AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಓಟಿಟಿಯಲ್ಲಿ ನೋಡಬಹುದು ‘ಭಜರಂಗಿ 2’ ಸಿನಿಮಾ; ಶಿವರಾಜ್​ಕುಮಾರ್​ ಅಭಿಮಾನಿಗಳಿಗೆ ಗುಡ್​ ನ್ಯೂಸ್​

Bhajarangi 2 on Zee5: ಡಿ.23ರಿಂದ ‘ಜೀ 5’ ಆ್ಯಪ್​ ಮೂಲಕ ‘ಭಜರಂಗಿ 2’ ಚಿತ್ರ ಬಿತ್ತರ ಆಗಲಿದೆ. ಈ ಸಿನಿಮಾದಲ್ಲಿ ಶಿವರಾಜ್​ಕುಮಾರ್​ ಮತ್ತು ಭಾವನಾ ಮೆನನ್​ ಜೋಡಿಯಾಗಿ ನಟಿಸಿದ್ದಾರೆ.

ಓಟಿಟಿಯಲ್ಲಿ ನೋಡಬಹುದು ‘ಭಜರಂಗಿ 2’ ಸಿನಿಮಾ; ಶಿವರಾಜ್​ಕುಮಾರ್​ ಅಭಿಮಾನಿಗಳಿಗೆ ಗುಡ್​ ನ್ಯೂಸ್​
ಶಿವರಾಜ್​ಕುಮಾರ್
TV9 Web
| Edited By: |

Updated on: Dec 18, 2021 | 3:55 PM

Share

ಸಿನಿಮಾಗಳನ್ನು ವೀಕ್ಷಿಸಲು ಈಗ ಚಿತ್ರಮಂದಿರ ಅಥವಾ ಟಿವಿ ಮಾತ್ರವೇ ವೇದಿಕೆಯಾಗಿ ಉಳಿದಿಲ್ಲ. ಓಟಿಟಿ ಪ್ಲಾಟ್​ಫಾರ್ಮ್​ (OTT platform) ಕೂಡ ಪ್ರಬಲವಾಗಿದೆ. ಅನೇಕ ಸ್ಟಾರ್​ ನಟರ ಸಿನಿಮಾಗಳನ್ನು ಪ್ರೇಕ್ಷಕರು ಓಟಿಟಿಯಲ್ಲಿ ನೋಡಿ ಆನಂದಿಸುತ್ತಿದ್ದಾರೆ. ಕೊವಿಡ್​ ನಂತರದ ಪರಿಸ್ಥಿತಿಯಲ್ಲಿ ಓಟಿಟಿಗಳ ಕಡೆಗೆ ಜನರ ಆಸಕ್ತಿ ಹೆಚ್ಚಿದೆ. ಈಗ ಶಿವರಾಜ್​ಕುಮಾರ್ (Shivarajkumar)​ ನಟನೆಯ ‘ಭಜರಂಗಿ 2’ ಸಿನಿಮಾ (Bhajarangi 2) ಕೂಡ ಓಟಿಟಿ ಪ್ಲಾಟ್​ಫಾರ್ಮ್​ನಲ್ಲಿ ವೀಕ್ಷಣೆಗೆ ಲಭ್ಯವಾಗುತ್ತಿದೆ. ಎ. ಹರ್ಷ ನಿರ್ದೇಶನದ ಈ ಸಿನಿಮಾ ಬಿಗ್​ ಬಜೆಟ್​ನಲ್ಲಿ ಮೂಡಿಬಂದಿದೆ. ಅ.29ರಂದು ಅದ್ದೂರಿಯಾಗಿ ಚಿತ್ರಮಂದಿರಗಳಲ್ಲಿ ‘ಭಜರಂಗಿ 2’ ಬಿಡುಗಡೆ ಆಗಿತ್ತು. ಥಿಯೇಟರ್​ನಲ್ಲಿ ಈ ಚಿತ್ರವನ್ನು ಮಿಸ್​ ಮಾಡಿಕೊಂಡವರು ‘ಜೀ 5’ (Zee5, ) ಮೂಲಕ ಮನೆಯಲ್ಲೇ ಕುಳಿತು ನೋಡಬಹುದು.

ಓಟಿಟಿ ಮೂಲಕ ಸಿನಿಮಾ ವೀಕ್ಷಿಸುವವರ ಸಂಖ್ಯೆ ಹೆಚ್ಚಿದೆ. ಅಂಥವರಿಗಾಗಿ ಶಿವರಾಜ್​ಕುಮಾರ್​ ನಟನೆಯ ‘ಭಜರಂಗಿ 2’ ಚಿತ್ರ ಭರ್ಜರಿ ಮನರಂಜನೆ ನೀಡಲಿದೆ. ಈ ಚಿತ್ರದಲ್ಲಿ ನಾಯಕಿಯಾಗಿ ಭಾವನಾ ಮೆನನ್​ ಅಭಿನಯಿಸಿದ್ದಾರೆ. ಭಜರಂಗಿ ಲೋಕಿ, ಶ್ರುತಿ, ಶಿವರಾಜ್​ ಕೆ.ಆರ್​. ಪೇಟೆ ಸೇರಿದಂತೆ ಅನೇಕ ಕಲಾವಿದರು ಬಣ್ಣ ಹಚ್ಚಿದ್ದಾರೆ. ಡಿ.23ರಿಂದ ‘ಜೀ 5’ ಆ್ಯಪ್​ ಮೂಲಕ ‘ಭಜರಂಗಿ 2’ ಚಿತ್ರ ಬಿತ್ತರ ಆಗಲಿದೆ. ಈ ಸಿನಿಮಾಗೆ ಖ್ಯಾತ ನಿರ್ಮಾಪಕರಾದ ಜಯಣ್ಣ-ಭೋಗೇಂದ್ರ ಬಂಡವಾಳ ಹೂಡಿದ್ದಾರೆ. ಅರ್ಜುನ್​ ಜನ್ಯ ಸಂಗೀತ ನಿರ್ದೇಶನ ಮಾಡಿದ್ದಾರೆ.

