AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘45’ ಸಿನಿಮಾ ಒಟಿಟಿ ರಿಲೀಸ್: ಜೀ5 ಮೂಲಕ ಜನವರಿ 23ರಿಂದ ಪ್ರಸಾರ ಶುರು

ಜನವರಿ 23ರಿಂದ ಜೀ5 ಒಟಿಟಿ ಮೂಲಕ ‘45’ ಸಿನಿಮಾ ಪ್ರಸಾರ ಆಗಲಿದೆ. ಶಿವರಾಜ್​​ಕುಮಾರ್, ರಾಜ್ ಬಿ. ಶೆಟ್ಟಿ, ಉಪೇಂದ್ರ ಅವರು ಈ ಚಿತ್ರದಲ್ಲಿ ಪ್ರಮುಖ ಪಾತ್ರಗಳನ್ನು ಮಾಡಿದ್ದಾರೆ. ಅರ್ಜುನ್ ಜನ್ಯ ನಿರ್ದೇಶನದ ಈ ಸಿನಿಮಾಗೆ ಎಂ. ರಮೇಶ್ ರೆಡ್ಡಿ ಅವರು ಬಂಡವಾಳ ಹೂಡಿದ್ದಾರೆ.

‘45’ ಸಿನಿಮಾ ಒಟಿಟಿ ರಿಲೀಸ್: ಜೀ5 ಮೂಲಕ ಜನವರಿ 23ರಿಂದ ಪ್ರಸಾರ ಶುರು
45 Movie Poster
ಮದನ್​ ಕುಮಾರ್​
|

Updated on: Jan 15, 2026 | 8:26 PM

Share

ವಿಶೇಷ ಕಥಾಹಂದರ ಇರುವ ‘45’ ಸಿನಿಮಾದಲ್ಲಿ ಶಿವರಾಜ್​​ಕುಮಾರ್, ರಾಜ್ ಬಿ. ಶೆಟ್ಟಿ, ಉಪೇಂದ್ರ ಮುಂತಾದವರು ನಟಿಸಿದ್ದಾರೆ. ಅವರ ಅಭಿಮಾನಿಗಳು ಈ ಸಿನಿಮಾವನ್ನು ಚಿತ್ರಮಂದಿರದಲ್ಲಿ ನೋಡಿದ್ದಾರೆ. ಈಗ ಈ ಚಿತ್ರ ಒಟಿಟಿಗೆ ಕಾಲಿಡುತ್ತಿದೆ. ಜನವರಿ 23ರಿಂದ ‘ಜೀ5’ ಒಟಿಟಿ (Zee5 OTT) ಮೂಲಕ ಪ್ರಸಾರ ಆಗಲಿದೆ. ಚಿತ್ರಮಂದಿರಗಳಲ್ಲಿ ‘45’ ಸಿನಿಮಾವನ್ನು (45 Movie) ಮಿಸ್ ಮಾಡಿಕೊಂಡವರು ಮನೆಯಲ್ಲೇ ಕುಳಿತು ನೋಡಬಹುದು. ಬೇರೆ ಬೇರೆ ಭಾಷೆಗಳಿಗೂ ಈ ಸಿನಿಮಾ ಡಬ್ ಆಗಿದೆ. ಅರ್ಜುನ್ ಜನ್ಯ ಅವರು ‘45’ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ.

ಅನೌನ್ಸ್ ಆದಾಗಿನಿಂದ ಬಿಡುಗಡೆ ತನಕ ‘45’ ಸಿನಿಮಾ ಒಂದಿಲ್ಲಾ ಒಂದು ಕಾರಣಕ್ಕೆ ಸುದ್ದಿ ಆಗುತ್ತಿತ್ತು. ವಿಭಿನ್ನವಾದ ಕಥೆ ಇದೆ ಎಂಬ ಕಾರಣದಿಂದ ಫ್ಯಾನ್ಸ್ ಈ ಸಿನಿಮಾ ನೋಡಿ ಎಂಜಾಯ್ ಮಾಡಿದರು. ಸಾಮಾನ್ಯ ಮನುಷ್ಯನ ಜೀವನದಲ್ಲಿ ಕೆಲವು ಸವಾಲುಗಳು ಎದುರಾದಾಗ ಏನಾಗುತ್ತದೆ? ನಂಬಿಕೆ ಹಾಗೂ ಭಯದ ನಡುವಿನ ಘರ್ಷಣೆ, ಸತ್ಯ ಹಾಗೂ ಮಿಥ್ಯ, ಒಳ್ಳೆಯದು ಹಾಗೂ ಕೆಟ್ಟದರ ನಡುವಿನ ಯುದ್ಧವನ್ನು ಈ ಸಿನಿಮಾದಲ್ಲಿ ತೋರಿಸಲಾಗಿದೆ.

ಉಪೇಂದ್ರ, ಶಿವರಾಜ್​ಕುಮಾರ್, ರಾಜ್ ಬಿ.‌ ಶೆಟ್ಟಿ ಜೊತೆಗೆ ಕೌಸ್ತುಭ ಮಣಿ, ಜಿಶು ಸೇನ್ ಗುಪ್ತಾ ಮುಂತಾದವರ ಕೂಡ ‘45’ ಸಿನಿಮಾದಲ್ಲಿ ನಟಿಸಿದ್ದಾರೆ. ಮ್ಯೂಸಿಕ್ ಡೈರೆಕ್ಟರ್ ಅರ್ಜುನ್ ಜನ್ಯ ಅವರು ನಿರ್ದೇಶನ ಮಾಡಿದ ಮೊದಲ ಸಿನಿಮಾ ಇದು ಎಂಬುದು ವಿಶೇಷ. ಎಂ. ರಮೇಶ್ ರೆಡ್ಡಿ ಅವರು ‘ಸೂರಜ್ ಪ್ರೊಡಕ್ಷನ್ಸ್’ ಮೂಲಕ ಈ ಸಿನಿಮಾವನ್ನು ನಿರ್ಮಿಸಿದ್ದಾರೆ.

ಜೀ5ನಲ್ಲಿ ‘45’ ಸಿನಿಮಾ ಬರುತ್ತಿರುವುದರ ಬಗ್ಗೆ ಶಿವರಾಜ್​ಕುಮಾರ್ ಮಾತಾಡಿದ್ದಾರೆ. ‘ಜೀವನದಲ್ಲಿ ನಾವು ಮಾಡುವ ಆಯ್ಕಗಳು, ನಿರ್ಧಾರಗಳು ಮತ್ತು ಅದರೊಂದಿಗೆ ಬರುವ‌ ಜವಾಬ್ದಾರಿಗಳನ್ನು ಒಟ್ಟಾಗಿ ಹೇಳುವುದಾದರೆ ನಮ್ಮ ಜೀವನವನ್ನು ಬಿಂಬಿಸುವ ಕಥೆ ಇದಾಗಿದೆ. ಜೀ5 ಜೊತೆ ನನ್ನ ಒಡನಾಟ ವಿಶೇಷವಾದದ್ದು. ಹೊಸ ಕಥೆಗಳಿಗೆ ಉತ್ತೇಜನ ನೀಡುವ ಈ ಡಿಜಿಟಲ್ ವೇದಿಕೆಯಲ್ಲಿ ನಮ್ಮ ಸಿನಿಮಾ ಪ್ರಸಾರ ಆಗುತ್ತಿರುವುದು ಸಂತೋಷ ತಂದಿದೆ’ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ‘45’ ಚಿತ್ರದ ಬಗ್ಗೆ ಅಪಪ್ರಚಾರ ಮಾಡುವವರಿಗೆ ಕಾನೂನು ಕ್ರಮದ ಎಚ್ಚರಿಕೆ

ನಟ ಉಪೇಂದ್ರ ಕೂಡ ಈ ಬಗ್ಗೆ ಹೇಳಿದ್ದಾರೆ. ‘ಈ ಚಿತ್ರವು ತಾತ್ವಿಕ ಮತ್ತು ಧಾರ್ಮಿಕ ಮೌಲ್ಯಗಳನ್ನು ಮನರಂಜನಾತ್ಮಕವಾಗಿ ತೋರಿಸುತ್ತದೆ. ಹೊಸ ರೀತಿಯ ಕಥೆಗಳನ್ನು ಪ್ರೋತ್ಸಾಹಿಸುವ ಜೀ5 ಒಟಿಟಿ ಈ ಸಿನಿಮಾ ಪ್ರಸಾರ ಮಾಡುತ್ತಿರುವುದು ಸಂತಸದ ಸಂಗತಿ. ಈ ಸಿನಿಮಾ ಬರೀ ಮನರಂಜನೆ ಮಾತ್ರವಲ್ಲದೇ ಮೌಲ್ಯಗಳನ್ನು ತಿಳಿಸಿಕೊಡುತ್ತದೆ’ ಎಂದಿದ್ದಾರೆ ಉಪೇಂದ್ರ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ
ಶ್ರೀರಂಗಪಟ್ಟಣದ ಚಾಮುಂಡೇಶ್ವರಿಗೆ 3 ಲಕ್ಷ ರೂಪಾಯಿ ನೋಟುಗಳ ವಿಶೇಷ ಅಲಂಕಾರ
ಶ್ರೀರಂಗಪಟ್ಟಣದ ಚಾಮುಂಡೇಶ್ವರಿಗೆ 3 ಲಕ್ಷ ರೂಪಾಯಿ ನೋಟುಗಳ ವಿಶೇಷ ಅಲಂಕಾರ
ಹುಬ್ಬಳ್ಳಿ ಲಕ್ಷ್ಮೀ ದೇವಸ್ಥಾನದಲ್ಲಿ ಭಕ್ತರ ದಂಡು, ವಿಶೇಷ ಅಲಂಕಾರ
ಹುಬ್ಬಳ್ಳಿ ಲಕ್ಷ್ಮೀ ದೇವಸ್ಥಾನದಲ್ಲಿ ಭಕ್ತರ ದಂಡು, ವಿಶೇಷ ಅಲಂಕಾರ
ಶೇಷಾದ್ರಿಪುರಂ ಮಹಾಲಕ್ಷ್ಮೀ ದೇವಾಲಯದಲ್ಲಿ ಸಡಗರದ ಪೂಜೆ
ಶೇಷಾದ್ರಿಪುರಂ ಮಹಾಲಕ್ಷ್ಮೀ ದೇವಾಲಯದಲ್ಲಿ ಸಡಗರದ ಪೂಜೆ
ಗೊರವನಹಳ್ಳಿ ಮಹಾಲಕ್ಷ್ಮೀ ದೇವಾಲಯದಲ್ಲಿ ವರಮಹಾಲಕ್ಷ್ಮೀ ಹಬ್ಬದ ಸಂಭ್ರಮ
ಗೊರವನಹಳ್ಳಿ ಮಹಾಲಕ್ಷ್ಮೀ ದೇವಾಲಯದಲ್ಲಿ ವರಮಹಾಲಕ್ಷ್ಮೀ ಹಬ್ಬದ ಸಂಭ್ರಮ