AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sonu Srinivas Gowda: ಸೋನು ಶ್ರೀನಿವಾಸ್​ ಗೌಡಗೆ ಮುಗಿಬಿದ್ದು ವೋಟ್​ ಮಾಡಿದ ಜನರು; ಬಿಗ್​ ಬಾಸ್​ನಲ್ಲಿ ವೈರಲ್​ ಹುಡುಗಿ ಸೇಫ್​

Sonu Srinivas Gowda | Bigg Boss Kannada OTT: ಸೋನು ಶ್ರೀನಿವಾಸ್​ ಗೌಡ ಅವರನ್ನು ಜನರು ಹಿಗ್ಗಾಮುಗ್ಗಾ ಟ್ರೋಲ್​ ಮಾಡುತ್ತಾರೆ. ಹಾಗಾಗಿ ‘ಬಿಗ್​ ಬಾಸ್​ ಕನ್ನಡ ಒಟಿಟಿ’ ಶೋನಲ್ಲಿ ಅವರಿಗೆ ಕಡಿಮೆ ವೋಟ್​ ಬೀಳಬಹುದು ಎಂದೇ ಊಹಿಸಲಾಗಿತ್ತು. ಆದರೆ ಆ ರೀತಿ ಆಗಿಲ್ಲ.

Sonu Srinivas Gowda: ಸೋನು ಶ್ರೀನಿವಾಸ್​ ಗೌಡಗೆ ಮುಗಿಬಿದ್ದು ವೋಟ್​ ಮಾಡಿದ ಜನರು; ಬಿಗ್​ ಬಾಸ್​ನಲ್ಲಿ ವೈರಲ್​ ಹುಡುಗಿ ಸೇಫ್​
ಸೋನು ಶ್ರೀನಿವಾಸ್ ಗೌಡ
TV9 Web
| Edited By: |

Updated on:Aug 13, 2022 | 9:45 PM

Share

ಜನಪ್ರಿಯ ರಿಯಾಲಿಟಿ ಶೋ ಬಿಗ್​​ ಬಾಸ್​ ಎಂದರೆ ಪ್ರೇಕ್ಷಕರಿಗೆ ಸಖತ್​ ಇಷ್ಟ. ಈ ಕಾರ್ಯಕ್ರಮದಲ್ಲಿ ಅನೇಕರ ಮುಖವಾಡಗಳು ಬಯಲಾಗುತ್ತವೆ. ಏನೋ ಅಂದುಕೊಂಡವರ ವ್ಯಕ್ತಿತ್ವ ಇನ್ನೇನೋ ಆಗಿ ಕಾಣಿಸುತ್ತದೆ. ಟಿಕ್​ ಟಾಕ್​ ವಿಡಿಯೋಗಳು ಮತ್ತು ರೀಲ್ಸ್​ ಮೂಲಕ ಫೇಮಸ್​ ಆಗಿದ್ದ ಸೋನು ಶ್ರೀನಿವಾಸ್​ ಗೌಡ (Sonu Srinivas Gowda) ಅವರ ವಿಚಾರದಲ್ಲೂ ಹಾಗೆಯೇ ಆಗುತ್ತಿದೆ. ಹೊರ ಜಗತ್ತಿನಲ್ಲಿ ಅವರನ್ನು ಜನರು ಹಿಗ್ಗಾಮುಗ್ಗಾ ಟ್ರೋಲ್​ ಮಾಡುತ್ತಿದ್ದಾರೆ. ಆದರೆ ‘ಬಿಗ್​ ಬಾಸ್​ ಕನ್ನಡ ಒಟಿಟಿ’ (Bigg Boss Kannada OTT) ​ಶೋನಲ್ಲಿ ಅವರನ್ನು ಸಪೋರ್ಟ್​ ಮಾಡುವವರ ಸಂಖ್ಯೆ ದೊಡ್ಡದಿದೆ. ಮೊದಲ ವಾರದಲ್ಲಿ ಸೋನು ಶ್ರೀನಿವಾಸ್​ ಗೌಡ ನಾಮಿನೇಟ್​ ಆಗಿದ್ದರು. ಆದರೆ ಜನರಿಂದ ವೋಟ್​ ಪಡೆಯುವ ಮೂಲಕ ಅವರು ಸೇಫ್​ ಆಗಿದ್ದಾರೆ. ಮೊದಲ ವಾರದ ಎಲಿಮಿನೇಷನ್​ನಿಂದ (Bigg Boss Elimination) ಬಚಾವ್​ ಆಗಿರುವ ಅವರು ಕುಣಿದು ಕುಪ್ಪಳಿಸಿದ್ದಾರೆ. ಇನ್ನೋರ್ವ ಸ್ಪರ್ಧಿ ಕಿರಣ್​ ಯೋಗೇಶ್ವರ್​ ಎಲಿಮಿನೇಟ್​ ಆಗಿದ್ದಾರೆ.

ಮೊದಲ ವಾರ ಎಂಬುದು ಬಿಗ್​ ಬಾಸ್​ ಸ್ಪರ್ಧಿಗಳಿಗೆ ತುಂಬ ಮುಖ್ಯ. ಇರುವ ಕಡಿಮೆ ಸಮಯದಲ್ಲಿ ತಮ್ಮ ತನವನ್ನು ಸಾಬೀತು ಪಡಿಸಿಕೊಳ್ಳಬೇಕು. ವೀಕ್ಷಕರಿಂದ ವೋಟ್​ ಗಿಟ್ಟಿಸಿಕೊಳ್ಳಬೇಕು. ಎಲ್ಲ ಟಾಸ್ಕ್​ಗಳನ್ನು ಚೆನ್ನಾಗಿ ಆಡಬೇಕು. ಒಂದು ವಿಚಾರದಲ್ಲಿ ಎಡವಟ್ಟು ಆದರೂ ಎಲಿಮಿನೇಷನ್​ ಭಯ ಕಾಡುತ್ತದೆ. ಈ ವಾರ ಸಾನ್ಯಾ ಅಯ್ಯರ್​, ರಾಕೇಶ್​ ಅಡಿಗ, ಆರ್ಯವರ್ಧನ್​ ಗುರೂಜಿ, ಸೋನು ಶ್ರೀನಿವಾಸ್​ ಗೌಡ, ಅರ್ಜುನ್​ ರಮೇಶ್​, ಉದಯ್​ ಸೂರ್ಯ, ಸ್ಫೂರ್ತಿ ಗೌಡ, ಜಯಶ್ರೀ ಆರಾಧ್ಯ, ಅಕ್ಷತಾ ಕುಕ್ಕಿ, ಕಿರಣ್​ ಯೋಗೇಶ್ವರ್​ ನಾಮಿನೇಟ್​ ಆಗಿದ್ದರು.

ಸೋನು ಶ್ರೀನಿವಾಸ್​ ಗೌಡ ಅವರನ್ನು ಜನರು ಹಿಗ್ಗಾಮುಗ್ಗಾ ಟ್ರೋಲ್​ ಮಾಡುತ್ತಾರೆ. ಅವರಿಗೆ ಬಿಗ್​ ಬಾಸ್​ ವೇದಿಕೆಯಲ್ಲಿ ಅವಕಾಶ ನೀಡಿದ್ದೇ ತಪ್ಪು ಎಂಬ ಅಭಿಪ್ರಾಯ ನೆಟ್ಟಿಗರಿಗೆ ಇದೆ. ಹಾಗಾಗಿ ಅವರಿಗೆ ಜನರಿಂದ ಕಡಿಮೆ ವೋಟ್​ ಬೀಳಬಹುದು ಎಂದೇ ಊಹಿಸಲಾಗಿತ್ತು. ಆದರೆ ಆ ರೀತಿ ಆಗಿಲ್ಲ. ಜನರು ಸೋನು ಗೌಡಗೆ ಸೇಫ್​ ಆಗುವಷ್ಟು ವೋಟ್​ ಮಾಡಿದ್ದಾರೆ. ಆದ್ದರಿಂದ ಮೊದಲ ವಾರದ ಎಲಿಮಿನೇಷನ್​ ದವಡೆಯಿಂದ ಅವರು ತಪ್ಪಿಸಿಕೊಂಡಿದ್ದಾರೆ.

ಇದನ್ನೂ ಓದಿ
Image
Sonu Srinivas Gowda: ‘ಯಾವ ನನ್ಮಗ​ ಏನು ಅಂದುಕೊಂಡ್ರೂ ನಾನು ತಲೆ ಕೆಡಿಸಿಕೊಳ್ಳಲ್ಲ’: ಸೋನು ಗೌಡ ಓಪನ್​ ಮಾತು
Image
Sonu Srinivas Gowda: ‘ಕ್ಯಾಮೆರಾ ಕಂಡ್ರೆ ನಾನು ಮೊದಲು ಪೋಸ್​ ಕೊಡೋದು ಹಿಂಗೆ’: ಸೋನು ಶ್ರೀನಿವಾಸ್​ ಗೌಡ
Image
Sonu Srinivas Gowda: ‘ನಂದು ಇನ್ನೊಂದು ವಿಡಿಯೋ ಇದೆ, ಯಾವಾಗ ಬರತ್ತೋ ಗೊತ್ತಿಲ್ಲ’: ಸತ್ಯ ಒಪ್ಪಿಕೊಂಡ ಸೋನು ಗೌಡ
Image
Sonu Srinivas Gowda: ಖಾಸಗಿ ವಿಡಿಯೋ ಲೀಕ್​ ಆಗಿದ್ದು ಹೇಗೆ? ಎಲ್ಲವನ್ನೂ ಎಳೆಎಳೆಯಾಗಿ ವಿವರಿಸಿದ ಸೋನು ಶ್ರೀನಿವಾಸ್​ ಗೌಡ

