Sign In

By signing in or creating an account, you agree with Associated Broadcasting Company's Terms & Conditions and Privacy Policy.

Sonu Srinivas Gowda: ‘ಬಿಗ್ ಬಾಸ್’ ಮನೆಯಲ್ಲಿ ಕಳಪೆ ಆಟ ತೋರಿದ ಸೋನು ಶ್ರೀನಿವಾಸ್ ಗೌಡಗೆ ಶಿಕ್ಷೆ

ಅತೀ ಹೆಚ್ಚು ವೋಟ್ ಪಡೆದವರಿಗೆ ಈ ಎರಡು ಪಟ್ಟ ಸಿಗುತ್ತದೆ. ಈ ವಾರ ಸೋನು ಶ್ರೀನಿವಾಸ್ ಗೌಡ ಅವರಿಗೆ ಕಳಪೆ ಪಟ್ಟ ಸಿಕ್ಕಿದೆ. ಮನೆಯ ಬಹುತೇಕರು ಸೋನು ಹೆಸರನ್ನು ತೆಗೆದುಕೊಂಡಿದ್ದಾರೆ.

Sonu Srinivas Gowda: ‘ಬಿಗ್ ಬಾಸ್’ ಮನೆಯಲ್ಲಿ ಕಳಪೆ ಆಟ ತೋರಿದ ಸೋನು ಶ್ರೀನಿವಾಸ್ ಗೌಡಗೆ ಶಿಕ್ಷೆ
ಸೋನು
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Sep 02, 2022 | 8:11 PM

ಸೋನು ಶ್ರೀನಿವಾಸ್ ಗೌಡ (Sonu Srinivas Gowda) ಬಿಗ್ ಬಾಸ್ ಮನೆಯಲ್ಲಿ ನಾಲ್ಕು ವಾರ ಕಳೆದಿದ್ದಾರೆ. ಈ ವಾರ ಅವರು ನಾಮಿನೇಷನ್ ಲಿಸ್ಟ್​ನಲ್ಲಿದ್ದಾರೆ. ಕಡಿಮೆ ವೋಟ್ ಬಿದ್ದರೆ ಅವರು ಮನೆಯಿಂದ ಹೊರಹೋಗೋದು ಪಕ್ಕಾ. ಅದಕ್ಕೂ ಮೊದಲು ‘ಬಿಗ್ ಬಾಸ್’ ಮನೆಯಲ್ಲಿ ಸೋನು ಕಳಪೆ ಪಟ್ಟ ಪಡೆದುಕೊಂಡಿದ್ದಾರೆ. ಈ ಕಾರಣಕ್ಕೆ ಸೋನು ಶ್ರೀನಿವಾಸ್ ಗೌಡ ಜೈಲಿಗೆ ಹೋಗಿದ್ದಾರೆ. ಒಂದು ದಿನ ಅವರು ಜೈಲಿನಲ್ಲಿ ಕಳೆದುಬರಬೇಕಿದೆ.

ಬಿಗ್ ಬಾಸ್ ಮನೆಯಲ್ಲಿ ಪ್ರತಿ ವೀಕೆಂಡ್​ಗೂ ಒಂದು ದಿನ ಮೊದಲು ‘ಬಿಗ್ ಬಾಸ್​’ ಮನೆಯಲ್ಲಿ ಕಳಪೆ ಹಾಗೂ ಉತ್ತಮ ಯಾರು ಎಂಬ ಆಯ್ಕೆ ನಡೆಯುತ್ತದೆ. ಎಲ್ಲಾ ಸ್ಪರ್ಧಿಗಳು ಕಳಪೆ ಯಾರು ಹಾಗೂ ಉತ್ತಮ ಯಾರು ಎಂದು ಹೇಳಬೇಕು. ಅತೀ ಹೆಚ್ಚು ವೋಟ್ ಪಡೆದವರಿಗೆ ಈ ಎರಡು ಪಟ್ಟ ಸಿಗುತ್ತದೆ. ಈ ವಾರ ಸೋನು ಶ್ರೀನಿವಾಸ್ ಗೌಡ ಅವರಿಗೆ ಕಳಪೆ ಪಟ್ಟ ಸಿಕ್ಕಿದೆ. ಮನೆಯ ಬಹುತೇಕರು ಸೋನು ಹೆಸರನ್ನು ತೆಗೆದುಕೊಂಡಿದ್ದಾರೆ.

ಸೋನು ಶ್ರೀನಿವಾಸ್ ಗೌಡ ಮನೆಯಲ್ಲಿ ಎಲ್ಲರನ್ನೂ ಎಂಟರ್​ಟೇನ್ ಮಾಡುತ್ತಿದ್ದಾರೆ ನಿಜ. ಆದರೆ, ಟಾಸ್ಕ್​ ವಿಚಾರದಲ್ಲಿ ಅವರು ಅಷ್ಟಾಗಿ ಪರ್ಫಾರ್ಮೆನ್ಸ್ ತೋರಿಸುತ್ತಿಲ್ಲ. ಇನ್ನು, ಮನೆಯ ಕೆಲಸದ ವಿಚಾರದಲ್ಲಿ ಅವರು ತಪ್ಪಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಮನೆಯ ಕ್ಲೀನಿಂಗ್, ಪಾತ್ರೆ ತೊಳೆಯುವ ವಿಚಾರದಲ್ಲಿ ಸೋನು ಶ್ರೀನಿವಾಸ್ ಗೌಡ ಅಂತರ ಕಾಯ್ದುಕೊಳ್ಳುತ್ತಲೇ ಬಂದಿದ್ದರು.

ಇದನ್ನೂ ಓದಿ
Image
Sonu Srinivas Gowda: ರಾತ್ರಿ 2.15ಕ್ಕೆ ಸೋನು ಗೌಡ ಜತೆ ಮಾತಾಡಲು ಬಂದ ರಾಕೇಶ್; ವೈರಲ್​ ಹುಡುಗಿಯ ಪ್ರತಿಕ್ರಿಯೆ ಹೇಗಿತ್ತು?​
Image
Sonu Srinivas Gowda: ಮೂಡ್ ಇಲ್ಲ ಅಂದ್ರೆ ಸೋನು ಶ್ರೀನಿವಾಸ್​ ಗೌಡ 3 ದಿನ ಸ್ನಾನ ಮಾಡಲ್ಲ; ಎಲ್ಲರ ಎದುರು ಸತ್ಯ ಬಯಲು
Image
Sonu Srinivas Gowda: ‘ನೀವು ಹೀಗೆ ಮಾಡಿದ್ರೆ ಈ ಶೋ ನಡೆಯಲ್ಲ’: ಸುದೀಪ್​ ಕೋಪಕ್ಕೆ ಕಾರಣವಾಯ್ತು ಸೋನು ಗೌಡ ವರ್ತನೆ
Image
Sonu Srinivas Gowda: ‘ಸೋನು ಬಾತ್​ ರೂಮ್​ ಯಾಕೆ ಹುಡುಕಲಿಲ್ಲ?’: ವೇದಿಕೆ ಮೇಲೆ ಸುದೀಪ್​ ಕೇಳಿದ್ರು ನೇರ ಪ್ರಶ್ನೆ

ಸೋನುಗೆ ಅಡುಗೆ ಮಾಡೋಕೆ ಬರುತ್ತದೆ ಎಂಬ ವಿಚಾರ ಯಾರಿಗೂ ಗೊತ್ತಿರಲಿಲ್ಲ. ಅವರು ಅಡುಗೆ ಮಾಡೋಕೆ ಬಂದ ಹೊರತಾಗಿಯೂ ಒಂದೇ ಒಂದು ದಿನವೂ ಕಿಚನ್ ಕಡೆ ಮುಖ ಮಾಡಿರಲಿಲ್ಲ. ಬಿಗ್ ಬಾಸ್ ಆದೇಶದ ಹಿನ್ನೆಲೆಯಲ್ಲಿ ಅವರು ಒಂದು ದಿನ ಅಡುಗೆ ಮಾಡಬೇಕಾಗಿ ಬಂದಿತ್ತು. ಈ ವೇಳೆ ಅವರಿಗೆ ಅಡುಗೆ ಬರುತ್ತದೆ ಎಂಬ ವಿಚಾರ ಗೊತ್ತಾಗಿತ್ತು. ಈ ಕಾರಣದಿಂದಲೂ ಮನೆ ಮಂದಿ ಅವರಿಗೆ ಕಳಪೆ ನೀಡಿದ್ದಾರೆ.

ಇದನ್ನೂ ಓದಿ: ನಾಮಿನೇಷನ್​ನಿಂದ ಈವಾರ ಸೇಫ್ ಆದ ರೂಪೇಶ್​; ಸಂಕಷ್ಟದಲ್ಲಿ ಸೋನು ಶ್ರೀನಿವಾಸ್ ಗೌಡ

ಕಳಪೆ ಪಟ್ಟ ಪಡೆದುಕೊಂಡ ವ್ಯಕ್ತಿ ಒಂದು ದಿನ ಜೈಲಿನಲ್ಲಿ ಕಳೆಯಬೇಕು. ಕೇವಲ ರಾಗಿಗಂಜಿ ಊಟ ಮಾಡಿಕೊಂಡು ಜೀವನ ನಡೆಸಬೇಕು. ಹೊರಗಿನ ಯಾವುದೇ ಸೌಲಭ್ಯವನ್ನು ಅವರು ಬಳಕೆ ಮಾಡುವಂತಿಲ್ಲ. ಹೀಗಾಗಿ, ಇದು ಸ್ಪರ್ಧಿಗಳಿಗೆ ಕೊಂಚ ಕಷ್ಟವೇ.

ನನ್ನ ವಿರುದ್ಧ ವಿನಾಕಾರಣ ದೂರು ಸಲ್ಲಿಸಲಾಗಿದೆ: ರಾಕೇಶ್ ಮಲ್ಲಿ
ನನ್ನ ವಿರುದ್ಧ ವಿನಾಕಾರಣ ದೂರು ಸಲ್ಲಿಸಲಾಗಿದೆ: ರಾಕೇಶ್ ಮಲ್ಲಿ
ರ‍್ಯಾಂಡಮ್ಮಾಗಿ ಗುಂಡು ಹಾರಿದ ಕಾರಣ ಪ್ರಾಣ ಉಳಿದಿದ್ದೇ ಹೆಚ್ಚು: ದೊಡ್ಡಬಸಯ್ಯ
ರ‍್ಯಾಂಡಮ್ಮಾಗಿ ಗುಂಡು ಹಾರಿದ ಕಾರಣ ಪ್ರಾಣ ಉಳಿದಿದ್ದೇ ಹೆಚ್ಚು: ದೊಡ್ಡಬಸಯ್ಯ
ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಸಿಡಿದ ಒಂದೇ ಗುಂಡು ಕ್ಷಣಾರ್ಧದಲ್ಲಿ ಪತಿಯ ಪ್ರಾಣ ತೆಗೆದುಕೊಂಡಿತು: ಪಲ್ಲವಿ
ಸಿಡಿದ ಒಂದೇ ಗುಂಡು ಕ್ಷಣಾರ್ಧದಲ್ಲಿ ಪತಿಯ ಪ್ರಾಣ ತೆಗೆದುಕೊಂಡಿತು: ಪಲ್ಲವಿ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಚೆನಾಬ್ ನದಿಗೆ ನಿರ್ಮಿಸಿದ ಬಾಗ್ಲಿಹಾರ್ ಡ್ಯಾಂ ವಿಡಿಯೋ ಇಲ್ಲಿದೆ
ಚೆನಾಬ್ ನದಿಗೆ ನಿರ್ಮಿಸಿದ ಬಾಗ್ಲಿಹಾರ್ ಡ್ಯಾಂ ವಿಡಿಯೋ ಇಲ್ಲಿದೆ
ಭರತ್ ಭೂಷಣ್ ಅಂತಿಮ ಸಂಸ್ಕಾರವನ್ನು ನೆರವೇರಿಸಿದ ಸಹೋದರ ಪ್ರೀತಂ
ಭರತ್ ಭೂಷಣ್ ಅಂತಿಮ ಸಂಸ್ಕಾರವನ್ನು ನೆರವೇರಿಸಿದ ಸಹೋದರ ಪ್ರೀತಂ
ಪಹಲ್ಗಾಮ್ ಸ್ವರ್ಗದಲ್ಲಿ ತೇಲಾಡುವಾಗ ಉಗ್ರರ ಭೀಕರತೆ ಬಿಚ್ಚಿಟ್ಟ ಪಲ್ಲವಿ
ಪಹಲ್ಗಾಮ್ ಸ್ವರ್ಗದಲ್ಲಿ ತೇಲಾಡುವಾಗ ಉಗ್ರರ ಭೀಕರತೆ ಬಿಚ್ಚಿಟ್ಟ ಪಲ್ಲವಿ
ಚಿತೆಯಲ್ಲಿ ಮಲಗಿದ ಪತಿಯ ಕೈ ಹುಡುಕಿ ಹಿಡಿದ ಪತ್ನಿ: ಹೃದಯ ಹಿಂಡುವ ದೃಶ್ಯ
ಚಿತೆಯಲ್ಲಿ ಮಲಗಿದ ಪತಿಯ ಕೈ ಹುಡುಕಿ ಹಿಡಿದ ಪತ್ನಿ: ಹೃದಯ ಹಿಂಡುವ ದೃಶ್ಯ
ಅಪ್ಪಾಜಿಯ ಸಮಾಧಿಗೆ ಪೂಜೆ ಮಾಡಿ, ಶಿವಣ್ಣ ಹೇಳಿದ್ದು ಹೀಗೆ..
ಅಪ್ಪಾಜಿಯ ಸಮಾಧಿಗೆ ಪೂಜೆ ಮಾಡಿ, ಶಿವಣ್ಣ ಹೇಳಿದ್ದು ಹೀಗೆ..