AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗರ್ಲ್​​ಫ್ರೆಂಡ್ ವಿಚಾರಕ್ಕೆ ಬಂದ ಸೋನು ಗೌಡ ವಿರುದ್ಧ ಸೇಡು ತೀರಿಸಿಕೊಂಡ ಜಶ್ವಂತ್

ಕಳೆದ ವಾರ ಸೋನು ಗೌಡ ನಾಮಿನೇಟ್ ಆಗಿದ್ದರು. ಅವರು ಮೊದಲ ವಾರವೇ ಮನೆಯಿಂದ ಹೊರ ಹೋಗುತ್ತಾರೆ ಎಂಬುದು ಎಲ್ಲರ ಲೆಕ್ಕಾಚಾರ ಆಗಿತ್ತು. ಆದರೆ, ಅವರು ಹೆಚ್ಚು ವೋಟ್ ಪಡೆದು ಬಚಾವ್ ಆದರು.

ಗರ್ಲ್​​ಫ್ರೆಂಡ್ ವಿಚಾರಕ್ಕೆ ಬಂದ ಸೋನು ಗೌಡ ವಿರುದ್ಧ ಸೇಡು ತೀರಿಸಿಕೊಂಡ ಜಶ್ವಂತ್
ಜಶ್ವಂತ್-ಸೋನು
TV9 Web
| Updated By: ರಾಜೇಶ್ ದುಗ್ಗುಮನೆ|

Updated on: Aug 15, 2022 | 9:30 PM

Share

ಬಿಗ್ ಬಾಸ್ (Bigg Boss) ಮನೆಯಲ್ಲಿ ಎರಡನೇ ವಾರದ ನಾಮಿನೇಷನ್​ನ ಪ್ರಕ್ರಿಯೆ ನಡೆದಿದೆ. ಈ ವಾರ ಬಿಗ್ ಬಾಸ್​ ಮನೆಯಿಂದ ಮತ್ತೊಂದು ಸದಸ್ಯರು ಹೊರ ಹೋಗಲಿದ್ದಾರೆ. ಅದು ಯಾರು ಎಂಬುದು ಈ ವಾರಾಂತ್ಯಕ್ಕೆ ಗೊತ್ತಾಗಲಿದೆ. ಕಳೆದ ವಾರದಂತೆ ಈ ವಾರವೂ ಸೋನು ಗೌಡ (Sonu Gowda) ನಾಮಿನೇಟ್​ ಆಗಿದ್ದಾರೆ. ಇದಕ್ಕೆ ಕಾರಣವಾಗಿದ್ದು ಜಶ್ವಂತ್​. ಅವರು ನಾಮಿನೇಟ್ ಆಗೋಕೆ ಕಾರಣ ಆಗಿದ್ದು ಜಶ್ವಂತ್​. ಗರ್ಲ್​ಫ್ರೆಂಡ್ ವಿಚಾರಕ್ಕೆ ಬಂದ ಸೋನು ಗೌಡ ವಿರುದ್ಧ ಅವರು ಸೇಡು ತೀರಿಸಿಕೊಂಡರು!

ಬಿಗ್​ ಬಾಸ್​ನ ಎರಡನೇ ವಾರದ ಮೊದಲ ದಿನವೇ ನಾಮಿನೇಷನ್ ಪ್ರಕ್ರಿಯೆ ನಡೆದಿದೆ. ಮ್ಯೂಸಿಕ್ ಚೇರ್ ರೀತಿಯೇ ಒಂದು ಗೇಮ್ ನಡೆದಿತ್ತು. ಈ ಗೇಮ್​ನಲ್ಲಿ ಸೋನುಗೆ ಒಂದು ಲೆಟರ್ ಸಿಕ್ಕಿದೆ. ಈ ಲೇಟರ್ ಮೂಲಕ ಅವರು ಒಬ್ಬರನ್ನು ನಾಮಿನೇಟ್ ಮಾಡಬೇಕಿತ್ತು. ‘ನಾನು ನಂದು ಅವರನ್ನು ನಾಮಿನೇಟ್ ಮಾಡುತ್ತೇನೆ. ಅವರು ಸಖತ್ ಆಗಿ ಆಡುತ್ತಾರೆ. ನನಗೆ ಟಫ್ ಕಾಂಪಿಟೇಟರ್ ಅನಿಸಿತು. ಈ ಕಾರಣಕ್ಕೆ ಅವರ ಹೆಸರನ್ನು ತೆಗೆದುಕೊಂಡೆ’ ಎಂದು ಕಾರಣ ನೀಡಿದರು.

ನಂತರ ಮತ್ತೊಂದು ಆಟದಲ್ಲಿ ಗೆದ್ದು ಜಶ್ವಂತ್ ಅವರು ಸೋನು ಅವರನ್ನು ನಾಮಿನೇಟ್ ಮಾಡಿದರು. ‘ಸೋನು ಅವರು ಎಲ್ಲರ ಜತೆ ಬೆರೆಯುತ್ತಿಲ್ಲ. ಇದರ ಜತೆಗೆ ಅವರು ನನ್ನ ಗರ್ಲ್​​ಫ್ರೆಂಡ್​​ ಅನ್ನು ನಾಮಿನೇಟ್ ಮಾಡಿದ್ದಾರೆ. ಈ ಕಾರಣಕ್ಕೆ ಅವರನ್ನು ನಾಮಿನೇಟ್ ಮಾಡುತ್ತಿದ್ದೇನೆ’ ಎಂದರು. ಈ ಮೂಲಕ ಅವರು ಸೇಡು ತೀರಿಸಿಕೊಂಡರು.

ಕಳೆದ ವಾರ ಸೋನು ಗೌಡ ನಾಮಿನೇಟ್ ಆಗಿದ್ದರು. ಅವರು ಮೊದಲ ವಾರವೇ ಮನೆಯಿಂದ ಹೊರ ಹೋಗುತ್ತಾರೆ ಎಂಬುದು ಎಲ್ಲರ ಲೆಕ್ಕಾಚಾರ ಆಗಿತ್ತು. ಆದರೆ, ಅವರು ಹೆಚ್ಚು ವೋಟ್ ಪಡೆದು ಬಚಾವ್ ಆದರು. ಈಗ ಅವರು ಮತ್ತೊಮ್ಮೆ ನಾಮಿನೇಟ್ ಆಗಿದ್ದಾರೆ. ಈ ಬಾರಿಗೆ ಅವರು ಅಗತ್ಯ ವೋಟ್ ಪಡೆದು ಎಲಿಮಿನೇಷನ್​ನಿಂದ ಪಾರು ಆಗುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ.

ಇದನ್ನೂ ಓದಿ: ‘ಮಿಸ್ಟೇಕ್ ಮಾಡ್ಕೋಬೇಡ’: ‘ಬಿಗ್ ಬಾಸ್​’ ಮನೆಯಲ್ಲಿ ಜೋರಾಯ್ತು ರಾಕೇಶ್​-ಸ್ಫೂರ್ತಿ ಕುರಿತ ಗುಸುಗುಸು

ಸೋನು ಮಾತ್ರವಲ್ಲದೆ, ನಂದು, ಅಕ್ಷತಾ, ಸ್ಫೂರ್ತಿ ಗೌಡ, ಸಾನ್ಯಾ ಅಯ್ಯರ್, ಜಯಶ್ರೀ, ಸೋಮಣ್ಣ, ರಾಕೇಶ್​ ಅಡಿಗ, ಆರ್ಯವರ್ಧನ್ ಗುರೂಜಿ ಮೇಲೆ ನಾಮಿನೇಷನ್​ ತೂಗುಗತ್ತಿ ಇದೆ.

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!