AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿಲ್ಪಾ ಶೆಟ್ಟಿ ತಂಗಿ ಶಮಿತಾ ಶೆಟ್ಟಿ ಚೀರಾಟ, ಹಾರಾಟ; ಇಂಥ ಪರಿಸ್ಥಿತಿಗೆ ಕಾರಣ ಏನು?

ಸದ್ಯ ಈ ವಿಡಿಯೋ ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗುತ್ತಿದೆ. ಕೆಲವರು ಶಮಿತಾ ಶೆಟ್ಟಿಗೆ ಕಮೆಂಟ್​ಗಳ ಮೂಲಕ ಬೆಂಬಲ ಸೂಚಿಸಿದ್ದರೆ, ಮತ್ತೆ ಕೆಲವರು ಕಾಲೆಳೆಯುತ್ತಿದ್ದಾರೆ.

ಶಿಲ್ಪಾ ಶೆಟ್ಟಿ ತಂಗಿ ಶಮಿತಾ ಶೆಟ್ಟಿ ಚೀರಾಟ, ಹಾರಾಟ; ಇಂಥ ಪರಿಸ್ಥಿತಿಗೆ ಕಾರಣ ಏನು?
ಶಿಲ್ಪಾ ಶೆಟ್ಟಿ ತಂಗಿ ಶಮಿತಾ ಶೆಟ್ಟಿ ಚೀರಾಟ, ಹಾರಾಟ; ಇಂಥ ಪರಿಸ್ಥಿತಿಗೆ ಕಾರಣ ಏನು?
TV9 Web
| Edited By: |

Updated on: Aug 10, 2021 | 9:25 AM

Share

ಅಶ್ಲೀಲ ಸಿನಿಮಾ ಪ್ರಕರಣದಲ್ಲಿ ಉದ್ಯಮಿ ರಾಜ್​ ಕುಂದ್ರಾ ಅರೆಸ್ಟ್​ ಆದ ನಂತರ ಅವರ ಪತ್ನಿ ಶಿಲ್ಪಾ ಶೆಟ್ಟಿ ಹಾಗೂ ಇಡೀ ಕುಟುಂಬವೇ ಸಂಕಷ್ಟ ಎದುರಿಸುವಂತಾಯಿತು. ಶಿಲ್ಪಾ ಶೆಟ್ಟಿ ತಂಗಿ ಶಮಿತಾ ಶೆಟ್ಟಿ ಕೂಡ ನೆಟ್ಟಿಗರಿಂದ ಟ್ರೋಲ್​ಗೆ ಒಳಗಾಗುತ್ತಿದ್ದಾರೆ. ಈ ನಡುವೆ ಅವರು ಮತ್ತೊಂದು ಪ್ರಮುಖ ಕಾರಣಕ್ಕಾಗಿ ಸುದ್ದಿ ಆಗುತ್ತಿದ್ದಾರೆ. ಈಗ ಅವರು ‘ಬಿಗ್​ ಬಾಸ್​ ಓಟಿಟಿ’ ಕಾರ್ಯಕ್ರಮದಲ್ಲಿ ಸ್ಪರ್ಧಿಸುತ್ತಿದ್ದಾರೆ. ಕರಣ್​ ಜೋಹರ್​ ನಡೆಸಿಕೊಡುತ್ತಿರುವ ಈ ಶೋ ಆ.9ರಿಂದ ಆರಂಭ ಆಗಿದ್ದು, ಮೊದಲ ದಿನವೇ ಶಮಿತಾ ಶೆಟ್ಟಿ ಕೂಗಾಟ, ಹಾರಾಟ ಶುರುಮಾಡಿಕೊಂಡಿದ್ದಾರೆ. ಸಹ ಸ್ಪರ್ಧಿಗಳ ವಿರುದ್ಧ ಅವರು ಹರಿಹಾಯ್ದಿದ್ದಾರೆ.

ಬಿಗ್​ ಬಾಸ್​ ಎಂದರೆ ಅಲ್ಲಿ ಜಗಳಗಳು ಮಾಮೂಲು. ಅದರಲ್ಲೂ ಈ ಬಾರಿ ‘ಬಿಗ್​ ಬಾಸ್​ ಓಟಿಟಿ’ ತುಂಬ ಖಾರವಾಗಿದೆ. ಸಿಕ್ಕಾಪಟ್ಟೆ ಬೋಲ್ಡ್​ ಆಗಿ ಕೂಡ ಇರಲಿದೆ ಎಂಬುದಕ್ಕೆ ಪ್ರೋಮೋನಲ್ಲೇ ಸುಳಿವು ಸಿಕ್ಕಿತ್ತು. ಅದಕ್ಕೆ ತಕ್ಕಂತೆಯೇ ಸ್ಪರ್ಧಿಗಳು ಕೂಡ ಸ್ಟ್ರಾಂಗ್​ ಆಗಿದ್ದಾರೆ. ಈ ಕಾರ್ಯಕ್ರಮಕ್ಕೆ ಕಾಲಿಟ್ಟು ಎರಡು ದಿನ ಕಳೆಯುವುದರೊಳಗೆ ಶಮಿತಾ ಶೆಟ್ಟಿ ಗರಂ ಆಗಿದ್ದಾರೆ. ಬಿಗ್​ ಬಾಸ್​ ಮನೆಯೊಳಗಿನ ಕೆಲಸ ಹಂಚಿಕೊಳ್ಳುವ ವಿಚಾರಕ್ಕೆ ಸಂಬಂಧಿಸಿದಂತೆ ಜಗಳ ಆಗಿದೆ. ಆಗ ಶಮಿತಾ ಕಿರುಚಾಡಿದ್ದಾರೆ.