ಪುನೀತ್​ ನಿಧನದ ದಿನವೇ ರಿಲೀಸ್​ ಆಗಿದ್ದ ಚಿತ್ರ:

ಅ.29ರಂದು ಅದ್ದೂರಿಯಾಗಿ ‘ಭಜರಂಗಿ 2’ ಸಿನಿಮಾ ರಾಜ್ಯಾದ್ಯಂತ ಬಿಡುಗಡೆ ಆಗಿತ್ತು. ಮುಂಜಾನೆ ಅನೇಕ ಕಡೆಗಳಲ್ಲಿ ಶೋ ಆರಂಭವಾಗಿತ್ತು. ಎಲ್ಲೆಡೆ ಹೌಸ್​ಫುಲ್​ ಪ್ರದರ್ಶನವಾಗಿ, ಚಿತ್ರಕ್ಕೆ ಒಳ್ಳೆಯ ರೆಸ್ಪಾನ್ಸ್​ ಸಿಗುತ್ತಿರುವುದು ನೋಡಿ ಇಡೀ ತಂಡಕ್ಕೆ ಖುಷಿ ಆಗಿತ್ತು. ಕೆಲವು ಚಿತ್ರಮಂದಿರಗಳಿಗೆ ಶಿವಣ್ಣ ಭೇಟಿ ನೀಡಿದ್ದರು. ಅದಾಗಿ ಕೆಲವೇ ಗಂಟೆಗಳು ಕಳೆಯುವುದರೊಳಗೆ ಕನ್ನಡ ಚಿತ್ರರಂಗದ ಪಾಲಿಗೆ ಕಹಿ ಸುದ್ದಿಯೊಂದು ಸಿಡಿಲಿನಂತೆ ಬಂದೆರಗಿತ್ತು. ಪುನೀತ್​ ರಾಜ್​ಕುಮಾರ್​ ಹೃದಯಾಘಾತದಿಂದ ನಿಧನರಾದರು ಎಂಬ ಸುದ್ದಿ ಕೇಳಿ ಎಲ್ಲವೂ ಸ್ತಬ್ದವಾದಂತಾಗಿತ್ತು. ಆ ಘಟನೆ ಬಳಿಕ ಚಿತ್ರಮಂದಿರದ ಕಡೆಗೆ ಬರಲು ಬಹುತೇಕರು ಹಿಂದೇಟು ಹಾಕಿದ್ದರು.

ಜೀ5ನಲ್ಲಿ ಲಭ್ಯವಿದೆ ‘ಕನ್ನಡಿಗ’ ಸಿನಿಮಾ

ರವಿಚಂದ್ರನ್ ನಟನೆಯ ‘ಕನ್ನಡಿಗ’ ಸಿನಿಮಾ ಕೂಡ ಓಟಿಟಿ ಮೂಲಕ ಬಿಡುಗಡೆ ಆಗಿದೆ. ‘ಜಟ್ಟ’, ‘ಮೈತ್ರಿ’ ಸಿನಿಮಾಗಳ ಮೂಲಕ ಖ್ಯಾತಿ ಪಡೆದ ಗಿರಿರಾಜ್​ ಅವರು ನಿರ್ದೇಶನ ಮಾಡಿರುವ ಈ ಸಿನಿಮಾ ಡಿ.17ರಿಂದ ಜೀ5 ಮೂಲಕ ವೀಕ್ಷಣೆಗೆ ಲಭ್ಯ ಆಗಿದೆ.

ಇದನ್ನೂ ಓದಿ:

ಆರ್​ಆರ್​ಆರ್​ ಚಿತ್ರ ಓಟಿಟಿಯಲ್ಲಿ ಬರೋದು ಯಾವಾಗ? ಕಾತರದ ಪ್ರಶ್ನೆಗೆ ಸಿಕ್ತು ಉತ್ತರ

ಕನ್ನಡ ಧ್ವಜ ಸುಟ್ಟವರ ವಿರುದ್ಧ ಶಿವಣ್ಣ, ಜಗ್ಗೇಶ್​ ಆಕ್ರೋಶ; ಕಿಡಿಗೇಡಿಗಳ ಕೃತ್ಯಕ್ಕೆ ಸ್ಯಾಂಡಲ್​ವುಡ್​ ಖಂಡನೆ

Follow Us
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ವಿಚಾರಣೆಗೆ ಬಂದಿದ್ದ ಮಲ್ಲಿಕಾರ್ಜುನ ಮುತ್ಯಾಗೆ ಶಾಕ್ ಕೊಟ್ಟ ಪೊಲೀಸ್ರು
ವಿಚಾರಣೆಗೆ ಬಂದಿದ್ದ ಮಲ್ಲಿಕಾರ್ಜುನ ಮುತ್ಯಾಗೆ ಶಾಕ್ ಕೊಟ್ಟ ಪೊಲೀಸ್ರು
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!