AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಭಜರಂಗಿ 2’ ಚಿತ್ರವನ್ನು ಪುನೀತ್​ ರಾಜ್​ಕುಮಾರ್​ಗೆ ಅರ್ಪಿಸಿದ ಶಿವರಾಜ್​ಕುಮಾರ್​

ಕೊವಿಡ್​ ನಂತರದ ಪರಿಸ್ಥಿತಿಯಲ್ಲಿ ಓಟಿಟಿಗಳ ಕಡೆಗೆ ಜನರ ಆಸಕ್ತಿ ಹೆಚ್ಚಿದೆ. ಈಗ ಶಿವರಾಜ್​ಕುಮಾರ್ ನಟನೆಯ ‘ಭಜರಂಗಿ 2’ ಸಿನಿಮಾ ಕೂಡ ಓಟಿಟಿ ಪ್ಲಾಟ್​ಫಾರ್ಮ್​ನಲ್ಲಿ ವೀಕ್ಷಣೆಗೆ ಲಭ್ಯವಾಗುತ್ತಿದೆ.

‘ಭಜರಂಗಿ 2’ ಚಿತ್ರವನ್ನು ಪುನೀತ್​ ರಾಜ್​ಕುಮಾರ್​ಗೆ ಅರ್ಪಿಸಿದ ಶಿವರಾಜ್​ಕುಮಾರ್​
ಶಿವಣ್ಣ-ಪುನೀತ್
TV9 Web
| Updated By: ರಾಜೇಶ್ ದುಗ್ಗುಮನೆ|

Updated on:Dec 21, 2021 | 3:23 PM

Share

ನಟ ಶಿವರಾಜ್​ಕುಮಾರ್​ ಮತ್ತು ನಿರ್ದೇಶಕ ಹರ್ಷ ಕಾಂಬಿನೇಷನ್​ನಲ್ಲಿ ಮೂಡಿ ಬಂದ ‘ಭಜರಂಗಿ 2’ ಸಿನಿಮಾ ಮೆಚ್ಚುಗೆ ಪಡೆದುಕೊಂಡಿತ್ತು. ಫ್ಯಾಮಿಲಿ ಆಡಿಯನ್ಸ್​ಗೆ ಈ ಸಿನಿಮಾ ಇಷ್ಟವಾಗಿತ್ತು. ಈಗ ಈ ಸಿನಿಮಾ ಒಟಿಟಿಯಲ್ಲಿ ರಿಲೀಸ್​ ಆಗುತ್ತಿದೆ. ಈ ಚಿತ್ರವನ್ನು ಶಿವರಾಜ್​ಕುಮಾರ್​ ಅವರು ಪುನೀತ್​ಗೆ ಅರ್ಪಿಸಿದ್ದಾರೆ. ಈ ಬಗ್ಗೆ ವಿಡಿಯೋ ಮೂಲಕ ಮಾಹಿತಿ ನೀಡಿದ್ದಾರೆ. ಈ ವಿಚಾರ ಕೇಳಿ ಅಭಿಮಾನಿಗಳು ಖುಷಿಯಾಗಿದ್ದಾರೆ.

ಈ ಬಗ್ಗೆ ವಿಡಿಯೋ ಹಂಚಿಕೊಂಡಿರುವ ಶಿವರಾಜ್​ಕುಮಾರ್​, ‘ನನ್ನ ನಟನೆಯ ‘ಭಜರಂಗಿ 2’ ಸಿನಿಮಾ ಜೀ5ನಲ್ಲಿ ರಿಲೀಸ್​ ಆಗುತ್ತಿದೆ. ನಾನು ಹಾಗೂ ನನ್ನ ತಂಡ ಈ ಸಿನಿಮಾವನ್ನು ಅಪ್ಪುಗೆ ಡೆಡಿಕೇಟ್​ ಮಾಡುತ್ತೇವೆ. ಇದು ಅಪ್ಪು ಎಡಿಟಿಂಗ್​ ರೂಮ್​​ನಲ್ಲೇ ಎಡಿಟ್​ ಮಾಡಿದ ಚಿತ್ರ. ಸಾಕಷ್ಟು ಬಾರಿ ಅವನು ಸಿನಿಮಾದ ದೃಶ್ಯ ನೋಡಿ ಮೆಚ್ಚುಗೆಯ ಮಾತನಾಡಿದ್ದ. ಪ್ರೀ ರಿಲೀಸಿಂಗ್​ ಇವೆಂಟ್​ಗೂ ಅಪ್ಪು ಬಂದು ಬೆಂಬಲಿಸಿದ್ದರು. ಡ್ಯಾನ್ಸ್​ ಮಾಡಿದ್ದರು. ರಿಲೀಸ್​ ಆದ ದಿನವೂ ಬೆಳಗ್ಗೆ ಟ್ವೀಟ್​ ಮಾಡಿ ಶುಭಕೋರಿದ್ದರು. ಸಿನಿಮಾದ ಸಾಕಷ್ಟು ದೃಶ್ಯಗಳು ಅಪ್ಪು ಅವರನ್ನು ನೆನಪಿಸುತ್ತವೆ’ ಎಂದು ಅಪ್ಪು ಅವರನ್ನು ನೆನಪಿಸಿಕೊಂಡಿದ್ದಾರೆ.

ಕೊವಿಡ್​ ನಂತರದ ಪರಿಸ್ಥಿತಿಯಲ್ಲಿ ಓಟಿಟಿಗಳ ಕಡೆಗೆ ಜನರ ಆಸಕ್ತಿ ಹೆಚ್ಚಿದೆ. ಈಗ ಶಿವರಾಜ್​ಕುಮಾರ್ ನಟನೆಯ ‘ಭಜರಂಗಿ 2’ ಸಿನಿಮಾ ಕೂಡ ಓಟಿಟಿ ಪ್ಲಾಟ್​ಫಾರ್ಮ್​ನಲ್ಲಿ ವೀಕ್ಷಣೆಗೆ ಲಭ್ಯವಾಗುತ್ತಿದೆ. ಎ. ಹರ್ಷ ನಿರ್ದೇಶನದ ಈ ಸಿನಿಮಾ ಬಿಗ್​ ಬಜೆಟ್​ನಲ್ಲಿ ಮೂಡಿಬಂದಿದೆ. ಅ.29ರಂದು ಅದ್ದೂರಿಯಾಗಿ ಚಿತ್ರಮಂದಿರಗಳಲ್ಲಿ ‘ಭಜರಂಗಿ 2’ ಬಿಡುಗಡೆ ಆಗಿತ್ತು. ಥಿಯೇಟರ್​ನಲ್ಲಿ ಈ ಚಿತ್ರವನ್ನು ಮಿಸ್​ ಮಾಡಿಕೊಂಡವರು ‘ಜೀ 5’ (Zee5, ) ಮೂಲಕ ಮನೆಯಲ್ಲೇ ಕುಳಿತು ನೋಡಬಹುದು.

ಓಟಿಟಿ ಮೂಲಕ ಸಿನಿಮಾ ವೀಕ್ಷಿಸುವವರ ಸಂಖ್ಯೆ ಹೆಚ್ಚಿದೆ. ಅಂಥವರಿಗಾಗಿ ಶಿವರಾಜ್​ಕುಮಾರ್​ ನಟನೆಯ ‘ಭಜರಂಗಿ 2’ ಚಿತ್ರ ಭರ್ಜರಿ ಮನರಂಜನೆ ನೀಡಲಿದೆ. ಈ ಚಿತ್ರದಲ್ಲಿ ನಾಯಕಿಯಾಗಿ ಭಾವನಾ ಮೆನನ್​ ಅಭಿನಯಿಸಿದ್ದಾರೆ. ಭಜರಂಗಿ ಲೋಕಿ, ಶ್ರುತಿ, ಶಿವರಾಜ್​ ಕೆ.ಆರ್​. ಪೇಟೆ ಸೇರಿದಂತೆ ಅನೇಕ ಕಲಾವಿದರು ಬಣ್ಣ ಹಚ್ಚಿದ್ದಾರೆ. ಡಿ.23ರಿಂದ ‘ಜೀ 5’ ಆ್ಯಪ್​ ಮೂಲಕ ‘ಭಜರಂಗಿ 2’ ಚಿತ್ರ ಬಿತ್ತರ ಆಗಲಿದೆ. ಈ ಸಿನಿಮಾಗೆ ಖ್ಯಾತ ನಿರ್ಮಾಪಕರಾದ ಜಯಣ್ಣ-ಭೋಗೇಂದ್ರ ಬಂಡವಾಳ ಹೂಡಿದ್ದಾರೆ. ಅರ್ಜುನ್​ ಜನ್ಯ ಸಂಗೀತ ನಿರ್ದೇಶನ ಮಾಡಿದ್ದಾರೆ.

ಇದನ್ನೂ ಓದಿ: ಅಮೇಜಾನ್​ ಪ್ರೈಮ್​ನಲ್ಲಿ ಪಿಆರ್​ಕೆ ವಾರ; ಒಂದು ತಿಂಗಳಲ್ಲಿ ಅಪ್ಪು ನಿರ್ಮಾಣದ ಮೂರು ಹೊಸ ಸಿನಿಮಾ ರಿಲೀಸ್​?

 ಇನ್ನೂ ಬಾಕಿ ಇದೆ ಪುನೀತ್​ ಕನಸಿನ ‘ಗಂಧದ ಗುಡಿ’ ಶೂಟಿಂಗ್​; ಪೂರ್ಣಗೊಳಿಸೋರು ಯಾರು?

Published On - 2:12 pm, Tue, 21 December 21

ಹುಬ್ಬಳ್ಳಿಯಲ್ಲಿ ವೇಶ್ಯಾವಾಟಿಕೆ ಜಾಲ: ಟಾಯ್ಲೆಟ್ ರೂಮ್​​ನಲ್ಲಿ ಸುರಂಗ ಮಾರ್ಗ
ಹುಬ್ಬಳ್ಳಿಯಲ್ಲಿ ವೇಶ್ಯಾವಾಟಿಕೆ ಜಾಲ: ಟಾಯ್ಲೆಟ್ ರೂಮ್​​ನಲ್ಲಿ ಸುರಂಗ ಮಾರ್ಗ
ನಾವು ಎಷ್ಟೇ ಬೆಳೆದರೂ ನಮ್ಮ ಕಾಲು ನೆಲದ ಮೇಲೆ ಇರಬೇಕು: ಹರ್ಷಿಕಾ ಪೂಣಚ್ಚ
ನಾವು ಎಷ್ಟೇ ಬೆಳೆದರೂ ನಮ್ಮ ಕಾಲು ನೆಲದ ಮೇಲೆ ಇರಬೇಕು: ಹರ್ಷಿಕಾ ಪೂಣಚ್ಚ
ಬೀಗರ ಗಲಾಟೆ: ಕಪಾಳಕ್ಕೆ ಬಾರಿಸಿದ ಶಾಸಕ ಪ್ರಭು ಚೌಹಾಣ್
ಬೀಗರ ಗಲಾಟೆ: ಕಪಾಳಕ್ಕೆ ಬಾರಿಸಿದ ಶಾಸಕ ಪ್ರಭು ಚೌಹಾಣ್
ಹೇಳದೇ ಒಬಿಸಿ ಸಮಿತಿಗೆ ನೇಮಕ: ಈ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು
ಹೇಳದೇ ಒಬಿಸಿ ಸಮಿತಿಗೆ ನೇಮಕ: ಈ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು
ತಮಿಳುನಾಡಿನ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ, ಓರ್ವ ಸಾವು, ನಾಲ್ವರಿಗೆ ಗಂಭೀರ
ತಮಿಳುನಾಡಿನ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ, ಓರ್ವ ಸಾವು, ನಾಲ್ವರಿಗೆ ಗಂಭೀರ
Video: ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ ಕಾರು ಚಲಾಯಿಸಿದ ವ್ಯಕ್ತಿ
Video: ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ ಕಾರು ಚಲಾಯಿಸಿದ ವ್ಯಕ್ತಿ
ಇಡೀ ಕುಟುಂಬವನ್ನು ಕಳೆದುಕೊಂಡು ಅನಾಥವಾದ 11ತಿಂಗಳ ಮಗು
ಇಡೀ ಕುಟುಂಬವನ್ನು ಕಳೆದುಕೊಂಡು ಅನಾಥವಾದ 11ತಿಂಗಳ ಮಗು
‘ಗೋಲಿ ಚಲ್ ಜಾವೇಗಿ’ ಹಾಡಿಗೆ ನೃತ್ಯ ಮಾಡುತ್ತಲೇ ಗುಂಡು ಹಾರಿಸಿದ ವ್ಯಕ್ತಿ
‘ಗೋಲಿ ಚಲ್ ಜಾವೇಗಿ’ ಹಾಡಿಗೆ ನೃತ್ಯ ಮಾಡುತ್ತಲೇ ಗುಂಡು ಹಾರಿಸಿದ ವ್ಯಕ್ತಿ
ರಶ್ಮಿಕಾ ಮಂದಣ್ಣ ತಪ್ಪು ಮಾತಾಡಿದ್ದಾರೆ, ಕ್ಷಮಿಸಿ ಬಿಡೋಣ: ನಟಿ ಹರ್ಷಿಕಾ
ರಶ್ಮಿಕಾ ಮಂದಣ್ಣ ತಪ್ಪು ಮಾತಾಡಿದ್ದಾರೆ, ಕ್ಷಮಿಸಿ ಬಿಡೋಣ: ನಟಿ ಹರ್ಷಿಕಾ
ಭೀಕರ ಅಪಘಾತ: ಡಿಕ್ಕಿ ರಭಸಕ್ಕೆ ಎರಡು ಪೀಸ್ ಆದ ಟೆಂಪೊ, EXCLUSIVE ದೃಶ್ಯ
ಭೀಕರ ಅಪಘಾತ: ಡಿಕ್ಕಿ ರಭಸಕ್ಕೆ ಎರಡು ಪೀಸ್ ಆದ ಟೆಂಪೊ, EXCLUSIVE ದೃಶ್ಯ