AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್​ಗೆ ಅವಾಜ್ ಹಾಕಿದ ಸೋನು ಶ್ರೀನಿವಾಸ್ ಗೌಡ; ಕ್ಷಮೆ ಕೇಳಲು ಪಟ್ಟು ಹಿಡಿದ ವೈರಲ್ ಹುಡುಗಿ

ದೊಡ್ಮನೆಯಲ್ಲಿ ಯಾರಾದರೂ ತಪ್ಪು ಮಾಡಿದರೆ ‘ಬಿಗ್ ಬಾಸ್’ ಆ ಬಗ್ಗೆ ಎಚ್ಚರಿಕೆ ನೀಡುತ್ತಾರೆ. ‘ಬಿಗ್ ಬಾಸ್’ ಮನೆಯಲ್ಲಿ ಸೋನು ಶ್ರೀನಿವಾಸ್ ಗೌಡ ಅವರು ಅನೇಕ ಬಾರಿ ಕಿವಿಮಾತು ಹೇಳಿಸಿಕೊಂಡಿದ್ದಾರೆ.

ಬಿಗ್ ಬಾಸ್​ಗೆ ಅವಾಜ್ ಹಾಕಿದ ಸೋನು ಶ್ರೀನಿವಾಸ್ ಗೌಡ; ಕ್ಷಮೆ ಕೇಳಲು ಪಟ್ಟು ಹಿಡಿದ ವೈರಲ್ ಹುಡುಗಿ
ಸೋನು ಶ್ರೀನಿವಾಸ್ ಗೌಡ
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on:Aug 26, 2022 | 10:29 PM

‘ಬಿಗ್ ಬಾಸ್ ಒಟಿಟಿ ಸೀಸನ್ 1’ನಲ್ಲಿ ಸೋನು ಶ್ರೀನಿವಾಸ್ ಗೌಡ (Sonu Srinivas Gowda) ಎಲ್ಲರ ಗಮನ ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆ. ಅವರು ರಾಕೇಶ್ ಅಡಿಗ ಜತೆ ಕ್ಲೋಸ್ ಆಗಿದ್ದಾರೆ. ಈ ವಿಚಾರ ಬಿಗ್ ಬಾಸ್ (Bigg Boss) ಮನೆಯಲ್ಲಿ ಹೈಲೈಟ್ ಆಗುತ್ತಿದೆ. ಈಗ ಸೋನು ಶ್ರೀನಿವಾಸ್ ಗೌಡ ಅವರು ಬಿಗ್ ಬಾಸ್​ಗೆ ಅವಾಜ್ ಹಾಕಿದ್ದಾರೆ. ಈ ವಿಚಾರ ಆಗಸ್ಟ್​ 26ರ ಎಪಿಸೋಡ್​ನಲ್ಲಿ ಸಾಕಷ್ಟು ಹೈಲೈಟ್ ಆಗಿದೆ. ಅವರು ಈ ರೀತಿ ಹೇಳೋಕೂ ಒಂದು ಕಾರಣ ಇದೆ.

ದೊಡ್ಮನೆಯಲ್ಲಿ ಯಾರಾದರೂ ತಪ್ಪು ಮಾಡಿದರೆ ‘ಬಿಗ್ ಬಾಸ್’ ಆ ಬಗ್ಗೆ ಎಚ್ಚರಿಕೆ ನೀಡುತ್ತಾರೆ. ‘ಬಿಗ್ ಬಾಸ್’ ಮನೆಯಲ್ಲಿ ಸೋನು ಶ್ರೀನಿವಾಸ್ ಗೌಡ ಅವರು ಅನೇಕ ಬಾರಿ ಕಿವಿಮಾತು ಹೇಳಿಸಿಕೊಂಡಿದ್ದಾರೆ. ಆಗಸ್ಟ್ 26ರ ಎಪಿಸೋಡ್​ನಲ್ಲೂ ಈ ಬಗ್ಗೆ ಸೋನುಗೆ ಎಚ್ಚರಿಕೆ ನೀಡಲಾಗಿದೆ. ‘ಸೋನು ಮೈಕ್​ ಅನ್ನು ಸರಿಯಾಗಿ ಧರಿಸಿ’ ಎಂದು ಬಿಗ್ ಬಾಸ್ ಘೋಷಿಸಿದರು. ಇದಕ್ಕೆ ಸೋನು ಸಿಟ್ಟಾಗಿದ್ದಾರೆ.

‘ನೋಡಿ ಬಿಗ್ ಬಾಸ್ ಮೈಕ್​ ಅನ್ನು ಸರಿಯಾಗಿ ಧರಿಸಿದ್ದೇನೆ. ನೀವು ಏಕೆ ಪದೇಪದೇ ನನ್ನನ್ನು ಟಾರ್ಗೆಟ್ ಮಾಡುತ್ತಿದ್ದೀರಾ? ಉದ್ದೇಶ ಪೂರ್ವಕವಾಗಿಯೇ ನೀವು ಹೇಳುತ್ತಿದ್ದೀರಾ ಅಥವಾ ಬೇರೆಯವರಿಗೆ ಹೇಳುವುದನ್ನು ನನಗೆ ಹೇಳುತ್ತಿದ್ದೀರಿ ಎನಿಸುತ್ತದೆ. ನೀವು ಕ್ಷಮೆ ಕೇಳಬೇಕು’ ಎಂದು ಬಿಗ್ ಬಾಸ್​ಗೆ ಸೋನು ಶ್ರೀನಿವಾಸ್​ ಗೌಡ ಹೇಳಿದ್ದಾರೆ.

ಇದನ್ನೂ ಓದಿ
Image
Sonu Srinivas Gowda: ರಾತ್ರಿ 2.15ಕ್ಕೆ ಸೋನು ಗೌಡ ಜತೆ ಮಾತಾಡಲು ಬಂದ ರಾಕೇಶ್; ವೈರಲ್​ ಹುಡುಗಿಯ ಪ್ರತಿಕ್ರಿಯೆ ಹೇಗಿತ್ತು?​
Image
Sonu Srinivas Gowda: ಮೂಡ್ ಇಲ್ಲ ಅಂದ್ರೆ ಸೋನು ಶ್ರೀನಿವಾಸ್​ ಗೌಡ 3 ದಿನ ಸ್ನಾನ ಮಾಡಲ್ಲ; ಎಲ್ಲರ ಎದುರು ಸತ್ಯ ಬಯಲು
Image
Sonu Srinivas Gowda: ‘ನೀವು ಹೀಗೆ ಮಾಡಿದ್ರೆ ಈ ಶೋ ನಡೆಯಲ್ಲ’: ಸುದೀಪ್​ ಕೋಪಕ್ಕೆ ಕಾರಣವಾಯ್ತು ಸೋನು ಗೌಡ ವರ್ತನೆ
Image
Sonu Srinivas Gowda: ‘ಸೋನು ಬಾತ್​ ರೂಮ್​ ಯಾಕೆ ಹುಡುಕಲಿಲ್ಲ?’: ವೇದಿಕೆ ಮೇಲೆ ಸುದೀಪ್​ ಕೇಳಿದ್ರು ನೇರ ಪ್ರಶ್ನೆ

ಇದನ್ನೂ ಓದಿ: ‘ನಿಜವಾದ ಪ್ರೀತಿಯಲ್ಲಿ ನಂಬಿಕೆ ಇರಬೇಕು’; ಇದು ಸೋನು ಶ್ರೀನಿವಾಸ್ ಗೌಡ ಪಾಠ

ಕಳೆದ ಸೀಸನ್​ ಅಲ್ಲಿ ಶುಭಾ ಪೂಂಜಾ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 8’ ಸಂದರ್ಭದಲ್ಲಿ ಬಿಗ್ ಬಾಸ್​ಗೆ ಅವಾಜ್ ಹಾಕಿದ ಉದಾಹರಣೆ ಸಾಕಷ್ಟಿದೆ. ಈ ಬಾರಿ ಸೋನು ಶ್ರೀನಿವಾಸ್ ಗೌಡ ಅವರು ಅದೇ ರೀತಿ ಆಡುತ್ತಿದ್ದಾರೆ. ಕಳೆದ ಬಾರಿ ಈ ವಿಚಾರ ವೀಕೆಂಡ್​ನಲ್ಲೂ ಚರ್ಚೆ ಆಗಿತ್ತು. ಈಗ ಆಗಸ್ಟ್​ 27ರಂದು ಕಿಚ್ಚ ಸುದೀಪ್ ಬರಲಿದ್ದಾರೆ. ಸೋನು ಅವರು ಹೇಳಿದ ಮಾತು ಚರ್ಚೆಗೆ ಬರಲಿದೆಯೇ ಎಂಬುದನ್ನು ಕಾದು ನೋಡಬೇಕಿದೆ.

Published On - 9:06 pm, Fri, 26 August 22

ಹತ್ಯೆಯಾದ ಯುವಕನ ತಾಯಿಯಿಂದ ಅಸ್ಪಷ್ಟ ಮಾಹಿತಿ!
ಹತ್ಯೆಯಾದ ಯುವಕನ ತಾಯಿಯಿಂದ ಅಸ್ಪಷ್ಟ ಮಾಹಿತಿ!
ಪಾಕಿಸ್ತಾನಕ್ಕೆ ಭಾರತದಿಂದ ಚೆನಾಬ್ ನದಿ ನೀರು ಬಂದ್; ಒಣಗಿದ ಸಲಾಲ್ ಡ್ಯಾಂ
ಪಾಕಿಸ್ತಾನಕ್ಕೆ ಭಾರತದಿಂದ ಚೆನಾಬ್ ನದಿ ನೀರು ಬಂದ್; ಒಣಗಿದ ಸಲಾಲ್ ಡ್ಯಾಂ
ಜಿಂಕೆಯನ್ನ ಬೇಟೆಯಾಡಿ ಬಾಯಲ್ಲಿ ಹಿಡಿದ ಹುಲಿಯ ಅಪರೂಪದ ದೃಶ್ಯ
ಜಿಂಕೆಯನ್ನ ಬೇಟೆಯಾಡಿ ಬಾಯಲ್ಲಿ ಹಿಡಿದ ಹುಲಿಯ ಅಪರೂಪದ ದೃಶ್ಯ
ಅಖ್ನೂರ್​ ಬಳಿ ಬರಿದಾದ ಚೆನಾಬ್ ನದಿ, ಖಾಲಿ ನದಿಯಲ್ಲಿ ಸ್ಥಳೀಯರ ಓಡಾಟ
ಅಖ್ನೂರ್​ ಬಳಿ ಬರಿದಾದ ಚೆನಾಬ್ ನದಿ, ಖಾಲಿ ನದಿಯಲ್ಲಿ ಸ್ಥಳೀಯರ ಓಡಾಟ
ಹರೀಶ್ ಪೂಂಜಾ ಸೀರಿಯಲ್ ಅಫೆಂಡರ್ ಹಾಗೆ ಗೋಚರಿಸಸುತ್ತಾರೆ: ದಿನೇಶ್ ಗುಂಡೂರಾವ್
ಹರೀಶ್ ಪೂಂಜಾ ಸೀರಿಯಲ್ ಅಫೆಂಡರ್ ಹಾಗೆ ಗೋಚರಿಸಸುತ್ತಾರೆ: ದಿನೇಶ್ ಗುಂಡೂರಾವ್
ಭದ್ರತಾ ಸಿಬ್ಬಂದಿ ಮೇಲೆ ಕಾರು ಹತ್ತಿಸಿದ ಚಾಲಕ
ಭದ್ರತಾ ಸಿಬ್ಬಂದಿ ಮೇಲೆ ಕಾರು ಹತ್ತಿಸಿದ ಚಾಲಕ
ಪೆಟ್ರೋಲ್​ ಹಾಕುವ ವಿಚಾರಕ್ಕೆ ಗಲಾಟೆ: ಅಟ್ಟಾಡಿಸಿ ಕೆಲಸಗಾರರ ಮೇಲೆ ಹಲ್ಲೆ
ಪೆಟ್ರೋಲ್​ ಹಾಕುವ ವಿಚಾರಕ್ಕೆ ಗಲಾಟೆ: ಅಟ್ಟಾಡಿಸಿ ಕೆಲಸಗಾರರ ಮೇಲೆ ಹಲ್ಲೆ
ಸದಾನಂದಗೌಡರು ಬುಲ್ಡೋಜರ್ ಬಳಸುವ ಬಗ್ಗೆ ಹೇಳಿದ್ದು ಗೊತ್ತಿಲ್ಲ: ಪರಮೇಶ್ವರ್
ಸದಾನಂದಗೌಡರು ಬುಲ್ಡೋಜರ್ ಬಳಸುವ ಬಗ್ಗೆ ಹೇಳಿದ್ದು ಗೊತ್ತಿಲ್ಲ: ಪರಮೇಶ್ವರ್
ಕರ್ನಾಟಕದಿಂದ ಎಷ್ಟು ಪಾಕಿಸ್ತಾನೀಯರು ವಾಪಸ್? ಮಾಹಿತಿ ನೀಡಿದ ಪರಮೇಶ್ವರ್
ಕರ್ನಾಟಕದಿಂದ ಎಷ್ಟು ಪಾಕಿಸ್ತಾನೀಯರು ವಾಪಸ್? ಮಾಹಿತಿ ನೀಡಿದ ಪರಮೇಶ್ವರ್
ಶಿವಾನಂದ ರಾಜೀನಾಮೆ ಸಲ್ಲಿಸಿರುವುದು ಕೇವಲ ನಾಟಕ ಮಾತ್ರ: ವಿಶ್ವನಾಥ್
ಶಿವಾನಂದ ರಾಜೀನಾಮೆ ಸಲ್ಲಿಸಿರುವುದು ಕೇವಲ ನಾಟಕ ಮಾತ್ರ: ವಿಶ್ವನಾಥ್