AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಿಳೆಯರ ಮಧ್ಯೆಯೇ ರೊಮ್ಯಾನ್ಸ್; ‘ಹೀರಾಮಂಡಿ’ ದೃಶ್ಯದ ಬಗ್ಗೆ ಸೋನಾಕ್ಷಿ ಮಾತು

ಸ್ವಾತಂತ್ರ್ಯಪೂರ್ವ ಕಾಲದ ಕಹಾನಿಯನ್ನು ಈ ಸೀರಿಸ್​ನಲ್ಲಿ ಹೇಳಲಾಗಿದೆ. ಲಾಹೋರ್​​ನ ರೆಡ್​ಲೈಟ್ ಏರಿಯಾ ಹೀರಾಮಂಡಿಯ ಕಥೆಯನ್ನು ಈ ಸಿನಿಮಾ ಹೊಂದಿದೆ. ಬ್ರಿಟಿಷರ ಆಳ್ವಿಕೆ ವೇಳೆ ಇವರ ಪರಿಸ್ಥಿತಿ ಯಾವ ರೀತಿಯಲ್ಲಿ ಇತ್ತು ಎಂಬುದನ್ನು ಈ ಸೀರಿಸ್​ನಲ್ಲಿ ತೋರಿಸಲಾಗಿದೆ.

ಮಹಿಳೆಯರ ಮಧ್ಯೆಯೇ ರೊಮ್ಯಾನ್ಸ್; ‘ಹೀರಾಮಂಡಿ’ ದೃಶ್ಯದ ಬಗ್ಗೆ ಸೋನಾಕ್ಷಿ ಮಾತು
ಸೋನಾಕ್ಷಿ
ರಾಜೇಶ್ ದುಗ್ಗುಮನೆ
|

Updated on: May 08, 2024 | 11:01 AM

Share

ಸಂಜಯ್ ಲೀಲಾ ಬನ್ಸಾಲಿ (Sanjay Leela Bansali) ನಿರ್ದೇಶನದ ‘ಹೀರಾಮಂಡಿ: ದಿ ಡೈಮಂಡ್ ಬಜಾರ್’ ವಿಮರ್ಶಕರಿಂದ ಮಿಶ್ರ ಪ್ರತಿಕ್ರಿಯೆ ಪಡೆದಿದೆ. ಈ ಮಧ್ಯೆ ಈ ಸರಣಿಯಲ್ಲಿ ನಟಿಸಿದ ಕಲಾವಿದರ ಬಗ್ಗೆ ಮೆಚ್ಚುಗೆ ವ್ಯಕ್ತವಾಗಿದೆ. ಸೋನಾಕ್ಷಿ ಸಿನ್ಹಾ ನಟನೆಯಲ್ಲಿ ಹೆಚ್ಚು ಅಂಕ ಪಡೆದಿದ್ದಾರೆ. ಸ್ವತಂತ್ರ ಪೂರ್ವ ಕಥೆಯನ್ನು ಈ ಸಿನಿಮಾ ಹೊಂದಿದೆ. ಈ ಸಿನಿಮಾದಲ್ಲಿ ಇಬ್ಬರು ಮಹಿಳೆಯರು ರೊಮ್ಯಾನ್ಸ್ ಮಾಡೋ ದೃಶ್ಯ ಇದೆ. ಅದನ್ನು ಹೇಗೆ ನಿರ್ವಹಿಸಿದಿರಿ ಎನ್ನುವ ಪ್ರಶ್ನೆಗೆ ಸೋನಾಕ್ಷಿ ಉತ್ತರಿಸಿದ್ದಾರೆ.

ನ್ಯೂಸ್18 ಇಂಗ್ಲಿಷ್​ಗೆ ನೀಡಿದ ಸಂದರ್ಶನದಲ್ಲಿ ಸೋನಾಕ್ಷಿ ಸಿನ್ಹಾ ಮಾತನಾಡಿದ್ದಾರೆ. ‘ಆರಂಭದಲ್ಲಿ ಬನ್ಸಾಲಿ ಅವರು ನನಗೆ ಪಾತ್ರದ ಬಗ್ಗೆ ವಿವರಿಸಿದ್ದರು. ಹೀರಾಮಂಡಿಯಲ್ಲಿ ಆ ವಿಚಾರದಲ್ಲಿ ಓಪನ್ ಆಗಿರುತ್ತಿದ್ದರು. ನಮ್ಮ ಸೀರಿಸ್​ನಲ್ಲಿ ಉಸ್ತಾದ್​ಜಿ ಅವರು ಗೇ ಎಂದು ಓಪನ್ ಆಗಿ ಹೇಳಿಕೊಳ್ಳುತ್ತಿದ್ದರು’ ಎಂದು ಸಿನಿಮಾ ಬಗ್ಗೆ ಮಾತನಾಡಿದ್ದಾರೆ ಸೋನಾಕ್ಷಿ ಸಿನ್ಹಾ.

ಫರೀದಾನ್ ಹಾಗೂ ಅವರ ಮನೆಯ ಕೆಲಸದಾಕೆ ಮಧ್ಯೆ ರೊಮ್ಯಾನ್ಸ್ ನಡೆಯುತ್ತದೆ. ಈ ದೃಶ್ಯದ ಬಗ್ಗೆ ಸೋನಾಕ್ಷಿ ಮಾತನಾಡಿದ್ದಾರೆ. ‘ನಾನು ಮಾಡಿದ ಫರೀದಾನ್ ಪಾತ್ರ​ ಭಿನ್ನವಾಗಿದೆ. ಆಕೆ 9 ವರ್ಷ ಇದ್ದಾಗಲೇ ಮಾರಾಟಕ್ಕೆ ಒಳಗಾಗುತ್ತಾಳೆ. ಈ ಕಾರಣಕ್ಕೆ ಆಕೆಗೆ ಪುರುಷರು ಅಂದರೆ ದ್ವೇಷ ಇರಬಹುದು. ಇಲ್ಲಿ ಎಲ್ಲವನ್ನೂ ಓಪನ್ ಆಗಿ ತೋರಿಸಲಾಗಿದೆ. ಬನ್ಸಾಲಿ ಅವರು ಹಲವು ರೀತಿಯ ವಿಚಾರಗಳನ್ನು ತೋರಿಸುವ ಪ್ರಯತ್ನ ಮಾಡಿದ್ದಾರೆ’ ಎಂದಿದ್ದಾರೆ ಸೋನಾಕ್ಷಿ. ಈ ಸಿನಿಮಾದಲ್ಲಿ ಪ್ರತಿ ಪಾತ್ರಧಾರಿಗಳಿಗೂ ವಿಶೇಷ ರೀತಿಯ ಉಡುಗೆ ನೀಡಲಾಗಿತ್ತು. ಇದು ಸೋನಾಕ್ಷಿಗೆ ಇಷ್ಟ ಆಗಿದೆ. ಅವರ ಪಾತ್ರಕ್ಕೆ ಮೆಚ್ಚುಗೆ ಸಿಕ್ಕಿದ್ದು, ಅವರ ಖುಷಿ ಹೆಚ್ಚಿಸಿದೆ.

ಇದನ್ನೂ ಓದಿ: ‘ಹೀರಾಮಂಡಿ’ ಸೀರಿಸ್​ಗೆ ನಿರ್ದೇಶಕ ಬನ್ಸಾಲಿ ಹಾಗೂ ಸ್ಟಾರ್ ಕಲಾವಿದರು ಪಡೆದ ಸಂಭಾವನೆ ಎಷ್ಟು?

ಸ್ವಾತಂತ್ರ್ಯಪೂರ್ವ ಕಾಲದ ಕಹಾನಿಯನ್ನು ಈ ಸೀರಿಸ್​ನಲ್ಲಿ ಹೇಳಲಾಗಿದೆ. ಲಾಹೋರ್​​ನ ರೆಡ್​ಲೈಟ್ ಏರಿಯಾ ಹೀರಾಮಂಡಿಯ ಕಥೆಯನ್ನು ಈ ಸಿನಿಮಾ ಹೊಂದಿದೆ. ಬ್ರಿಟಿಷರ ಆಳ್ವಿಕೆ ವೇಳೆ ಇವರ ಪರಿಸ್ಥಿತಿ ಯಾವ ರೀತಿಯಲ್ಲಿ ಇತ್ತು ಎಂಬುದನ್ನು ಈ ಸೀರಿಸ್​ನಲ್ಲಿ ತೋರಿಸಲಾಗಿದೆ. ಮನಿಶಾ ಕೊಯಿರಾಲಾ, ಸೋನಾಕ್ಷಿ ಸಿನ್ಹಾ, ಅದಿತಿ ರಾವ್​ ಹೈದರಿ, ರಿಚಾ ಚಡ್ಡಾ, ಶರ್ಮಿನ್​ ಸೇಗಲ್​, ಸಂಜೀದಾ ಶೇಖ್​ ಮುಂತಾದವರು ‘ಹೀರಾಮಂಡಿ’ ವೆಬ್​ ಸಿರೀಸ್​ನಲ್ಲಿ ನಟಿಸಿದ್ದಾರೆ. ಇವರೆಲ್ಲರಿಗೂ ದೊಡ್ಡ ಮಟ್ಟದ ಸಂಭಾವನೆ ಸಿಕ್ಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