AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮ್ ಚರಣ್, ನಾನಿ ಜೊತೆ ಸಿನಿಮಾ: ಶಿವಣ್ಣ ಹೇಳಿದ್ದು ಹೀಗೆ

Ram Charan: ಶಿವರಾಜ್ ಕುಮಾರ್ ಅವರು ತೆಲುಗಿನ ಸ್ಟಾರ್ ನಟ ರಾಮ್ ಚರಣ್ ಜೊತೆ ಹೊಸ ಸಿನಿಮಾದಲ್ಲಿ ನಟಿಸಲಿದ್ದಾರೆ ಎನ್ನಲಾಗುತ್ತಿದೆ. ಈ ಬಗ್ಗೆ ಸ್ವತಃ ಶಿವಣ್ಣ ಮಾತನಾಡಿದ್ದಾರೆ.

ರಾಮ್ ಚರಣ್, ನಾನಿ ಜೊತೆ ಸಿನಿಮಾ: ಶಿವಣ್ಣ ಹೇಳಿದ್ದು ಹೀಗೆ
ರಾಮ್ ಚರಣ್-ಶಿವಣ್ಣ
ಮಂಜುನಾಥ ಸಿ.
|

Updated on:Dec 06, 2023 | 9:19 PM

Share

ಶಿವರಾಜ್ ಕುಮಾರ್ (Shiva Rajkumar) ಅನುಮಾನವೇ ಇಲ್ಲದೆ ಕನ್ನಡ ಚಿತ್ರರಂಗದ ಬ್ಯುಸಿಯೆಸ್ಟ್ ಸ್ಟಾರ್ ನಟ. ತಮಿಳಿನ ‘ಜೈಲರ್’ ಸಿನಿಮಾದ ಅತಿಥಿ ಪಾತ್ರದ ಬಳಿಕವಂತೂ ಪರಭಾಷೆಗಳಲ್ಲಿಯೂ ಶಿವಣ್ಣನಿಗೆ ಬೇಡಿಕೆ ಹೆಚ್ಚಾಗಿದೆ. ಈಗಾಗಲೇ ತಮಿಳಿನ ಧನುಶ್​ ಜೊತೆ ಸಿನಿಮಾದಲ್ಲಿ ನಟಿಸಿರುವ ಶಿವಣ್ಣ, ತೆಲುಗಿನ ಸ್ಟಾರ್ ನಟ ರಾಮ್ ಚರಣ್ ಜೊತೆ ಹೊಸದೊಂದು ಸಿನಿಮಾದಲ್ಲಿ ನಟಿಸಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಈ ಬಗ್ಗೆ ಸ್ವತಃ ಶಿವರಾಜ್ ಕುಮಾರ್ ಇದೀಗ ಮಾತನಾಡಿದ್ದಾರೆ.

‘ರಾಮ್ ಚರಣ್ ಜೊತೆ ಸಿನಿಮಾ ಬಗ್ಗೆ ಈಗಲೇ ಏನೂ ಹೇಳಲಿಕ್ಕಿಲ್ಲ, ಕೆಲವು ಸುದ್ದಿಗಳು ಹರಿದಾಡುತ್ತಿವೆ. ಆದರೆ ಯಾವುದೇ ಮಾತು-ಕತೆ ಆಗಿಲ್ಲ. ಈಗಲೇ ಮಾತನಾಡಿ ಆ ಮೇಲೆ ಸಿನಿಮಾ ಆಗಲಿಲ್ಲ ಎಂದರೆ ಅಭಿಮಾನಿಗಳಿಗೆ ಬೇಜಾರಾಗುತ್ತದೆ. ತೆಲುಗಿನಲ್ಲಿ ‘ಉಪ್ಪೆನ’ ಸಿನಿಮಾ ಮಾಡಿದ್ದಾರಲ್ಲ ಬುಚ್ಚಿ ಬಾಬು ಅವರು ಭೇಟಿ ಆಗಬೇಕು ಎಂದು ಕೇಳಿದ್ದಾರೆ. ನೋಡೋಣ ಏನಾಗುತ್ತದೆಯೋ’ ಎಂದಿದ್ದಾರೆ ಶಿವರಾಜ್ ಕುಮಾರ್.

ಇತ್ತೀಚೆಗೆ ನಟ ನಾನಿ ಬೆಂಗಳೂರಿಗೆ ಬಂದು ಭೇಟಿ ಆದ ಬಗ್ಗೆ ಮಾತನಾಡಿದ ಶಿವರಾಜ್ ಕುಮಾರ್, ‘ಸಿನಿಮಾ ಒಂದರಲ್ಲಿ ಅತಿಥಿ ಪಾತ್ರ ಮಾಡಬೇಕು ಎಂದು ನಾನೇ ನಾನಿಗೆ ಹಿಂದೊಮ್ಮೆ ಫೋನ್ ಮಾಡಿದ್ದೆ. ಕೂಡಲೇ ಎಸ್ ಅಂತ ಅಂದಿದ್ರು, ನಾನೇ ಬಂದು ಭೇಟಿ ಮಾಡ್ತೀನಿ ಅಂತಾನೂ ಹೇಳಿದ್ದೆ, ಆದರೆ ಅವರು ಇಲ್ಲ ನಾನೇ ಅಲ್ಲಿಗೆ ಬರ್ತೀನಿ ಅಂದರು. ಆದರೆ ಆ ಸಿನಿಮಾ ಆಗಲಿಲ್ಲ. ಈಗ ಬಂದು ಭೇಟಿಯಾದ್ರು. ಇಬ್ಬರೂ ಒಟ್ಟಿಗೆ ಸಿನಿಮಾ ಮಾಡೋಣ ಅಂದುಕೊಂಡಿದ್ದೀವಿ’ ಎಂದರು ಶಿವರಾಜ್ ಕುಮಾರ್.

ಇದನ್ನೂ ಓದಿ:‘ಘೋಸ್ಟ್’ ಸಿನಿಮಾ ನೋಡಲು ಕೆಲವು ಸಲಹೆ ಕೊಟ್ಟ ನಟ ಶಿವರಾಜ್ ಕುಮಾರ್

‘ಘೋಸ್ಟ್’ ಸಿನಿಮಾಕ್ಕೆ ಒಟಿಟಿಯಲ್ಲಿಯೂ ಭರ್ಜರಿ ರೆಸ್ಪಾನ್ಸ್ ಸಿಕ್ಕಿರುವ ಬಗ್ಗೆ ಮಾತನಾಡಿರುವ ಶಿವರಾಜ್ ಕುಮಾರ್, ‘ನಮ್ಮ ಸಿನಿಮಾಕ್ಕೆ ಆಸ್ಟ್ರೇಲಿಯಾ, ಅಮೆರಿಕಾ, ಯುಕೆಯಲ್ಲಿ ತುಂಬಾ ಒಳ್ಳೆಯ ಪ್ರತಿಕ್ರಿಯೆ ಸಿಕ್ಕಿತ್ತು. ಆ ಸಮಯದಲ್ಲಿ ಸ್ವಲ್ಪ ದೊಡ್ಡ ದೊಡ್ಡ ಸಿನಿಮಾಗಳೇ ಬಂದವು. ಆದರೂ, ನಮ್ಮ ಸಿನಿಮಾ ಚೆನ್ನಾಗಿ ಹೋಯ್ತು’ ಎಂದರು.

ಶಿವಣ್ಣ ನಟಿಸಿರುವ ‘ಘೋಸ್ಟ್’ ಸಿನಿಮಾ ಅಕ್ಟೋಬರ್ 19ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆ ಆಯ್ತು. ಚಿತ್ರಮಂದಿರದಲ್ಲಿ ಸಿನಿಮಾ ಸೂಪರ್ ಹಿಟ್ ಆಯ್ತು. ಸಿನಿಮಾವನ್ನು ಶ್ರೀನಿ ನಿರ್ದೇಶನ ಮಾಡಿದ್ದರು. ಸಿನಿಮಾದಲ್ಲಿ ಶಿವಣ್ಣನ ಜೊತೆಗೆ ಅನುಪಮ್ ಖೇರ್, ಜಯರಾಂ ಇನ್ನೂ ಹಲವರು ನಟಿಸಿದ್ದರು. ಸಿನಿಮಾ ಜಿ5 ಒಟಿಟಿಯಲ್ಲಿ ಬಿಡುಗಡೆ ಆಗಿ ಅಲ್ಲಿಯೂ ಸೂಪರ್ ಹಿಟ್ ಆಗಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:36 pm, Wed, 6 December 23

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