Sonu Srinivas Gowda: ‘ಸುದೀಪ್​ ಇರುವ ವೇದಿಕೆಗೆ ಇದು ಗೌರವ ಅಲ್ಲ’: ಸೋನು ಶ್ರೀನಿವಾಸ್​ ಗೌಡ ಆಯ್ಕೆ ಆಗಿದ್ದಕ್ಕೆ ನೆಟ್ಟಿಗರು ಗರಂ

Sonu Srinivas Gowda | Kiccha Sudeep: ಬಿಗ್​ ಬಾಸ್​ ಮನೆಯೊಳಗೆ ಸೋನು ಶ್ರೀನಿವಾಸ್​ ಗೌಡ ಏನೆಲ್ಲ ಮಾಡಲಿದ್ದಾರೆ ಎಂಬ ಬಗ್ಗೆ ವೀಕ್ಷಕರಿಗೆ ಕುತೂಹಲ ಇದೆ. ವೂಟ್​ ಸೆಲೆಕ್ಟ್​ ಮೂಲಕ ಈ ಶೋ ಪ್ರಸಾರ ಆಗುತ್ತಿದೆ.

Sonu Srinivas Gowda: ‘ಸುದೀಪ್​ ಇರುವ ವೇದಿಕೆಗೆ ಇದು ಗೌರವ ಅಲ್ಲ’: ಸೋನು ಶ್ರೀನಿವಾಸ್​ ಗೌಡ ಆಯ್ಕೆ ಆಗಿದ್ದಕ್ಕೆ ನೆಟ್ಟಿಗರು ಗರಂ
ಸೋನು ಶ್ರೀನಿವಾಸ್ ಗೌಡ-ಸುದೀಪ್
Follow us
| Updated By: ಮದನ್​ ಕುಮಾರ್​

Updated on: Aug 07, 2022 | 4:42 PM

ಪ್ರತಿ ಬಾರಿ ಬಿಗ್​ ಬಾಸ್​ ಆರಂಭ ಆದಾಗಲೂ ಒಂದಷ್ಟು ಪರ-ವಿರೋಧಗಳು ಹುಟ್ಟಿಕೊಳ್ಳುತ್ತವೆ. ಸ್ಪರ್ಧಿಗಳ ಆಯ್ಕೆ ಬಗ್ಗೆ ಸಹಜವಾಗಿಯೇ ವೀಕ್ಷಕರು ತಮ್ಮ ಅಭಿಪ್ರಾಯ ತಿಳಿಸುತ್ತಾರೆ. ಸಾಧ್ಯವಾದಷ್ಟು ಅರ್ಹ ವ್ಯಕ್ತಿಗಳಿಗೆ ಅವಕಾಶ ಸಿಗಲಿ ಎಂಬುದು ಜನರ ಆಶಯ. ಬೇರೆ ಬೇರೆ ಕಾರಣದಿಂದ ವಿವಾದ ಮಾಡಿಕೊಂಡು ವೈರಲ್​ ಆದವರಿಗೆ ಚಾನ್ಸ್​ ಸಿಕ್ಕರೆ ವೀಕ್ಷಕರಿಗೆ ಬೇಸರ ಆಗುತ್ತದೆ. ಈ ಬಾರಿ ಸೋನು ಶ್ರೀನಿವಾಸ್​ ಗೌಡ (Sonu Srinivas Gowda) ಬಿಗ್​ ಬಾಸ್​ ಮನೆಗೆ ಹೋಗಿರುವುದು ಅನೇಕರಿಗೆ ಇಷ್ಟ ಆಗಿಲ್ಲ. ಕಮೆಂಟ್​ಗಳ ಮೂಲಕ ಜನರು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಕಿಚ್ಚ ಸುದೀಪ್ (Kiccha Sudeep)​ ಅವರು ನಡೆಸಿಕೊಡುತ್ತಿರುವ ಈ ಕಾರ್ಯಕ್ರಮದಲ್ಲಿ ಇಂಥ ಸ್ಪರ್ಧಿಗಳು ಬಂದಿದ್ದು ಸರಿಯಲ್ಲ ಎಂದು ಅನೇಕರು ಕಮೆಂಟ್​ ಮಾಡುತ್ತಿದ್ದಾರೆ. ‘ಬಿಗ್ ಬಾಸ್​ ಕನ್ನಡ ಒಟಿಟಿ ಸೀಸನ್​ 1’ಕ್ಕೆ (Bigg Boss OTT Kannada) ಸ್ಪರ್ಧಿಗಳನ್ನು ಆಯ್ಕೆ ಮಾಡಿದರ ವಿರುದ್ಧ ಜನರು ಗರಂ ಆಗಿದ್ದಾರೆ.

ಬಿಗ್​ ಬಾಸ್​ ಕಾರ್ಯಕ್ರಮದಲ್ಲಿ ಸ್ಪರ್ಧಿಸುವ ವ್ಯಕ್ತಿಗಳಿಗೆ ದೊಡ್ಡ ಮಟ್ಟದ ಜನಪ್ರಿಯತೆ ಸಿಗುತ್ತದೆ. ಕಿಚ್ಚ ಸುದೀಪ್​ ಜೊತೆ ಒಡನಾಡುವ ಅವಕಾಶ ಸಿಗುತ್ತದೆ. ಒಂದೇ ವೇದಿಕೆಯಲ್ಲಿ ಸುದೀಪ್​ ಮತ್ತು ಸ್ಪರ್ಧಿಗಳು ನಿಂತುಕೊಳ್ಳುವಂತಹ ಸಂದರ್ಭಗಳು ಇರುತ್ತವೆ. ಯೋಗ್ಯವಲ್ಲದ ವ್ಯಕ್ತಿಗಳು ಈ ಶೋಗೆ ಬಂದರೆ ಅಂಥವರಿಂದ ಸುದೀಪ್​ ಅವರ ಘನತೆಗೆ ಧಕ್ಕೆ ಆಗುತ್ತದೆ ಎಂದು ಅಭಿಮಾನಿಗಳು ಬೇಸರ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ
Image
Bigg Boss OTT Kannada: ಮೊದಲ ದಿನವೇ ಬಿಗ್​ ಬಾಸ್​ನಲ್ಲಿ ಕಣ್ಣೀರ ಕೋಡಿ; ನೋವು ತೋಡಿಕೊಂಡು ಗಳಗಳನೆ ಅತ್ತ ಸ್ಪರ್ಧಿಗಳು
Image
‘ನಾನು ಸ್ಮೋಕ್​ ಮಾಡ್ತೀನಿ, ಅದ್ರಲ್ಲಿ ತಪ್ಪೇನಿದೆ?’ ‘ಬಿಗ್​ ಬಾಸ್​​’ನಲ್ಲಿ ಸೋನು ಗೌಡ ನೇರ ಪ್ರಶ್ನೆ
Image
Rakesh Adiga: ‘ಬಿಗ್​ ಬಾಸ್​’ ಮನೆಗೆ ರಾಕೇಶ್ ಅಡಿಗ ಎಂಟ್ರಿ; ಆರಂಭ ಆಗುತ್ತಾ ಸೆಕೆಂಡ್ ಇನ್ನಿಂಗ್ಸ್​?
Image
ಭಿಕ್ಷೆ ಬೇಡುತ್ತಿದ್ದ ಈ ವ್ಯಕ್ತಿ ಬಿಗ್​ ಬಾಸ್​​ಗೆ ಸ್ಪರ್ಧಿ; ಈ ಕಲಾವಿದನ ಬದುಕು ಎಷ್ಟು ಕಷ್ಟ ಇತ್ತು ಗೊತ್ತಾ?

ಕರ್ನಾಟಕದಲ್ಲಿ ಕೋಟ್ಯಂತರ ಜನರು ಬಿಗ್​ ಬಾಸ್​ಗೆ ಬರಬೇಕು ಎಂಬ ಆಸೆ ಇಟ್ಟುಕೊಂಡಿದ್ದಾರೆ. ಸಿನಿಮಾ ಮತ್ತು ಸೀರಿಯಲ್​ನಲ್ಲಿ ಸಾಧನೆ ಮಾಡಿದವರು ಬೇಕಾದಷ್ಟು ಮಂದಿ ಇದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಒಳ್ಳೆಯ ರೀತಿಯಲ್ಲಿ ಗುರುತಿಸಿಕೊಂಡವರೂ ಬಹಳಷ್ಟು ಜನರು ಇದ್ದಾರೆ. ಅಂಥವರಿಗೆ ಬಿಗ್​ ಬಾಸ್​ನಲ್ಲಿ ಚಾನ್ಸ್ ಸಿಕ್ಕಿರೆ ಅವರ ಬದುಕು ಬದಲಾಗುತ್ತದೆ. ಕಾರ್ಯಕ್ರಮಕ್ಕೂ ಒಂದು ಗೌರವ ಹೆಚ್ಚುತ್ತದೆ. ಆದರೆ ಕೆಲವು ಸ್ಪರ್ಧಿಗಳ ಆಯ್ಕೆಯಿಂದ ತಮಗೆ ಬೇಸರ ಆಗಿದೆ ಎಂದು ವೀಕ್ಷಕರು ಕಮೆಂಟ್​ ಮಾಡುತ್ತಿದ್ದಾರೆ.

ಸೋನು ಶ್ರೀನಿವಾಸ್​ ಗೌಡ ಆಯ್ಕೆ ಆಗಿರುವುದಕ್ಕೆ ನೆಟ್ಟಿಗರು ಟ್ರೋಲ್​ ಮಾಡುತ್ತಿದ್ದಾರೆ. ಈ ವಿಚಾರದ ಕುರಿತಂತೆ ಬಗೆಬಗೆಯ ಮೀವ್ಸ್​ ವೈರಲ್​ ಆಗಿವೆ. ಆದಷ್ಟು ಬೇಗ ಸೋನು ಎಲಿಮಿನೇಟ್​ ಆಗಬೇಕು ಎಂದು ಕೆಲವರು ಒತ್ತಾಯಿಸುತ್ತಿದ್ದಾರೆ. ಇನ್ನು, ಬಿಗ್​ ಬಾಸ್​ ಮನೆಯೊಳಗೆ ಸೋನು ಶ್ರೀನಿವಾಸ್​ ಗೌಡ ಏನೆಲ್ಲ ಮಾಡಲಿದ್ದಾರೆ ಎಂಬ ಬಗ್ಗೆಯೂ ವೀಕ್ಷಕರಿಗೆ ಕುತೂಹಲ ಇದೆ. ವೂಟ್​ ಸೆಲೆಕ್ಟ್​ ಮೂಲಕ ಈ ಶೋ ಪ್ರಸಾರ ಆಗುತ್ತಿದೆ.

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!