AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್​ಗೆ ಅವಾಜ್ ಹಾಕಿದ ಸೋನು ಶ್ರೀನಿವಾಸ್ ಗೌಡ; ಕ್ಷಮೆ ಕೇಳಲು ಪಟ್ಟು ಹಿಡಿದ ವೈರಲ್ ಹುಡುಗಿ

ದೊಡ್ಮನೆಯಲ್ಲಿ ಯಾರಾದರೂ ತಪ್ಪು ಮಾಡಿದರೆ ‘ಬಿಗ್ ಬಾಸ್’ ಆ ಬಗ್ಗೆ ಎಚ್ಚರಿಕೆ ನೀಡುತ್ತಾರೆ. ‘ಬಿಗ್ ಬಾಸ್’ ಮನೆಯಲ್ಲಿ ಸೋನು ಶ್ರೀನಿವಾಸ್ ಗೌಡ ಅವರು ಅನೇಕ ಬಾರಿ ಕಿವಿಮಾತು ಹೇಳಿಸಿಕೊಂಡಿದ್ದಾರೆ.

ಬಿಗ್ ಬಾಸ್​ಗೆ ಅವಾಜ್ ಹಾಕಿದ ಸೋನು ಶ್ರೀನಿವಾಸ್ ಗೌಡ; ಕ್ಷಮೆ ಕೇಳಲು ಪಟ್ಟು ಹಿಡಿದ ವೈರಲ್ ಹುಡುಗಿ
ಸೋನು ಶ್ರೀನಿವಾಸ್ ಗೌಡ
TV9 Web
| Edited By: |

Updated on:Aug 26, 2022 | 10:29 PM

Share

‘ಬಿಗ್ ಬಾಸ್ ಒಟಿಟಿ ಸೀಸನ್ 1’ನಲ್ಲಿ ಸೋನು ಶ್ರೀನಿವಾಸ್ ಗೌಡ (Sonu Srinivas Gowda) ಎಲ್ಲರ ಗಮನ ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆ. ಅವರು ರಾಕೇಶ್ ಅಡಿಗ ಜತೆ ಕ್ಲೋಸ್ ಆಗಿದ್ದಾರೆ. ಈ ವಿಚಾರ ಬಿಗ್ ಬಾಸ್ (Bigg Boss) ಮನೆಯಲ್ಲಿ ಹೈಲೈಟ್ ಆಗುತ್ತಿದೆ. ಈಗ ಸೋನು ಶ್ರೀನಿವಾಸ್ ಗೌಡ ಅವರು ಬಿಗ್ ಬಾಸ್​ಗೆ ಅವಾಜ್ ಹಾಕಿದ್ದಾರೆ. ಈ ವಿಚಾರ ಆಗಸ್ಟ್​ 26ರ ಎಪಿಸೋಡ್​ನಲ್ಲಿ ಸಾಕಷ್ಟು ಹೈಲೈಟ್ ಆಗಿದೆ. ಅವರು ಈ ರೀತಿ ಹೇಳೋಕೂ ಒಂದು ಕಾರಣ ಇದೆ.

ದೊಡ್ಮನೆಯಲ್ಲಿ ಯಾರಾದರೂ ತಪ್ಪು ಮಾಡಿದರೆ ‘ಬಿಗ್ ಬಾಸ್’ ಆ ಬಗ್ಗೆ ಎಚ್ಚರಿಕೆ ನೀಡುತ್ತಾರೆ. ‘ಬಿಗ್ ಬಾಸ್’ ಮನೆಯಲ್ಲಿ ಸೋನು ಶ್ರೀನಿವಾಸ್ ಗೌಡ ಅವರು ಅನೇಕ ಬಾರಿ ಕಿವಿಮಾತು ಹೇಳಿಸಿಕೊಂಡಿದ್ದಾರೆ. ಆಗಸ್ಟ್ 26ರ ಎಪಿಸೋಡ್​ನಲ್ಲೂ ಈ ಬಗ್ಗೆ ಸೋನುಗೆ ಎಚ್ಚರಿಕೆ ನೀಡಲಾಗಿದೆ. ‘ಸೋನು ಮೈಕ್​ ಅನ್ನು ಸರಿಯಾಗಿ ಧರಿಸಿ’ ಎಂದು ಬಿಗ್ ಬಾಸ್ ಘೋಷಿಸಿದರು. ಇದಕ್ಕೆ ಸೋನು ಸಿಟ್ಟಾಗಿದ್ದಾರೆ.

