AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಶೋ ನಂತರವೂ ನಾವು ಕನೆಕ್ಟ್​ ಆಗುತ್ತೇವೆ’; ಶಮಿತಾ ಬಗ್ಗೆ ರಾಕೇಶ್​ ಅಚ್ಚರಿಯ ಹೇಳಿಕೆ

ಎಲ್ಲಾ ಸ್ಪರ್ಧಿಗಳ ಬಗ್ಗೆ ತಮ್ಮತಮ್ಮ ಅಭಿಪ್ರಾಯ ಹೇಳಿಕೊಳ್ಳುವ ಅವಕಾಶವನ್ನು ಬಿಗ್​ ಬಾಸ್​ ನೀಡಿದ್ದರು. ಈ ವೇಳೆ ರಾಕೇಶ್​ ಅವರು ಶಮಿತಾ ಬಗ್ಗೆ ಮಾತನಾಡೋಕೆ ಆರಂಭಿಸಿದರು.

‘ಶೋ ನಂತರವೂ ನಾವು ಕನೆಕ್ಟ್​ ಆಗುತ್ತೇವೆ’; ಶಮಿತಾ ಬಗ್ಗೆ ರಾಕೇಶ್​ ಅಚ್ಚರಿಯ ಹೇಳಿಕೆ
‘ಶೋ ನಂತರವೂ ನಾವು ಕನೆಕ್ಟ್​ ಆಗುತ್ತೇವೆ’; ಶಮಿತಾ ಬಗ್ಗೆ ರಾಕೇಶ್​ ಅಚ್ಚರಿಯ ಹೇಳಿಕೆ
TV9 Web
| Edited By: |

Updated on: Sep 02, 2021 | 6:54 PM

Share

ಶಿಲ್ಪಾ ಶೆಟ್ಟಿ ತಂಗಿ ಶಮಿತಾ ಶೆಟ್ಟಿ ಹಾಗೂ ರಾಕೇಶ್​ ಬಾಪಟ್​ ಬಿಗ್​ ಬಾಸ್​ ಮನೆಯಲ್ಲಿ ಹೆಚ್ಚು ಕನೆಕ್ಟ್​ ಆಗುತ್ತಿದ್ದಾರೆ. ಅವರ ನಡುವೆ ಏನೋ ನಡೆಯುತ್ತಿದೆ ಎನ್ನುವ ಗುಮಾನಿ ಅಭಿಮಾನಿಗಳಲ್ಲಿದೆ. ಹೀಗಿರುವಾಗಲೇ ಅವರು ಬಿಗ್​ ಬಾಸ್​ ಮನೆಯಲ್ಲಿ ನಾನಾ ರೀತಿಯ ಹೇಳಿಕೆ ನೀಡಿ ಅಭಿಮಾನಿಗಳಲ್ಲಿ ಅಚ್ಚರಿ ಮೂಡಿಸುತ್ತಿದ್ದಾರೆ. ಶೋ ನಂತರವೂ ನಾವು ಕನೆಕ್ಟ್​ ಆಗುತ್ತೇವೆ ಎಂದು ಹೇಳುವ ಮೂಲಕ ರಾಕೇಶ್​ ಅಚ್ಚರಿ ಮೂಡಿಸಿದ್ದಾರೆ.

ಎಲ್ಲಾ ಸ್ಪರ್ಧಿಗಳ ಬಗ್ಗೆ ತಮ್ಮತಮ್ಮ ಅಭಿಪ್ರಾಯ ಹೇಳಿಕೊಳ್ಳುವ ಅವಕಾಶವನ್ನು ಬಿಗ್​ ಬಾಸ್​ ನೀಡಿದ್ದರು. ಈ ವೇಳೆ ರಾಕೇಶ್​ ಅವರು ಶಮಿತಾ ಬಗ್ಗೆ ಮಾತನಾಡೋಕೆ ಆರಂಭಿಸಿದರು. ಅವರು ಮಾತನಾಡುತ್ತಾ ಭಾವುಕರಾಗಿದ್ದು ವೀಕ್ಷಕರ ಗಮನಕ್ಕೆ ಬಂದಿದೆ. ಅವರ ನಡುವೆ ಹುಟ್ಟಿರುವ ಸಂಬಂಧ ಎಂಥದ್ದು ಎನ್ನುವ ಪ್ರಶ್ನೆ ಅಭಿಮಾನಿಗಳನ್ನು ಕಾಡುತ್ತಿದೆ.

‘ಶಮಿತಾ ಮನಸ್ಸು ಶುದ್ಧವಾಗಿದೆ. ನಾನು ಅವಳನ್ನು ನಿಜವಾಗಲೂ ಇಷ್ಟಪಡುತ್ತೇನೆ. ಅವಳು ಅದ್ಭುತ ವ್ಯಕ್ತಿ. ಶೋ ಮುಗಿದ ನಂತರವೂ ನಾವು ಕನೆಕ್ಟ್​ ಆಗುತ್ತೇವೆ ಎಂದು ನನಗೆ ಅನಿಸುತ್ತದೆ. ನನಗೆ ಯಾರದ್ದಾದರೂ ಜೊತೆಗೆ ಸಂಬಂಧ ಬೆಳೆಸುವುದು ಎಂದರೆ ಭಯ. ಆದರೆ, ನಾನು ಅವಳಿಗೆ ಸಿಕ್ಕಾಪಟ್ಟೆ ಕನೆಕ್ಟ್​​ ಆಗುತ್ತೇನೆ’ ಎಂದು ಖುಷಿ ವ್ಯಕ್ತಪಡಿಸಿದರು.

ದಿವ್ಯಾ ಅಗರ್​​ವಾಲ್​ ಜೊತೆ ರಾಕೇಶ್​ ಮಾತನಾಡುವುದನ್ನು ಶಮಿತಾ ತಡೆಯುತ್ತಿದ್ದಾರೆ. ಇದು ರಾಕೇಶ್​​ಗೆ ಇಷ್ಟವಾಗಲಿಲ್ಲ. ಈ ವಿಚಾರವಾಗಿ ಶಮಿತಾ ಜತೆ ಮಾತನಾಡಿದ ರಾಕೇಶ್,​ ‘ದಿವ್ಯಾ ಎಂದರೆ ನನಗೆ ಇಷ್ಟವಿಲ್ಲ. ಅವಳು ನನಗೆ ಮುಖ್ಯಳಲ್ಲ. ಆದರೆ ಒಂದೇ ಮನೆಯಲ್ಲಿರುವಾಗ ಅವಳನ್ನು ನಿರ್ಲಕ್ಷಿಸಲು ಸಾಧ್ಯವಿಲ್ಲ’ ಎಂದಿದ್ದಾರೆ​. ‘ನಾನು ಮೊದಲ ದಿನದಿಂದಲೂ ನಿನ್ನ ಜತೆ ನಡೆದುಕೊಂಡಿದ್ದ ರೀತಿ ನಕಲಿ ಅಲ್ಲ. ನನ್ನ ಕೈಗೆ, ಕುತ್ತಿಗೆಗೆ ಕಿಸ್​ ಮಾಡೋಕೆ ಅವಕಾಶ ಕೊಟ್ಟೆ. ಇದಕ್ಕೆ ಕಾರಣ ನಾನು ನಿನ್ನನ್ನು ಇಷ್ಟಪಡುತ್ತಿದ್ದೇನೆ’ ಎಂದು ಶಮಿತಾ ಒಪ್ಪಿಕೊಂಡರು.

ಇದನ್ನೂ ಓದಿ: ‘ನಾನು ನಿನ್ನನ್ನು ಇಷ್ಟಪಡುತ್ತಿದ್ದೇನೆ, ಅದಕ್ಕೆ ಕಿಸ್​ ಮಾಡೋಕೆ ಬಿಟ್ಟೆ’; ರಾಕೇಶ್​ ಎದುರು ಎಲ್ಲವನ್ನೂ ಹೇಳಿಕೊಂಡ ಶಮಿತಾ ಶೆಟ್ಟಿ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?