AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಟಿಟಿಗೆ ಬಂತು ಶಿವಣ್ಣ ನಟನೆಯ ‘ಘೋಸ್ಟ್’; 10,000 ಅಡಿ ಪೋಸ್ಟರ್ ಲಾಂಚ್  

ಕೊವಿಡ್ ಕಾಣಿಸಿಕೊಂಡ ಬಳಿಕ ಒಟಿಟಿ ವ್ಯಾಪ್ತಿ ಹಿರಿದಾಗಿದೆ. ಹಲವು ಪ್ಲಾಟ್​ಫಾರ್ಮ್​ಗಳು ಈ ರೇಸ್​ನಲ್ಲಿ ಮುಂದಿವೆ. ಜೀ5ನಲ್ಲಿ ಹಲವು ಕನ್ನಡ ಸಿನಿಮಾಗಳು ರಿಲೀಸ್ ಆಗುತ್ತಿವೆ. ಶಿವರಾಜ್​ಕುಮಾರ್ ನಟನೆಯ ‘ಘೋಸ್ಟ್’ ಸಿನಿಮಾ ಕೂಡ ಒಟಿಟಿಯಲ್ಲಿ ರಿಲೀಸ್ ಆಗಿ ಮೆಚ್ಚುಗೆ ಪಡೆಯುತ್ತಿದೆ.

ಒಟಿಟಿಗೆ ಬಂತು ಶಿವಣ್ಣ ನಟನೆಯ ‘ಘೋಸ್ಟ್’; 10,000 ಅಡಿ ಪೋಸ್ಟರ್ ಲಾಂಚ್  
ಘೋಸ್ಟ್​ ಪೋಸ್ಟರ್
ರಾಜೇಶ್ ದುಗ್ಗುಮನೆ
|

Updated on: Nov 18, 2023 | 2:43 PM

Share

ಶಿವರಾಜ್​ಕುಮಾರ್ (Shivarajkumar) ನಟನೆಯ, ಶ್ರೀನಿ ನಿರ್ದೇಶನದ ‘ಘೋಸ್ಟ್’ ಸಿನಿಮಾ ದಸರಾ ಪ್ರಯುಕ್ತ ನವೆಂಬರ್ ಅಕ್ಟೋಬರ್ 12ರಂದು ಥಿಯೇಟರ್​ನಲ್ಲಿ ರಿಲೀಸ್ ಮಾಡಲಾಯಿತು. ಈ ಸಿನಿಮಾ ಥಿಯೇಟರ್​ನಲ್ಲಿ ಭರ್ಜರಿ ಸದ್ದು ಮಾಡಿತು. ಈ ಸಿನಿಮಾ ಈಗ ಒಟಿಟಿಗೆ ಕಾಲಿಟ್ಟಿದೆ. ನವೆಂಬರ್ 17ರಂದು ಜೀ5ನಲ್ಲಿ ಬಿಡುಗಡೆ ಆಗಿದೆ. ಇದಕ್ಕಾಗಿ ಜೀ5 ಕಡೆಯಿಂದ ಹೊಸ ಪ್ರಯತ್ನ ಮಾಡಲಾಗಿದೆ. ಬರೋಬ್ಬರಿ 10 ಸಾವಿರ ಅಡಿಯ ‘ಘೋಸ್ಟ್’ ಪೋಸ್ಟರ್​ ಬಿಡುಗಡೆ ಮಾಡಲಾಗಿದೆ.

ಕೊವಿಡ್ ಕಾಣಿಸಿಕೊಂಡ ಬಳಿಕ ಒಟಿಟಿ ವ್ಯಾಪ್ತಿ ಹಿರಿದಾಗಿದೆ. ಹಲವು ಪ್ಲಾಟ್​ಫಾರ್ಮ್​ಗಳು ಈ ರೇಸ್​ನಲ್ಲಿ ಮುಂದಿವೆ. ಜೀ5ನಲ್ಲಿ ಹಲವು ಕನ್ನಡ ಸಿನಿಮಾಗಳು ರಿಲೀಸ್ ಆಗುತ್ತಿವೆ. ಶಿವರಾಜ್​ಕುಮಾರ್ ನಟನೆಯ ‘ಘೋಸ್ಟ್’ ಸಿನಿಮಾ ಕೂಡ ಒಟಿಟಿಯಲ್ಲಿ ರಿಲೀಸ್ ಆಗಿ ಮೆಚ್ಚುಗೆ ಪಡೆಯುತ್ತಿದೆ. ಈ ಸಿನಿಮಾದ ಪ್ರಚಾರಕ್ಕೆ ಇಷ್ಟು ದೊಡ್ಡ ಪೋಸ್ಟರ್ ಬಿಡುಗಡೆ ಮಾಡಲಾಗಿದೆ.

ಥಿಯೇಟರ್‌ಗಳಲ್ಲಿ ರಿಲೀಸ್ ಆಗುವ ಚಿತ್ರಗಳಿಗೆ ಬ್ಯಾನರ್, ಪೋಸ್ಟರ್ ಹಾಕುವುದು ಸಹಜ. ಆದರೆ, ಈ ಬಾರಿ ಒಟಿಟಿ ರಿಲೀಸ್‌ಗೆ ಪೋಸ್ಟರ್ ಹಾಕಿ ವಿಭಿನ್ನವಾಗಿ ಪ್ರಚಾರ ಮಾಡಲಾಗಿದೆ. ಬೆಂಗಳೂರಿನ ಜಯನಗರದ ಎಂಇಎಸ್ ಗ್ರೌಂಡ್​ನಲ್ಲಿ ಘೋಸ್ಟ್ ಸಿನಿಮಾದ  10,000 ಅಡಿ ಪೋಸ್ಟರ್ ಅನಾವರಣ ಮಾಡಲಾಗಿದೆ.

‘ಘೋಸ್ಟ್’ ಸಿನಿಮಾಗೆ ಶ್ರೀನಿ ನಿರ್ದೇಶನ ಇದೆ. ಹೊಸ ರೀತಿಯಲ್ಲಿ ಅವರು ಚಿತ್ರವನ್ನು ಪ್ರೇಕ್ಷಕರ ಎದುರು ತಂದಿಟ್ಟರು. ಥಿಯೇಟರ್​ನಲ್ಲಿ ಸಿನಿಮಾನ ಮಿಸ್ ಮಾಡಿಕೊಂಡವರು, ಥಿಯೇಟರ್​ನಲ್ಲಿ ಒಮ್ಮೆ ನೋಡಿ ಮತ್ತೊಮ್ಮೆ ವೀಕ್ಷಿಸಬೇಕು ಎಂದುಕೊಂಡವರು ‘ಘೋಸ್ಟ್’ ಚಿತ್ರವನ್ನು ಒಟಿಟಿಯಲ್ಲಿ ವೀಕ್ಷಿಸಬಹುದು.

ಇದನ್ನೂ ಓದಿ: ಅಂದುಕೊಂಡಷ್ಟು ಬೇಗ ಬರಲ್ಲ ಘೋಸ್ಟ್  ನಿರ್ದೇಶಕ ಶ್ರೀನಿ ಯೋಜನೆಗಳೇನು?

‘ಘೋಸ್ಟ್’ ಸಿನಿಮಾದಲ್ಲಿ ಶಿವರಾಜ್​ಕುಮಾರ್ ಎರಡು ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ಸಂದೇಶ್​ ಪ್ರೊಡಕ್ಷನ್ಸ್ ಬ್ಯಾನರ್‌ ಅಡಿಯಲ್ಲಿ ‘ಘೋಸ್ಟ್’ ಸಿನಿಮಾ ಸಿದ್ಧವಾಗಿದೆ. ಪ್ಯಾನ್ ಇಂಡಿಯಾ ಮಟ್ಟದಲ್ಲಿ ಈ ಚಿತ್ರದಲ್ಲಿ ಬಿಡುಗಡೆ ಆಗಿದೆ. ಅರ್ಜುನ್‌ ಜನ್ಯಾ ಸಂಗೀತ ಸಂಯೋಜನೆ ಇದೆ. ಜಯರಾಮ್‌, ಅನುಪಮ್‌ ಖೇರ್‌, ಅರ್ಚನಾ ಜೋಯಿಸ್‌, ಸತ್ಯಪ್ರಕಾಶ್‌ ಮೊದಲಾದವರು ನಟಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ
ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ
ಉತ್ತರ ಕರ್ನಾಟಕದಲ್ಲಿ ಮಳೆ ಕೊರತೆಯ ಪರಿಣಾಮ ಭೀಕರ: ಅನ್ನದಾತರು ಕಂಗಾಲು
ಉತ್ತರ ಕರ್ನಾಟಕದಲ್ಲಿ ಮಳೆ ಕೊರತೆಯ ಪರಿಣಾಮ ಭೀಕರ: ಅನ್ನದಾತರು ಕಂಗಾಲು
ಆಸ್ಪತ್ರೆಗೆ ಹೋಗಿ ಬರುವಷ್ಟರಲ್ಲಿ ಮನೆ ಎಲ್ಲ ದೋಚಿದ ಖದೀಮರು!
ಆಸ್ಪತ್ರೆಗೆ ಹೋಗಿ ಬರುವಷ್ಟರಲ್ಲಿ ಮನೆ ಎಲ್ಲ ದೋಚಿದ ಖದೀಮರು!