್ಘಾಟನೆಯಾದ 6 ತಿಂಗಳೊಳಗೆ ಬಂಗಾಳದ ಫ್ಲೈಓವರ್ ಗೋಡೆ ಕುಸಿತ
ಮುಜುರಾಯಿ ದೇಗುಲಗಳಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಲು ಗ್ಯಾಸ್ ಸಮಸ್ಯೆ
ಮುಜುರಾಯಿ ದೇಗುಲಗಳಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಲು ಗ್ಯಾಸ್ ಸಮಸ್ಯೆ
ಯಾದಗಿರಿ ಭೂಗರ್ಭದಲ್ಲಿ ಅಡಗಿದೆಯಾ ಖನಿಜ ನಿಕ್ಷೇಪ? ಹೆಲಿಕಾಪ್ಟರ್ ಮೂಲಕ ಶೋಧ
ಯಾದಗಿರಿ ಭೂಗರ್ಭದಲ್ಲಿ ಅಡಗಿದೆಯಾ ಖನಿಜ ನಿಕ್ಷೇಪ? ಹೆಲಿಕಾಪ್ಟರ್ ಮೂಲಕ ಶೋಧ
ಯುಗಾದಿ ವರ್ಷ ಭವಿಷ್ಯ; ಮೀನ ರಾಶಿಗೆ ಈ ವರ್ಷ ಹೇಗಿರಲಿದೆ?
ಯುಗಾದಿ ವರ್ಷ ಭವಿಷ್ಯ; ಮೀನ ರಾಶಿಗೆ ಈ ವರ್ಷ ಹೇಗಿರಲಿದೆ?
ಯುಗಾದಿ ವರ್ಷ ಭವಿಷ್ಯ; ಈ ರಾಶಿಗೆ ವಿವಾಹ ಯೋಗ ಹಾಗೂ ಹೊಸ ಉದ್ಯೋಗಾವಕಾಶ
ಯುಗಾದಿ ವರ್ಷ ಭವಿಷ್ಯ; ಈ ರಾಶಿಗೆ ವಿವಾಹ ಯೋಗ ಹಾಗೂ ಹೊಸ ಉದ್ಯೋಗಾವಕಾಶ
ಏರ್ ಇಂಡಿಯಾ ವಿಮಾನ ಹಾರ್ಡ್​ ಲ್ಯಾಂಡಿಂಗ್, ಪುಡಿ ಪುಡಿಯಾದ ಚಕ್ರ
ಏರ್ ಇಂಡಿಯಾ ವಿಮಾನ ಹಾರ್ಡ್​ ಲ್ಯಾಂಡಿಂಗ್, ಪುಡಿ ಪುಡಿಯಾದ ಚಕ್ರ
ಗ್ಯಾಸ್ ನೋ ಸ್ಟಾಕ್: ಬೆಂಗಳೂರಿನಲ್ಲಿ ಬಂಕ್ ಬಂದ್, ಆಟೋದವರ ದುಡಿಮೆಗೂ ಕುತ್ತು
ಗ್ಯಾಸ್ ನೋ ಸ್ಟಾಕ್: ಬೆಂಗಳೂರಿನಲ್ಲಿ ಬಂಕ್ ಬಂದ್, ಆಟೋದವರ ದುಡಿಮೆಗೂ ಕುತ್ತು
ಯುಗಾದಿ ವರ್ಷ ಭವಿಷ್ಯ; ಈ ರಾಶಿಯವರು ಆರೋಗ್ಯದ ಬಗ್ಗೆ ಅತ್ಯಂತ ಜಾಗರೂಕರಾಗಿರಿ
ಯುಗಾದಿ ವರ್ಷ ಭವಿಷ್ಯ; ಈ ರಾಶಿಯವರು ಆರೋಗ್ಯದ ಬಗ್ಗೆ ಅತ್ಯಂತ ಜಾಗರೂಕರಾಗಿರಿ
ಕಾರು ಓಡಿಸುವಾಗ ವ್ಯಕ್ತಿಗೆ ಹೃದಯಾಘಾತ, ಸಿಪಿಆರ್ ನೀಡಿ ಜೀವ ಉಳಿಸಿದ ಪೊಲೀಸ್
ಕಾರು ಓಡಿಸುವಾಗ ವ್ಯಕ್ತಿಗೆ ಹೃದಯಾಘಾತ, ಸಿಪಿಆರ್ ನೀಡಿ ಜೀವ ಉಳಿಸಿದ ಪೊಲೀಸ್
ನಿಮ್ಮ 10 ಕೋಟಿ ರೂ. ಎಲ್ಲಿ ಸಾಕಾಗುತ್ತದೆ
ನಿಮ್ಮ 10 ಕೋಟಿ ರೂ. ಎಲ್ಲಿ ಸಾಕಾಗುತ್ತದೆ