‘ನೋಡಿ ಬಿಗ್ ಬಾಸ್ ಮೈಕ್​ ಅನ್ನು ಸರಿಯಾಗಿ ಧರಿಸಿದ್ದೇನೆ. ನೀವು ಏಕೆ ಪದೇಪದೇ ನನ್ನನ್ನು ಟಾರ್ಗೆಟ್ ಮಾಡುತ್ತಿದ್ದೀರಾ? ಉದ್ದೇಶ ಪೂರ್ವಕವಾಗಿಯೇ ನೀವು ಹೇಳುತ್ತಿದ್ದೀರಾ ಅಥವಾ ಬೇರೆಯವರಿಗೆ ಹೇಳುವುದನ್ನು ನನಗೆ ಹೇಳುತ್ತಿದ್ದೀರಿ ಎನಿಸುತ್ತದೆ. ನೀವು ಕ್ಷಮೆ ಕೇಳಬೇಕು’ ಎಂದು ಬಿಗ್ ಬಾಸ್​ಗೆ ಸೋನು ಶ್ರೀನಿವಾಸ್​ ಗೌಡ ಹೇಳಿದ್ದಾರೆ.

ಇದನ್ನೂ ಓದಿ
Image
Sonu Srinivas Gowda: ರಾತ್ರಿ 2.15ಕ್ಕೆ ಸೋನು ಗೌಡ ಜತೆ ಮಾತಾಡಲು ಬಂದ ರಾಕೇಶ್; ವೈರಲ್​ ಹುಡುಗಿಯ ಪ್ರತಿಕ್ರಿಯೆ ಹೇಗಿತ್ತು?​
Image
Sonu Srinivas Gowda: ಮೂಡ್ ಇಲ್ಲ ಅಂದ್ರೆ ಸೋನು ಶ್ರೀನಿವಾಸ್​ ಗೌಡ 3 ದಿನ ಸ್ನಾನ ಮಾಡಲ್ಲ; ಎಲ್ಲರ ಎದುರು ಸತ್ಯ ಬಯಲು
Image
Sonu Srinivas Gowda: ‘ನೀವು ಹೀಗೆ ಮಾಡಿದ್ರೆ ಈ ಶೋ ನಡೆಯಲ್ಲ’: ಸುದೀಪ್​ ಕೋಪಕ್ಕೆ ಕಾರಣವಾಯ್ತು ಸೋನು ಗೌಡ ವರ್ತನೆ
Image
Sonu Srinivas Gowda: ‘ಸೋನು ಬಾತ್​ ರೂಮ್​ ಯಾಕೆ ಹುಡುಕಲಿಲ್ಲ?’: ವೇದಿಕೆ ಮೇಲೆ ಸುದೀಪ್​ ಕೇಳಿದ್ರು ನೇರ ಪ್ರಶ್ನೆ

ಇದನ್ನೂ ಓದಿ: ‘ನಿಜವಾದ ಪ್ರೀತಿಯಲ್ಲಿ ನಂಬಿಕೆ ಇರಬೇಕು’; ಇದು ಸೋನು ಶ್ರೀನಿವಾಸ್ ಗೌಡ ಪಾಠ

ಕಳೆದ ಸೀಸನ್​ ಅಲ್ಲಿ ಶುಭಾ ಪೂಂಜಾ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 8’ ಸಂದರ್ಭದಲ್ಲಿ ಬಿಗ್ ಬಾಸ್​ಗೆ ಅವಾಜ್ ಹಾಕಿದ ಉದಾಹರಣೆ ಸಾಕಷ್ಟಿದೆ. ಈ ಬಾರಿ ಸೋನು ಶ್ರೀನಿವಾಸ್ ಗೌಡ ಅವರು ಅದೇ ರೀತಿ ಆಡುತ್ತಿದ್ದಾರೆ. ಕಳೆದ ಬಾರಿ ಈ ವಿಚಾರ ವೀಕೆಂಡ್​ನಲ್ಲೂ ಚರ್ಚೆ ಆಗಿತ್ತು. ಈಗ ಆಗಸ್ಟ್​ 27ರಂದು ಕಿಚ್ಚ ಸುದೀಪ್ ಬರಲಿದ್ದಾರೆ. ಸೋನು ಅವರು ಹೇಳಿದ ಮಾತು ಚರ್ಚೆಗೆ ಬರಲಿದೆಯೇ ಎಂಬುದನ್ನು ಕಾದು ನೋಡಬೇಕಿದೆ.

Published On - 9:06 pm, Fri, 26 August 22

ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್