ಈ ಹಿಂದೆ ಸೋನು ಶ್ರೀನಿವಾಸ್​ ಗೌಡ ಅವರ ಖಾಸಗಿ ವಿಡಿಯೋ ವೈರಲ್​ ಆಗಿತ್ತು. ಆ ಬಳಿಕ ಅವರು ಟ್ರೋಲಿಗರ ಕೆಂಗಣ್ಣಿಗೆ ಗುರಿ ಆಗಿದ್ದರು. ಆ ಕಹಿ ಘಟನೆ ನಡೆದಿದ್ದು ಹೇಗೆ ಎಂಬ ಬಗ್ಗೆ ಮೊದಲ ವಾರವೇ ಅವರು ಬಿಗ್​ ಬಾಸ್​ ಮನೆಯಲ್ಲಿ ಬಾಯ್ಬಿಟ್ಟಿದ್ದಾರೆ. ಅಲ್ಲದೇ, ‘ನನ್ನದು ಇನ್ನೊಂದು ವಿಡಿಯೋ ಇದೆ. ಅದು ಯಾವಾಗ ಹೊರಬರುತ್ತೋ ಗೊತ್ತಿಲ್ಲ’ ಎಂದು ಅಳಲು ತೋಡಿಕೊಂಡಿದ್ದಾರೆ. ಅವರ ನೇರ ನಡೆ-ನುಡಿಯ ವ್ಯಕ್ತಿತ್ವದ ಬಗ್ಗೆ ಇನ್ನುಳಿದ ಸ್ಪರ್ಧಿಗಳು ಮಾತನಾಡಿಕೊಳ್ಳುತ್ತಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 9:45 pm, Sat, 13 August 22

Follow Us
ರವಿ ಕರ್ಕಾಟಕ, ಚಂದ್ರ ಕುಂಭರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ
ರವಿ ಕರ್ಕಾಟಕ, ಚಂದ್ರ ಕುಂಭರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ
ಪರಪ್ಪನ ಅಗ್ರಹಾರ ಜೈಲಿನಿಂದ ನಗುನಗುತ್ತಲೇ ಹೊರ ಬಂದ ವಿನಯ್ ಕುಲಕರ್ಣಿ
ಪರಪ್ಪನ ಅಗ್ರಹಾರ ಜೈಲಿನಿಂದ ನಗುನಗುತ್ತಲೇ ಹೊರ ಬಂದ ವಿನಯ್ ಕುಲಕರ್ಣಿ
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ
ಜೈಲಿನಲ್ಲಿ ದರ್ಶನ್ ಜೊತೆ 1 ಗಂಟೆಗೂ ಹೆಚ್ಚು ಕಾಲ ವಿಜಯಲಕ್ಷ್ಮಿ ಸಮಾಲೋಚನೆ
ಜೈಲಿನಲ್ಲಿ ದರ್ಶನ್ ಜೊತೆ 1 ಗಂಟೆಗೂ ಹೆಚ್ಚು ಕಾಲ ವಿಜಯಲಕ್ಷ್ಮಿ ಸಮಾಲೋಚನೆ
ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ
ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ
ಊರ್ವಶಿ ಚಿತ್ರಮಂದಿರದಿಂದ ‘ಜನ ನಾಯಗನ್’ ಎತ್ತಂಗಡಿ: ವಿಡಿಯೋ ನೋಡಿ
ಊರ್ವಶಿ ಚಿತ್ರಮಂದಿರದಿಂದ ‘ಜನ ನಾಯಗನ್’ ಎತ್ತಂಗಡಿ: ವಿಡಿಯೋ ನೋಡಿ
ರೈತ ದಂಪತಿ ಸಾವು: ಕುಟುಂಬಕ್ಕೆ ಹೆಚ್.ಡಿ. ಕುಮಾರಸ್ವಾಮಿ ಸಾಂತ್ವನ
ರೈತ ದಂಪತಿ ಸಾವು: ಕುಟುಂಬಕ್ಕೆ ಹೆಚ್.ಡಿ. ಕುಮಾರಸ್ವಾಮಿ ಸಾಂತ್ವನ
ಹಿಂಗಾರು ಮಳೆ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಹವಾಮಾನ ಇಲಾಖೆ ನಿರ್ದೇಶಕ
ಹಿಂಗಾರು ಮಳೆ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಹವಾಮಾನ ಇಲಾಖೆ ನಿರ್ದೇಶಕ