AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್​ಗೆ ಅವಾಜ್ ಹಾಕಿದ ಸೋನು ಶ್ರೀನಿವಾಸ್ ಗೌಡ; ಕ್ಷಮೆ ಕೇಳಲು ಪಟ್ಟು ಹಿಡಿದ ವೈರಲ್ ಹುಡುಗಿ

ದೊಡ್ಮನೆಯಲ್ಲಿ ಯಾರಾದರೂ ತಪ್ಪು ಮಾಡಿದರೆ ‘ಬಿಗ್ ಬಾಸ್’ ಆ ಬಗ್ಗೆ ಎಚ್ಚರಿಕೆ ನೀಡುತ್ತಾರೆ. ‘ಬಿಗ್ ಬಾಸ್’ ಮನೆಯಲ್ಲಿ ಸೋನು ಶ್ರೀನಿವಾಸ್ ಗೌಡ ಅವರು ಅನೇಕ ಬಾರಿ ಕಿವಿಮಾತು ಹೇಳಿಸಿಕೊಂಡಿದ್ದಾರೆ.

ಬಿಗ್ ಬಾಸ್​ಗೆ ಅವಾಜ್ ಹಾಕಿದ ಸೋನು ಶ್ರೀನಿವಾಸ್ ಗೌಡ; ಕ್ಷಮೆ ಕೇಳಲು ಪಟ್ಟು ಹಿಡಿದ ವೈರಲ್ ಹುಡುಗಿ
ಸೋನು ಶ್ರೀನಿವಾಸ್ ಗೌಡ
TV9 Web
| Edited By: |

Updated on:Aug 26, 2022 | 10:29 PM

Share

‘ಬಿಗ್ ಬಾಸ್ ಒಟಿಟಿ ಸೀಸನ್ 1’ನಲ್ಲಿ ಸೋನು ಶ್ರೀನಿವಾಸ್ ಗೌಡ (Sonu Srinivas Gowda) ಎಲ್ಲರ ಗಮನ ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆ. ಅವರು ರಾಕೇಶ್ ಅಡಿಗ ಜತೆ ಕ್ಲೋಸ್ ಆಗಿದ್ದಾರೆ. ಈ ವಿಚಾರ ಬಿಗ್ ಬಾಸ್ (Bigg Boss) ಮನೆಯಲ್ಲಿ ಹೈಲೈಟ್ ಆಗುತ್ತಿದೆ. ಈಗ ಸೋನು ಶ್ರೀನಿವಾಸ್ ಗೌಡ ಅವರು ಬಿಗ್ ಬಾಸ್​ಗೆ ಅವಾಜ್ ಹಾಕಿದ್ದಾರೆ. ಈ ವಿಚಾರ ಆಗಸ್ಟ್​ 26ರ ಎಪಿಸೋಡ್​ನಲ್ಲಿ ಸಾಕಷ್ಟು ಹೈಲೈಟ್ ಆಗಿದೆ. ಅವರು ಈ ರೀತಿ ಹೇಳೋಕೂ ಒಂದು ಕಾರಣ ಇದೆ.

ದೊಡ್ಮನೆಯಲ್ಲಿ ಯಾರಾದರೂ ತಪ್ಪು ಮಾಡಿದರೆ ‘ಬಿಗ್ ಬಾಸ್’ ಆ ಬಗ್ಗೆ ಎಚ್ಚರಿಕೆ ನೀಡುತ್ತಾರೆ. ‘ಬಿಗ್ ಬಾಸ್’ ಮನೆಯಲ್ಲಿ ಸೋನು ಶ್ರೀನಿವಾಸ್ ಗೌಡ ಅವರು ಅನೇಕ ಬಾರಿ ಕಿವಿಮಾತು ಹೇಳಿಸಿಕೊಂಡಿದ್ದಾರೆ. ಆಗಸ್ಟ್ 26ರ ಎಪಿಸೋಡ್​ನಲ್ಲೂ ಈ ಬಗ್ಗೆ ಸೋನುಗೆ ಎಚ್ಚರಿಕೆ ನೀಡಲಾಗಿದೆ. ‘ಸೋನು ಮೈಕ್​ ಅನ್ನು ಸರಿಯಾಗಿ ಧರಿಸಿ’ ಎಂದು ಬಿಗ್ ಬಾಸ್ ಘೋಷಿಸಿದರು. ಇದಕ್ಕೆ ಸೋನು ಸಿಟ್ಟಾಗಿದ್ದಾರೆ.

‘ನೋಡಿ ಬಿಗ್ ಬಾಸ್ ಮೈಕ್​ ಅನ್ನು ಸರಿಯಾಗಿ ಧರಿಸಿದ್ದೇನೆ. ನೀವು ಏಕೆ ಪದೇಪದೇ ನನ್ನನ್ನು ಟಾರ್ಗೆಟ್ ಮಾಡುತ್ತಿದ್ದೀರಾ? ಉದ್ದೇಶ ಪೂರ್ವಕವಾಗಿಯೇ ನೀವು ಹೇಳುತ್ತಿದ್ದೀರಾ ಅಥವಾ ಬೇರೆಯವರಿಗೆ ಹೇಳುವುದನ್ನು ನನಗೆ ಹೇಳುತ್ತಿದ್ದೀರಿ ಎನಿಸುತ್ತದೆ. ನೀವು ಕ್ಷಮೆ ಕೇಳಬೇಕು’ ಎಂದು ಬಿಗ್ ಬಾಸ್​ಗೆ ಸೋನು ಶ್ರೀನಿವಾಸ್​ ಗೌಡ ಹೇಳಿದ್ದಾರೆ.

