AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಭಜರಂಗಿ 2’ ಚಿತ್ರವನ್ನು ಪುನೀತ್​ ರಾಜ್​ಕುಮಾರ್​ಗೆ ಅರ್ಪಿಸಿದ ಶಿವರಾಜ್​ಕುಮಾರ್​

ಕೊವಿಡ್​ ನಂತರದ ಪರಿಸ್ಥಿತಿಯಲ್ಲಿ ಓಟಿಟಿಗಳ ಕಡೆಗೆ ಜನರ ಆಸಕ್ತಿ ಹೆಚ್ಚಿದೆ. ಈಗ ಶಿವರಾಜ್​ಕುಮಾರ್ ನಟನೆಯ ‘ಭಜರಂಗಿ 2’ ಸಿನಿಮಾ ಕೂಡ ಓಟಿಟಿ ಪ್ಲಾಟ್​ಫಾರ್ಮ್​ನಲ್ಲಿ ವೀಕ್ಷಣೆಗೆ ಲಭ್ಯವಾಗುತ್ತಿದೆ.

‘ಭಜರಂಗಿ 2’ ಚಿತ್ರವನ್ನು ಪುನೀತ್​ ರಾಜ್​ಕುಮಾರ್​ಗೆ ಅರ್ಪಿಸಿದ ಶಿವರಾಜ್​ಕುಮಾರ್​
ಶಿವಣ್ಣ-ಪುನೀತ್
TV9 Web
| Edited By: |

Updated on:Dec 21, 2021 | 3:23 PM

Share

ನಟ ಶಿವರಾಜ್​ಕುಮಾರ್​ ಮತ್ತು ನಿರ್ದೇಶಕ ಹರ್ಷ ಕಾಂಬಿನೇಷನ್​ನಲ್ಲಿ ಮೂಡಿ ಬಂದ ‘ಭಜರಂಗಿ 2’ ಸಿನಿಮಾ ಮೆಚ್ಚುಗೆ ಪಡೆದುಕೊಂಡಿತ್ತು. ಫ್ಯಾಮಿಲಿ ಆಡಿಯನ್ಸ್​ಗೆ ಈ ಸಿನಿಮಾ ಇಷ್ಟವಾಗಿತ್ತು. ಈಗ ಈ ಸಿನಿಮಾ ಒಟಿಟಿಯಲ್ಲಿ ರಿಲೀಸ್​ ಆಗುತ್ತಿದೆ. ಈ ಚಿತ್ರವನ್ನು ಶಿವರಾಜ್​ಕುಮಾರ್​ ಅವರು ಪುನೀತ್​ಗೆ ಅರ್ಪಿಸಿದ್ದಾರೆ. ಈ ಬಗ್ಗೆ ವಿಡಿಯೋ ಮೂಲಕ ಮಾಹಿತಿ ನೀಡಿದ್ದಾರೆ. ಈ ವಿಚಾರ ಕೇಳಿ ಅಭಿಮಾನಿಗಳು ಖುಷಿಯಾಗಿದ್ದಾರೆ.

ಈ ಬಗ್ಗೆ ವಿಡಿಯೋ ಹಂಚಿಕೊಂಡಿರುವ ಶಿವರಾಜ್​ಕುಮಾರ್​, ‘ನನ್ನ ನಟನೆಯ ‘ಭಜರಂಗಿ 2’ ಸಿನಿಮಾ ಜೀ5ನಲ್ಲಿ ರಿಲೀಸ್​ ಆಗುತ್ತಿದೆ. ನಾನು ಹಾಗೂ ನನ್ನ ತಂಡ ಈ ಸಿನಿಮಾವನ್ನು ಅಪ್ಪುಗೆ ಡೆಡಿಕೇಟ್​ ಮಾಡುತ್ತೇವೆ. ಇದು ಅಪ್ಪು ಎಡಿಟಿಂಗ್​ ರೂಮ್​​ನಲ್ಲೇ ಎಡಿಟ್​ ಮಾಡಿದ ಚಿತ್ರ. ಸಾಕಷ್ಟು ಬಾರಿ ಅವನು ಸಿನಿಮಾದ ದೃಶ್ಯ ನೋಡಿ ಮೆಚ್ಚುಗೆಯ ಮಾತನಾಡಿದ್ದ. ಪ್ರೀ ರಿಲೀಸಿಂಗ್​ ಇವೆಂಟ್​ಗೂ ಅಪ್ಪು ಬಂದು ಬೆಂಬಲಿಸಿದ್ದರು. ಡ್ಯಾನ್ಸ್​ ಮಾಡಿದ್ದರು. ರಿಲೀಸ್​ ಆದ ದಿನವೂ ಬೆಳಗ್ಗೆ ಟ್ವೀಟ್​ ಮಾಡಿ ಶುಭಕೋರಿದ್ದರು. ಸಿನಿಮಾದ ಸಾಕಷ್ಟು ದೃಶ್ಯಗಳು ಅಪ್ಪು ಅವರನ್ನು ನೆನಪಿಸುತ್ತವೆ’ ಎಂದು ಅಪ್ಪು ಅವರನ್ನು ನೆನಪಿಸಿಕೊಂಡಿದ್ದಾರೆ.

ಕೊವಿಡ್​ ನಂತರದ ಪರಿಸ್ಥಿತಿಯಲ್ಲಿ ಓಟಿಟಿಗಳ ಕಡೆಗೆ ಜನರ ಆಸಕ್ತಿ ಹೆಚ್ಚಿದೆ. ಈಗ ಶಿವರಾಜ್​ಕುಮಾರ್ ನಟನೆಯ ‘ಭಜರಂಗಿ 2’ ಸಿನಿಮಾ ಕೂಡ ಓಟಿಟಿ ಪ್ಲಾಟ್​ಫಾರ್ಮ್​ನಲ್ಲಿ ವೀಕ್ಷಣೆಗೆ ಲಭ್ಯವಾಗುತ್ತಿದೆ. ಎ. ಹರ್ಷ ನಿರ್ದೇಶನದ ಈ ಸಿನಿಮಾ ಬಿಗ್​ ಬಜೆಟ್​ನಲ್ಲಿ ಮೂಡಿಬಂದಿದೆ. ಅ.29ರಂದು ಅದ್ದೂರಿಯಾಗಿ ಚಿತ್ರಮಂದಿರಗಳಲ್ಲಿ ‘ಭಜರಂಗಿ 2’ ಬಿಡುಗಡೆ ಆಗಿತ್ತು. ಥಿಯೇಟರ್​ನಲ್ಲಿ ಈ ಚಿತ್ರವನ್ನು ಮಿಸ್​ ಮಾಡಿಕೊಂಡವರು ‘ಜೀ 5’ (Zee5, ) ಮೂಲಕ ಮನೆಯಲ್ಲೇ ಕುಳಿತು ನೋಡಬಹುದು.

ಓಟಿಟಿ ಮೂಲಕ ಸಿನಿಮಾ ವೀಕ್ಷಿಸುವವರ ಸಂಖ್ಯೆ ಹೆಚ್ಚಿದೆ. ಅಂಥವರಿಗಾಗಿ ಶಿವರಾಜ್​ಕುಮಾರ್​ ನಟನೆಯ ‘ಭಜರಂಗಿ 2’ ಚಿತ್ರ ಭರ್ಜರಿ ಮನರಂಜನೆ ನೀಡಲಿದೆ. ಈ ಚಿತ್ರದಲ್ಲಿ ನಾಯಕಿಯಾಗಿ ಭಾವನಾ ಮೆನನ್​ ಅಭಿನಯಿಸಿದ್ದಾರೆ. ಭಜರಂಗಿ ಲೋಕಿ, ಶ್ರುತಿ, ಶಿವರಾಜ್​ ಕೆ.ಆರ್​. ಪೇಟೆ ಸೇರಿದಂತೆ ಅನೇಕ ಕಲಾವಿದರು ಬಣ್ಣ ಹಚ್ಚಿದ್ದಾರೆ. ಡಿ.23ರಿಂದ ‘ಜೀ 5’ ಆ್ಯಪ್​ ಮೂಲಕ ‘ಭಜರಂಗಿ 2’ ಚಿತ್ರ ಬಿತ್ತರ ಆಗಲಿದೆ. ಈ ಸಿನಿಮಾಗೆ ಖ್ಯಾತ ನಿರ್ಮಾಪಕರಾದ ಜಯಣ್ಣ-ಭೋಗೇಂದ್ರ ಬಂಡವಾಳ ಹೂಡಿದ್ದಾರೆ. ಅರ್ಜುನ್​ ಜನ್ಯ ಸಂಗೀತ ನಿರ್ದೇಶನ ಮಾಡಿದ್ದಾರೆ.

ಇದನ್ನೂ ಓದಿ: ಅಮೇಜಾನ್​ ಪ್ರೈಮ್​ನಲ್ಲಿ ಪಿಆರ್​ಕೆ ವಾರ; ಒಂದು ತಿಂಗಳಲ್ಲಿ ಅಪ್ಪು ನಿರ್ಮಾಣದ ಮೂರು ಹೊಸ ಸಿನಿಮಾ ರಿಲೀಸ್​?

 ಇನ್ನೂ ಬಾಕಿ ಇದೆ ಪುನೀತ್​ ಕನಸಿನ ‘ಗಂಧದ ಗುಡಿ’ ಶೂಟಿಂಗ್​; ಪೂರ್ಣಗೊಳಿಸೋರು ಯಾರು?

Published On - 2:12 pm, Tue, 21 December 21

Follow Us
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!