ಸದ್ಯ ಈ ವಿಡಿಯೋ ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗುತ್ತಿದೆ. ಕೆಲವರು ಶಮಿತಾ ಶೆಟ್ಟಿಗೆ ಕಮೆಂಟ್​ಗಳ ಮೂಲಕ ಬೆಂಬಲ ಸೂಚಿಸಿದ್ದರೆ, ಮತ್ತೆ ಕೆಲವರು ಕಾಲೆಳೆಯುತ್ತಿದ್ದಾರೆ. ತಮ್ಮ ಕುಟುಂಬದ ಸದಸ್ಯರಾದ ರಾಜ್​ ಕುಂದ್ರ ಮೇಲೆ ನೀಲಿ ಚಿತ್ರ ನಿರ್ಮಾಣದ ಆರೋಪ ಎದುರಾಗಿರುವುದರಿಂದ ಆ ವಿಷಯ ಕೂಡ ಬಿಗ್ ಬಾಸ್​ ಮನೆಯೊಳಗೆ ಶಮಿತಾಗೆ ಮುಳುವಾಗಬಹುದು. ಆದರೆ ಅದೆಲ್ಲದಕ್ಕೂ ಸಿದ್ಧರಾಗಿಯೇ ಅವರು ದೊಡ್ಮನೆಯೊಳಗೆ ಕಾಲಿಟ್ಟಿದ್ದಾರೆ.

View this post on Instagram

A post shared by MrKhabri (@mrkhabrix)

ಆರು ವಾರಗಳ ಕಾಲ ನಡೆಯಲಿರುವ ಈ ಬಿಗ್​​ ಬಾಸ್​ ಕಾರ್ಯಕ್ರಮವು ವೂಟ್​ನಲ್ಲಿ ಮಾತ್ರ ಪ್ರಸಾರ ಆಗಲಿದೆ. ಬಳಿಕ ಸಲ್ಮಾನ್​ ಖಾನ್​ ನಡೆಸಿಕೊಡುವ ‘ಬಿಗ್​ ಬಾಸ್ ಹಿಂದಿ ಸೀಸನ್​ 15’ ಆರಂಭ ಆಗಲಿದೆ. ಅಲ್ಲಿಯವರೆಗೂ ಕರಣ್​ ಜೋಹರ್​ ಅವರು ಈ ಕಾರ್ಯಕ್ರಮದ ನಿರೂಪಣೆ ಮಾಡುತ್ತಾರೆ. ‘ಬಿಗ್​ ಬಾಸ್​ ಓಟಿಟಿ’ಯಲ್ಲಿ ಇರುವ ಸ್ಪರ್ಧಿಗಳೇ ‘ಬಿಗ್​ ಬಾಸ್​ 15’ರಲ್ಲೂ ಮುಂದುವರಿಯುತ್ತಾರಾ ಅಥವಾ ಹೊಸ ಸ್ಪರ್ಧಿಗಳು ಎಂಟ್ರಿ ನೀಡುತ್ತಾರಾ ಎಂಬುದಕ್ಕೆ ಇನ್ನಷ್ಟೇ ಉತ್ತರ ಸಿಗಬೇಕಿದೆ.

ಇದನ್ನೂ ಓದಿ:

ಶಿಲ್ಪಾ ಶೆಟ್ಟಿ, ತಾಯಿ ಸುನಂದಾ ಶೆಟ್ಟಿ ವಿರುದ್ಧ ಚೀಟಿಂಗ್​ ಕೇಸ್​; ಬಂಧನ ಭೀತಿ

‘ರಾಜ್ ಕುಂದ್ರಾ ರಾತ್ರಿಯ ಯೋಗ ಪೋಸ್​ ಕಲಿಸುತ್ತಾರೆ’; ಶಿಲ್ಪಾ ಶೆಟ್ಟಿ ತಂಗಿಗೆ ನೆಟ್ಟಿಗರಿಂದ ಹಿಗ್ಗಾಮುಗ್ಗಾ ಟ್ರೋಲ್​

Follow Us
Web contact
Web contact

TV9 Kannada

Read More
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