ಇದನ್ನೂ ಓದಿ
Image
Sonu Srinivas Gowda: ರಾತ್ರಿ 2.15ಕ್ಕೆ ಸೋನು ಗೌಡ ಜತೆ ಮಾತಾಡಲು ಬಂದ ರಾಕೇಶ್; ವೈರಲ್​ ಹುಡುಗಿಯ ಪ್ರತಿಕ್ರಿಯೆ ಹೇಗಿತ್ತು?​
Image
Sonu Srinivas Gowda: ಮೂಡ್ ಇಲ್ಲ ಅಂದ್ರೆ ಸೋನು ಶ್ರೀನಿವಾಸ್​ ಗೌಡ 3 ದಿನ ಸ್ನಾನ ಮಾಡಲ್ಲ; ಎಲ್ಲರ ಎದುರು ಸತ್ಯ ಬಯಲು
Image
Sonu Srinivas Gowda: ‘ನೀವು ಹೀಗೆ ಮಾಡಿದ್ರೆ ಈ ಶೋ ನಡೆಯಲ್ಲ’: ಸುದೀಪ್​ ಕೋಪಕ್ಕೆ ಕಾರಣವಾಯ್ತು ಸೋನು ಗೌಡ ವರ್ತನೆ
Image
Sonu Srinivas Gowda: ‘ಸೋನು ಬಾತ್​ ರೂಮ್​ ಯಾಕೆ ಹುಡುಕಲಿಲ್ಲ?’: ವೇದಿಕೆ ಮೇಲೆ ಸುದೀಪ್​ ಕೇಳಿದ್ರು ನೇರ ಪ್ರಶ್ನೆ

ಇದನ್ನೂ ಓದಿ: ‘ನಿಜವಾದ ಪ್ರೀತಿಯಲ್ಲಿ ನಂಬಿಕೆ ಇರಬೇಕು’; ಇದು ಸೋನು ಶ್ರೀನಿವಾಸ್ ಗೌಡ ಪಾಠ

ಕಳೆದ ಸೀಸನ್​ ಅಲ್ಲಿ ಶುಭಾ ಪೂಂಜಾ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 8’ ಸಂದರ್ಭದಲ್ಲಿ ಬಿಗ್ ಬಾಸ್​ಗೆ ಅವಾಜ್ ಹಾಕಿದ ಉದಾಹರಣೆ ಸಾಕಷ್ಟಿದೆ. ಈ ಬಾರಿ ಸೋನು ಶ್ರೀನಿವಾಸ್ ಗೌಡ ಅವರು ಅದೇ ರೀತಿ ಆಡುತ್ತಿದ್ದಾರೆ. ಕಳೆದ ಬಾರಿ ಈ ವಿಚಾರ ವೀಕೆಂಡ್​ನಲ್ಲೂ ಚರ್ಚೆ ಆಗಿತ್ತು. ಈಗ ಆಗಸ್ಟ್​ 27ರಂದು ಕಿಚ್ಚ ಸುದೀಪ್ ಬರಲಿದ್ದಾರೆ. ಸೋನು ಅವರು ಹೇಳಿದ ಮಾತು ಚರ್ಚೆಗೆ ಬರಲಿದೆಯೇ ಎಂಬುದನ್ನು ಕಾದು ನೋಡಬೇಕಿದೆ.

Published On - 9:06 pm, Fri, 26 August 22

Follow Us
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಬೆಂಗಳೂರಿನಲ್ಲಿ ಬೆಳಗಿನಿಂದಲೇ ಜಿಟಿ ಜಿಟಿ ಮಳೆ
ಬೆಂಗಳೂರಿನಲ್ಲಿ ಬೆಳಗಿನಿಂದಲೇ ಜಿಟಿ ಜಿಟಿ ಮಳೆ
ದೇವರಾಜ ಅರಸು ಅವರ ವಿಂಟೇಜ್ ಕಾರಿನಲ್ಲಿ ಡಿಸಿಎಂ, ಸಚಿವರ ಸವಾರಿ
ದೇವರಾಜ ಅರಸು ಅವರ ವಿಂಟೇಜ್ ಕಾರಿನಲ್ಲಿ ಡಿಸಿಎಂ, ಸಚಿವರ ಸವಾರಿ
‘ಜೈಲಿನಲ್ಲಿ ಅಧಿಕಾರಿಗಳಿಂದಲೇ ವೇಶ್ಯಾವಾಟಿಕೆ’: ಮಾಜಿ ಕೈದಿ ಗಂಭೀರ ಆರೋಪ
‘ಜೈಲಿನಲ್ಲಿ ಅಧಿಕಾರಿಗಳಿಂದಲೇ ವೇಶ್ಯಾವಾಟಿಕೆ’: ಮಾಜಿ ಕೈದಿ ಗಂಭೀರ ಆರೋಪ
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು