AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗರ್ಲ್​​ಫ್ರೆಂಡ್ ವಿಚಾರಕ್ಕೆ ಬಂದ ಸೋನು ಗೌಡ ವಿರುದ್ಧ ಸೇಡು ತೀರಿಸಿಕೊಂಡ ಜಶ್ವಂತ್

ಕಳೆದ ವಾರ ಸೋನು ಗೌಡ ನಾಮಿನೇಟ್ ಆಗಿದ್ದರು. ಅವರು ಮೊದಲ ವಾರವೇ ಮನೆಯಿಂದ ಹೊರ ಹೋಗುತ್ತಾರೆ ಎಂಬುದು ಎಲ್ಲರ ಲೆಕ್ಕಾಚಾರ ಆಗಿತ್ತು. ಆದರೆ, ಅವರು ಹೆಚ್ಚು ವೋಟ್ ಪಡೆದು ಬಚಾವ್ ಆದರು.

ಗರ್ಲ್​​ಫ್ರೆಂಡ್ ವಿಚಾರಕ್ಕೆ ಬಂದ ಸೋನು ಗೌಡ ವಿರುದ್ಧ ಸೇಡು ತೀರಿಸಿಕೊಂಡ ಜಶ್ವಂತ್
ಜಶ್ವಂತ್-ಸೋನು
TV9 Web
| Edited By: |

Updated on: Aug 15, 2022 | 9:30 PM

Share

ಬಿಗ್ ಬಾಸ್ (Bigg Boss) ಮನೆಯಲ್ಲಿ ಎರಡನೇ ವಾರದ ನಾಮಿನೇಷನ್​ನ ಪ್ರಕ್ರಿಯೆ ನಡೆದಿದೆ. ಈ ವಾರ ಬಿಗ್ ಬಾಸ್​ ಮನೆಯಿಂದ ಮತ್ತೊಂದು ಸದಸ್ಯರು ಹೊರ ಹೋಗಲಿದ್ದಾರೆ. ಅದು ಯಾರು ಎಂಬುದು ಈ ವಾರಾಂತ್ಯಕ್ಕೆ ಗೊತ್ತಾಗಲಿದೆ. ಕಳೆದ ವಾರದಂತೆ ಈ ವಾರವೂ ಸೋನು ಗೌಡ (Sonu Gowda) ನಾಮಿನೇಟ್​ ಆಗಿದ್ದಾರೆ. ಇದಕ್ಕೆ ಕಾರಣವಾಗಿದ್ದು ಜಶ್ವಂತ್​. ಅವರು ನಾಮಿನೇಟ್ ಆಗೋಕೆ ಕಾರಣ ಆಗಿದ್ದು ಜಶ್ವಂತ್​. ಗರ್ಲ್​ಫ್ರೆಂಡ್ ವಿಚಾರಕ್ಕೆ ಬಂದ ಸೋನು ಗೌಡ ವಿರುದ್ಧ ಅವರು ಸೇಡು ತೀರಿಸಿಕೊಂಡರು!

ಬಿಗ್​ ಬಾಸ್​ನ ಎರಡನೇ ವಾರದ ಮೊದಲ ದಿನವೇ ನಾಮಿನೇಷನ್ ಪ್ರಕ್ರಿಯೆ ನಡೆದಿದೆ. ಮ್ಯೂಸಿಕ್ ಚೇರ್ ರೀತಿಯೇ ಒಂದು ಗೇಮ್ ನಡೆದಿತ್ತು. ಈ ಗೇಮ್​ನಲ್ಲಿ ಸೋನುಗೆ ಒಂದು ಲೆಟರ್ ಸಿಕ್ಕಿದೆ. ಈ ಲೇಟರ್ ಮೂಲಕ ಅವರು ಒಬ್ಬರನ್ನು ನಾಮಿನೇಟ್ ಮಾಡಬೇಕಿತ್ತು. ‘ನಾನು ನಂದು ಅವರನ್ನು ನಾಮಿನೇಟ್ ಮಾಡುತ್ತೇನೆ. ಅವರು ಸಖತ್ ಆಗಿ ಆಡುತ್ತಾರೆ. ನನಗೆ ಟಫ್ ಕಾಂಪಿಟೇಟರ್ ಅನಿಸಿತು. ಈ ಕಾರಣಕ್ಕೆ ಅವರ ಹೆಸರನ್ನು ತೆಗೆದುಕೊಂಡೆ’ ಎಂದು ಕಾರಣ ನೀಡಿದರು.

ನಂತರ ಮತ್ತೊಂದು ಆಟದಲ್ಲಿ ಗೆದ್ದು ಜಶ್ವಂತ್ ಅವರು ಸೋನು ಅವರನ್ನು ನಾಮಿನೇಟ್ ಮಾಡಿದರು. ‘ಸೋನು ಅವರು ಎಲ್ಲರ ಜತೆ ಬೆರೆಯುತ್ತಿಲ್ಲ. ಇದರ ಜತೆಗೆ ಅವರು ನನ್ನ ಗರ್ಲ್​​ಫ್ರೆಂಡ್​​ ಅನ್ನು ನಾಮಿನೇಟ್ ಮಾಡಿದ್ದಾರೆ. ಈ ಕಾರಣಕ್ಕೆ ಅವರನ್ನು ನಾಮಿನೇಟ್ ಮಾಡುತ್ತಿದ್ದೇನೆ’ ಎಂದರು. ಈ ಮೂಲಕ ಅವರು ಸೇಡು ತೀರಿಸಿಕೊಂಡರು.

ಕಳೆದ ವಾರ ಸೋನು ಗೌಡ ನಾಮಿನೇಟ್ ಆಗಿದ್ದರು. ಅವರು ಮೊದಲ ವಾರವೇ ಮನೆಯಿಂದ ಹೊರ ಹೋಗುತ್ತಾರೆ ಎಂಬುದು ಎಲ್ಲರ ಲೆಕ್ಕಾಚಾರ ಆಗಿತ್ತು. ಆದರೆ, ಅವರು ಹೆಚ್ಚು ವೋಟ್ ಪಡೆದು ಬಚಾವ್ ಆದರು. ಈಗ ಅವರು ಮತ್ತೊಮ್ಮೆ ನಾಮಿನೇಟ್ ಆಗಿದ್ದಾರೆ. ಈ ಬಾರಿಗೆ ಅವರು ಅಗತ್ಯ ವೋಟ್ ಪಡೆದು ಎಲಿಮಿನೇಷನ್​ನಿಂದ ಪಾರು ಆಗುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ.

ಇದನ್ನೂ ಓದಿ: ‘ಮಿಸ್ಟೇಕ್ ಮಾಡ್ಕೋಬೇಡ’: ‘ಬಿಗ್ ಬಾಸ್​’ ಮನೆಯಲ್ಲಿ ಜೋರಾಯ್ತು ರಾಕೇಶ್​-ಸ್ಫೂರ್ತಿ ಕುರಿತ ಗುಸುಗುಸು

ಸೋನು ಮಾತ್ರವಲ್ಲದೆ, ನಂದು, ಅಕ್ಷತಾ, ಸ್ಫೂರ್ತಿ ಗೌಡ, ಸಾನ್ಯಾ ಅಯ್ಯರ್, ಜಯಶ್ರೀ, ಸೋಮಣ್ಣ, ರಾಕೇಶ್​ ಅಡಿಗ, ಆರ್ಯವರ್ಧನ್ ಗುರೂಜಿ ಮೇಲೆ ನಾಮಿನೇಷನ್​ ತೂಗುಗತ್ತಿ ಇದೆ.

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು