AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sonu Srinivas Gowda: ‘ಸುದೀಪ್​ ಇರುವ ವೇದಿಕೆಗೆ ಇದು ಗೌರವ ಅಲ್ಲ’: ಸೋನು ಶ್ರೀನಿವಾಸ್​ ಗೌಡ ಆಯ್ಕೆ ಆಗಿದ್ದಕ್ಕೆ ನೆಟ್ಟಿಗರು ಗರಂ

Sonu Srinivas Gowda | Kiccha Sudeep: ಬಿಗ್​ ಬಾಸ್​ ಮನೆಯೊಳಗೆ ಸೋನು ಶ್ರೀನಿವಾಸ್​ ಗೌಡ ಏನೆಲ್ಲ ಮಾಡಲಿದ್ದಾರೆ ಎಂಬ ಬಗ್ಗೆ ವೀಕ್ಷಕರಿಗೆ ಕುತೂಹಲ ಇದೆ. ವೂಟ್​ ಸೆಲೆಕ್ಟ್​ ಮೂಲಕ ಈ ಶೋ ಪ್ರಸಾರ ಆಗುತ್ತಿದೆ.

Sonu Srinivas Gowda: ‘ಸುದೀಪ್​ ಇರುವ ವೇದಿಕೆಗೆ ಇದು ಗೌರವ ಅಲ್ಲ’: ಸೋನು ಶ್ರೀನಿವಾಸ್​ ಗೌಡ ಆಯ್ಕೆ ಆಗಿದ್ದಕ್ಕೆ ನೆಟ್ಟಿಗರು ಗರಂ
ಸೋನು ಶ್ರೀನಿವಾಸ್ ಗೌಡ-ಸುದೀಪ್
Follow us
TV9 Web
| Updated By: ಮದನ್​ ಕುಮಾರ್​

Updated on: Aug 07, 2022 | 4:42 PM

ಪ್ರತಿ ಬಾರಿ ಬಿಗ್​ ಬಾಸ್​ ಆರಂಭ ಆದಾಗಲೂ ಒಂದಷ್ಟು ಪರ-ವಿರೋಧಗಳು ಹುಟ್ಟಿಕೊಳ್ಳುತ್ತವೆ. ಸ್ಪರ್ಧಿಗಳ ಆಯ್ಕೆ ಬಗ್ಗೆ ಸಹಜವಾಗಿಯೇ ವೀಕ್ಷಕರು ತಮ್ಮ ಅಭಿಪ್ರಾಯ ತಿಳಿಸುತ್ತಾರೆ. ಸಾಧ್ಯವಾದಷ್ಟು ಅರ್ಹ ವ್ಯಕ್ತಿಗಳಿಗೆ ಅವಕಾಶ ಸಿಗಲಿ ಎಂಬುದು ಜನರ ಆಶಯ. ಬೇರೆ ಬೇರೆ ಕಾರಣದಿಂದ ವಿವಾದ ಮಾಡಿಕೊಂಡು ವೈರಲ್​ ಆದವರಿಗೆ ಚಾನ್ಸ್​ ಸಿಕ್ಕರೆ ವೀಕ್ಷಕರಿಗೆ ಬೇಸರ ಆಗುತ್ತದೆ. ಈ ಬಾರಿ ಸೋನು ಶ್ರೀನಿವಾಸ್​ ಗೌಡ (Sonu Srinivas Gowda) ಬಿಗ್​ ಬಾಸ್​ ಮನೆಗೆ ಹೋಗಿರುವುದು ಅನೇಕರಿಗೆ ಇಷ್ಟ ಆಗಿಲ್ಲ. ಕಮೆಂಟ್​ಗಳ ಮೂಲಕ ಜನರು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಕಿಚ್ಚ ಸುದೀಪ್ (Kiccha Sudeep)​ ಅವರು ನಡೆಸಿಕೊಡುತ್ತಿರುವ ಈ ಕಾರ್ಯಕ್ರಮದಲ್ಲಿ ಇಂಥ ಸ್ಪರ್ಧಿಗಳು ಬಂದಿದ್ದು ಸರಿಯಲ್ಲ ಎಂದು ಅನೇಕರು ಕಮೆಂಟ್​ ಮಾಡುತ್ತಿದ್ದಾರೆ. ‘ಬಿಗ್ ಬಾಸ್​ ಕನ್ನಡ ಒಟಿಟಿ ಸೀಸನ್​ 1’ಕ್ಕೆ (Bigg Boss OTT Kannada) ಸ್ಪರ್ಧಿಗಳನ್ನು ಆಯ್ಕೆ ಮಾಡಿದರ ವಿರುದ್ಧ ಜನರು ಗರಂ ಆಗಿದ್ದಾರೆ.

ಬಿಗ್​ ಬಾಸ್​ ಕಾರ್ಯಕ್ರಮದಲ್ಲಿ ಸ್ಪರ್ಧಿಸುವ ವ್ಯಕ್ತಿಗಳಿಗೆ ದೊಡ್ಡ ಮಟ್ಟದ ಜನಪ್ರಿಯತೆ ಸಿಗುತ್ತದೆ. ಕಿಚ್ಚ ಸುದೀಪ್​ ಜೊತೆ ಒಡನಾಡುವ ಅವಕಾಶ ಸಿಗುತ್ತದೆ. ಒಂದೇ ವೇದಿಕೆಯಲ್ಲಿ ಸುದೀಪ್​ ಮತ್ತು ಸ್ಪರ್ಧಿಗಳು ನಿಂತುಕೊಳ್ಳುವಂತಹ ಸಂದರ್ಭಗಳು ಇರುತ್ತವೆ. ಯೋಗ್ಯವಲ್ಲದ ವ್ಯಕ್ತಿಗಳು ಈ ಶೋಗೆ ಬಂದರೆ ಅಂಥವರಿಂದ ಸುದೀಪ್​ ಅವರ ಘನತೆಗೆ ಧಕ್ಕೆ ಆಗುತ್ತದೆ ಎಂದು ಅಭಿಮಾನಿಗಳು ಬೇಸರ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ
Image
Bigg Boss OTT Kannada: ಮೊದಲ ದಿನವೇ ಬಿಗ್​ ಬಾಸ್​ನಲ್ಲಿ ಕಣ್ಣೀರ ಕೋಡಿ; ನೋವು ತೋಡಿಕೊಂಡು ಗಳಗಳನೆ ಅತ್ತ ಸ್ಪರ್ಧಿಗಳು
Image
‘ನಾನು ಸ್ಮೋಕ್​ ಮಾಡ್ತೀನಿ, ಅದ್ರಲ್ಲಿ ತಪ್ಪೇನಿದೆ?’ ‘ಬಿಗ್​ ಬಾಸ್​​’ನಲ್ಲಿ ಸೋನು ಗೌಡ ನೇರ ಪ್ರಶ್ನೆ
Image
Rakesh Adiga: ‘ಬಿಗ್​ ಬಾಸ್​’ ಮನೆಗೆ ರಾಕೇಶ್ ಅಡಿಗ ಎಂಟ್ರಿ; ಆರಂಭ ಆಗುತ್ತಾ ಸೆಕೆಂಡ್ ಇನ್ನಿಂಗ್ಸ್​?
Image
ಭಿಕ್ಷೆ ಬೇಡುತ್ತಿದ್ದ ಈ ವ್ಯಕ್ತಿ ಬಿಗ್​ ಬಾಸ್​​ಗೆ ಸ್ಪರ್ಧಿ; ಈ ಕಲಾವಿದನ ಬದುಕು ಎಷ್ಟು ಕಷ್ಟ ಇತ್ತು ಗೊತ್ತಾ?

ಕರ್ನಾಟಕದಲ್ಲಿ ಕೋಟ್ಯಂತರ ಜನರು ಬಿಗ್​ ಬಾಸ್​ಗೆ ಬರಬೇಕು ಎಂಬ ಆಸೆ ಇಟ್ಟುಕೊಂಡಿದ್ದಾರೆ. ಸಿನಿಮಾ ಮತ್ತು ಸೀರಿಯಲ್​ನಲ್ಲಿ ಸಾಧನೆ ಮಾಡಿದವರು ಬೇಕಾದಷ್ಟು ಮಂದಿ ಇದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಒಳ್ಳೆಯ ರೀತಿಯಲ್ಲಿ ಗುರುತಿಸಿಕೊಂಡವರೂ ಬಹಳಷ್ಟು ಜನರು ಇದ್ದಾರೆ. ಅಂಥವರಿಗೆ ಬಿಗ್​ ಬಾಸ್​ನಲ್ಲಿ ಚಾನ್ಸ್ ಸಿಕ್ಕಿರೆ ಅವರ ಬದುಕು ಬದಲಾಗುತ್ತದೆ. ಕಾರ್ಯಕ್ರಮಕ್ಕೂ ಒಂದು ಗೌರವ ಹೆಚ್ಚುತ್ತದೆ. ಆದರೆ ಕೆಲವು ಸ್ಪರ್ಧಿಗಳ ಆಯ್ಕೆಯಿಂದ ತಮಗೆ ಬೇಸರ ಆಗಿದೆ ಎಂದು ವೀಕ್ಷಕರು ಕಮೆಂಟ್​ ಮಾಡುತ್ತಿದ್ದಾರೆ.

ಸೋನು ಶ್ರೀನಿವಾಸ್​ ಗೌಡ ಆಯ್ಕೆ ಆಗಿರುವುದಕ್ಕೆ ನೆಟ್ಟಿಗರು ಟ್ರೋಲ್​ ಮಾಡುತ್ತಿದ್ದಾರೆ. ಈ ವಿಚಾರದ ಕುರಿತಂತೆ ಬಗೆಬಗೆಯ ಮೀವ್ಸ್​ ವೈರಲ್​ ಆಗಿವೆ. ಆದಷ್ಟು ಬೇಗ ಸೋನು ಎಲಿಮಿನೇಟ್​ ಆಗಬೇಕು ಎಂದು ಕೆಲವರು ಒತ್ತಾಯಿಸುತ್ತಿದ್ದಾರೆ. ಇನ್ನು, ಬಿಗ್​ ಬಾಸ್​ ಮನೆಯೊಳಗೆ ಸೋನು ಶ್ರೀನಿವಾಸ್​ ಗೌಡ ಏನೆಲ್ಲ ಮಾಡಲಿದ್ದಾರೆ ಎಂಬ ಬಗ್ಗೆಯೂ ವೀಕ್ಷಕರಿಗೆ ಕುತೂಹಲ ಇದೆ. ವೂಟ್​ ಸೆಲೆಕ್ಟ್​ ಮೂಲಕ ಈ ಶೋ ಪ್ರಸಾರ ಆಗುತ್ತಿದೆ.

ಪ್ರಿಯಾಂಕ್​ ಖರ್ಗೆಗೆ ಎಲ್ಲಾದರಲ್ಲೂ ರಾಜಕಿಯ ಮಾಡುವ ಚಟ: ಸಿಟಿ ರವಿ
ಪ್ರಿಯಾಂಕ್​ ಖರ್ಗೆಗೆ ಎಲ್ಲಾದರಲ್ಲೂ ರಾಜಕಿಯ ಮಾಡುವ ಚಟ: ಸಿಟಿ ರವಿ
ಫೈಲ್‌ ಎತ್ತಿ ಇಟ್ಟುಬಿಡ್ತಾರೆ, ಅಲೆದಾಡಿಸ್ತಾರೆ..ಇದಕ್ಕೆ ಹೊಸ ಅಸ್ತ್ರ!
ಫೈಲ್‌ ಎತ್ತಿ ಇಟ್ಟುಬಿಡ್ತಾರೆ, ಅಲೆದಾಡಿಸ್ತಾರೆ..ಇದಕ್ಕೆ ಹೊಸ ಅಸ್ತ್ರ!
ಇರಾನ್​ ನಿಂದ ಇದೇ ಮೊದಲ ಬಾರಿಗೆ ಸೆಜ್ಜಿಲ್ ಮಿಸೈಲ್ ಬಳಕೆ, ಇಸ್ರೇಲ್ ತತ್ತರ!
ಇರಾನ್​ ನಿಂದ ಇದೇ ಮೊದಲ ಬಾರಿಗೆ ಸೆಜ್ಜಿಲ್ ಮಿಸೈಲ್ ಬಳಕೆ, ಇಸ್ರೇಲ್ ತತ್ತರ!
ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್
ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್
ಜಯಂತಿ ಬಸುರಿ ಮತ್ತು ಸೀಮಂತದ ದಿನಾಂಕ ಫಿಕ್ಸ್ ಆಗಿತ್ತು: ನೆರೆಮನೆ ಮಹಿಳೆ
ಜಯಂತಿ ಬಸುರಿ ಮತ್ತು ಸೀಮಂತದ ದಿನಾಂಕ ಫಿಕ್ಸ್ ಆಗಿತ್ತು: ನೆರೆಮನೆ ಮಹಿಳೆ
ಅಸಿಮ್ ಮುನೀರ್​​ಗೆ ಔತಣ ನೀಡಿದ ಟ್ರಂಪ್ ವಿರುದ್ಧ ಶಶಿ ತರೂರ್ ಲೇವಡಿ
ಅಸಿಮ್ ಮುನೀರ್​​ಗೆ ಔತಣ ನೀಡಿದ ಟ್ರಂಪ್ ವಿರುದ್ಧ ಶಶಿ ತರೂರ್ ಲೇವಡಿ
ಒನ್​ ವೇನಲ್ಲಿ ಬಂದು ಡಿಸಿಗೆ ಅವಾಜ್ ಹಾಕಿದ ಬೈಕ್ ಸವಾರ: ಮುಂದೇನಾಯ್ತು?
ಒನ್​ ವೇನಲ್ಲಿ ಬಂದು ಡಿಸಿಗೆ ಅವಾಜ್ ಹಾಕಿದ ಬೈಕ್ ಸವಾರ: ಮುಂದೇನಾಯ್ತು?
ಪಕ್ಷ ಅಧಿಕಾರಕ್ಕೆ ಬರಬೇಕಾದರೆ ಸಾಮೂಹಿಕ ನಾಯಕತ್ವ ಬೇಕಾಗುತ್ತದೆ: ರಾಜಣ್ಣ
ಪಕ್ಷ ಅಧಿಕಾರಕ್ಕೆ ಬರಬೇಕಾದರೆ ಸಾಮೂಹಿಕ ನಾಯಕತ್ವ ಬೇಕಾಗುತ್ತದೆ: ರಾಜಣ್ಣ
ಜನಪ್ರಿಯ ಗೆಟ್ಟೋ ಕಿಡ್ಸ್​ಗೆ ಪ್ರೀತಿಯ ವಿದಾಯ ಹೇಳಿದ ಅರ್ಜುನ್ ಜನ್ಯ
ಜನಪ್ರಿಯ ಗೆಟ್ಟೋ ಕಿಡ್ಸ್​ಗೆ ಪ್ರೀತಿಯ ವಿದಾಯ ಹೇಳಿದ ಅರ್ಜುನ್ ಜನ್ಯ
ಕಚೇರಿಗೆ ಗೈರುಹಾಜರಾದರೂ ಸಿಬ್ಬಂದಿಯಿಂದ ಸಿಎಲ್ ಅರ್ಜಿ ಇಲ್ಲ!
ಕಚೇರಿಗೆ ಗೈರುಹಾಜರಾದರೂ ಸಿಬ್ಬಂದಿಯಿಂದ ಸಿಎಲ್ ಅರ್ಜಿ ಇಲ್ಲ!