ಬಿಗ್ ಬಾಸ್​ ಸಿನಿಮಾದಲ್ಲಿ ಸೋಮಣ್ಣ ಹೀರೋ, ಸೋನು ಹೀರೋಯಿನ್​, ರಾಕೇಶ್​ ವಿಲನ್​: ಕಾಮಿಡಿ ಯಾರು?

Bigg Boss Kannada OTT: ಬಿಗ್​ ಬಾಸ್​ನಲ್ಲಿ ಆರ್ಯವರ್ಧನ್​ ಗುರೂಜಿ ಮಾತನಾಡುವಾಗ ಸಖತ್​ ಫನ್​ ಇರುತ್ತದೆ. ಕಿಚ್ಚ ಸುದೀಪ್​ ಕೇಳುವ ಪ್ರಶ್ನೆಗಳಿಗೆ ಅವರು ತಮ್ಮದೇ ರೀತಿಯಲ್ಲಿ ಉತ್ತರ ನೀಡುತ್ತಾರೆ.

ಬಿಗ್ ಬಾಸ್​ ಸಿನಿಮಾದಲ್ಲಿ ಸೋಮಣ್ಣ ಹೀರೋ, ಸೋನು ಹೀರೋಯಿನ್​, ರಾಕೇಶ್​ ವಿಲನ್​: ಕಾಮಿಡಿ ಯಾರು?
ಗುರೂಜಿ, ಸೋಮಣ್ಣ, ಸೋನು, ರಾಕೇಶ್​
Follow us
| Updated By: ಮದನ್​ ಕುಮಾರ್​

Updated on:Sep 05, 2022 | 6:48 PM

ವೂಟ್​ ಸೆಲೆಕ್ಟ್​ನಲ್ಲಿ ಪ್ರಸಾರ ಆಗುತ್ತಿರುವ ‘ಬಿಗ್​ ಬಾಸ್​ ಕನ್ನಡ ಒಟಿಟಿ’ ಶೋ ಮುಗಿಯಲು ಇನ್ನು ಎರಡೇ ವಾರಗಳು ಬಾಕಿ ಇವೆ. ಈಗಾಗಲೇ ನಾಲ್ಕು ವಾರಗಳು ಕಳೆದಿವೆ. ಆರ್ಯವರ್ಧನ್​ ಗುರೂಜಿ (Aryavardhan Guruji), ಜಯಶ್ರೀ ಆರಾಧ್ಯ, ಸೋನು ಶ್ರೀನಿವಾಸ್​ ಗೌಡ (Sonu Srinivas Gowda), ರಾಕೇಶ್​ ಅಡಿಗ, ರೂಪೇಶ್​ ಶೆಟ್ಟಿ, ಸಾನ್ಯಾ ಅಯ್ಯರ್​, ಸೋಮಣ್ಣ ಮಾಚಿಮಾಡ (Somanna Machimada), ನಂದಿನಿ, ಜಶ್ವಂತ್​ ಆಟ ಮುಂದುವರಿಸಿದ್ದಾರೆ. ಎಲ್ಲರೂ ಇಷ್ಟು ದಿನಗಳ ಕಾಲ ಟಫ್​ ಸ್ಪರ್ಧೆ ನೀಡಿ ತಮ್ಮ ಸ್ಥಾನ ಉಳಿಸಿಕೊಂಡಿರುವುದು ಸುಲಭದ ಮಾತಲ್ಲ. ಪ್ರತಿ ವಾರದಂತೆ ನಾಲ್ಕನೇ ವಾರ ಕೂಡ ಕಿಚ್ಚ ಸುದೀಪ್​ ಅವರು ‘ಸೂಪರ್​ ಸಂಡೇ ವಿಥ್​ ಸುದೀಪ’ ಎಪಿಸೋಡ್​ ನಡೆಸಿಕೊಟ್ಟಿದ್ದಾರೆ. ಈ ವೇಳೆ ಸ್ಪರ್ಧಿಗಳ ಜೊತೆ ಅವರು ನಡೆಸಿದ ಮಾತುಕತೆ ಫನ್ನಿಯಾಗಿತ್ತು.

ಸುದೀಪ್​ ಕೇಳೋದು ಒಂದಾದರೆ, ಆರ್ಯವರ್ಧನ್​ ಗುರೂಜಿ ಅರ್ಥ ಮಾಡಿಕೊಳ್ಳೋದು ಮತ್ತೊಂದು. ಇದು ಬಿಗ್​ ಬಾಸ್​ನಲ್ಲಿ ಹಲವು ಬಾರಿ ಆಗಿದೆ. ಅದೇನೇ ಇರಲಿ, ಗುರೂಜಿ ಮಾತನಾಡುವಾಗ ಸಖತ್​ ಫನ್​ ಇರುತ್ತದೆ ಎಂಬುದಂತೂ ನಿಜ. ‘ಸೋಮಣ್ಣ ಮಾಚಿಮಾಡ ಅವರಿಗೆ ಹೀರೋ ಆಗುವ ಗುಣ ಇದೆ. ಸಿನಿಮಾದಲ್ಲಿ ನಟಿಸುವ ಆಸೆ ಕೂಡ ಅವರಿಗೆ ಇದೆ. ಹೀರೋ ಅಥವಾ ಹೀರೋ ಫ್ರೆಂಡ್​ ಪಾತ್ರವನ್ನು ಅವರು ಮಾಡಬಹುದು’ ಎಂದು ಆರ್ಯವರ್ಧನ್​ ಹೇಳಿದರು. ‘ಒಂದು ವೇಳೆ ಸೋಮಣ್ಣ ಹೀರೋ ಆದರೆ ಹೀರೋಯಿನ್​ ಯಾರು’ ಎಂದು ಸುದೀಪ್​ ಪ್ರಶ್ನಿಸಿದರು. ಅದಕ್ಕೆ ಥಟ್​ ಅಂತ ಸೋನು ಗೌಡ ಹೆಸರು ಹೇಳಿದರು ಗುರೂಜಿ.

ಈ ಮಾತುಕತೆ ಹೀಗೇ ಮುಂದುವರಿಯಿತು. ‘ಈ ಮನೆಯಲ್ಲಿ ವಿಲನ್​ ಯಾರು’ ಎಂದು ಕೇಳಿದ್ದಕ್ಕೆ ರಾಕೇಶ್​ ಅಡಿಗ ಮತ್ತು ಜಯಶ್ರೀ ಅವರ ಹೆಸರನ್ನು ಗುರೂಜಿ ಹೇಳಿದರು. ‘ಸೋಮಣ್ಣ ಹೀರೋ, ರಾಕೇಶ್ ವಿಲನ್​ ಆದರೆ ಇಬ್ಬರ ನಡುವೆ ಜಗಳ ತುಂಬ ಜೋರಾಗಿ ಇರುತ್ತದೆ, ಇಂಟರೆಸ್ಟಿಂಗ್​ ಆಗಿರುತ್ತದೆ. ಯಾಕೆಂದರೆ ಸೋನು ಗೌಡ ಆಗಾಗ ಮನಸ್ಸು ಬದಲಾಯಿಸುತ್ತಾ ಇರುತ್ತಾಳೆ’ ಎಂದು ಅವರು ಅಭಿಪ್ರಾಯ ತಿಳಿಸಿದರು.

ಇದನ್ನೂ ಓದಿ
Image
ದೊಡ್ಮನೆಯಲ್ಲಿ ಎದೆ ಬಡಿದುಕೊಂಡು ಅತ್ತ ಜಯಶ್ರೀ; ಬಿಗ್​ ಬಾಸ್​ ಶೋನಲ್ಲಿ ಅಂಥದ್ದೇನಾಯ್ತು?
Image
BBK: ಬಿಗ್​ ಬಾಸ್​ಗೆ ಅವಮಾನ ಮಾಡಿದ ಸೋನು ಗೌಡ; ಮುಲಾಜಿಲ್ಲದೇ ಕ್ಲಾಸ್​ ತೆಗೆದುಕೊಂಡ ಕಿಚ್ಚ ಸುದೀಪ್​
Image
ಬಿಗ್​ ಬಾಸ್​ನಲ್ಲಿ ಹುಡುಗರಿಗೆ ಹೊರಗಿನಿಂದ ಸಿಗುತ್ತಿದೆ ಆ ಒಂದು ವಸ್ತು; ಸೋನು ಹೇಳಿಯೇ ಬಿಟ್ರು
Image
‘ಬಿಗ್​ ಬಾಸ್​ ಒಟಿಟಿ’ ಮನೆಯೊಳಗೆ ನಿಜವಾಗಿ ಏನೆಲ್ಲ ನಡೆಯಿತು? ಎಲ್ಲವನ್ನೂ ವಿವರಿಸಿದ ಸ್ಫೂರ್ತಿ ಗೌಡ

‘ಈ ಸಿನಿಮಾದಲ್ಲಿ ಕಾಮಿಡಿ ಮಾಡೋದು ಯಾರು?’ ಸುದೀಪ್​ ಕೇಳಿದ ಈ ಪ್ರಶ್ನೆ ಉತ್ತರ ಬಂದಿದ್ದು ಸೋಮಣ್ಣನ ಕಡೆಯಿಂದ. ‘ಗುರೂಜಿಯೇ ಕಾಮಿಡಿಯನ್​ ಆಗಬೇಕು. ಕೆಲವೊಂದು ಸಮಯದಲ್ಲಿ ಅವರ ಗೆಟಪ್​ ಹಾಗೆಯೇ ಇರುತ್ತದೆ. ಅದನ್ನು ನೋಡಿ ನಾವು ಬಿದ್ದು ಬಿದ್ದು ನಕ್ಕಿದ್ದೇವೆ. ಅವರೊಳಗೆ ಒಬ್ಬ ಕಲಾವಿದ ಇದ್ದಾನೆ. ಕಾಮಿಡಿ ಟಚ್​ ಇರುವ ವಿಲನ್​ ಪಾತ್ರಕ್ಕೆ ಅವರು ತುಂಬ ಚೆನ್ನಾಗಿ ಹೊಂದಿಕೆ ಆಗುತ್ತಾರೆ’ ಎಂದು ಸೋಮಣ್ಣ ಹೇಳಿದರು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 6:48 pm, Mon, 5 September 22

ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್