AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿಲ್ಪಾ ಶೆಟ್ಟಿ ತಂಗಿ ಶಮಿತಾ ಶೆಟ್ಟಿ ಚೀರಾಟ, ಹಾರಾಟ; ಇಂಥ ಪರಿಸ್ಥಿತಿಗೆ ಕಾರಣ ಏನು?

ಸದ್ಯ ಈ ವಿಡಿಯೋ ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗುತ್ತಿದೆ. ಕೆಲವರು ಶಮಿತಾ ಶೆಟ್ಟಿಗೆ ಕಮೆಂಟ್​ಗಳ ಮೂಲಕ ಬೆಂಬಲ ಸೂಚಿಸಿದ್ದರೆ, ಮತ್ತೆ ಕೆಲವರು ಕಾಲೆಳೆಯುತ್ತಿದ್ದಾರೆ.

ಶಿಲ್ಪಾ ಶೆಟ್ಟಿ ತಂಗಿ ಶಮಿತಾ ಶೆಟ್ಟಿ ಚೀರಾಟ, ಹಾರಾಟ; ಇಂಥ ಪರಿಸ್ಥಿತಿಗೆ ಕಾರಣ ಏನು?
ಶಿಲ್ಪಾ ಶೆಟ್ಟಿ ತಂಗಿ ಶಮಿತಾ ಶೆಟ್ಟಿ ಚೀರಾಟ, ಹಾರಾಟ; ಇಂಥ ಪರಿಸ್ಥಿತಿಗೆ ಕಾರಣ ಏನು?
TV9 Web
| Edited By: |

Updated on: Aug 10, 2021 | 9:25 AM

Share

ಅಶ್ಲೀಲ ಸಿನಿಮಾ ಪ್ರಕರಣದಲ್ಲಿ ಉದ್ಯಮಿ ರಾಜ್​ ಕುಂದ್ರಾ ಅರೆಸ್ಟ್​ ಆದ ನಂತರ ಅವರ ಪತ್ನಿ ಶಿಲ್ಪಾ ಶೆಟ್ಟಿ ಹಾಗೂ ಇಡೀ ಕುಟುಂಬವೇ ಸಂಕಷ್ಟ ಎದುರಿಸುವಂತಾಯಿತು. ಶಿಲ್ಪಾ ಶೆಟ್ಟಿ ತಂಗಿ ಶಮಿತಾ ಶೆಟ್ಟಿ ಕೂಡ ನೆಟ್ಟಿಗರಿಂದ ಟ್ರೋಲ್​ಗೆ ಒಳಗಾಗುತ್ತಿದ್ದಾರೆ. ಈ ನಡುವೆ ಅವರು ಮತ್ತೊಂದು ಪ್ರಮುಖ ಕಾರಣಕ್ಕಾಗಿ ಸುದ್ದಿ ಆಗುತ್ತಿದ್ದಾರೆ. ಈಗ ಅವರು ‘ಬಿಗ್​ ಬಾಸ್​ ಓಟಿಟಿ’ ಕಾರ್ಯಕ್ರಮದಲ್ಲಿ ಸ್ಪರ್ಧಿಸುತ್ತಿದ್ದಾರೆ. ಕರಣ್​ ಜೋಹರ್​ ನಡೆಸಿಕೊಡುತ್ತಿರುವ ಈ ಶೋ ಆ.9ರಿಂದ ಆರಂಭ ಆಗಿದ್ದು, ಮೊದಲ ದಿನವೇ ಶಮಿತಾ ಶೆಟ್ಟಿ ಕೂಗಾಟ, ಹಾರಾಟ ಶುರುಮಾಡಿಕೊಂಡಿದ್ದಾರೆ. ಸಹ ಸ್ಪರ್ಧಿಗಳ ವಿರುದ್ಧ ಅವರು ಹರಿಹಾಯ್ದಿದ್ದಾರೆ.

ಬಿಗ್​ ಬಾಸ್​ ಎಂದರೆ ಅಲ್ಲಿ ಜಗಳಗಳು ಮಾಮೂಲು. ಅದರಲ್ಲೂ ಈ ಬಾರಿ ‘ಬಿಗ್​ ಬಾಸ್​ ಓಟಿಟಿ’ ತುಂಬ ಖಾರವಾಗಿದೆ. ಸಿಕ್ಕಾಪಟ್ಟೆ ಬೋಲ್ಡ್​ ಆಗಿ ಕೂಡ ಇರಲಿದೆ ಎಂಬುದಕ್ಕೆ ಪ್ರೋಮೋನಲ್ಲೇ ಸುಳಿವು ಸಿಕ್ಕಿತ್ತು. ಅದಕ್ಕೆ ತಕ್ಕಂತೆಯೇ ಸ್ಪರ್ಧಿಗಳು ಕೂಡ ಸ್ಟ್ರಾಂಗ್​ ಆಗಿದ್ದಾರೆ. ಈ ಕಾರ್ಯಕ್ರಮಕ್ಕೆ ಕಾಲಿಟ್ಟು ಎರಡು ದಿನ ಕಳೆಯುವುದರೊಳಗೆ ಶಮಿತಾ ಶೆಟ್ಟಿ ಗರಂ ಆಗಿದ್ದಾರೆ. ಬಿಗ್​ ಬಾಸ್​ ಮನೆಯೊಳಗಿನ ಕೆಲಸ ಹಂಚಿಕೊಳ್ಳುವ ವಿಚಾರಕ್ಕೆ ಸಂಬಂಧಿಸಿದಂತೆ ಜಗಳ ಆಗಿದೆ. ಆಗ ಶಮಿತಾ ಕಿರುಚಾಡಿದ್ದಾರೆ.

ಸದ್ಯ ಈ ವಿಡಿಯೋ ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗುತ್ತಿದೆ. ಕೆಲವರು ಶಮಿತಾ ಶೆಟ್ಟಿಗೆ ಕಮೆಂಟ್​ಗಳ ಮೂಲಕ ಬೆಂಬಲ ಸೂಚಿಸಿದ್ದರೆ, ಮತ್ತೆ ಕೆಲವರು ಕಾಲೆಳೆಯುತ್ತಿದ್ದಾರೆ. ತಮ್ಮ ಕುಟುಂಬದ ಸದಸ್ಯರಾದ ರಾಜ್​ ಕುಂದ್ರ ಮೇಲೆ ನೀಲಿ ಚಿತ್ರ ನಿರ್ಮಾಣದ ಆರೋಪ ಎದುರಾಗಿರುವುದರಿಂದ ಆ ವಿಷಯ ಕೂಡ ಬಿಗ್ ಬಾಸ್​ ಮನೆಯೊಳಗೆ ಶಮಿತಾಗೆ ಮುಳುವಾಗಬಹುದು. ಆದರೆ ಅದೆಲ್ಲದಕ್ಕೂ ಸಿದ್ಧರಾಗಿಯೇ ಅವರು ದೊಡ್ಮನೆಯೊಳಗೆ ಕಾಲಿಟ್ಟಿದ್ದಾರೆ.

View this post on Instagram

A post shared by MrKhabri (@mrkhabrix)

ಆರು ವಾರಗಳ ಕಾಲ ನಡೆಯಲಿರುವ ಈ ಬಿಗ್​​ ಬಾಸ್​ ಕಾರ್ಯಕ್ರಮವು ವೂಟ್​ನಲ್ಲಿ ಮಾತ್ರ ಪ್ರಸಾರ ಆಗಲಿದೆ. ಬಳಿಕ ಸಲ್ಮಾನ್​ ಖಾನ್​ ನಡೆಸಿಕೊಡುವ ‘ಬಿಗ್​ ಬಾಸ್ ಹಿಂದಿ ಸೀಸನ್​ 15’ ಆರಂಭ ಆಗಲಿದೆ. ಅಲ್ಲಿಯವರೆಗೂ ಕರಣ್​ ಜೋಹರ್​ ಅವರು ಈ ಕಾರ್ಯಕ್ರಮದ ನಿರೂಪಣೆ ಮಾಡುತ್ತಾರೆ. ‘ಬಿಗ್​ ಬಾಸ್​ ಓಟಿಟಿ’ಯಲ್ಲಿ ಇರುವ ಸ್ಪರ್ಧಿಗಳೇ ‘ಬಿಗ್​ ಬಾಸ್​ 15’ರಲ್ಲೂ ಮುಂದುವರಿಯುತ್ತಾರಾ ಅಥವಾ ಹೊಸ ಸ್ಪರ್ಧಿಗಳು ಎಂಟ್ರಿ ನೀಡುತ್ತಾರಾ ಎಂಬುದಕ್ಕೆ ಇನ್ನಷ್ಟೇ ಉತ್ತರ ಸಿಗಬೇಕಿದೆ.

ಇದನ್ನೂ ಓದಿ:

ಶಿಲ್ಪಾ ಶೆಟ್ಟಿ, ತಾಯಿ ಸುನಂದಾ ಶೆಟ್ಟಿ ವಿರುದ್ಧ ಚೀಟಿಂಗ್​ ಕೇಸ್​; ಬಂಧನ ಭೀತಿ

‘ರಾಜ್ ಕುಂದ್ರಾ ರಾತ್ರಿಯ ಯೋಗ ಪೋಸ್​ ಕಲಿಸುತ್ತಾರೆ’; ಶಿಲ್ಪಾ ಶೆಟ್ಟಿ ತಂಗಿಗೆ ನೆಟ್ಟಿಗರಿಂದ ಹಿಗ್ಗಾಮುಗ್ಗಾ ಟ್ರೋಲ್​

Follow Us
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್