AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್​ಗೆ ಅವಾಜ್ ಹಾಕಿದ ಸೋನು ಶ್ರೀನಿವಾಸ್ ಗೌಡ; ಕ್ಷಮೆ ಕೇಳಲು ಪಟ್ಟು ಹಿಡಿದ ವೈರಲ್ ಹುಡುಗಿ

ದೊಡ್ಮನೆಯಲ್ಲಿ ಯಾರಾದರೂ ತಪ್ಪು ಮಾಡಿದರೆ ‘ಬಿಗ್ ಬಾಸ್’ ಆ ಬಗ್ಗೆ ಎಚ್ಚರಿಕೆ ನೀಡುತ್ತಾರೆ. ‘ಬಿಗ್ ಬಾಸ್’ ಮನೆಯಲ್ಲಿ ಸೋನು ಶ್ರೀನಿವಾಸ್ ಗೌಡ ಅವರು ಅನೇಕ ಬಾರಿ ಕಿವಿಮಾತು ಹೇಳಿಸಿಕೊಂಡಿದ್ದಾರೆ.

ಬಿಗ್ ಬಾಸ್​ಗೆ ಅವಾಜ್ ಹಾಕಿದ ಸೋನು ಶ್ರೀನಿವಾಸ್ ಗೌಡ; ಕ್ಷಮೆ ಕೇಳಲು ಪಟ್ಟು ಹಿಡಿದ ವೈರಲ್ ಹುಡುಗಿ
ಸೋನು ಶ್ರೀನಿವಾಸ್ ಗೌಡ
TV9 Web
| Edited By: |

Updated on:Aug 26, 2022 | 10:29 PM

Share

‘ಬಿಗ್ ಬಾಸ್ ಒಟಿಟಿ ಸೀಸನ್ 1’ನಲ್ಲಿ ಸೋನು ಶ್ರೀನಿವಾಸ್ ಗೌಡ (Sonu Srinivas Gowda) ಎಲ್ಲರ ಗಮನ ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆ. ಅವರು ರಾಕೇಶ್ ಅಡಿಗ ಜತೆ ಕ್ಲೋಸ್ ಆಗಿದ್ದಾರೆ. ಈ ವಿಚಾರ ಬಿಗ್ ಬಾಸ್ (Bigg Boss) ಮನೆಯಲ್ಲಿ ಹೈಲೈಟ್ ಆಗುತ್ತಿದೆ. ಈಗ ಸೋನು ಶ್ರೀನಿವಾಸ್ ಗೌಡ ಅವರು ಬಿಗ್ ಬಾಸ್​ಗೆ ಅವಾಜ್ ಹಾಕಿದ್ದಾರೆ. ಈ ವಿಚಾರ ಆಗಸ್ಟ್​ 26ರ ಎಪಿಸೋಡ್​ನಲ್ಲಿ ಸಾಕಷ್ಟು ಹೈಲೈಟ್ ಆಗಿದೆ. ಅವರು ಈ ರೀತಿ ಹೇಳೋಕೂ ಒಂದು ಕಾರಣ ಇದೆ.

ದೊಡ್ಮನೆಯಲ್ಲಿ ಯಾರಾದರೂ ತಪ್ಪು ಮಾಡಿದರೆ ‘ಬಿಗ್ ಬಾಸ್’ ಆ ಬಗ್ಗೆ ಎಚ್ಚರಿಕೆ ನೀಡುತ್ತಾರೆ. ‘ಬಿಗ್ ಬಾಸ್’ ಮನೆಯಲ್ಲಿ ಸೋನು ಶ್ರೀನಿವಾಸ್ ಗೌಡ ಅವರು ಅನೇಕ ಬಾರಿ ಕಿವಿಮಾತು ಹೇಳಿಸಿಕೊಂಡಿದ್ದಾರೆ. ಆಗಸ್ಟ್ 26ರ ಎಪಿಸೋಡ್​ನಲ್ಲೂ ಈ ಬಗ್ಗೆ ಸೋನುಗೆ ಎಚ್ಚರಿಕೆ ನೀಡಲಾಗಿದೆ. ‘ಸೋನು ಮೈಕ್​ ಅನ್ನು ಸರಿಯಾಗಿ ಧರಿಸಿ’ ಎಂದು ಬಿಗ್ ಬಾಸ್ ಘೋಷಿಸಿದರು. ಇದಕ್ಕೆ ಸೋನು ಸಿಟ್ಟಾಗಿದ್ದಾರೆ.

‘ನೋಡಿ ಬಿಗ್ ಬಾಸ್ ಮೈಕ್​ ಅನ್ನು ಸರಿಯಾಗಿ ಧರಿಸಿದ್ದೇನೆ. ನೀವು ಏಕೆ ಪದೇಪದೇ ನನ್ನನ್ನು ಟಾರ್ಗೆಟ್ ಮಾಡುತ್ತಿದ್ದೀರಾ? ಉದ್ದೇಶ ಪೂರ್ವಕವಾಗಿಯೇ ನೀವು ಹೇಳುತ್ತಿದ್ದೀರಾ ಅಥವಾ ಬೇರೆಯವರಿಗೆ ಹೇಳುವುದನ್ನು ನನಗೆ ಹೇಳುತ್ತಿದ್ದೀರಿ ಎನಿಸುತ್ತದೆ. ನೀವು ಕ್ಷಮೆ ಕೇಳಬೇಕು’ ಎಂದು ಬಿಗ್ ಬಾಸ್​ಗೆ ಸೋನು ಶ್ರೀನಿವಾಸ್​ ಗೌಡ ಹೇಳಿದ್ದಾರೆ.

ಇದನ್ನೂ ಓದಿ
Image
Sonu Srinivas Gowda: ರಾತ್ರಿ 2.15ಕ್ಕೆ ಸೋನು ಗೌಡ ಜತೆ ಮಾತಾಡಲು ಬಂದ ರಾಕೇಶ್; ವೈರಲ್​ ಹುಡುಗಿಯ ಪ್ರತಿಕ್ರಿಯೆ ಹೇಗಿತ್ತು?​
Image
Sonu Srinivas Gowda: ಮೂಡ್ ಇಲ್ಲ ಅಂದ್ರೆ ಸೋನು ಶ್ರೀನಿವಾಸ್​ ಗೌಡ 3 ದಿನ ಸ್ನಾನ ಮಾಡಲ್ಲ; ಎಲ್ಲರ ಎದುರು ಸತ್ಯ ಬಯಲು
Image
Sonu Srinivas Gowda: ‘ನೀವು ಹೀಗೆ ಮಾಡಿದ್ರೆ ಈ ಶೋ ನಡೆಯಲ್ಲ’: ಸುದೀಪ್​ ಕೋಪಕ್ಕೆ ಕಾರಣವಾಯ್ತು ಸೋನು ಗೌಡ ವರ್ತನೆ
Image
Sonu Srinivas Gowda: ‘ಸೋನು ಬಾತ್​ ರೂಮ್​ ಯಾಕೆ ಹುಡುಕಲಿಲ್ಲ?’: ವೇದಿಕೆ ಮೇಲೆ ಸುದೀಪ್​ ಕೇಳಿದ್ರು ನೇರ ಪ್ರಶ್ನೆ

ಇದನ್ನೂ ಓದಿ: ‘ನಿಜವಾದ ಪ್ರೀತಿಯಲ್ಲಿ ನಂಬಿಕೆ ಇರಬೇಕು’; ಇದು ಸೋನು ಶ್ರೀನಿವಾಸ್ ಗೌಡ ಪಾಠ

ಕಳೆದ ಸೀಸನ್​ ಅಲ್ಲಿ ಶುಭಾ ಪೂಂಜಾ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 8’ ಸಂದರ್ಭದಲ್ಲಿ ಬಿಗ್ ಬಾಸ್​ಗೆ ಅವಾಜ್ ಹಾಕಿದ ಉದಾಹರಣೆ ಸಾಕಷ್ಟಿದೆ. ಈ ಬಾರಿ ಸೋನು ಶ್ರೀನಿವಾಸ್ ಗೌಡ ಅವರು ಅದೇ ರೀತಿ ಆಡುತ್ತಿದ್ದಾರೆ. ಕಳೆದ ಬಾರಿ ಈ ವಿಚಾರ ವೀಕೆಂಡ್​ನಲ್ಲೂ ಚರ್ಚೆ ಆಗಿತ್ತು. ಈಗ ಆಗಸ್ಟ್​ 27ರಂದು ಕಿಚ್ಚ ಸುದೀಪ್ ಬರಲಿದ್ದಾರೆ. ಸೋನು ಅವರು ಹೇಳಿದ ಮಾತು ಚರ್ಚೆಗೆ ಬರಲಿದೆಯೇ ಎಂಬುದನ್ನು ಕಾದು ನೋಡಬೇಕಿದೆ.

Published On - 9:06 pm, Fri, 26 August 22

ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?